Homeಮುಖಪುಟಪಿ. ಲಂಕೇಶ್‌ ಜನ್ಮದಿನ: ಅವರ ಬರೆಹಗಳ ಆಯ್ದ ಭಾಗಗಳು

ಪಿ. ಲಂಕೇಶ್‌ ಜನ್ಮದಿನ: ಅವರ ಬರೆಹಗಳ ಆಯ್ದ ಭಾಗಗಳು

ನನ್ನಂತೆಯೇ ಮಾರ್ಚ್ 8ರಂದು ಲಕ್ಷಾಂತರ, ಕೋಟ್ಯಂತರ ಜನ ಹುಟ್ಟಿ ವಿವಿಧ ಕರ್ಮಗಳಲ್ಲಿ ತೊಡಗಿರಬಹುದು. ಅವರು ನನಗಿಂತಲೂ ಬುದ್ಧಿವಂತರೂ, ವಿಚಾರವಂತರೂ ಆಗಿರಬಹುದು.

- Advertisement -
- Advertisement -

ಕನ್ನಡದ ಕೆಲವು ತಲೆಮಾರುಗಳನ್ನು ಪ್ರಭಾವಿಸಿದ ಪ್ರತಿಭಾನ್ವಿತ ಲೇಖಕ, ಚಿಂತಕ, ಪತ್ರಕರ್ತ ಪಿ.ಲಂಕೇಶ್‌ರವರ ಜನ್ಮದಿನ ಇಂದು. ಅವರ ನೆನಪಿನಲ್ಲಿ ಅವರ ಟೀಕೆಟಿಪ್ಪಣಿ ಪುಸ್ತಕದಿಂದ ಕೆಲ ಬರಹಗಳನ್ನು ಇಲ್ಲಿ ನೀಡುತ್ತಿದ್ದೇವೆ.

ಈಗ ಯಾವುದನ್ನು ನೆನೆಯಲಿ? ಯಾವುದು ಮೊದಲು? ಯಾವುದು ಆಮೇಲೆ?

ನೀವು ನನ್ನನ್ನು ದಯವಿಟ್ಟು ಕ್ಷಮಿಸಿ. ನನ್ನಂತೆಯೇ ಮಾರ್ಚ್ 8ರಂದು ಲಕ್ಷಾಂತರ, ಕೋಟ್ಯಂತರ ಜನ ಹುಟ್ಟಿ ವಿವಿಧ ಕರ್ಮಗಳಲ್ಲಿ ತೊಡಗಿರಬಹುದು. ಅವರು ನನಗಿಂತಲೂ ಬುದ್ಧಿವಂತರೂ, ವಿಚಾರವಂತರೂ ಆಗಿರಬಹುದು ಅಥವಾ ನನಗಿಂತಲೂ ಅನಾಮಿಕರಾಗಿದ್ದು ನೆಮ್ಮೆದಿ, ಆತಂಕ ಎರಡನ್ನೂ ಅರಿಯದೇ ಜೀವಿಸುತ್ತಿರಬಹುದು.ಆದ್ದರಿಂದ ಈ ಹುಟ್ಟುಹಬ್ಬದ ಬಗ್ಗೆಯಾಗಲೀ, ನನ್ನ ಕಳೆದುಹೋದ ಮತ್ತು ಎಂದೆಂದಿಗೂ ನನಗೆ ಅಂಟಿಕೊಂಡೇ ಇರುವ ಐವತ್ತು ವರ್ಷದ ಬಗ್ಗೆಯಾಗಲೀ ಧ್ವನಿ ಎತ್ತರಿಸಿ ಮಾತಾಡಿದೊಡನೆ, ಬೊಬ್ಬೆ ಹಾಕೊದೊಡನೆ ಎಲ್ಲ ಅಸಹಜವಾಗುತ್ತದೆ.

ಅಹಂಕಾರಕ್ಕೆ ಅನೇಕ ರೂಪಗಳಿರುತ್ತವೆ. ನನ್ನ ನೆಮ್ಮೆದಿಯನ್ನು ನಾನೇ ಕಲಕುವ ಮತ್ತು ಹೊಸ ಬಗೆಯ ವಿಶ್ವಾಸ ಹುಡುಕುವ ಚಟ ಮತ್ತು ಛಲ ನನ್ನಿಂದ ಮರೆಯಾಗದಿರಲಿ.

***

ಆ ಓಲಗದ ಸದ್ದು ಯಾವ ನೋವನ್ನು, ಯಾರ ಸಾವನ್ನು, ಎಷ್ಟು ಹೃದಯಗಳ ಆಕ್ರಂದನವನ್ನು ಸೂಚಿಸುತ್ತಿದೆ? ಅದು ದುಃಖದ ಓಲಗ ಎಷ್ಟು ಜನರ ಸಂತೋಷವನ್ನು ಸಾವಿನ ಬಗ್ಗೆ ಅಟ್ಟಹಾಸವನು, ರೋಷದ ಅಂತಿಮವನ್ನು, ಸೇಡಿನ ಪ್ರತಿಫಲನವನ್ನು ಮಂಡಿಸುತ್ತಿದೆ?

ಆ ಓಲಗದ ಸದ್ದು ಯಾವ ಮಾಯವಾದ ಕ್ರಿಯಾಶೀಲತೆಯನ್ನು, ಕೊನೆಗೊಂಡ ಕನಸನ್ನು ಸೂಚಿಸುತ್ತಿದೆ?

***

ಗಾಂಧೀಜಿಗೆ ಗೊತ್ತಿತ್ತು. ಆತ್ಮವನ್ನು ಕಳೆದುಕೊಂಡ ರಾಜಕಾರಣಿ ತನ್ನನ್ನು ರಕ್ಷಿಸಲು ಪೋಲೀಸು ಪಡೆಯನ್ನು ಹೊಂದಿರಬೇಕಾಗುತ್ತದೆ.

ಬಾಪೂಜಿ ಎಂದೂ ಅಂಗ ರಕ್ಷಕರನ್ನು ಹೊಂದಲಿಲ್ಲ.

ಸಿದ್ಧಾರ್ಥನನ್ನು ಚಿಂತೆಗೀಡು ಮಾಡಿ, ಬುದ್ಧನನ್ನಾಗಿಸಿದ ಆ ಸದ್ದು ಇವರಿಗೆ ಯಾವುದಾದರೂ ಅರ್ಥವನ್ನು ತಲುಪಿಸುತ್ತಿದೆಯೇ? ಬಾಪೂಜಿಯನ್ನು ಮಹಾತ್ಮನನ್ನಾಗಿ ಮಾಡುವಲ್ಲಿ ಯಶಸ್ವಿಯಾದ ಆ ಸದ್ದು ಕಿಂಚಿತ್ತಾದರೂ ನಮ್ಮನ್ನು ಸ್ಪರ್ಶಿಸಬೇಡವೇ?

ಆ ಓಲಗ ಯಾರ ಸಾವನ್ನು, ನೋವನ್ನು, ಅನ್ಯಾಯವನ್ನು, ಯಾವ ಮಾಯವಾದ ಕನಸು, ಕ್ರಿಯಾಶೀಲತೆಯನ್ನು, ಯಾವ ಭ್ರಷ್ಟತೆ, ಹುಂಬತನವನ್ನು , ಯಾವ ದ್ವೀಪವನ್ನು, ಸ್ವಾರ್ಥದ ಪರಿಣಾಮವನ್ನು ವ್ಯಕ್ತಪಡಿಸುತ್ತಿವೆ?

ಯೋಚಿಸೋಣ.

***

ಇಲ್ಲಿಯ ರೈತ, ಗುಡಿಗಾರ, ಕಮ್ಮಾರ, ಕುಂಬಾರ ಎಲ್ಲರೂ ಜಾತಿಪದ್ಧತಿಯ ನರಕದಲ್ಲಿ ಬಿದ್ದು ಬಡತನ, ನಿರುದ್ಯೊಗದಲ್ಲಿ ನಶಿಸಿ ಹೋಗುತ್ತಿದ್ದಾರೆ. ಅಕ್ಷರ ಜ್ಞಾನವಿದ್ದ ಒಂದೇ ಒಂದು ಗುಂಪು ಇಲ್ಲಿಯ ರೈತನ ನೇಗಿಲು, ಕಮ್ಮಾರರ ತಿದಿ, ಗೃಹಿಣಿಯ ಬೀಸುವ ಕಲ್ಲು, ಕೊಟ್ಟಣ ಮುಂತಾದುವನ್ನು ಉತ್ತಮಪಡಿಸಲು ಬಡವನ ಶ್ರಮವನ್ನು ಕಮ್ಮಿ ಮಾಡಲು ಯತ್ನಿಸಲಿಲ್ಲ. ಅಷ್ಟೇ ಏಕೆ, ಇವೆಲ್ಲವನ್ನೂ ಮೀರಿ ಇಡೀ ದೇಶಕ್ಕೆ ಕ್ರಾಂತಿಕಾರಿ ಎನ್ನಿಸಬಹುದಾದ ಪೆನ್ನು, ಪೇಪರ್, ಸ್ಲೇಟನ್ನು ಕಂಡುಹಿಡಿಯಲಿಲ್ಲ. ಕೆಲವರ ಮೇಲುಜಾತಿಯ ಮಿದುಳುಗಳು ಲಕ್ಷಾಂತರ ವಿಷಯಗಳನ್ನು ನೆನಪಿಟ್ಟುಕೊಳ್ಳಲು ಯತ್ನಿಸಿ, ಪೇಪರಿಗೆ ಬದಲು ದಾಖಲೆಯ ಹಾಳೆಗಳಾಗಲು ಯತ್ನಿಸಿ ಸತ್ತುಹೋದ ಒಬ್ಬ ವ್ಯಕ್ತಿಯೊಂದಿಗೆ ತಿಳಿವು ಕೂಡಾ ಸಾಯುತ್ತಾ ಹೋಯಿತು. ಕ್ರೌರ್ಯ ಮತ್ತು ಜಡತ್ವ ಮಾತ್ರ ಉಳಿಯಿತು. ಕ್ರೌರ್ಯ ಮತ್ತು ಜಡತ್ವ ಇರುವ ಮನುಷ್ಯನಲ್ಲಿ ಪ್ರೇಮ, ಸಹಾನುಭೂತಿ, ಪಾಳುದಾರಿಕೆ ಉಳಿಯುವುದಿಲ್ಲ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...