Homeಮುಖಪುಟಪಿ. ಲಂಕೇಶ್‌ ಜನ್ಮದಿನ: ಅವರ ಬರೆಹಗಳ ಆಯ್ದ ಭಾಗಗಳು

ಪಿ. ಲಂಕೇಶ್‌ ಜನ್ಮದಿನ: ಅವರ ಬರೆಹಗಳ ಆಯ್ದ ಭಾಗಗಳು

ನನ್ನಂತೆಯೇ ಮಾರ್ಚ್ 8ರಂದು ಲಕ್ಷಾಂತರ, ಕೋಟ್ಯಂತರ ಜನ ಹುಟ್ಟಿ ವಿವಿಧ ಕರ್ಮಗಳಲ್ಲಿ ತೊಡಗಿರಬಹುದು. ಅವರು ನನಗಿಂತಲೂ ಬುದ್ಧಿವಂತರೂ, ವಿಚಾರವಂತರೂ ಆಗಿರಬಹುದು.

- Advertisement -
- Advertisement -

ಕನ್ನಡದ ಕೆಲವು ತಲೆಮಾರುಗಳನ್ನು ಪ್ರಭಾವಿಸಿದ ಪ್ರತಿಭಾನ್ವಿತ ಲೇಖಕ, ಚಿಂತಕ, ಪತ್ರಕರ್ತ ಪಿ.ಲಂಕೇಶ್‌ರವರ ಜನ್ಮದಿನ ಇಂದು. ಅವರ ನೆನಪಿನಲ್ಲಿ ಅವರ ಟೀಕೆಟಿಪ್ಪಣಿ ಪುಸ್ತಕದಿಂದ ಕೆಲ ಬರಹಗಳನ್ನು ಇಲ್ಲಿ ನೀಡುತ್ತಿದ್ದೇವೆ.

ಈಗ ಯಾವುದನ್ನು ನೆನೆಯಲಿ? ಯಾವುದು ಮೊದಲು? ಯಾವುದು ಆಮೇಲೆ?

ನೀವು ನನ್ನನ್ನು ದಯವಿಟ್ಟು ಕ್ಷಮಿಸಿ. ನನ್ನಂತೆಯೇ ಮಾರ್ಚ್ 8ರಂದು ಲಕ್ಷಾಂತರ, ಕೋಟ್ಯಂತರ ಜನ ಹುಟ್ಟಿ ವಿವಿಧ ಕರ್ಮಗಳಲ್ಲಿ ತೊಡಗಿರಬಹುದು. ಅವರು ನನಗಿಂತಲೂ ಬುದ್ಧಿವಂತರೂ, ವಿಚಾರವಂತರೂ ಆಗಿರಬಹುದು ಅಥವಾ ನನಗಿಂತಲೂ ಅನಾಮಿಕರಾಗಿದ್ದು ನೆಮ್ಮೆದಿ, ಆತಂಕ ಎರಡನ್ನೂ ಅರಿಯದೇ ಜೀವಿಸುತ್ತಿರಬಹುದು.ಆದ್ದರಿಂದ ಈ ಹುಟ್ಟುಹಬ್ಬದ ಬಗ್ಗೆಯಾಗಲೀ, ನನ್ನ ಕಳೆದುಹೋದ ಮತ್ತು ಎಂದೆಂದಿಗೂ ನನಗೆ ಅಂಟಿಕೊಂಡೇ ಇರುವ ಐವತ್ತು ವರ್ಷದ ಬಗ್ಗೆಯಾಗಲೀ ಧ್ವನಿ ಎತ್ತರಿಸಿ ಮಾತಾಡಿದೊಡನೆ, ಬೊಬ್ಬೆ ಹಾಕೊದೊಡನೆ ಎಲ್ಲ ಅಸಹಜವಾಗುತ್ತದೆ.

ಅಹಂಕಾರಕ್ಕೆ ಅನೇಕ ರೂಪಗಳಿರುತ್ತವೆ. ನನ್ನ ನೆಮ್ಮೆದಿಯನ್ನು ನಾನೇ ಕಲಕುವ ಮತ್ತು ಹೊಸ ಬಗೆಯ ವಿಶ್ವಾಸ ಹುಡುಕುವ ಚಟ ಮತ್ತು ಛಲ ನನ್ನಿಂದ ಮರೆಯಾಗದಿರಲಿ.

***

ಆ ಓಲಗದ ಸದ್ದು ಯಾವ ನೋವನ್ನು, ಯಾರ ಸಾವನ್ನು, ಎಷ್ಟು ಹೃದಯಗಳ ಆಕ್ರಂದನವನ್ನು ಸೂಚಿಸುತ್ತಿದೆ? ಅದು ದುಃಖದ ಓಲಗ ಎಷ್ಟು ಜನರ ಸಂತೋಷವನ್ನು ಸಾವಿನ ಬಗ್ಗೆ ಅಟ್ಟಹಾಸವನು, ರೋಷದ ಅಂತಿಮವನ್ನು, ಸೇಡಿನ ಪ್ರತಿಫಲನವನ್ನು ಮಂಡಿಸುತ್ತಿದೆ?

ಆ ಓಲಗದ ಸದ್ದು ಯಾವ ಮಾಯವಾದ ಕ್ರಿಯಾಶೀಲತೆಯನ್ನು, ಕೊನೆಗೊಂಡ ಕನಸನ್ನು ಸೂಚಿಸುತ್ತಿದೆ?

***

ಗಾಂಧೀಜಿಗೆ ಗೊತ್ತಿತ್ತು. ಆತ್ಮವನ್ನು ಕಳೆದುಕೊಂಡ ರಾಜಕಾರಣಿ ತನ್ನನ್ನು ರಕ್ಷಿಸಲು ಪೋಲೀಸು ಪಡೆಯನ್ನು ಹೊಂದಿರಬೇಕಾಗುತ್ತದೆ.

ಬಾಪೂಜಿ ಎಂದೂ ಅಂಗ ರಕ್ಷಕರನ್ನು ಹೊಂದಲಿಲ್ಲ.

ಸಿದ್ಧಾರ್ಥನನ್ನು ಚಿಂತೆಗೀಡು ಮಾಡಿ, ಬುದ್ಧನನ್ನಾಗಿಸಿದ ಆ ಸದ್ದು ಇವರಿಗೆ ಯಾವುದಾದರೂ ಅರ್ಥವನ್ನು ತಲುಪಿಸುತ್ತಿದೆಯೇ? ಬಾಪೂಜಿಯನ್ನು ಮಹಾತ್ಮನನ್ನಾಗಿ ಮಾಡುವಲ್ಲಿ ಯಶಸ್ವಿಯಾದ ಆ ಸದ್ದು ಕಿಂಚಿತ್ತಾದರೂ ನಮ್ಮನ್ನು ಸ್ಪರ್ಶಿಸಬೇಡವೇ?

ಆ ಓಲಗ ಯಾರ ಸಾವನ್ನು, ನೋವನ್ನು, ಅನ್ಯಾಯವನ್ನು, ಯಾವ ಮಾಯವಾದ ಕನಸು, ಕ್ರಿಯಾಶೀಲತೆಯನ್ನು, ಯಾವ ಭ್ರಷ್ಟತೆ, ಹುಂಬತನವನ್ನು , ಯಾವ ದ್ವೀಪವನ್ನು, ಸ್ವಾರ್ಥದ ಪರಿಣಾಮವನ್ನು ವ್ಯಕ್ತಪಡಿಸುತ್ತಿವೆ?

ಯೋಚಿಸೋಣ.

***

ಇಲ್ಲಿಯ ರೈತ, ಗುಡಿಗಾರ, ಕಮ್ಮಾರ, ಕುಂಬಾರ ಎಲ್ಲರೂ ಜಾತಿಪದ್ಧತಿಯ ನರಕದಲ್ಲಿ ಬಿದ್ದು ಬಡತನ, ನಿರುದ್ಯೊಗದಲ್ಲಿ ನಶಿಸಿ ಹೋಗುತ್ತಿದ್ದಾರೆ. ಅಕ್ಷರ ಜ್ಞಾನವಿದ್ದ ಒಂದೇ ಒಂದು ಗುಂಪು ಇಲ್ಲಿಯ ರೈತನ ನೇಗಿಲು, ಕಮ್ಮಾರರ ತಿದಿ, ಗೃಹಿಣಿಯ ಬೀಸುವ ಕಲ್ಲು, ಕೊಟ್ಟಣ ಮುಂತಾದುವನ್ನು ಉತ್ತಮಪಡಿಸಲು ಬಡವನ ಶ್ರಮವನ್ನು ಕಮ್ಮಿ ಮಾಡಲು ಯತ್ನಿಸಲಿಲ್ಲ. ಅಷ್ಟೇ ಏಕೆ, ಇವೆಲ್ಲವನ್ನೂ ಮೀರಿ ಇಡೀ ದೇಶಕ್ಕೆ ಕ್ರಾಂತಿಕಾರಿ ಎನ್ನಿಸಬಹುದಾದ ಪೆನ್ನು, ಪೇಪರ್, ಸ್ಲೇಟನ್ನು ಕಂಡುಹಿಡಿಯಲಿಲ್ಲ. ಕೆಲವರ ಮೇಲುಜಾತಿಯ ಮಿದುಳುಗಳು ಲಕ್ಷಾಂತರ ವಿಷಯಗಳನ್ನು ನೆನಪಿಟ್ಟುಕೊಳ್ಳಲು ಯತ್ನಿಸಿ, ಪೇಪರಿಗೆ ಬದಲು ದಾಖಲೆಯ ಹಾಳೆಗಳಾಗಲು ಯತ್ನಿಸಿ ಸತ್ತುಹೋದ ಒಬ್ಬ ವ್ಯಕ್ತಿಯೊಂದಿಗೆ ತಿಳಿವು ಕೂಡಾ ಸಾಯುತ್ತಾ ಹೋಯಿತು. ಕ್ರೌರ್ಯ ಮತ್ತು ಜಡತ್ವ ಮಾತ್ರ ಉಳಿಯಿತು. ಕ್ರೌರ್ಯ ಮತ್ತು ಜಡತ್ವ ಇರುವ ಮನುಷ್ಯನಲ್ಲಿ ಪ್ರೇಮ, ಸಹಾನುಭೂತಿ, ಪಾಳುದಾರಿಕೆ ಉಳಿಯುವುದಿಲ್ಲ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...