Homeಮುಖಪುಟಪಿ. ಲಂಕೇಶ್‌ ಜನ್ಮದಿನ: ಅವರ ಬರೆಹಗಳ ಆಯ್ದ ಭಾಗಗಳು

ಪಿ. ಲಂಕೇಶ್‌ ಜನ್ಮದಿನ: ಅವರ ಬರೆಹಗಳ ಆಯ್ದ ಭಾಗಗಳು

ನನ್ನಂತೆಯೇ ಮಾರ್ಚ್ 8ರಂದು ಲಕ್ಷಾಂತರ, ಕೋಟ್ಯಂತರ ಜನ ಹುಟ್ಟಿ ವಿವಿಧ ಕರ್ಮಗಳಲ್ಲಿ ತೊಡಗಿರಬಹುದು. ಅವರು ನನಗಿಂತಲೂ ಬುದ್ಧಿವಂತರೂ, ವಿಚಾರವಂತರೂ ಆಗಿರಬಹುದು.

- Advertisement -
- Advertisement -

ಕನ್ನಡದ ಕೆಲವು ತಲೆಮಾರುಗಳನ್ನು ಪ್ರಭಾವಿಸಿದ ಪ್ರತಿಭಾನ್ವಿತ ಲೇಖಕ, ಚಿಂತಕ, ಪತ್ರಕರ್ತ ಪಿ.ಲಂಕೇಶ್‌ರವರ ಜನ್ಮದಿನ ಇಂದು. ಅವರ ನೆನಪಿನಲ್ಲಿ ಅವರ ಟೀಕೆಟಿಪ್ಪಣಿ ಪುಸ್ತಕದಿಂದ ಕೆಲ ಬರಹಗಳನ್ನು ಇಲ್ಲಿ ನೀಡುತ್ತಿದ್ದೇವೆ.

ಈಗ ಯಾವುದನ್ನು ನೆನೆಯಲಿ? ಯಾವುದು ಮೊದಲು? ಯಾವುದು ಆಮೇಲೆ?

ನೀವು ನನ್ನನ್ನು ದಯವಿಟ್ಟು ಕ್ಷಮಿಸಿ. ನನ್ನಂತೆಯೇ ಮಾರ್ಚ್ 8ರಂದು ಲಕ್ಷಾಂತರ, ಕೋಟ್ಯಂತರ ಜನ ಹುಟ್ಟಿ ವಿವಿಧ ಕರ್ಮಗಳಲ್ಲಿ ತೊಡಗಿರಬಹುದು. ಅವರು ನನಗಿಂತಲೂ ಬುದ್ಧಿವಂತರೂ, ವಿಚಾರವಂತರೂ ಆಗಿರಬಹುದು ಅಥವಾ ನನಗಿಂತಲೂ ಅನಾಮಿಕರಾಗಿದ್ದು ನೆಮ್ಮೆದಿ, ಆತಂಕ ಎರಡನ್ನೂ ಅರಿಯದೇ ಜೀವಿಸುತ್ತಿರಬಹುದು.ಆದ್ದರಿಂದ ಈ ಹುಟ್ಟುಹಬ್ಬದ ಬಗ್ಗೆಯಾಗಲೀ, ನನ್ನ ಕಳೆದುಹೋದ ಮತ್ತು ಎಂದೆಂದಿಗೂ ನನಗೆ ಅಂಟಿಕೊಂಡೇ ಇರುವ ಐವತ್ತು ವರ್ಷದ ಬಗ್ಗೆಯಾಗಲೀ ಧ್ವನಿ ಎತ್ತರಿಸಿ ಮಾತಾಡಿದೊಡನೆ, ಬೊಬ್ಬೆ ಹಾಕೊದೊಡನೆ ಎಲ್ಲ ಅಸಹಜವಾಗುತ್ತದೆ.

ಅಹಂಕಾರಕ್ಕೆ ಅನೇಕ ರೂಪಗಳಿರುತ್ತವೆ. ನನ್ನ ನೆಮ್ಮೆದಿಯನ್ನು ನಾನೇ ಕಲಕುವ ಮತ್ತು ಹೊಸ ಬಗೆಯ ವಿಶ್ವಾಸ ಹುಡುಕುವ ಚಟ ಮತ್ತು ಛಲ ನನ್ನಿಂದ ಮರೆಯಾಗದಿರಲಿ.

***

ಆ ಓಲಗದ ಸದ್ದು ಯಾವ ನೋವನ್ನು, ಯಾರ ಸಾವನ್ನು, ಎಷ್ಟು ಹೃದಯಗಳ ಆಕ್ರಂದನವನ್ನು ಸೂಚಿಸುತ್ತಿದೆ? ಅದು ದುಃಖದ ಓಲಗ ಎಷ್ಟು ಜನರ ಸಂತೋಷವನ್ನು ಸಾವಿನ ಬಗ್ಗೆ ಅಟ್ಟಹಾಸವನು, ರೋಷದ ಅಂತಿಮವನ್ನು, ಸೇಡಿನ ಪ್ರತಿಫಲನವನ್ನು ಮಂಡಿಸುತ್ತಿದೆ?

ಆ ಓಲಗದ ಸದ್ದು ಯಾವ ಮಾಯವಾದ ಕ್ರಿಯಾಶೀಲತೆಯನ್ನು, ಕೊನೆಗೊಂಡ ಕನಸನ್ನು ಸೂಚಿಸುತ್ತಿದೆ?

***

ಗಾಂಧೀಜಿಗೆ ಗೊತ್ತಿತ್ತು. ಆತ್ಮವನ್ನು ಕಳೆದುಕೊಂಡ ರಾಜಕಾರಣಿ ತನ್ನನ್ನು ರಕ್ಷಿಸಲು ಪೋಲೀಸು ಪಡೆಯನ್ನು ಹೊಂದಿರಬೇಕಾಗುತ್ತದೆ.

ಬಾಪೂಜಿ ಎಂದೂ ಅಂಗ ರಕ್ಷಕರನ್ನು ಹೊಂದಲಿಲ್ಲ.

ಸಿದ್ಧಾರ್ಥನನ್ನು ಚಿಂತೆಗೀಡು ಮಾಡಿ, ಬುದ್ಧನನ್ನಾಗಿಸಿದ ಆ ಸದ್ದು ಇವರಿಗೆ ಯಾವುದಾದರೂ ಅರ್ಥವನ್ನು ತಲುಪಿಸುತ್ತಿದೆಯೇ? ಬಾಪೂಜಿಯನ್ನು ಮಹಾತ್ಮನನ್ನಾಗಿ ಮಾಡುವಲ್ಲಿ ಯಶಸ್ವಿಯಾದ ಆ ಸದ್ದು ಕಿಂಚಿತ್ತಾದರೂ ನಮ್ಮನ್ನು ಸ್ಪರ್ಶಿಸಬೇಡವೇ?

ಆ ಓಲಗ ಯಾರ ಸಾವನ್ನು, ನೋವನ್ನು, ಅನ್ಯಾಯವನ್ನು, ಯಾವ ಮಾಯವಾದ ಕನಸು, ಕ್ರಿಯಾಶೀಲತೆಯನ್ನು, ಯಾವ ಭ್ರಷ್ಟತೆ, ಹುಂಬತನವನ್ನು , ಯಾವ ದ್ವೀಪವನ್ನು, ಸ್ವಾರ್ಥದ ಪರಿಣಾಮವನ್ನು ವ್ಯಕ್ತಪಡಿಸುತ್ತಿವೆ?

ಯೋಚಿಸೋಣ.

***

ಇಲ್ಲಿಯ ರೈತ, ಗುಡಿಗಾರ, ಕಮ್ಮಾರ, ಕುಂಬಾರ ಎಲ್ಲರೂ ಜಾತಿಪದ್ಧತಿಯ ನರಕದಲ್ಲಿ ಬಿದ್ದು ಬಡತನ, ನಿರುದ್ಯೊಗದಲ್ಲಿ ನಶಿಸಿ ಹೋಗುತ್ತಿದ್ದಾರೆ. ಅಕ್ಷರ ಜ್ಞಾನವಿದ್ದ ಒಂದೇ ಒಂದು ಗುಂಪು ಇಲ್ಲಿಯ ರೈತನ ನೇಗಿಲು, ಕಮ್ಮಾರರ ತಿದಿ, ಗೃಹಿಣಿಯ ಬೀಸುವ ಕಲ್ಲು, ಕೊಟ್ಟಣ ಮುಂತಾದುವನ್ನು ಉತ್ತಮಪಡಿಸಲು ಬಡವನ ಶ್ರಮವನ್ನು ಕಮ್ಮಿ ಮಾಡಲು ಯತ್ನಿಸಲಿಲ್ಲ. ಅಷ್ಟೇ ಏಕೆ, ಇವೆಲ್ಲವನ್ನೂ ಮೀರಿ ಇಡೀ ದೇಶಕ್ಕೆ ಕ್ರಾಂತಿಕಾರಿ ಎನ್ನಿಸಬಹುದಾದ ಪೆನ್ನು, ಪೇಪರ್, ಸ್ಲೇಟನ್ನು ಕಂಡುಹಿಡಿಯಲಿಲ್ಲ. ಕೆಲವರ ಮೇಲುಜಾತಿಯ ಮಿದುಳುಗಳು ಲಕ್ಷಾಂತರ ವಿಷಯಗಳನ್ನು ನೆನಪಿಟ್ಟುಕೊಳ್ಳಲು ಯತ್ನಿಸಿ, ಪೇಪರಿಗೆ ಬದಲು ದಾಖಲೆಯ ಹಾಳೆಗಳಾಗಲು ಯತ್ನಿಸಿ ಸತ್ತುಹೋದ ಒಬ್ಬ ವ್ಯಕ್ತಿಯೊಂದಿಗೆ ತಿಳಿವು ಕೂಡಾ ಸಾಯುತ್ತಾ ಹೋಯಿತು. ಕ್ರೌರ್ಯ ಮತ್ತು ಜಡತ್ವ ಮಾತ್ರ ಉಳಿಯಿತು. ಕ್ರೌರ್ಯ ಮತ್ತು ಜಡತ್ವ ಇರುವ ಮನುಷ್ಯನಲ್ಲಿ ಪ್ರೇಮ, ಸಹಾನುಭೂತಿ, ಪಾಳುದಾರಿಕೆ ಉಳಿಯುವುದಿಲ್ಲ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...