Homeಚಳವಳಿರೈತರ ಹಕ್ಕೊತ್ತಾಯ ಬಗೆಹರಿಸುವ ಸ್ವತಂತ್ರ ಸಮಿತಿಯಲ್ಲಿ ಪಿ.ಸಾಯಿನಾಥ್, ಬಿಕೆಯು ಪ್ರತಿನಿಧಿಗಳು ಇರಲಿ: ಸುಪ್ರೀಂ ಕೋರ್ಟ್

ರೈತರ ಹಕ್ಕೊತ್ತಾಯ ಬಗೆಹರಿಸುವ ಸ್ವತಂತ್ರ ಸಮಿತಿಯಲ್ಲಿ ಪಿ.ಸಾಯಿನಾಥ್, ಬಿಕೆಯು ಪ್ರತಿನಿಧಿಗಳು ಇರಲಿ: ಸುಪ್ರೀಂ ಕೋರ್ಟ್

“ಸಮಾಜದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ. ರೈತರಿಗೂ ಪ್ರತಿಭಟಿಸುವ ಹಕ್ಕಿದ್ದು, ಅವರ ಹೋರಾಟ ಮುಂದುವರೆಯಬೇಕು. ಅಲ್ಲದೆ, ಯಾವುದೇ ಕಾರಣಕ್ಕೂ ರೈತರನ್ನು ಹೋರಾಟದ ಕಣದಿಂದ ತೆರವುಗೊಳಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ”

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ಮಾಡುತ್ತಿದ್ದು, ಈ ಕುರಿತು ಚರ್ಚಿಸಿ ಬಗೆಹರಿಸಲು ಸ್ವತಂತ್ರ ಸಮಿತಿಯೊಂದನ್ನು ರಚಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ. “ಈ ಸಮಿತಿಯಲ್ಲಿ ರೈತ ಸಂಘಟನೆಗಳ ಪ್ರತಿನಿಧಿಗಳು ಸೇರಿದಂತೆ ಖ್ಯಾತ ಚಿಂತಕ ಪಿ.ಸಾಯಿನಾಥ್ ಅವರನ್ನೂ ಒಳಗೊಳ್ಳಬಹುದು” ಎಂದು ಸಲಹೆ ನೀಡಿದೆ.

“ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಕಳೆದ 22 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ ಶಾಂತಿಯುತವಾಗಿ ಮುಂದುವರೆಯಲಿ, ಪೊಲೀಸರು ಏನು ಮಾಡಲಾಗುವುದಿಲ್ಲ. ಎಲ್ಲಿಯವರೆಗೆ ಆಸ್ತಿಪಾಸ್ತಿ ನಷ್ಟ ಅಥವಾ ಮನುಷ್ಯರ ಜೀವಕ್ಕೆ ಹಾನಿಯಾಗುವುದಿಲ್ಲವೋ ಅಲ್ಲಿಯವರೆಗೆ ರೈತರು ಪ್ರತಿಭಟಿಸುವ ಸಾಂವಿಧಾನಿಕ ಹಕ್ಕು ಹೊಂದಿದ್ದಾರೆ” ಎಂದು ಸಿಜೆಐ ಎಸ್.ಎ ಬೋಬ್ಡೆ ಹೇಳಿದ್ದಾರೆ.

ಇದನ್ನೂ ಓದಿ: ರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ 2 ಕ್ಕೆ ಮಾತ್ರ ರಾಹುಲ್ ಭಾಗಿ: ಕೇಂದ್ರ…

ಇದನ್ನೂ ಓದಿ: ರೈತರ ಹೋರಾಟ ಮುಂದುವರೆಯಲಿ. ಪ್ರತಿಭಟಿಸುವುದು ಸಾಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್

ರೈತರು ದೆಹಲಿ ತಲುಪುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಿರುವುದರಿಂದ ಔಷಧಿ ಪೂರೈಕೆಗೆ ತಡೆಯಾಗಿದೆ. ಹಾಗಾಗಿ ದೆಹಲಿ ಗಡಿಗಳಲ್ಲಿ ಹೋರಾಟ ನಿರತರನ್ನು ರೈತರನ್ನು ಇಲ್ಲಿಂದ ಹೊರಗೆ ಕಳಿಸಬೇಕೆಂದು ಸುಪ್ರೀಂನಲ್ಲಿ ದಾಖಲಾದ ಸರಣಿ ಪಿಐಎಲ್‌ಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ “ದೆಹಲಿಯ ರಸ್ತೆಗಳನ್ನು ನಿರ್ಬಂಧಿಸದೆ ರೈತರು ಪ್ರತಿಭಟನೆ ಮುಂದುವರೆಸಬಹುದು” ಎಂದಿದೆ.

ನಿನ್ನೆ ಈ ವಿಚಾರದ ಕುರಿತು ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಈ ಸಮಸ್ಯೆಯನ್ನು ನಿಭಾಯಿಸಲು ಸ್ವತಂತ್ರ ಸಮಿತಿಯೊಂದನ್ನು ರಚಿಸಿ, ಕೃಷಿಯ ಜ್ಞಾನ ಹೊಂದಿರುವ ಸ್ವತಂತ್ರ ಸದಸ್ಯರು ಮತ್ತು ಎರಡೂ ಕಡೆಯವರನ್ನು ಕೇಳಿ ಮತ್ತು ಏನು ಮಾಡಬೇಕೆಂಬುದರ ಬಗ್ಗೆ ವರದಿ ನೀಡಿ. ಈ ಸಮಿತಿಯಲ್ಲಿ ಪಿ.ಸಾಯಿನಾಥ್ ಸೇರಿದಂತೆ ರೈತ ಸಂಘಟನೆಗಳ ಪ್ರತಿನಿಧಿಗಳೂ ಇರಬಹುದು” ಎಂದು ಎಸ್‌.ಎ ಬೋಬ್ಡೆ ತಿಳಿಸಿದ್ದರು.

ಇದನ್ನೂ ಓದಿ: ಡಾ. ಕಫೀಲ್ ಖಾನ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ: ಯುಪಿ ಸರ್ಕಾರಕ್ಕೆ ಮುಖಭಂಗ

“ಸಮಾಜದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ. ರೈತರಿಗೂ ಪ್ರತಿಭಟಿಸುವ ಹಕ್ಕಿದ್ದು, ಅವರ ಹೋರಾಟ ಮುಂದುವರೆಯಬೇಕು. ಅಲ್ಲದೆ, ಯಾವುದೇ ಕಾರಣಕ್ಕೂ ರೈತರನ್ನು ಹೋರಾಟದ ಕಣದಿಂದ ತೆರವುಗೊಳಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.​

“ರೈತರಿಗೆ ಪ್ರತಿಭಟಿಸುವ ಹಕ್ಕಿದೆ. ಹಿಂಸಾಚಾರವಿಲ್ಲದೆ ಪ್ರತಿಭಟನೆಗಳು ಮುಂದುವರಿಯಬಹುದು. ಹೀಗಾಗಿ ಪೊಲೀಸರು ಈ ಹೋರಾಟವನ್ನು ನಿಗ್ರಹಿಸಲು ಮುಂದಾಗುವುದು ಸರಿಯಲ್ಲ. ರೈತರೂ ಸಹಾ ನಗರವೊಂದನ್ನು ಸುತ್ತುವರೆಯುವುದಾಗಲೀ, ಹಿಂಸೆಯನ್ನು ಪ್ರಚೋದಿಸುವುದನ್ನಾಗಲೀ ಮಾಡಬಾರದು” ಎಂದು ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೊಬ್ಡೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

“ಕೇವಲ ಪ್ರತಿಭಟನೆಗಾಗಿ ಪ್ರತಿಭಟನೆಗಳಾಗಬಾರದು. ಅವು ಕೃಷಿ ದೃಷ್ಟಿಕೋನದಿಂದ ಕೂಡಿರಬೇಕು ಎಂದು ಅರ್ಜಿದಾರರ ಪರವಾಗಿ ಹಿರಿಯ ವಕೀಲ ಹರೀಶ್​ ಸಾಳ್ವೆ ವಾದ ಮಂಡಿಸಿದಾಗ ಅದನ್ನೆ ನಾವು ಹೇಳುತ್ತಿರುವುದು ಎಂದು ಸುಪ್ರೀ ಕೋರ್ಟ್ ಹೇಳಿದೆ.

“ಪ್ರತಿಭಟನೆಯ ಉದ್ದೇಶವು ಅಹಿಂಸಾತ್ಮಕ ವಿಧಾನಗಳಿಂದ ಈಡೇರಬೇಕು. ಪ್ರತಿಭಟನೆಗಳು ಸಮಸ್ಯೆಗಳ ಬಗ್ಗೆ ಇರಬೇಕು. ಅನ್ಯಾಯಕ್ಕೊಳಗಾದವರಿಗೆ ಪ್ರತಿಭಟಿಸಲು ತಮ್ಮ ಪರವಾದ ನ್ಯಾಯವನ್ನು ಮಂಡಿಸಲು ಅವಕಾಶ ನೀಡಬೇಕು ಮತ್ತು ಸಮಸ್ಯೆಗೆ ಕಾರಣವಾದ ವ್ಯಕ್ತಿಗಳು ಅದಕ್ಕೆ ತಕ್ಕ ಉತ್ತರ ನೀಡಬೇಕು” ಎಂದು ಎಸ್‌.ಎ ಬೋಬ್ಡೆ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಸಿಐಡಿ ವಿಭಾಗದ ಡಿವೈಎಸ್ಪಿ ಲಕ್ಷ್ಮಿ(33) ಅಸಹಜ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...