Homeಚಳವಳಿರೈತರ ಹಕ್ಕೊತ್ತಾಯ ಬಗೆಹರಿಸುವ ಸ್ವತಂತ್ರ ಸಮಿತಿಯಲ್ಲಿ ಪಿ.ಸಾಯಿನಾಥ್, ಬಿಕೆಯು ಪ್ರತಿನಿಧಿಗಳು ಇರಲಿ: ಸುಪ್ರೀಂ ಕೋರ್ಟ್

ರೈತರ ಹಕ್ಕೊತ್ತಾಯ ಬಗೆಹರಿಸುವ ಸ್ವತಂತ್ರ ಸಮಿತಿಯಲ್ಲಿ ಪಿ.ಸಾಯಿನಾಥ್, ಬಿಕೆಯು ಪ್ರತಿನಿಧಿಗಳು ಇರಲಿ: ಸುಪ್ರೀಂ ಕೋರ್ಟ್

“ಸಮಾಜದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ. ರೈತರಿಗೂ ಪ್ರತಿಭಟಿಸುವ ಹಕ್ಕಿದ್ದು, ಅವರ ಹೋರಾಟ ಮುಂದುವರೆಯಬೇಕು. ಅಲ್ಲದೆ, ಯಾವುದೇ ಕಾರಣಕ್ಕೂ ರೈತರನ್ನು ಹೋರಾಟದ ಕಣದಿಂದ ತೆರವುಗೊಳಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ”

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ಮಾಡುತ್ತಿದ್ದು, ಈ ಕುರಿತು ಚರ್ಚಿಸಿ ಬಗೆಹರಿಸಲು ಸ್ವತಂತ್ರ ಸಮಿತಿಯೊಂದನ್ನು ರಚಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ. “ಈ ಸಮಿತಿಯಲ್ಲಿ ರೈತ ಸಂಘಟನೆಗಳ ಪ್ರತಿನಿಧಿಗಳು ಸೇರಿದಂತೆ ಖ್ಯಾತ ಚಿಂತಕ ಪಿ.ಸಾಯಿನಾಥ್ ಅವರನ್ನೂ ಒಳಗೊಳ್ಳಬಹುದು” ಎಂದು ಸಲಹೆ ನೀಡಿದೆ.

“ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಕಳೆದ 22 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ ಶಾಂತಿಯುತವಾಗಿ ಮುಂದುವರೆಯಲಿ, ಪೊಲೀಸರು ಏನು ಮಾಡಲಾಗುವುದಿಲ್ಲ. ಎಲ್ಲಿಯವರೆಗೆ ಆಸ್ತಿಪಾಸ್ತಿ ನಷ್ಟ ಅಥವಾ ಮನುಷ್ಯರ ಜೀವಕ್ಕೆ ಹಾನಿಯಾಗುವುದಿಲ್ಲವೋ ಅಲ್ಲಿಯವರೆಗೆ ರೈತರು ಪ್ರತಿಭಟಿಸುವ ಸಾಂವಿಧಾನಿಕ ಹಕ್ಕು ಹೊಂದಿದ್ದಾರೆ” ಎಂದು ಸಿಜೆಐ ಎಸ್.ಎ ಬೋಬ್ಡೆ ಹೇಳಿದ್ದಾರೆ.

ಇದನ್ನೂ ಓದಿ: ರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ 2 ಕ್ಕೆ ಮಾತ್ರ ರಾಹುಲ್ ಭಾಗಿ: ಕೇಂದ್ರ…

ಇದನ್ನೂ ಓದಿ: ರೈತರ ಹೋರಾಟ ಮುಂದುವರೆಯಲಿ. ಪ್ರತಿಭಟಿಸುವುದು ಸಾಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್

ರೈತರು ದೆಹಲಿ ತಲುಪುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಿರುವುದರಿಂದ ಔಷಧಿ ಪೂರೈಕೆಗೆ ತಡೆಯಾಗಿದೆ. ಹಾಗಾಗಿ ದೆಹಲಿ ಗಡಿಗಳಲ್ಲಿ ಹೋರಾಟ ನಿರತರನ್ನು ರೈತರನ್ನು ಇಲ್ಲಿಂದ ಹೊರಗೆ ಕಳಿಸಬೇಕೆಂದು ಸುಪ್ರೀಂನಲ್ಲಿ ದಾಖಲಾದ ಸರಣಿ ಪಿಐಎಲ್‌ಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ “ದೆಹಲಿಯ ರಸ್ತೆಗಳನ್ನು ನಿರ್ಬಂಧಿಸದೆ ರೈತರು ಪ್ರತಿಭಟನೆ ಮುಂದುವರೆಸಬಹುದು” ಎಂದಿದೆ.

ನಿನ್ನೆ ಈ ವಿಚಾರದ ಕುರಿತು ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಈ ಸಮಸ್ಯೆಯನ್ನು ನಿಭಾಯಿಸಲು ಸ್ವತಂತ್ರ ಸಮಿತಿಯೊಂದನ್ನು ರಚಿಸಿ, ಕೃಷಿಯ ಜ್ಞಾನ ಹೊಂದಿರುವ ಸ್ವತಂತ್ರ ಸದಸ್ಯರು ಮತ್ತು ಎರಡೂ ಕಡೆಯವರನ್ನು ಕೇಳಿ ಮತ್ತು ಏನು ಮಾಡಬೇಕೆಂಬುದರ ಬಗ್ಗೆ ವರದಿ ನೀಡಿ. ಈ ಸಮಿತಿಯಲ್ಲಿ ಪಿ.ಸಾಯಿನಾಥ್ ಸೇರಿದಂತೆ ರೈತ ಸಂಘಟನೆಗಳ ಪ್ರತಿನಿಧಿಗಳೂ ಇರಬಹುದು” ಎಂದು ಎಸ್‌.ಎ ಬೋಬ್ಡೆ ತಿಳಿಸಿದ್ದರು.

ಇದನ್ನೂ ಓದಿ: ಡಾ. ಕಫೀಲ್ ಖಾನ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ: ಯುಪಿ ಸರ್ಕಾರಕ್ಕೆ ಮುಖಭಂಗ

“ಸಮಾಜದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ. ರೈತರಿಗೂ ಪ್ರತಿಭಟಿಸುವ ಹಕ್ಕಿದ್ದು, ಅವರ ಹೋರಾಟ ಮುಂದುವರೆಯಬೇಕು. ಅಲ್ಲದೆ, ಯಾವುದೇ ಕಾರಣಕ್ಕೂ ರೈತರನ್ನು ಹೋರಾಟದ ಕಣದಿಂದ ತೆರವುಗೊಳಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.​

“ರೈತರಿಗೆ ಪ್ರತಿಭಟಿಸುವ ಹಕ್ಕಿದೆ. ಹಿಂಸಾಚಾರವಿಲ್ಲದೆ ಪ್ರತಿಭಟನೆಗಳು ಮುಂದುವರಿಯಬಹುದು. ಹೀಗಾಗಿ ಪೊಲೀಸರು ಈ ಹೋರಾಟವನ್ನು ನಿಗ್ರಹಿಸಲು ಮುಂದಾಗುವುದು ಸರಿಯಲ್ಲ. ರೈತರೂ ಸಹಾ ನಗರವೊಂದನ್ನು ಸುತ್ತುವರೆಯುವುದಾಗಲೀ, ಹಿಂಸೆಯನ್ನು ಪ್ರಚೋದಿಸುವುದನ್ನಾಗಲೀ ಮಾಡಬಾರದು” ಎಂದು ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೊಬ್ಡೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

“ಕೇವಲ ಪ್ರತಿಭಟನೆಗಾಗಿ ಪ್ರತಿಭಟನೆಗಳಾಗಬಾರದು. ಅವು ಕೃಷಿ ದೃಷ್ಟಿಕೋನದಿಂದ ಕೂಡಿರಬೇಕು ಎಂದು ಅರ್ಜಿದಾರರ ಪರವಾಗಿ ಹಿರಿಯ ವಕೀಲ ಹರೀಶ್​ ಸಾಳ್ವೆ ವಾದ ಮಂಡಿಸಿದಾಗ ಅದನ್ನೆ ನಾವು ಹೇಳುತ್ತಿರುವುದು ಎಂದು ಸುಪ್ರೀ ಕೋರ್ಟ್ ಹೇಳಿದೆ.

“ಪ್ರತಿಭಟನೆಯ ಉದ್ದೇಶವು ಅಹಿಂಸಾತ್ಮಕ ವಿಧಾನಗಳಿಂದ ಈಡೇರಬೇಕು. ಪ್ರತಿಭಟನೆಗಳು ಸಮಸ್ಯೆಗಳ ಬಗ್ಗೆ ಇರಬೇಕು. ಅನ್ಯಾಯಕ್ಕೊಳಗಾದವರಿಗೆ ಪ್ರತಿಭಟಿಸಲು ತಮ್ಮ ಪರವಾದ ನ್ಯಾಯವನ್ನು ಮಂಡಿಸಲು ಅವಕಾಶ ನೀಡಬೇಕು ಮತ್ತು ಸಮಸ್ಯೆಗೆ ಕಾರಣವಾದ ವ್ಯಕ್ತಿಗಳು ಅದಕ್ಕೆ ತಕ್ಕ ಉತ್ತರ ನೀಡಬೇಕು” ಎಂದು ಎಸ್‌.ಎ ಬೋಬ್ಡೆ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಸಿಐಡಿ ವಿಭಾಗದ ಡಿವೈಎಸ್ಪಿ ಲಕ್ಷ್ಮಿ(33) ಅಸಹಜ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...