Homeಚಳವಳಿರೈತರ ಹಕ್ಕೊತ್ತಾಯ ಬಗೆಹರಿಸುವ ಸ್ವತಂತ್ರ ಸಮಿತಿಯಲ್ಲಿ ಪಿ.ಸಾಯಿನಾಥ್, ಬಿಕೆಯು ಪ್ರತಿನಿಧಿಗಳು ಇರಲಿ: ಸುಪ್ರೀಂ ಕೋರ್ಟ್

ರೈತರ ಹಕ್ಕೊತ್ತಾಯ ಬಗೆಹರಿಸುವ ಸ್ವತಂತ್ರ ಸಮಿತಿಯಲ್ಲಿ ಪಿ.ಸಾಯಿನಾಥ್, ಬಿಕೆಯು ಪ್ರತಿನಿಧಿಗಳು ಇರಲಿ: ಸುಪ್ರೀಂ ಕೋರ್ಟ್

“ಸಮಾಜದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ. ರೈತರಿಗೂ ಪ್ರತಿಭಟಿಸುವ ಹಕ್ಕಿದ್ದು, ಅವರ ಹೋರಾಟ ಮುಂದುವರೆಯಬೇಕು. ಅಲ್ಲದೆ, ಯಾವುದೇ ಕಾರಣಕ್ಕೂ ರೈತರನ್ನು ಹೋರಾಟದ ಕಣದಿಂದ ತೆರವುಗೊಳಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ”

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ಮಾಡುತ್ತಿದ್ದು, ಈ ಕುರಿತು ಚರ್ಚಿಸಿ ಬಗೆಹರಿಸಲು ಸ್ವತಂತ್ರ ಸಮಿತಿಯೊಂದನ್ನು ರಚಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ. “ಈ ಸಮಿತಿಯಲ್ಲಿ ರೈತ ಸಂಘಟನೆಗಳ ಪ್ರತಿನಿಧಿಗಳು ಸೇರಿದಂತೆ ಖ್ಯಾತ ಚಿಂತಕ ಪಿ.ಸಾಯಿನಾಥ್ ಅವರನ್ನೂ ಒಳಗೊಳ್ಳಬಹುದು” ಎಂದು ಸಲಹೆ ನೀಡಿದೆ.

“ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಕಳೆದ 22 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ ಶಾಂತಿಯುತವಾಗಿ ಮುಂದುವರೆಯಲಿ, ಪೊಲೀಸರು ಏನು ಮಾಡಲಾಗುವುದಿಲ್ಲ. ಎಲ್ಲಿಯವರೆಗೆ ಆಸ್ತಿಪಾಸ್ತಿ ನಷ್ಟ ಅಥವಾ ಮನುಷ್ಯರ ಜೀವಕ್ಕೆ ಹಾನಿಯಾಗುವುದಿಲ್ಲವೋ ಅಲ್ಲಿಯವರೆಗೆ ರೈತರು ಪ್ರತಿಭಟಿಸುವ ಸಾಂವಿಧಾನಿಕ ಹಕ್ಕು ಹೊಂದಿದ್ದಾರೆ” ಎಂದು ಸಿಜೆಐ ಎಸ್.ಎ ಬೋಬ್ಡೆ ಹೇಳಿದ್ದಾರೆ.

ಇದನ್ನೂ ಓದಿ: ರಕ್ಷಣಾ ಸ್ಥಾಯಿ ಸಮಿತಿಯ 14 ಸಭೆಗಳಲ್ಲಿ 2 ಕ್ಕೆ ಮಾತ್ರ ರಾಹುಲ್ ಭಾಗಿ: ಕೇಂದ್ರ…

ಇದನ್ನೂ ಓದಿ: ರೈತರ ಹೋರಾಟ ಮುಂದುವರೆಯಲಿ. ಪ್ರತಿಭಟಿಸುವುದು ಸಾಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್

ರೈತರು ದೆಹಲಿ ತಲುಪುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಿರುವುದರಿಂದ ಔಷಧಿ ಪೂರೈಕೆಗೆ ತಡೆಯಾಗಿದೆ. ಹಾಗಾಗಿ ದೆಹಲಿ ಗಡಿಗಳಲ್ಲಿ ಹೋರಾಟ ನಿರತರನ್ನು ರೈತರನ್ನು ಇಲ್ಲಿಂದ ಹೊರಗೆ ಕಳಿಸಬೇಕೆಂದು ಸುಪ್ರೀಂನಲ್ಲಿ ದಾಖಲಾದ ಸರಣಿ ಪಿಐಎಲ್‌ಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ “ದೆಹಲಿಯ ರಸ್ತೆಗಳನ್ನು ನಿರ್ಬಂಧಿಸದೆ ರೈತರು ಪ್ರತಿಭಟನೆ ಮುಂದುವರೆಸಬಹುದು” ಎಂದಿದೆ.

ನಿನ್ನೆ ಈ ವಿಚಾರದ ಕುರಿತು ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಈ ಸಮಸ್ಯೆಯನ್ನು ನಿಭಾಯಿಸಲು ಸ್ವತಂತ್ರ ಸಮಿತಿಯೊಂದನ್ನು ರಚಿಸಿ, ಕೃಷಿಯ ಜ್ಞಾನ ಹೊಂದಿರುವ ಸ್ವತಂತ್ರ ಸದಸ್ಯರು ಮತ್ತು ಎರಡೂ ಕಡೆಯವರನ್ನು ಕೇಳಿ ಮತ್ತು ಏನು ಮಾಡಬೇಕೆಂಬುದರ ಬಗ್ಗೆ ವರದಿ ನೀಡಿ. ಈ ಸಮಿತಿಯಲ್ಲಿ ಪಿ.ಸಾಯಿನಾಥ್ ಸೇರಿದಂತೆ ರೈತ ಸಂಘಟನೆಗಳ ಪ್ರತಿನಿಧಿಗಳೂ ಇರಬಹುದು” ಎಂದು ಎಸ್‌.ಎ ಬೋಬ್ಡೆ ತಿಳಿಸಿದ್ದರು.

ಇದನ್ನೂ ಓದಿ: ಡಾ. ಕಫೀಲ್ ಖಾನ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ: ಯುಪಿ ಸರ್ಕಾರಕ್ಕೆ ಮುಖಭಂಗ

“ಸಮಾಜದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟಿಸುವ ಹಕ್ಕಿದೆ. ರೈತರಿಗೂ ಪ್ರತಿಭಟಿಸುವ ಹಕ್ಕಿದ್ದು, ಅವರ ಹೋರಾಟ ಮುಂದುವರೆಯಬೇಕು. ಅಲ್ಲದೆ, ಯಾವುದೇ ಕಾರಣಕ್ಕೂ ರೈತರನ್ನು ಹೋರಾಟದ ಕಣದಿಂದ ತೆರವುಗೊಳಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.​

“ರೈತರಿಗೆ ಪ್ರತಿಭಟಿಸುವ ಹಕ್ಕಿದೆ. ಹಿಂಸಾಚಾರವಿಲ್ಲದೆ ಪ್ರತಿಭಟನೆಗಳು ಮುಂದುವರಿಯಬಹುದು. ಹೀಗಾಗಿ ಪೊಲೀಸರು ಈ ಹೋರಾಟವನ್ನು ನಿಗ್ರಹಿಸಲು ಮುಂದಾಗುವುದು ಸರಿಯಲ್ಲ. ರೈತರೂ ಸಹಾ ನಗರವೊಂದನ್ನು ಸುತ್ತುವರೆಯುವುದಾಗಲೀ, ಹಿಂಸೆಯನ್ನು ಪ್ರಚೋದಿಸುವುದನ್ನಾಗಲೀ ಮಾಡಬಾರದು” ಎಂದು ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೊಬ್ಡೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಪತನದಲ್ಲಿ ಮೋದಿ ಪಾತ್ರವಿತ್ತು: ಬಿಜೆಪಿ ನಾಯಕನ ಹೇಳಿಕೆ ವೈರಲ್

“ಕೇವಲ ಪ್ರತಿಭಟನೆಗಾಗಿ ಪ್ರತಿಭಟನೆಗಳಾಗಬಾರದು. ಅವು ಕೃಷಿ ದೃಷ್ಟಿಕೋನದಿಂದ ಕೂಡಿರಬೇಕು ಎಂದು ಅರ್ಜಿದಾರರ ಪರವಾಗಿ ಹಿರಿಯ ವಕೀಲ ಹರೀಶ್​ ಸಾಳ್ವೆ ವಾದ ಮಂಡಿಸಿದಾಗ ಅದನ್ನೆ ನಾವು ಹೇಳುತ್ತಿರುವುದು ಎಂದು ಸುಪ್ರೀ ಕೋರ್ಟ್ ಹೇಳಿದೆ.

“ಪ್ರತಿಭಟನೆಯ ಉದ್ದೇಶವು ಅಹಿಂಸಾತ್ಮಕ ವಿಧಾನಗಳಿಂದ ಈಡೇರಬೇಕು. ಪ್ರತಿಭಟನೆಗಳು ಸಮಸ್ಯೆಗಳ ಬಗ್ಗೆ ಇರಬೇಕು. ಅನ್ಯಾಯಕ್ಕೊಳಗಾದವರಿಗೆ ಪ್ರತಿಭಟಿಸಲು ತಮ್ಮ ಪರವಾದ ನ್ಯಾಯವನ್ನು ಮಂಡಿಸಲು ಅವಕಾಶ ನೀಡಬೇಕು ಮತ್ತು ಸಮಸ್ಯೆಗೆ ಕಾರಣವಾದ ವ್ಯಕ್ತಿಗಳು ಅದಕ್ಕೆ ತಕ್ಕ ಉತ್ತರ ನೀಡಬೇಕು” ಎಂದು ಎಸ್‌.ಎ ಬೋಬ್ಡೆ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಸಿಐಡಿ ವಿಭಾಗದ ಡಿವೈಎಸ್ಪಿ ಲಕ್ಷ್ಮಿ(33) ಅಸಹಜ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...