Homeಮುಖಪುಟಪಿ ಸಾಯಿನಾಥ್‌ರವರ 'ಪರಿ'ಗೆ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ

ಪಿ ಸಾಯಿನಾಥ್‌ರವರ ‘ಪರಿ’ಗೆ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ

- Advertisement -
- Advertisement -

2020ನೇ ಸಾಲಿನ ಪತ್ರಿಕೋದ್ಯಮಕ್ಕಾಗಿ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿಯು ಪಿ ಸಾಯಿನಾಥ್‌ರವರ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ (ಪರಿ) ಮತ್ತು ಪತ್ರಕರ್ತ ದೀಪಂಕರ್ ಘೋಷ್ ಅವರಿಗೆ ಸಂದಿದೆ.

COVID-19 ಸಾಂಕ್ರಾಮಿಕ ಮತ್ತು ಸಂಬಂಧಿತ ವಿಷಯಗಳ ಪ್ರಸಾರಕ್ಕಾಗಿ ಘೋಷ್ ಮತ್ತು PARI ತಂಡವನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರೇಮ್ ಭಾಟಿಯಾ ಮೆಮೋರಿಯಲ್ ಟ್ರಸ್ಟ್‌ನ ಪತ್ರಿಕಾ ಹೇಳಿಕೆ ತಿಳಿಸಿದೆ.

PARI ತಂಡವು “ಹವಾಮಾನ ಬದಲಾವಣೆಯ ಪರಿಣಾಮಗಳು ಮತ್ತು ಗ್ರಾಮೀಣ ಭಾರತದ ಮೇಲೆ ಸಾಂಕ್ರಾಮಿಕದ ಪ್ರಭಾವ ಸೇರಿದಂತೆ ಅವರ ವ್ಯಾಪಕ ಕ್ಷೇತ್ರ ವರದಿಗಳಿಗಾಗಿ” ಪ್ರಶಸ್ತಿಯನ್ನು ಸ್ವೀಕರಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದುವರೆಗೂ ಪ್ರಶಸ್ತಿಯನ್ನು ಸಾಮಾನ್ಯವಾಗಿ ಒಬ್ಬ ವ್ಯಕ್ತಿಗೆ ನೀಡಲಾಗುತ್ತಿತ್ತು. ಆದರೆ ಈ ಭಾರಿ ಆ ಸಂಪ್ರದಾಯವನ್ನು ಮುರಿದಿದ್ದು “PARI ಒಟ್ಟಾರೆ ಕ್ಷೇತ್ರ ವರದಿಗಾರರು, ಸ್ವಯಂಸೇವಕರು ಮತ್ತು ಅದರ ಸಮರ್ಪಿತ ತಂಡಕ್ಕಾಗಿ” ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರೇಮ್ ಭಾಟಿಯಾ ಟ್ರಸ್ಟ್ ಹೇಳಿದೆ.

ವಲಸೆ ಕಾರ್ಮಿಕರ ಬಗ್ಗೆ, ಸೂಕ್ಷ್ಮವಾಗಿ ಹೆಣೆದುಕೊಂಡಿರುವ ಗ್ರಾಮೀಣ ಭಾರತದ ಆರ್ಥಿಕತೆಯ ಮೇಲೆ, ರೈತರು, ನಗರ ಮತ್ತು ಗ್ರಾಮೀಣ ಭಾಗದಲ್ಲಿನ ಕಾರ್ಮಿಕರು, ಕಬ್ಬು ಕತ್ತರಿಸುವವರು, ನೇಕಾರರು, ಆಟಿಕೆ ತಯಾರಕರು, ಇತರ ಕುಶಲಕರ್ಮಿಗಳು, ನೈರ್ಮಲ್ಯ ಕಾರ್ಮಿಕರು, ಸ್ಥಳಾಂತರಗೊಂಡ ಕಾರ್ಮಿಕರು, ಮುಂಬಯಿಯ ಪ್ರಮುಖ ಆಸ್ಪತ್ರೆಗಳ ಹೊರಗಿನ ಫುಟ್‌ಪಾತ್‌ಗಳಲ್ಲಿ ಕಾಯುತ್ತಿರುವ ಗ್ರಾಮೀಣ ಪ್ರದೇಶದ ಕ್ಯಾನ್ಸರ್ ರೋಗಿಗಳು, ಅಲೆಮಾರಿ ಪಾದ್ರಿಗಳು, ದೈನಂದಿನ ಬಾಜಿ ಕಟ್ಟುವವರು, ಜಾನಪದ ಕಲಾವಿದರು, ಮೀನುಗಾರರು, ಕ್ಷೌರಿಕರು, ಇಟ್ಟಿಗೆ ಗೂಡು ಕಾರ್ಮಿಕರು, ಹಾರ್ಮೋನಿಯಂ ರಿಪೇರಿ ಮಾಡುವವರು, ದಲಿತರು ಮತ್ತು ಆದಿವಾಸಿಗಳು… ಹೀಗೆ ವಿವಿಧ ಉದ್ಯೋಗಿಗಳ ಬಗ್ಗೆ ದೇಶದ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುತ್ತಾಡಿ ನೂರಾರು ವರದಿಗಳು ಮತ್ತು ವಿಡಿಯೋ ದಾಖಲೆಗಳನ್ನು ಪರಿ ಕಲೆಹಾಕಿದೆ ಎಂದು ಪರಿ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು 2014 ರಲ್ಲಿ ಸ್ಥಾಪಿಸಿದ ವೆಬ್‌ಸೈಟ್‌ ‘ಪರಿ’ ವರದಿಗಾರಿಕೆಯ ಮೂಲಕ ಗ್ರಾಮೀಣ ಭಾರತದ ಕುರಿತಾದ ದಾಖಲಾತಿಗಳ ಸಂಗ್ರಹವಾಗಿದೆ. “ಪಾರಿ ಜೀವಂತ ಜರ್ನಲ್ ಮತ್ತು ಆರ್ಕೈವ್ ಆಗಿದೆ. ಇದು ಪ್ರಸ್ತುತ ಗ್ರಾಮೀಣ ಭಾರತದ ಮೂಲೆಗೆ ತಳ್ಳಲ್ಪಟ್ಟ ವರದಿಗಳನ್ನು ಮುನ್ನೆಲೆಗೆ ತರಲು ಪ್ರಯತ್ನಿಸುತ್ತದೆ. ಈಗಾಗಲೇ ಪ್ರಕಟವಾದ ಕಥೆಗಳು, ವರದಿಗಳು, ವೀಡಿಯೊಗಳು ಮತ್ತು ಆಡಿಯೊಗಳ ಡೇಟಾಬೇಸ್ ಅನ್ನು ಸಾಧ್ಯವಾದಷ್ಟು ಮೂಲಗಳಿಂದ ಸಂಗ್ರಹಿಸಲಾಗಿದೆ. PARIಯ ಒಂದು ಕುತೂಹಲಕಾರಿ ಅಂಶವೆಂದರೆ, ಜನರ ದೈನಂದಿನ ಜೀವನದ ಬಗ್ಗೆ ಬರೆಯುತ್ತಿರುವ ಮತ್ತು ನಮ್ಮ ಯೋಜನೆಯ ಮಾನದಂಡಗಳನ್ನು ಪೂರೈಸುವ, ಯೋಜನೆಯ ಆದೇಶವನ್ನು ಅನುಸರಿಸಲು ಸಿದ್ಧರಿರುವ ಯಾರಾದರೂ ವೆಬ್‌ಸೈಟ್‌ಗೆ ಕೊಡುಗೆ ನೀಡಬಹುದು. ಇಲ್ಲಿರುವ ಎಲ್ಲವನ್ನು ಉಚಿತವಾಗಿ ಓದಬಹುದು” ಎಂದು ಪಿ ಸಾಯಿನಾಥ್ ಹೇಳುತ್ತಾರೆ.

ಮತ್ತೊರ್ವ ಪರ್ತಕರ್ತ, ಇಂಡಿಯನ್ ಎಕ್ಸ್‌ಪ್ರೆಸ್‌ನ ರಾಜಕೀಯ ವಿಭಾಗದ ಮುಖ್ಯಸ್ಥ ದೀಪಂಕರ್ ಘೋಷ್ ಅವರಿಗೂ ಸಹ ಪ್ರೇಮ್ ಭಾಟಿಯಾ ಪ್ರಶಸ್ತಿ ನೀಡಲಾಗಿದೆ.

ಪ್ರಖ್ಯಾತ ಪತ್ರಕರ್ತ ಪ್ರೇಮ್ ಭಾಟಿಯಾ (1911-1995) ಅವರ ನೆನಪಿಗಾಗಿ 1995 ರಲ್ಲಿ ಪ್ರೇಮ್ ಭಾಟಿಯಾ ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದೆ. ವಸ್ತುನಿಷ್ಠ ವರದಿಗಾರಿಕೆ, ಸತ್ಯದ ನಿರ್ಭೀತ ಅನ್ವೇಷಣೆ ಮತ್ತು ಭಾರತದಲ್ಲಿ ಪತ್ರಿಕೋದ್ಯಮದ ಗುಣಮಟ್ಟವನ್ನು ಸುಧಾರಿಸುವ ಬದ್ಧತೆಯ ಮೌಲ್ಯಗಳನ್ನು ಪ್ರಚುರ ಪಡಿಸುವುದು ಅದರ ಉದ್ದೇಶವಾಗಿದೆ.


ಇದನ್ನೂ ಓದಿ: ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಗೌರವ ಡಾಕ್ಟರೇಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...