Homeಮುಖಪುಟಪಿ ಸಾಯಿನಾಥ್‌ರವರ 'ಪರಿ'ಗೆ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ

ಪಿ ಸಾಯಿನಾಥ್‌ರವರ ‘ಪರಿ’ಗೆ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ

- Advertisement -
- Advertisement -

2020ನೇ ಸಾಲಿನ ಪತ್ರಿಕೋದ್ಯಮಕ್ಕಾಗಿ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿಯು ಪಿ ಸಾಯಿನಾಥ್‌ರವರ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ (ಪರಿ) ಮತ್ತು ಪತ್ರಕರ್ತ ದೀಪಂಕರ್ ಘೋಷ್ ಅವರಿಗೆ ಸಂದಿದೆ.

COVID-19 ಸಾಂಕ್ರಾಮಿಕ ಮತ್ತು ಸಂಬಂಧಿತ ವಿಷಯಗಳ ಪ್ರಸಾರಕ್ಕಾಗಿ ಘೋಷ್ ಮತ್ತು PARI ತಂಡವನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರೇಮ್ ಭಾಟಿಯಾ ಮೆಮೋರಿಯಲ್ ಟ್ರಸ್ಟ್‌ನ ಪತ್ರಿಕಾ ಹೇಳಿಕೆ ತಿಳಿಸಿದೆ.

PARI ತಂಡವು “ಹವಾಮಾನ ಬದಲಾವಣೆಯ ಪರಿಣಾಮಗಳು ಮತ್ತು ಗ್ರಾಮೀಣ ಭಾರತದ ಮೇಲೆ ಸಾಂಕ್ರಾಮಿಕದ ಪ್ರಭಾವ ಸೇರಿದಂತೆ ಅವರ ವ್ಯಾಪಕ ಕ್ಷೇತ್ರ ವರದಿಗಳಿಗಾಗಿ” ಪ್ರಶಸ್ತಿಯನ್ನು ಸ್ವೀಕರಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದುವರೆಗೂ ಪ್ರಶಸ್ತಿಯನ್ನು ಸಾಮಾನ್ಯವಾಗಿ ಒಬ್ಬ ವ್ಯಕ್ತಿಗೆ ನೀಡಲಾಗುತ್ತಿತ್ತು. ಆದರೆ ಈ ಭಾರಿ ಆ ಸಂಪ್ರದಾಯವನ್ನು ಮುರಿದಿದ್ದು “PARI ಒಟ್ಟಾರೆ ಕ್ಷೇತ್ರ ವರದಿಗಾರರು, ಸ್ವಯಂಸೇವಕರು ಮತ್ತು ಅದರ ಸಮರ್ಪಿತ ತಂಡಕ್ಕಾಗಿ” ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರೇಮ್ ಭಾಟಿಯಾ ಟ್ರಸ್ಟ್ ಹೇಳಿದೆ.

ವಲಸೆ ಕಾರ್ಮಿಕರ ಬಗ್ಗೆ, ಸೂಕ್ಷ್ಮವಾಗಿ ಹೆಣೆದುಕೊಂಡಿರುವ ಗ್ರಾಮೀಣ ಭಾರತದ ಆರ್ಥಿಕತೆಯ ಮೇಲೆ, ರೈತರು, ನಗರ ಮತ್ತು ಗ್ರಾಮೀಣ ಭಾಗದಲ್ಲಿನ ಕಾರ್ಮಿಕರು, ಕಬ್ಬು ಕತ್ತರಿಸುವವರು, ನೇಕಾರರು, ಆಟಿಕೆ ತಯಾರಕರು, ಇತರ ಕುಶಲಕರ್ಮಿಗಳು, ನೈರ್ಮಲ್ಯ ಕಾರ್ಮಿಕರು, ಸ್ಥಳಾಂತರಗೊಂಡ ಕಾರ್ಮಿಕರು, ಮುಂಬಯಿಯ ಪ್ರಮುಖ ಆಸ್ಪತ್ರೆಗಳ ಹೊರಗಿನ ಫುಟ್‌ಪಾತ್‌ಗಳಲ್ಲಿ ಕಾಯುತ್ತಿರುವ ಗ್ರಾಮೀಣ ಪ್ರದೇಶದ ಕ್ಯಾನ್ಸರ್ ರೋಗಿಗಳು, ಅಲೆಮಾರಿ ಪಾದ್ರಿಗಳು, ದೈನಂದಿನ ಬಾಜಿ ಕಟ್ಟುವವರು, ಜಾನಪದ ಕಲಾವಿದರು, ಮೀನುಗಾರರು, ಕ್ಷೌರಿಕರು, ಇಟ್ಟಿಗೆ ಗೂಡು ಕಾರ್ಮಿಕರು, ಹಾರ್ಮೋನಿಯಂ ರಿಪೇರಿ ಮಾಡುವವರು, ದಲಿತರು ಮತ್ತು ಆದಿವಾಸಿಗಳು… ಹೀಗೆ ವಿವಿಧ ಉದ್ಯೋಗಿಗಳ ಬಗ್ಗೆ ದೇಶದ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುತ್ತಾಡಿ ನೂರಾರು ವರದಿಗಳು ಮತ್ತು ವಿಡಿಯೋ ದಾಖಲೆಗಳನ್ನು ಪರಿ ಕಲೆಹಾಕಿದೆ ಎಂದು ಪರಿ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು 2014 ರಲ್ಲಿ ಸ್ಥಾಪಿಸಿದ ವೆಬ್‌ಸೈಟ್‌ ‘ಪರಿ’ ವರದಿಗಾರಿಕೆಯ ಮೂಲಕ ಗ್ರಾಮೀಣ ಭಾರತದ ಕುರಿತಾದ ದಾಖಲಾತಿಗಳ ಸಂಗ್ರಹವಾಗಿದೆ. “ಪಾರಿ ಜೀವಂತ ಜರ್ನಲ್ ಮತ್ತು ಆರ್ಕೈವ್ ಆಗಿದೆ. ಇದು ಪ್ರಸ್ತುತ ಗ್ರಾಮೀಣ ಭಾರತದ ಮೂಲೆಗೆ ತಳ್ಳಲ್ಪಟ್ಟ ವರದಿಗಳನ್ನು ಮುನ್ನೆಲೆಗೆ ತರಲು ಪ್ರಯತ್ನಿಸುತ್ತದೆ. ಈಗಾಗಲೇ ಪ್ರಕಟವಾದ ಕಥೆಗಳು, ವರದಿಗಳು, ವೀಡಿಯೊಗಳು ಮತ್ತು ಆಡಿಯೊಗಳ ಡೇಟಾಬೇಸ್ ಅನ್ನು ಸಾಧ್ಯವಾದಷ್ಟು ಮೂಲಗಳಿಂದ ಸಂಗ್ರಹಿಸಲಾಗಿದೆ. PARIಯ ಒಂದು ಕುತೂಹಲಕಾರಿ ಅಂಶವೆಂದರೆ, ಜನರ ದೈನಂದಿನ ಜೀವನದ ಬಗ್ಗೆ ಬರೆಯುತ್ತಿರುವ ಮತ್ತು ನಮ್ಮ ಯೋಜನೆಯ ಮಾನದಂಡಗಳನ್ನು ಪೂರೈಸುವ, ಯೋಜನೆಯ ಆದೇಶವನ್ನು ಅನುಸರಿಸಲು ಸಿದ್ಧರಿರುವ ಯಾರಾದರೂ ವೆಬ್‌ಸೈಟ್‌ಗೆ ಕೊಡುಗೆ ನೀಡಬಹುದು. ಇಲ್ಲಿರುವ ಎಲ್ಲವನ್ನು ಉಚಿತವಾಗಿ ಓದಬಹುದು” ಎಂದು ಪಿ ಸಾಯಿನಾಥ್ ಹೇಳುತ್ತಾರೆ.

ಮತ್ತೊರ್ವ ಪರ್ತಕರ್ತ, ಇಂಡಿಯನ್ ಎಕ್ಸ್‌ಪ್ರೆಸ್‌ನ ರಾಜಕೀಯ ವಿಭಾಗದ ಮುಖ್ಯಸ್ಥ ದೀಪಂಕರ್ ಘೋಷ್ ಅವರಿಗೂ ಸಹ ಪ್ರೇಮ್ ಭಾಟಿಯಾ ಪ್ರಶಸ್ತಿ ನೀಡಲಾಗಿದೆ.

ಪ್ರಖ್ಯಾತ ಪತ್ರಕರ್ತ ಪ್ರೇಮ್ ಭಾಟಿಯಾ (1911-1995) ಅವರ ನೆನಪಿಗಾಗಿ 1995 ರಲ್ಲಿ ಪ್ರೇಮ್ ಭಾಟಿಯಾ ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದೆ. ವಸ್ತುನಿಷ್ಠ ವರದಿಗಾರಿಕೆ, ಸತ್ಯದ ನಿರ್ಭೀತ ಅನ್ವೇಷಣೆ ಮತ್ತು ಭಾರತದಲ್ಲಿ ಪತ್ರಿಕೋದ್ಯಮದ ಗುಣಮಟ್ಟವನ್ನು ಸುಧಾರಿಸುವ ಬದ್ಧತೆಯ ಮೌಲ್ಯಗಳನ್ನು ಪ್ರಚುರ ಪಡಿಸುವುದು ಅದರ ಉದ್ದೇಶವಾಗಿದೆ.


ಇದನ್ನೂ ಓದಿ: ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಗೌರವ ಡಾಕ್ಟರೇಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...