Homeಮುಖಪುಟಪಿ ಸಾಯಿನಾಥ್‌ರವರ 'ಪರಿ'ಗೆ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ

ಪಿ ಸಾಯಿನಾಥ್‌ರವರ ‘ಪರಿ’ಗೆ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿ

- Advertisement -
- Advertisement -

2020ನೇ ಸಾಲಿನ ಪತ್ರಿಕೋದ್ಯಮಕ್ಕಾಗಿ ಪ್ರತಿಷ್ಠಿತ ಪ್ರೇಮ್ ಭಾಟಿಯಾ ಪ್ರಶಸ್ತಿಯು ಪಿ ಸಾಯಿನಾಥ್‌ರವರ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ (ಪರಿ) ಮತ್ತು ಪತ್ರಕರ್ತ ದೀಪಂಕರ್ ಘೋಷ್ ಅವರಿಗೆ ಸಂದಿದೆ.

COVID-19 ಸಾಂಕ್ರಾಮಿಕ ಮತ್ತು ಸಂಬಂಧಿತ ವಿಷಯಗಳ ಪ್ರಸಾರಕ್ಕಾಗಿ ಘೋಷ್ ಮತ್ತು PARI ತಂಡವನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರೇಮ್ ಭಾಟಿಯಾ ಮೆಮೋರಿಯಲ್ ಟ್ರಸ್ಟ್‌ನ ಪತ್ರಿಕಾ ಹೇಳಿಕೆ ತಿಳಿಸಿದೆ.

PARI ತಂಡವು “ಹವಾಮಾನ ಬದಲಾವಣೆಯ ಪರಿಣಾಮಗಳು ಮತ್ತು ಗ್ರಾಮೀಣ ಭಾರತದ ಮೇಲೆ ಸಾಂಕ್ರಾಮಿಕದ ಪ್ರಭಾವ ಸೇರಿದಂತೆ ಅವರ ವ್ಯಾಪಕ ಕ್ಷೇತ್ರ ವರದಿಗಳಿಗಾಗಿ” ಪ್ರಶಸ್ತಿಯನ್ನು ಸ್ವೀಕರಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದುವರೆಗೂ ಪ್ರಶಸ್ತಿಯನ್ನು ಸಾಮಾನ್ಯವಾಗಿ ಒಬ್ಬ ವ್ಯಕ್ತಿಗೆ ನೀಡಲಾಗುತ್ತಿತ್ತು. ಆದರೆ ಈ ಭಾರಿ ಆ ಸಂಪ್ರದಾಯವನ್ನು ಮುರಿದಿದ್ದು “PARI ಒಟ್ಟಾರೆ ಕ್ಷೇತ್ರ ವರದಿಗಾರರು, ಸ್ವಯಂಸೇವಕರು ಮತ್ತು ಅದರ ಸಮರ್ಪಿತ ತಂಡಕ್ಕಾಗಿ” ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರೇಮ್ ಭಾಟಿಯಾ ಟ್ರಸ್ಟ್ ಹೇಳಿದೆ.

ವಲಸೆ ಕಾರ್ಮಿಕರ ಬಗ್ಗೆ, ಸೂಕ್ಷ್ಮವಾಗಿ ಹೆಣೆದುಕೊಂಡಿರುವ ಗ್ರಾಮೀಣ ಭಾರತದ ಆರ್ಥಿಕತೆಯ ಮೇಲೆ, ರೈತರು, ನಗರ ಮತ್ತು ಗ್ರಾಮೀಣ ಭಾಗದಲ್ಲಿನ ಕಾರ್ಮಿಕರು, ಕಬ್ಬು ಕತ್ತರಿಸುವವರು, ನೇಕಾರರು, ಆಟಿಕೆ ತಯಾರಕರು, ಇತರ ಕುಶಲಕರ್ಮಿಗಳು, ನೈರ್ಮಲ್ಯ ಕಾರ್ಮಿಕರು, ಸ್ಥಳಾಂತರಗೊಂಡ ಕಾರ್ಮಿಕರು, ಮುಂಬಯಿಯ ಪ್ರಮುಖ ಆಸ್ಪತ್ರೆಗಳ ಹೊರಗಿನ ಫುಟ್‌ಪಾತ್‌ಗಳಲ್ಲಿ ಕಾಯುತ್ತಿರುವ ಗ್ರಾಮೀಣ ಪ್ರದೇಶದ ಕ್ಯಾನ್ಸರ್ ರೋಗಿಗಳು, ಅಲೆಮಾರಿ ಪಾದ್ರಿಗಳು, ದೈನಂದಿನ ಬಾಜಿ ಕಟ್ಟುವವರು, ಜಾನಪದ ಕಲಾವಿದರು, ಮೀನುಗಾರರು, ಕ್ಷೌರಿಕರು, ಇಟ್ಟಿಗೆ ಗೂಡು ಕಾರ್ಮಿಕರು, ಹಾರ್ಮೋನಿಯಂ ರಿಪೇರಿ ಮಾಡುವವರು, ದಲಿತರು ಮತ್ತು ಆದಿವಾಸಿಗಳು… ಹೀಗೆ ವಿವಿಧ ಉದ್ಯೋಗಿಗಳ ಬಗ್ಗೆ ದೇಶದ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುತ್ತಾಡಿ ನೂರಾರು ವರದಿಗಳು ಮತ್ತು ವಿಡಿಯೋ ದಾಖಲೆಗಳನ್ನು ಪರಿ ಕಲೆಹಾಕಿದೆ ಎಂದು ಪರಿ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.

ಖ್ಯಾತ ಪತ್ರಕರ್ತ ಪಿ.ಸಾಯಿನಾಥ್ ಅವರು 2014 ರಲ್ಲಿ ಸ್ಥಾಪಿಸಿದ ವೆಬ್‌ಸೈಟ್‌ ‘ಪರಿ’ ವರದಿಗಾರಿಕೆಯ ಮೂಲಕ ಗ್ರಾಮೀಣ ಭಾರತದ ಕುರಿತಾದ ದಾಖಲಾತಿಗಳ ಸಂಗ್ರಹವಾಗಿದೆ. “ಪಾರಿ ಜೀವಂತ ಜರ್ನಲ್ ಮತ್ತು ಆರ್ಕೈವ್ ಆಗಿದೆ. ಇದು ಪ್ರಸ್ತುತ ಗ್ರಾಮೀಣ ಭಾರತದ ಮೂಲೆಗೆ ತಳ್ಳಲ್ಪಟ್ಟ ವರದಿಗಳನ್ನು ಮುನ್ನೆಲೆಗೆ ತರಲು ಪ್ರಯತ್ನಿಸುತ್ತದೆ. ಈಗಾಗಲೇ ಪ್ರಕಟವಾದ ಕಥೆಗಳು, ವರದಿಗಳು, ವೀಡಿಯೊಗಳು ಮತ್ತು ಆಡಿಯೊಗಳ ಡೇಟಾಬೇಸ್ ಅನ್ನು ಸಾಧ್ಯವಾದಷ್ಟು ಮೂಲಗಳಿಂದ ಸಂಗ್ರಹಿಸಲಾಗಿದೆ. PARIಯ ಒಂದು ಕುತೂಹಲಕಾರಿ ಅಂಶವೆಂದರೆ, ಜನರ ದೈನಂದಿನ ಜೀವನದ ಬಗ್ಗೆ ಬರೆಯುತ್ತಿರುವ ಮತ್ತು ನಮ್ಮ ಯೋಜನೆಯ ಮಾನದಂಡಗಳನ್ನು ಪೂರೈಸುವ, ಯೋಜನೆಯ ಆದೇಶವನ್ನು ಅನುಸರಿಸಲು ಸಿದ್ಧರಿರುವ ಯಾರಾದರೂ ವೆಬ್‌ಸೈಟ್‌ಗೆ ಕೊಡುಗೆ ನೀಡಬಹುದು. ಇಲ್ಲಿರುವ ಎಲ್ಲವನ್ನು ಉಚಿತವಾಗಿ ಓದಬಹುದು” ಎಂದು ಪಿ ಸಾಯಿನಾಥ್ ಹೇಳುತ್ತಾರೆ.

ಮತ್ತೊರ್ವ ಪರ್ತಕರ್ತ, ಇಂಡಿಯನ್ ಎಕ್ಸ್‌ಪ್ರೆಸ್‌ನ ರಾಜಕೀಯ ವಿಭಾಗದ ಮುಖ್ಯಸ್ಥ ದೀಪಂಕರ್ ಘೋಷ್ ಅವರಿಗೂ ಸಹ ಪ್ರೇಮ್ ಭಾಟಿಯಾ ಪ್ರಶಸ್ತಿ ನೀಡಲಾಗಿದೆ.

ಪ್ರಖ್ಯಾತ ಪತ್ರಕರ್ತ ಪ್ರೇಮ್ ಭಾಟಿಯಾ (1911-1995) ಅವರ ನೆನಪಿಗಾಗಿ 1995 ರಲ್ಲಿ ಪ್ರೇಮ್ ಭಾಟಿಯಾ ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದೆ. ವಸ್ತುನಿಷ್ಠ ವರದಿಗಾರಿಕೆ, ಸತ್ಯದ ನಿರ್ಭೀತ ಅನ್ವೇಷಣೆ ಮತ್ತು ಭಾರತದಲ್ಲಿ ಪತ್ರಿಕೋದ್ಯಮದ ಗುಣಮಟ್ಟವನ್ನು ಸುಧಾರಿಸುವ ಬದ್ಧತೆಯ ಮೌಲ್ಯಗಳನ್ನು ಪ್ರಚುರ ಪಡಿಸುವುದು ಅದರ ಉದ್ದೇಶವಾಗಿದೆ.


ಇದನ್ನೂ ಓದಿ: ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ಗೆ ಗೌರವ ಡಾಕ್ಟರೇಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...