HomeUncategorizedಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

- Advertisement -
- Advertisement -

ಪದವಿಪೂರ್ವ ಉಪನ್ಯಾಸಕರ ನೇಮಕಾತಿ 2015ರ ಹುದ್ದೆಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಸೇರಿಸುವಂತೆ ಆಕಾಂಕ್ಷಿಗಳು ಒತ್ತಾಯ ಮಾಡಿದ್ದು ಇಂದು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

2011ರಿಂದ ಒಬ್ಬ ಉಪನ್ಯಾಸಕರನ್ನು ನೇಮಕಾತಿ ಮಾಡಿಲ್ಲ. 2015ರ ಸಾಲಿನ 1130 ಹುದ್ದೆಗಳ ನೇಮಕಾತಿಗೆ 2018ರಲ್ಲಿ ಪರೀಕ್ಷೆ ನಡೆದಿದ್ದು 2019ರ ಆಗಸ್ಟ್ ನಲ್ಲಿ ಅಂತಿಮ ಪಟ್ಟಿ ಪ್ರಕಟಿಸಿದ್ದಾರೆ. ಆದರೆ 2016 ರಿಂದ 2019ರವರೆಗೆ ಹಲವಾರು ಉಪನ್ಯಾಸಕ ಹುದ್ದೆಗಳು ಮರಣ, ನಿವೃತ್ತಿ, ಸ್ವಯಂ ನಿವೃತ್ತಿ ಇತ್ಯಾದಿ ಕಾರಣಗಳಿಗಾಗಿ 3407 ಹುದ್ದೆಗಳು ಖಾಲಿ ಉಳಿದಿವೆ.

ಹೀಗಿರುವಾಗ ಕೇವಲ 1130 ಹುದ್ದೆಗಳನ್ನು ತುಂಬುವ ಬದಲು 3407 ಖಾಲಿ ಹುದ್ದೆಗಳನ್ನು ಸೇರಿಸಿ ತುಂಬಬೇಕು ಎಂದು ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಆಕಾಂಕ್ಷಿಗಳ ಪರವಾಗಿ ಪರಶುರಾಮ್, ನಾಗರಾಜ್ ಹುಡೇದ್ ಒತ್ತಾಯಿಸಿದ್ದಾರೆ.

1130 ಹುದ್ದೆಗಳಿಗೆ 65,000 ಅಭ್ಯರ್ಥಿಗಳು ಪರೀಕ್ಷೆ ಬರೆದು ಮೆರಿಟ್ ಇದ್ದ 1:2 ಆಧಾರದಲ್ಲಿ  2260 ಜನರನ್ನು ಆಯ್ಕೆ ಮಾಡಿ ಕೊನೆಗೆ ಅದರಲ್ಲಿ 1130 ಜನರನ್ನು ತುಂಬಲು ಸರಕಾರ ಚಿಂತಿಸಿದೆ. ಆದರೆ 2016 ಮತ್ತು 2017ರಲ್ಲಿ ನೇಮಕಾತಿ ಮಾಡಿಲ್ಲ. ಆಗಲೂ 2015ರ  ನೋಟಿಫಿಕೇಷನ್ ಅನ್ನೇ ಪುನಾರಾವರ್ತನೆ ಮಾಡಿದ್ದಾರೆ. 2017ರಲ್ಲಿಯೇ 1130 ಹುದ್ದೆಗಳ ಜೊತೆಗೆ ಇನ್ನೂ 1512 ಹುದ್ದೆಗಳು ತುಂಬದೇ ಉಳಿದಿದ್ದವು.. ಹಾಗಾಗಿ ನಮ್ಮ ಬೇಡಿಕೆಯೆಂದರೆ ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವ ಬದಲು 1:2 ಆಧಾರದಲ್ಲಿ ಆಯ್ಕೆಯಾಗಿರುವ ಎಲ್ಲಾ 2260 ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂಬುದಾಗಿದೆ ಎಂದು ನಾಗರಾಜ್ ಹುಡೇದ್ ತಿಳಿಸಿದ್ದಾರೆ.

2015ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ, 2017ರ ಎಸ್.ಡಿ.ಎ/ಎಫ್.ಡಿ.ಎ ನೇಮಕಾತಿ, 2018ರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗಳಲ್ಲಿ ಪ್ರಥಮ ಅಧಿಸೂಚನೆಗೆ ಅನುಗುಣವಾಗಿ ಎರಡನೇ ಅಧಿಸೂಚನೆಯನ್ನು ಹೊರಡಿಸಿ ಅಂದಿನ ದಿನಾಂಕದವರೆಗಿನ ಖಾಲಿ ಹುದ್ದೆಗಳನ್ನು ಸೇರಿಸಿ ನೇಮಕಾತಿ ಮಾಡಕೊಳ್ಳಲಾಗಿದೆ. ಹಾಗಾಗಿ ಇದೇ ಮಾದರಿಯನ್ನು ಪಿಯು ಉಪನ್ಯಾಸಕ ಹುದ್ದೆಗಳ ನೇಮಕಾತಿಗೂ ಅನ್ವಯಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

8 ವರ್ಷಗಳಿಂದ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರಿಲ್ಲದೇ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿದೆ. ಫಲಿತಾಂಶವೂ ಸಹ ಕಡಿಮೆಯಾಗುತ್ತಿದೆ. ಮತ್ತೆ ನೇಮಕಾತಿ ಪ್ರಾರಂಭವಾಗಿ ಮುಗಿಯಲು ಮತ್ತೆ ಐದು ವರ್ಷಗಳೇ ಬೇಕಾಗುತ್ತದೆ. ಅಲ್ಲಿಯವರೆಗೆ ವಿದ್ಯಾರ್ಥಿಗಳಿಗೂ ಸಾಕಷ್ಟು ತೊಂದರೆಯಾಗುವುದರ ಜೊತೆಗೆ ಆಕಾಂಕ್ಷಿಗಳ ವಯೋಮಿತಿ ಸಹ ನಿರಂತರವಾಗಿ ಏರುತ್ತಲೇ ಇರುತ್ತದೆ ಹಾಗಾಗಿ ಅದಕ್ಕೆ 1:2 ಆಧಾರದಲ್ಲಿ ಆಯ್ಕೆಯಾಗಿರುವ ನಮ್ಮನ್ನು ಸೇರಿಸಬೇಕೆಂದು ಆಕಾಂಕ್ಷಿಗಳು ಪಟ್ಟು  ಹಿಡಿದಿದ್ದಾರೆ.

ಕಳೆದ ವರ್ಷ ನಡೆದ ಪರೀಕ್ಷೆಯಲ್ಲಿ ಕೇವಲ 1130 ಹುದ್ದೆಗಳು ಇದ್ದ ಕಾರಣ ನಾವು 1:2 ಪಟ್ಟಿ ಸೇರಿದ್ದೇವೆ. ಅತ್ಯಂತ ಕಡಿಮೆ ಹುದ್ದೆಗಳ ಇದ್ದ ಕಾರಣದಿಂದ ನಾವು ಆಯ್ಕೆಯಾಗಿಲ್ಲ. ಆಗಲೇ ಖಾಲಿ ಇದ್ದ ಹುದ್ದೆಗಳನ್ನು ಸೇರಿಸಿ ಪರೀಕ್ಷೆ ಮಾಡಿದ್ದಾರೆ ನಾವು ಕೂಡ 1:1 ರ ಅಂತಿಮ ಪಟ್ಟಿಯಲ್ಲಿಯೂ ಆಯ್ಕೆಯಾಗುತ್ತಿದ್ದೆವು. ನಮಗೆ ಈಗಾಗಲೇ ವಯೋಮಿತಿ ಮೀರುತ್ತಿದ್ದು ಮುಂದಿನ ನೇಮಕಾತಿಗೆ ಅರ್ಜಿ ಸಲ್ಲಿಸಲೂ ಕೂಡ ನಾವು ಅರ್ಹರಾಗಿರುವುದಿಲ್ಲ. ಈಗ ಇರುವ ಅವಕಾಶವನ್ನು ಬಿಟ್ಟರೆ ನಮಗೆ ಮುಂದೆ ನೇಮಕಾತಿ ಗಗನ ಕುಸುಮವಾಗಲಿದೆ ಎಂದು ಆಕಾಂಕ್ಷಿ ಪರಶುರಾಮ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಆದರೆ ಪಿ.ಯು ನಿರ್ದೇಶಕರಾದ ಎಂ.ಕನಗವಲ್ಲಿ, ಶಿಕ್ಷಣ ಇಲಾಖೆಯ ಉಮಾಮಹೇಶ್ವರ್ ರವರು ಈ ರೀತಿ ತುಂಬಿಕೊಳ್ಳಲು ತಾಂತ್ರಿಕ ಸಮಸ್ಯೆಗಳಿವೆ ಎಂದು ಸಚಿವರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ ಸರ್ಕಾರದ ಹಲವಾರು ಇಲಾಖೆಗಳು ಈ ವಿಧಾನದಲ್ಲಿ ನೇಮಕಾತಿ ಮಾಡಿಕೊಂಡಿರುವಾಗ ಈ ರೀತಿ ಅಡ್ಡಿಯಾಗುವುದು ಸರಿಯಲ್ಲ ಎಂಬುದು ಆಕಾಂಕ್ಷಿಗಳ ಅಭಿಪ್ರಾಯವಾಗಿದೆ..

ಈಗಾಗಲೇ ಗಂಗಾವತಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ರವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಲಾಗಿದ್ದು ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ. ಅದೇ ರೀತಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದ್ದು ಅವರು ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದು ನಾಗರಾಜ್ ಹುಡೇದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...