HomeUncategorizedಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

- Advertisement -
- Advertisement -

ಪದವಿಪೂರ್ವ ಉಪನ್ಯಾಸಕರ ನೇಮಕಾತಿ 2015ರ ಹುದ್ದೆಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಸೇರಿಸುವಂತೆ ಆಕಾಂಕ್ಷಿಗಳು ಒತ್ತಾಯ ಮಾಡಿದ್ದು ಇಂದು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

2011ರಿಂದ ಒಬ್ಬ ಉಪನ್ಯಾಸಕರನ್ನು ನೇಮಕಾತಿ ಮಾಡಿಲ್ಲ. 2015ರ ಸಾಲಿನ 1130 ಹುದ್ದೆಗಳ ನೇಮಕಾತಿಗೆ 2018ರಲ್ಲಿ ಪರೀಕ್ಷೆ ನಡೆದಿದ್ದು 2019ರ ಆಗಸ್ಟ್ ನಲ್ಲಿ ಅಂತಿಮ ಪಟ್ಟಿ ಪ್ರಕಟಿಸಿದ್ದಾರೆ. ಆದರೆ 2016 ರಿಂದ 2019ರವರೆಗೆ ಹಲವಾರು ಉಪನ್ಯಾಸಕ ಹುದ್ದೆಗಳು ಮರಣ, ನಿವೃತ್ತಿ, ಸ್ವಯಂ ನಿವೃತ್ತಿ ಇತ್ಯಾದಿ ಕಾರಣಗಳಿಗಾಗಿ 3407 ಹುದ್ದೆಗಳು ಖಾಲಿ ಉಳಿದಿವೆ.

ಹೀಗಿರುವಾಗ ಕೇವಲ 1130 ಹುದ್ದೆಗಳನ್ನು ತುಂಬುವ ಬದಲು 3407 ಖಾಲಿ ಹುದ್ದೆಗಳನ್ನು ಸೇರಿಸಿ ತುಂಬಬೇಕು ಎಂದು ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಆಕಾಂಕ್ಷಿಗಳ ಪರವಾಗಿ ಪರಶುರಾಮ್, ನಾಗರಾಜ್ ಹುಡೇದ್ ಒತ್ತಾಯಿಸಿದ್ದಾರೆ.

1130 ಹುದ್ದೆಗಳಿಗೆ 65,000 ಅಭ್ಯರ್ಥಿಗಳು ಪರೀಕ್ಷೆ ಬರೆದು ಮೆರಿಟ್ ಇದ್ದ 1:2 ಆಧಾರದಲ್ಲಿ  2260 ಜನರನ್ನು ಆಯ್ಕೆ ಮಾಡಿ ಕೊನೆಗೆ ಅದರಲ್ಲಿ 1130 ಜನರನ್ನು ತುಂಬಲು ಸರಕಾರ ಚಿಂತಿಸಿದೆ. ಆದರೆ 2016 ಮತ್ತು 2017ರಲ್ಲಿ ನೇಮಕಾತಿ ಮಾಡಿಲ್ಲ. ಆಗಲೂ 2015ರ  ನೋಟಿಫಿಕೇಷನ್ ಅನ್ನೇ ಪುನಾರಾವರ್ತನೆ ಮಾಡಿದ್ದಾರೆ. 2017ರಲ್ಲಿಯೇ 1130 ಹುದ್ದೆಗಳ ಜೊತೆಗೆ ಇನ್ನೂ 1512 ಹುದ್ದೆಗಳು ತುಂಬದೇ ಉಳಿದಿದ್ದವು.. ಹಾಗಾಗಿ ನಮ್ಮ ಬೇಡಿಕೆಯೆಂದರೆ ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವ ಬದಲು 1:2 ಆಧಾರದಲ್ಲಿ ಆಯ್ಕೆಯಾಗಿರುವ ಎಲ್ಲಾ 2260 ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂಬುದಾಗಿದೆ ಎಂದು ನಾಗರಾಜ್ ಹುಡೇದ್ ತಿಳಿಸಿದ್ದಾರೆ.

2015ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ, 2017ರ ಎಸ್.ಡಿ.ಎ/ಎಫ್.ಡಿ.ಎ ನೇಮಕಾತಿ, 2018ರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗಳಲ್ಲಿ ಪ್ರಥಮ ಅಧಿಸೂಚನೆಗೆ ಅನುಗುಣವಾಗಿ ಎರಡನೇ ಅಧಿಸೂಚನೆಯನ್ನು ಹೊರಡಿಸಿ ಅಂದಿನ ದಿನಾಂಕದವರೆಗಿನ ಖಾಲಿ ಹುದ್ದೆಗಳನ್ನು ಸೇರಿಸಿ ನೇಮಕಾತಿ ಮಾಡಕೊಳ್ಳಲಾಗಿದೆ. ಹಾಗಾಗಿ ಇದೇ ಮಾದರಿಯನ್ನು ಪಿಯು ಉಪನ್ಯಾಸಕ ಹುದ್ದೆಗಳ ನೇಮಕಾತಿಗೂ ಅನ್ವಯಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

8 ವರ್ಷಗಳಿಂದ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರಿಲ್ಲದೇ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿದೆ. ಫಲಿತಾಂಶವೂ ಸಹ ಕಡಿಮೆಯಾಗುತ್ತಿದೆ. ಮತ್ತೆ ನೇಮಕಾತಿ ಪ್ರಾರಂಭವಾಗಿ ಮುಗಿಯಲು ಮತ್ತೆ ಐದು ವರ್ಷಗಳೇ ಬೇಕಾಗುತ್ತದೆ. ಅಲ್ಲಿಯವರೆಗೆ ವಿದ್ಯಾರ್ಥಿಗಳಿಗೂ ಸಾಕಷ್ಟು ತೊಂದರೆಯಾಗುವುದರ ಜೊತೆಗೆ ಆಕಾಂಕ್ಷಿಗಳ ವಯೋಮಿತಿ ಸಹ ನಿರಂತರವಾಗಿ ಏರುತ್ತಲೇ ಇರುತ್ತದೆ ಹಾಗಾಗಿ ಅದಕ್ಕೆ 1:2 ಆಧಾರದಲ್ಲಿ ಆಯ್ಕೆಯಾಗಿರುವ ನಮ್ಮನ್ನು ಸೇರಿಸಬೇಕೆಂದು ಆಕಾಂಕ್ಷಿಗಳು ಪಟ್ಟು  ಹಿಡಿದಿದ್ದಾರೆ.

ಕಳೆದ ವರ್ಷ ನಡೆದ ಪರೀಕ್ಷೆಯಲ್ಲಿ ಕೇವಲ 1130 ಹುದ್ದೆಗಳು ಇದ್ದ ಕಾರಣ ನಾವು 1:2 ಪಟ್ಟಿ ಸೇರಿದ್ದೇವೆ. ಅತ್ಯಂತ ಕಡಿಮೆ ಹುದ್ದೆಗಳ ಇದ್ದ ಕಾರಣದಿಂದ ನಾವು ಆಯ್ಕೆಯಾಗಿಲ್ಲ. ಆಗಲೇ ಖಾಲಿ ಇದ್ದ ಹುದ್ದೆಗಳನ್ನು ಸೇರಿಸಿ ಪರೀಕ್ಷೆ ಮಾಡಿದ್ದಾರೆ ನಾವು ಕೂಡ 1:1 ರ ಅಂತಿಮ ಪಟ್ಟಿಯಲ್ಲಿಯೂ ಆಯ್ಕೆಯಾಗುತ್ತಿದ್ದೆವು. ನಮಗೆ ಈಗಾಗಲೇ ವಯೋಮಿತಿ ಮೀರುತ್ತಿದ್ದು ಮುಂದಿನ ನೇಮಕಾತಿಗೆ ಅರ್ಜಿ ಸಲ್ಲಿಸಲೂ ಕೂಡ ನಾವು ಅರ್ಹರಾಗಿರುವುದಿಲ್ಲ. ಈಗ ಇರುವ ಅವಕಾಶವನ್ನು ಬಿಟ್ಟರೆ ನಮಗೆ ಮುಂದೆ ನೇಮಕಾತಿ ಗಗನ ಕುಸುಮವಾಗಲಿದೆ ಎಂದು ಆಕಾಂಕ್ಷಿ ಪರಶುರಾಮ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಆದರೆ ಪಿ.ಯು ನಿರ್ದೇಶಕರಾದ ಎಂ.ಕನಗವಲ್ಲಿ, ಶಿಕ್ಷಣ ಇಲಾಖೆಯ ಉಮಾಮಹೇಶ್ವರ್ ರವರು ಈ ರೀತಿ ತುಂಬಿಕೊಳ್ಳಲು ತಾಂತ್ರಿಕ ಸಮಸ್ಯೆಗಳಿವೆ ಎಂದು ಸಚಿವರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ ಸರ್ಕಾರದ ಹಲವಾರು ಇಲಾಖೆಗಳು ಈ ವಿಧಾನದಲ್ಲಿ ನೇಮಕಾತಿ ಮಾಡಿಕೊಂಡಿರುವಾಗ ಈ ರೀತಿ ಅಡ್ಡಿಯಾಗುವುದು ಸರಿಯಲ್ಲ ಎಂಬುದು ಆಕಾಂಕ್ಷಿಗಳ ಅಭಿಪ್ರಾಯವಾಗಿದೆ..

ಈಗಾಗಲೇ ಗಂಗಾವತಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ರವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಲಾಗಿದ್ದು ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ. ಅದೇ ರೀತಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದ್ದು ಅವರು ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದು ನಾಗರಾಜ್ ಹುಡೇದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...