HomeUncategorizedಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

- Advertisement -
- Advertisement -

ಪದವಿಪೂರ್ವ ಉಪನ್ಯಾಸಕರ ನೇಮಕಾತಿ 2015ರ ಹುದ್ದೆಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಸೇರಿಸುವಂತೆ ಆಕಾಂಕ್ಷಿಗಳು ಒತ್ತಾಯ ಮಾಡಿದ್ದು ಇಂದು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

2011ರಿಂದ ಒಬ್ಬ ಉಪನ್ಯಾಸಕರನ್ನು ನೇಮಕಾತಿ ಮಾಡಿಲ್ಲ. 2015ರ ಸಾಲಿನ 1130 ಹುದ್ದೆಗಳ ನೇಮಕಾತಿಗೆ 2018ರಲ್ಲಿ ಪರೀಕ್ಷೆ ನಡೆದಿದ್ದು 2019ರ ಆಗಸ್ಟ್ ನಲ್ಲಿ ಅಂತಿಮ ಪಟ್ಟಿ ಪ್ರಕಟಿಸಿದ್ದಾರೆ. ಆದರೆ 2016 ರಿಂದ 2019ರವರೆಗೆ ಹಲವಾರು ಉಪನ್ಯಾಸಕ ಹುದ್ದೆಗಳು ಮರಣ, ನಿವೃತ್ತಿ, ಸ್ವಯಂ ನಿವೃತ್ತಿ ಇತ್ಯಾದಿ ಕಾರಣಗಳಿಗಾಗಿ 3407 ಹುದ್ದೆಗಳು ಖಾಲಿ ಉಳಿದಿವೆ.

ಹೀಗಿರುವಾಗ ಕೇವಲ 1130 ಹುದ್ದೆಗಳನ್ನು ತುಂಬುವ ಬದಲು 3407 ಖಾಲಿ ಹುದ್ದೆಗಳನ್ನು ಸೇರಿಸಿ ತುಂಬಬೇಕು ಎಂದು ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಆಕಾಂಕ್ಷಿಗಳ ಪರವಾಗಿ ಪರಶುರಾಮ್, ನಾಗರಾಜ್ ಹುಡೇದ್ ಒತ್ತಾಯಿಸಿದ್ದಾರೆ.

1130 ಹುದ್ದೆಗಳಿಗೆ 65,000 ಅಭ್ಯರ್ಥಿಗಳು ಪರೀಕ್ಷೆ ಬರೆದು ಮೆರಿಟ್ ಇದ್ದ 1:2 ಆಧಾರದಲ್ಲಿ  2260 ಜನರನ್ನು ಆಯ್ಕೆ ಮಾಡಿ ಕೊನೆಗೆ ಅದರಲ್ಲಿ 1130 ಜನರನ್ನು ತುಂಬಲು ಸರಕಾರ ಚಿಂತಿಸಿದೆ. ಆದರೆ 2016 ಮತ್ತು 2017ರಲ್ಲಿ ನೇಮಕಾತಿ ಮಾಡಿಲ್ಲ. ಆಗಲೂ 2015ರ  ನೋಟಿಫಿಕೇಷನ್ ಅನ್ನೇ ಪುನಾರಾವರ್ತನೆ ಮಾಡಿದ್ದಾರೆ. 2017ರಲ್ಲಿಯೇ 1130 ಹುದ್ದೆಗಳ ಜೊತೆಗೆ ಇನ್ನೂ 1512 ಹುದ್ದೆಗಳು ತುಂಬದೇ ಉಳಿದಿದ್ದವು.. ಹಾಗಾಗಿ ನಮ್ಮ ಬೇಡಿಕೆಯೆಂದರೆ ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವ ಬದಲು 1:2 ಆಧಾರದಲ್ಲಿ ಆಯ್ಕೆಯಾಗಿರುವ ಎಲ್ಲಾ 2260 ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂಬುದಾಗಿದೆ ಎಂದು ನಾಗರಾಜ್ ಹುಡೇದ್ ತಿಳಿಸಿದ್ದಾರೆ.

2015ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ, 2017ರ ಎಸ್.ಡಿ.ಎ/ಎಫ್.ಡಿ.ಎ ನೇಮಕಾತಿ, 2018ರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗಳಲ್ಲಿ ಪ್ರಥಮ ಅಧಿಸೂಚನೆಗೆ ಅನುಗುಣವಾಗಿ ಎರಡನೇ ಅಧಿಸೂಚನೆಯನ್ನು ಹೊರಡಿಸಿ ಅಂದಿನ ದಿನಾಂಕದವರೆಗಿನ ಖಾಲಿ ಹುದ್ದೆಗಳನ್ನು ಸೇರಿಸಿ ನೇಮಕಾತಿ ಮಾಡಕೊಳ್ಳಲಾಗಿದೆ. ಹಾಗಾಗಿ ಇದೇ ಮಾದರಿಯನ್ನು ಪಿಯು ಉಪನ್ಯಾಸಕ ಹುದ್ದೆಗಳ ನೇಮಕಾತಿಗೂ ಅನ್ವಯಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

8 ವರ್ಷಗಳಿಂದ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರಿಲ್ಲದೇ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿದೆ. ಫಲಿತಾಂಶವೂ ಸಹ ಕಡಿಮೆಯಾಗುತ್ತಿದೆ. ಮತ್ತೆ ನೇಮಕಾತಿ ಪ್ರಾರಂಭವಾಗಿ ಮುಗಿಯಲು ಮತ್ತೆ ಐದು ವರ್ಷಗಳೇ ಬೇಕಾಗುತ್ತದೆ. ಅಲ್ಲಿಯವರೆಗೆ ವಿದ್ಯಾರ್ಥಿಗಳಿಗೂ ಸಾಕಷ್ಟು ತೊಂದರೆಯಾಗುವುದರ ಜೊತೆಗೆ ಆಕಾಂಕ್ಷಿಗಳ ವಯೋಮಿತಿ ಸಹ ನಿರಂತರವಾಗಿ ಏರುತ್ತಲೇ ಇರುತ್ತದೆ ಹಾಗಾಗಿ ಅದಕ್ಕೆ 1:2 ಆಧಾರದಲ್ಲಿ ಆಯ್ಕೆಯಾಗಿರುವ ನಮ್ಮನ್ನು ಸೇರಿಸಬೇಕೆಂದು ಆಕಾಂಕ್ಷಿಗಳು ಪಟ್ಟು  ಹಿಡಿದಿದ್ದಾರೆ.

ಕಳೆದ ವರ್ಷ ನಡೆದ ಪರೀಕ್ಷೆಯಲ್ಲಿ ಕೇವಲ 1130 ಹುದ್ದೆಗಳು ಇದ್ದ ಕಾರಣ ನಾವು 1:2 ಪಟ್ಟಿ ಸೇರಿದ್ದೇವೆ. ಅತ್ಯಂತ ಕಡಿಮೆ ಹುದ್ದೆಗಳ ಇದ್ದ ಕಾರಣದಿಂದ ನಾವು ಆಯ್ಕೆಯಾಗಿಲ್ಲ. ಆಗಲೇ ಖಾಲಿ ಇದ್ದ ಹುದ್ದೆಗಳನ್ನು ಸೇರಿಸಿ ಪರೀಕ್ಷೆ ಮಾಡಿದ್ದಾರೆ ನಾವು ಕೂಡ 1:1 ರ ಅಂತಿಮ ಪಟ್ಟಿಯಲ್ಲಿಯೂ ಆಯ್ಕೆಯಾಗುತ್ತಿದ್ದೆವು. ನಮಗೆ ಈಗಾಗಲೇ ವಯೋಮಿತಿ ಮೀರುತ್ತಿದ್ದು ಮುಂದಿನ ನೇಮಕಾತಿಗೆ ಅರ್ಜಿ ಸಲ್ಲಿಸಲೂ ಕೂಡ ನಾವು ಅರ್ಹರಾಗಿರುವುದಿಲ್ಲ. ಈಗ ಇರುವ ಅವಕಾಶವನ್ನು ಬಿಟ್ಟರೆ ನಮಗೆ ಮುಂದೆ ನೇಮಕಾತಿ ಗಗನ ಕುಸುಮವಾಗಲಿದೆ ಎಂದು ಆಕಾಂಕ್ಷಿ ಪರಶುರಾಮ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಆದರೆ ಪಿ.ಯು ನಿರ್ದೇಶಕರಾದ ಎಂ.ಕನಗವಲ್ಲಿ, ಶಿಕ್ಷಣ ಇಲಾಖೆಯ ಉಮಾಮಹೇಶ್ವರ್ ರವರು ಈ ರೀತಿ ತುಂಬಿಕೊಳ್ಳಲು ತಾಂತ್ರಿಕ ಸಮಸ್ಯೆಗಳಿವೆ ಎಂದು ಸಚಿವರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ ಸರ್ಕಾರದ ಹಲವಾರು ಇಲಾಖೆಗಳು ಈ ವಿಧಾನದಲ್ಲಿ ನೇಮಕಾತಿ ಮಾಡಿಕೊಂಡಿರುವಾಗ ಈ ರೀತಿ ಅಡ್ಡಿಯಾಗುವುದು ಸರಿಯಲ್ಲ ಎಂಬುದು ಆಕಾಂಕ್ಷಿಗಳ ಅಭಿಪ್ರಾಯವಾಗಿದೆ..

ಈಗಾಗಲೇ ಗಂಗಾವತಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ರವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಲಾಗಿದ್ದು ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ. ಅದೇ ರೀತಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದ್ದು ಅವರು ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದು ನಾಗರಾಜ್ ಹುಡೇದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...