HomeUncategorizedಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

- Advertisement -
- Advertisement -

ಪದವಿಪೂರ್ವ ಉಪನ್ಯಾಸಕರ ನೇಮಕಾತಿ 2015ರ ಹುದ್ದೆಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಸೇರಿಸುವಂತೆ ಆಕಾಂಕ್ಷಿಗಳು ಒತ್ತಾಯ ಮಾಡಿದ್ದು ಇಂದು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

2011ರಿಂದ ಒಬ್ಬ ಉಪನ್ಯಾಸಕರನ್ನು ನೇಮಕಾತಿ ಮಾಡಿಲ್ಲ. 2015ರ ಸಾಲಿನ 1130 ಹುದ್ದೆಗಳ ನೇಮಕಾತಿಗೆ 2018ರಲ್ಲಿ ಪರೀಕ್ಷೆ ನಡೆದಿದ್ದು 2019ರ ಆಗಸ್ಟ್ ನಲ್ಲಿ ಅಂತಿಮ ಪಟ್ಟಿ ಪ್ರಕಟಿಸಿದ್ದಾರೆ. ಆದರೆ 2016 ರಿಂದ 2019ರವರೆಗೆ ಹಲವಾರು ಉಪನ್ಯಾಸಕ ಹುದ್ದೆಗಳು ಮರಣ, ನಿವೃತ್ತಿ, ಸ್ವಯಂ ನಿವೃತ್ತಿ ಇತ್ಯಾದಿ ಕಾರಣಗಳಿಗಾಗಿ 3407 ಹುದ್ದೆಗಳು ಖಾಲಿ ಉಳಿದಿವೆ.

ಹೀಗಿರುವಾಗ ಕೇವಲ 1130 ಹುದ್ದೆಗಳನ್ನು ತುಂಬುವ ಬದಲು 3407 ಖಾಲಿ ಹುದ್ದೆಗಳನ್ನು ಸೇರಿಸಿ ತುಂಬಬೇಕು ಎಂದು ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಆಕಾಂಕ್ಷಿಗಳ ಪರವಾಗಿ ಪರಶುರಾಮ್, ನಾಗರಾಜ್ ಹುಡೇದ್ ಒತ್ತಾಯಿಸಿದ್ದಾರೆ.

1130 ಹುದ್ದೆಗಳಿಗೆ 65,000 ಅಭ್ಯರ್ಥಿಗಳು ಪರೀಕ್ಷೆ ಬರೆದು ಮೆರಿಟ್ ಇದ್ದ 1:2 ಆಧಾರದಲ್ಲಿ  2260 ಜನರನ್ನು ಆಯ್ಕೆ ಮಾಡಿ ಕೊನೆಗೆ ಅದರಲ್ಲಿ 1130 ಜನರನ್ನು ತುಂಬಲು ಸರಕಾರ ಚಿಂತಿಸಿದೆ. ಆದರೆ 2016 ಮತ್ತು 2017ರಲ್ಲಿ ನೇಮಕಾತಿ ಮಾಡಿಲ್ಲ. ಆಗಲೂ 2015ರ  ನೋಟಿಫಿಕೇಷನ್ ಅನ್ನೇ ಪುನಾರಾವರ್ತನೆ ಮಾಡಿದ್ದಾರೆ. 2017ರಲ್ಲಿಯೇ 1130 ಹುದ್ದೆಗಳ ಜೊತೆಗೆ ಇನ್ನೂ 1512 ಹುದ್ದೆಗಳು ತುಂಬದೇ ಉಳಿದಿದ್ದವು.. ಹಾಗಾಗಿ ನಮ್ಮ ಬೇಡಿಕೆಯೆಂದರೆ ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವ ಬದಲು 1:2 ಆಧಾರದಲ್ಲಿ ಆಯ್ಕೆಯಾಗಿರುವ ಎಲ್ಲಾ 2260 ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂಬುದಾಗಿದೆ ಎಂದು ನಾಗರಾಜ್ ಹುಡೇದ್ ತಿಳಿಸಿದ್ದಾರೆ.

2015ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ, 2017ರ ಎಸ್.ಡಿ.ಎ/ಎಫ್.ಡಿ.ಎ ನೇಮಕಾತಿ, 2018ರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗಳಲ್ಲಿ ಪ್ರಥಮ ಅಧಿಸೂಚನೆಗೆ ಅನುಗುಣವಾಗಿ ಎರಡನೇ ಅಧಿಸೂಚನೆಯನ್ನು ಹೊರಡಿಸಿ ಅಂದಿನ ದಿನಾಂಕದವರೆಗಿನ ಖಾಲಿ ಹುದ್ದೆಗಳನ್ನು ಸೇರಿಸಿ ನೇಮಕಾತಿ ಮಾಡಕೊಳ್ಳಲಾಗಿದೆ. ಹಾಗಾಗಿ ಇದೇ ಮಾದರಿಯನ್ನು ಪಿಯು ಉಪನ್ಯಾಸಕ ಹುದ್ದೆಗಳ ನೇಮಕಾತಿಗೂ ಅನ್ವಯಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

8 ವರ್ಷಗಳಿಂದ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರಿಲ್ಲದೇ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿದೆ. ಫಲಿತಾಂಶವೂ ಸಹ ಕಡಿಮೆಯಾಗುತ್ತಿದೆ. ಮತ್ತೆ ನೇಮಕಾತಿ ಪ್ರಾರಂಭವಾಗಿ ಮುಗಿಯಲು ಮತ್ತೆ ಐದು ವರ್ಷಗಳೇ ಬೇಕಾಗುತ್ತದೆ. ಅಲ್ಲಿಯವರೆಗೆ ವಿದ್ಯಾರ್ಥಿಗಳಿಗೂ ಸಾಕಷ್ಟು ತೊಂದರೆಯಾಗುವುದರ ಜೊತೆಗೆ ಆಕಾಂಕ್ಷಿಗಳ ವಯೋಮಿತಿ ಸಹ ನಿರಂತರವಾಗಿ ಏರುತ್ತಲೇ ಇರುತ್ತದೆ ಹಾಗಾಗಿ ಅದಕ್ಕೆ 1:2 ಆಧಾರದಲ್ಲಿ ಆಯ್ಕೆಯಾಗಿರುವ ನಮ್ಮನ್ನು ಸೇರಿಸಬೇಕೆಂದು ಆಕಾಂಕ್ಷಿಗಳು ಪಟ್ಟು  ಹಿಡಿದಿದ್ದಾರೆ.

ಕಳೆದ ವರ್ಷ ನಡೆದ ಪರೀಕ್ಷೆಯಲ್ಲಿ ಕೇವಲ 1130 ಹುದ್ದೆಗಳು ಇದ್ದ ಕಾರಣ ನಾವು 1:2 ಪಟ್ಟಿ ಸೇರಿದ್ದೇವೆ. ಅತ್ಯಂತ ಕಡಿಮೆ ಹುದ್ದೆಗಳ ಇದ್ದ ಕಾರಣದಿಂದ ನಾವು ಆಯ್ಕೆಯಾಗಿಲ್ಲ. ಆಗಲೇ ಖಾಲಿ ಇದ್ದ ಹುದ್ದೆಗಳನ್ನು ಸೇರಿಸಿ ಪರೀಕ್ಷೆ ಮಾಡಿದ್ದಾರೆ ನಾವು ಕೂಡ 1:1 ರ ಅಂತಿಮ ಪಟ್ಟಿಯಲ್ಲಿಯೂ ಆಯ್ಕೆಯಾಗುತ್ತಿದ್ದೆವು. ನಮಗೆ ಈಗಾಗಲೇ ವಯೋಮಿತಿ ಮೀರುತ್ತಿದ್ದು ಮುಂದಿನ ನೇಮಕಾತಿಗೆ ಅರ್ಜಿ ಸಲ್ಲಿಸಲೂ ಕೂಡ ನಾವು ಅರ್ಹರಾಗಿರುವುದಿಲ್ಲ. ಈಗ ಇರುವ ಅವಕಾಶವನ್ನು ಬಿಟ್ಟರೆ ನಮಗೆ ಮುಂದೆ ನೇಮಕಾತಿ ಗಗನ ಕುಸುಮವಾಗಲಿದೆ ಎಂದು ಆಕಾಂಕ್ಷಿ ಪರಶುರಾಮ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಆದರೆ ಪಿ.ಯು ನಿರ್ದೇಶಕರಾದ ಎಂ.ಕನಗವಲ್ಲಿ, ಶಿಕ್ಷಣ ಇಲಾಖೆಯ ಉಮಾಮಹೇಶ್ವರ್ ರವರು ಈ ರೀತಿ ತುಂಬಿಕೊಳ್ಳಲು ತಾಂತ್ರಿಕ ಸಮಸ್ಯೆಗಳಿವೆ ಎಂದು ಸಚಿವರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ ಸರ್ಕಾರದ ಹಲವಾರು ಇಲಾಖೆಗಳು ಈ ವಿಧಾನದಲ್ಲಿ ನೇಮಕಾತಿ ಮಾಡಿಕೊಂಡಿರುವಾಗ ಈ ರೀತಿ ಅಡ್ಡಿಯಾಗುವುದು ಸರಿಯಲ್ಲ ಎಂಬುದು ಆಕಾಂಕ್ಷಿಗಳ ಅಭಿಪ್ರಾಯವಾಗಿದೆ..

ಈಗಾಗಲೇ ಗಂಗಾವತಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ರವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಲಾಗಿದ್ದು ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ. ಅದೇ ರೀತಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದ್ದು ಅವರು ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದು ನಾಗರಾಜ್ ಹುಡೇದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...