HomeUncategorizedಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

- Advertisement -
- Advertisement -

ಪದವಿಪೂರ್ವ ಉಪನ್ಯಾಸಕರ ನೇಮಕಾತಿ 2015ರ ಹುದ್ದೆಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಸೇರಿಸುವಂತೆ ಆಕಾಂಕ್ಷಿಗಳು ಒತ್ತಾಯ ಮಾಡಿದ್ದು ಇಂದು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

2011ರಿಂದ ಒಬ್ಬ ಉಪನ್ಯಾಸಕರನ್ನು ನೇಮಕಾತಿ ಮಾಡಿಲ್ಲ. 2015ರ ಸಾಲಿನ 1130 ಹುದ್ದೆಗಳ ನೇಮಕಾತಿಗೆ 2018ರಲ್ಲಿ ಪರೀಕ್ಷೆ ನಡೆದಿದ್ದು 2019ರ ಆಗಸ್ಟ್ ನಲ್ಲಿ ಅಂತಿಮ ಪಟ್ಟಿ ಪ್ರಕಟಿಸಿದ್ದಾರೆ. ಆದರೆ 2016 ರಿಂದ 2019ರವರೆಗೆ ಹಲವಾರು ಉಪನ್ಯಾಸಕ ಹುದ್ದೆಗಳು ಮರಣ, ನಿವೃತ್ತಿ, ಸ್ವಯಂ ನಿವೃತ್ತಿ ಇತ್ಯಾದಿ ಕಾರಣಗಳಿಗಾಗಿ 3407 ಹುದ್ದೆಗಳು ಖಾಲಿ ಉಳಿದಿವೆ.

ಹೀಗಿರುವಾಗ ಕೇವಲ 1130 ಹುದ್ದೆಗಳನ್ನು ತುಂಬುವ ಬದಲು 3407 ಖಾಲಿ ಹುದ್ದೆಗಳನ್ನು ಸೇರಿಸಿ ತುಂಬಬೇಕು ಎಂದು ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಆಕಾಂಕ್ಷಿಗಳ ಪರವಾಗಿ ಪರಶುರಾಮ್, ನಾಗರಾಜ್ ಹುಡೇದ್ ಒತ್ತಾಯಿಸಿದ್ದಾರೆ.

1130 ಹುದ್ದೆಗಳಿಗೆ 65,000 ಅಭ್ಯರ್ಥಿಗಳು ಪರೀಕ್ಷೆ ಬರೆದು ಮೆರಿಟ್ ಇದ್ದ 1:2 ಆಧಾರದಲ್ಲಿ  2260 ಜನರನ್ನು ಆಯ್ಕೆ ಮಾಡಿ ಕೊನೆಗೆ ಅದರಲ್ಲಿ 1130 ಜನರನ್ನು ತುಂಬಲು ಸರಕಾರ ಚಿಂತಿಸಿದೆ. ಆದರೆ 2016 ಮತ್ತು 2017ರಲ್ಲಿ ನೇಮಕಾತಿ ಮಾಡಿಲ್ಲ. ಆಗಲೂ 2015ರ  ನೋಟಿಫಿಕೇಷನ್ ಅನ್ನೇ ಪುನಾರಾವರ್ತನೆ ಮಾಡಿದ್ದಾರೆ. 2017ರಲ್ಲಿಯೇ 1130 ಹುದ್ದೆಗಳ ಜೊತೆಗೆ ಇನ್ನೂ 1512 ಹುದ್ದೆಗಳು ತುಂಬದೇ ಉಳಿದಿದ್ದವು.. ಹಾಗಾಗಿ ನಮ್ಮ ಬೇಡಿಕೆಯೆಂದರೆ ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವ ಬದಲು 1:2 ಆಧಾರದಲ್ಲಿ ಆಯ್ಕೆಯಾಗಿರುವ ಎಲ್ಲಾ 2260 ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂಬುದಾಗಿದೆ ಎಂದು ನಾಗರಾಜ್ ಹುಡೇದ್ ತಿಳಿಸಿದ್ದಾರೆ.

2015ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ, 2017ರ ಎಸ್.ಡಿ.ಎ/ಎಫ್.ಡಿ.ಎ ನೇಮಕಾತಿ, 2018ರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗಳಲ್ಲಿ ಪ್ರಥಮ ಅಧಿಸೂಚನೆಗೆ ಅನುಗುಣವಾಗಿ ಎರಡನೇ ಅಧಿಸೂಚನೆಯನ್ನು ಹೊರಡಿಸಿ ಅಂದಿನ ದಿನಾಂಕದವರೆಗಿನ ಖಾಲಿ ಹುದ್ದೆಗಳನ್ನು ಸೇರಿಸಿ ನೇಮಕಾತಿ ಮಾಡಕೊಳ್ಳಲಾಗಿದೆ. ಹಾಗಾಗಿ ಇದೇ ಮಾದರಿಯನ್ನು ಪಿಯು ಉಪನ್ಯಾಸಕ ಹುದ್ದೆಗಳ ನೇಮಕಾತಿಗೂ ಅನ್ವಯಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

8 ವರ್ಷಗಳಿಂದ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರಿಲ್ಲದೇ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿದೆ. ಫಲಿತಾಂಶವೂ ಸಹ ಕಡಿಮೆಯಾಗುತ್ತಿದೆ. ಮತ್ತೆ ನೇಮಕಾತಿ ಪ್ರಾರಂಭವಾಗಿ ಮುಗಿಯಲು ಮತ್ತೆ ಐದು ವರ್ಷಗಳೇ ಬೇಕಾಗುತ್ತದೆ. ಅಲ್ಲಿಯವರೆಗೆ ವಿದ್ಯಾರ್ಥಿಗಳಿಗೂ ಸಾಕಷ್ಟು ತೊಂದರೆಯಾಗುವುದರ ಜೊತೆಗೆ ಆಕಾಂಕ್ಷಿಗಳ ವಯೋಮಿತಿ ಸಹ ನಿರಂತರವಾಗಿ ಏರುತ್ತಲೇ ಇರುತ್ತದೆ ಹಾಗಾಗಿ ಅದಕ್ಕೆ 1:2 ಆಧಾರದಲ್ಲಿ ಆಯ್ಕೆಯಾಗಿರುವ ನಮ್ಮನ್ನು ಸೇರಿಸಬೇಕೆಂದು ಆಕಾಂಕ್ಷಿಗಳು ಪಟ್ಟು  ಹಿಡಿದಿದ್ದಾರೆ.

ಕಳೆದ ವರ್ಷ ನಡೆದ ಪರೀಕ್ಷೆಯಲ್ಲಿ ಕೇವಲ 1130 ಹುದ್ದೆಗಳು ಇದ್ದ ಕಾರಣ ನಾವು 1:2 ಪಟ್ಟಿ ಸೇರಿದ್ದೇವೆ. ಅತ್ಯಂತ ಕಡಿಮೆ ಹುದ್ದೆಗಳ ಇದ್ದ ಕಾರಣದಿಂದ ನಾವು ಆಯ್ಕೆಯಾಗಿಲ್ಲ. ಆಗಲೇ ಖಾಲಿ ಇದ್ದ ಹುದ್ದೆಗಳನ್ನು ಸೇರಿಸಿ ಪರೀಕ್ಷೆ ಮಾಡಿದ್ದಾರೆ ನಾವು ಕೂಡ 1:1 ರ ಅಂತಿಮ ಪಟ್ಟಿಯಲ್ಲಿಯೂ ಆಯ್ಕೆಯಾಗುತ್ತಿದ್ದೆವು. ನಮಗೆ ಈಗಾಗಲೇ ವಯೋಮಿತಿ ಮೀರುತ್ತಿದ್ದು ಮುಂದಿನ ನೇಮಕಾತಿಗೆ ಅರ್ಜಿ ಸಲ್ಲಿಸಲೂ ಕೂಡ ನಾವು ಅರ್ಹರಾಗಿರುವುದಿಲ್ಲ. ಈಗ ಇರುವ ಅವಕಾಶವನ್ನು ಬಿಟ್ಟರೆ ನಮಗೆ ಮುಂದೆ ನೇಮಕಾತಿ ಗಗನ ಕುಸುಮವಾಗಲಿದೆ ಎಂದು ಆಕಾಂಕ್ಷಿ ಪರಶುರಾಮ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಆದರೆ ಪಿ.ಯು ನಿರ್ದೇಶಕರಾದ ಎಂ.ಕನಗವಲ್ಲಿ, ಶಿಕ್ಷಣ ಇಲಾಖೆಯ ಉಮಾಮಹೇಶ್ವರ್ ರವರು ಈ ರೀತಿ ತುಂಬಿಕೊಳ್ಳಲು ತಾಂತ್ರಿಕ ಸಮಸ್ಯೆಗಳಿವೆ ಎಂದು ಸಚಿವರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ ಸರ್ಕಾರದ ಹಲವಾರು ಇಲಾಖೆಗಳು ಈ ವಿಧಾನದಲ್ಲಿ ನೇಮಕಾತಿ ಮಾಡಿಕೊಂಡಿರುವಾಗ ಈ ರೀತಿ ಅಡ್ಡಿಯಾಗುವುದು ಸರಿಯಲ್ಲ ಎಂಬುದು ಆಕಾಂಕ್ಷಿಗಳ ಅಭಿಪ್ರಾಯವಾಗಿದೆ..

ಈಗಾಗಲೇ ಗಂಗಾವತಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ರವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಲಾಗಿದ್ದು ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ. ಅದೇ ರೀತಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದ್ದು ಅವರು ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದು ನಾಗರಾಜ್ ಹುಡೇದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...