HomeUncategorizedಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

- Advertisement -
- Advertisement -

ಪದವಿಪೂರ್ವ ಉಪನ್ಯಾಸಕರ ನೇಮಕಾತಿ 2015ರ ಹುದ್ದೆಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಸೇರಿಸುವಂತೆ ಆಕಾಂಕ್ಷಿಗಳು ಒತ್ತಾಯ ಮಾಡಿದ್ದು ಇಂದು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

2011ರಿಂದ ಒಬ್ಬ ಉಪನ್ಯಾಸಕರನ್ನು ನೇಮಕಾತಿ ಮಾಡಿಲ್ಲ. 2015ರ ಸಾಲಿನ 1130 ಹುದ್ದೆಗಳ ನೇಮಕಾತಿಗೆ 2018ರಲ್ಲಿ ಪರೀಕ್ಷೆ ನಡೆದಿದ್ದು 2019ರ ಆಗಸ್ಟ್ ನಲ್ಲಿ ಅಂತಿಮ ಪಟ್ಟಿ ಪ್ರಕಟಿಸಿದ್ದಾರೆ. ಆದರೆ 2016 ರಿಂದ 2019ರವರೆಗೆ ಹಲವಾರು ಉಪನ್ಯಾಸಕ ಹುದ್ದೆಗಳು ಮರಣ, ನಿವೃತ್ತಿ, ಸ್ವಯಂ ನಿವೃತ್ತಿ ಇತ್ಯಾದಿ ಕಾರಣಗಳಿಗಾಗಿ 3407 ಹುದ್ದೆಗಳು ಖಾಲಿ ಉಳಿದಿವೆ.

ಹೀಗಿರುವಾಗ ಕೇವಲ 1130 ಹುದ್ದೆಗಳನ್ನು ತುಂಬುವ ಬದಲು 3407 ಖಾಲಿ ಹುದ್ದೆಗಳನ್ನು ಸೇರಿಸಿ ತುಂಬಬೇಕು ಎಂದು ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಆಕಾಂಕ್ಷಿಗಳ ಪರವಾಗಿ ಪರಶುರಾಮ್, ನಾಗರಾಜ್ ಹುಡೇದ್ ಒತ್ತಾಯಿಸಿದ್ದಾರೆ.

1130 ಹುದ್ದೆಗಳಿಗೆ 65,000 ಅಭ್ಯರ್ಥಿಗಳು ಪರೀಕ್ಷೆ ಬರೆದು ಮೆರಿಟ್ ಇದ್ದ 1:2 ಆಧಾರದಲ್ಲಿ  2260 ಜನರನ್ನು ಆಯ್ಕೆ ಮಾಡಿ ಕೊನೆಗೆ ಅದರಲ್ಲಿ 1130 ಜನರನ್ನು ತುಂಬಲು ಸರಕಾರ ಚಿಂತಿಸಿದೆ. ಆದರೆ 2016 ಮತ್ತು 2017ರಲ್ಲಿ ನೇಮಕಾತಿ ಮಾಡಿಲ್ಲ. ಆಗಲೂ 2015ರ  ನೋಟಿಫಿಕೇಷನ್ ಅನ್ನೇ ಪುನಾರಾವರ್ತನೆ ಮಾಡಿದ್ದಾರೆ. 2017ರಲ್ಲಿಯೇ 1130 ಹುದ್ದೆಗಳ ಜೊತೆಗೆ ಇನ್ನೂ 1512 ಹುದ್ದೆಗಳು ತುಂಬದೇ ಉಳಿದಿದ್ದವು.. ಹಾಗಾಗಿ ನಮ್ಮ ಬೇಡಿಕೆಯೆಂದರೆ ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವ ಬದಲು 1:2 ಆಧಾರದಲ್ಲಿ ಆಯ್ಕೆಯಾಗಿರುವ ಎಲ್ಲಾ 2260 ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂಬುದಾಗಿದೆ ಎಂದು ನಾಗರಾಜ್ ಹುಡೇದ್ ತಿಳಿಸಿದ್ದಾರೆ.

2015ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ, 2017ರ ಎಸ್.ಡಿ.ಎ/ಎಫ್.ಡಿ.ಎ ನೇಮಕಾತಿ, 2018ರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗಳಲ್ಲಿ ಪ್ರಥಮ ಅಧಿಸೂಚನೆಗೆ ಅನುಗುಣವಾಗಿ ಎರಡನೇ ಅಧಿಸೂಚನೆಯನ್ನು ಹೊರಡಿಸಿ ಅಂದಿನ ದಿನಾಂಕದವರೆಗಿನ ಖಾಲಿ ಹುದ್ದೆಗಳನ್ನು ಸೇರಿಸಿ ನೇಮಕಾತಿ ಮಾಡಕೊಳ್ಳಲಾಗಿದೆ. ಹಾಗಾಗಿ ಇದೇ ಮಾದರಿಯನ್ನು ಪಿಯು ಉಪನ್ಯಾಸಕ ಹುದ್ದೆಗಳ ನೇಮಕಾತಿಗೂ ಅನ್ವಯಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

8 ವರ್ಷಗಳಿಂದ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರಿಲ್ಲದೇ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿದೆ. ಫಲಿತಾಂಶವೂ ಸಹ ಕಡಿಮೆಯಾಗುತ್ತಿದೆ. ಮತ್ತೆ ನೇಮಕಾತಿ ಪ್ರಾರಂಭವಾಗಿ ಮುಗಿಯಲು ಮತ್ತೆ ಐದು ವರ್ಷಗಳೇ ಬೇಕಾಗುತ್ತದೆ. ಅಲ್ಲಿಯವರೆಗೆ ವಿದ್ಯಾರ್ಥಿಗಳಿಗೂ ಸಾಕಷ್ಟು ತೊಂದರೆಯಾಗುವುದರ ಜೊತೆಗೆ ಆಕಾಂಕ್ಷಿಗಳ ವಯೋಮಿತಿ ಸಹ ನಿರಂತರವಾಗಿ ಏರುತ್ತಲೇ ಇರುತ್ತದೆ ಹಾಗಾಗಿ ಅದಕ್ಕೆ 1:2 ಆಧಾರದಲ್ಲಿ ಆಯ್ಕೆಯಾಗಿರುವ ನಮ್ಮನ್ನು ಸೇರಿಸಬೇಕೆಂದು ಆಕಾಂಕ್ಷಿಗಳು ಪಟ್ಟು  ಹಿಡಿದಿದ್ದಾರೆ.

ಕಳೆದ ವರ್ಷ ನಡೆದ ಪರೀಕ್ಷೆಯಲ್ಲಿ ಕೇವಲ 1130 ಹುದ್ದೆಗಳು ಇದ್ದ ಕಾರಣ ನಾವು 1:2 ಪಟ್ಟಿ ಸೇರಿದ್ದೇವೆ. ಅತ್ಯಂತ ಕಡಿಮೆ ಹುದ್ದೆಗಳ ಇದ್ದ ಕಾರಣದಿಂದ ನಾವು ಆಯ್ಕೆಯಾಗಿಲ್ಲ. ಆಗಲೇ ಖಾಲಿ ಇದ್ದ ಹುದ್ದೆಗಳನ್ನು ಸೇರಿಸಿ ಪರೀಕ್ಷೆ ಮಾಡಿದ್ದಾರೆ ನಾವು ಕೂಡ 1:1 ರ ಅಂತಿಮ ಪಟ್ಟಿಯಲ್ಲಿಯೂ ಆಯ್ಕೆಯಾಗುತ್ತಿದ್ದೆವು. ನಮಗೆ ಈಗಾಗಲೇ ವಯೋಮಿತಿ ಮೀರುತ್ತಿದ್ದು ಮುಂದಿನ ನೇಮಕಾತಿಗೆ ಅರ್ಜಿ ಸಲ್ಲಿಸಲೂ ಕೂಡ ನಾವು ಅರ್ಹರಾಗಿರುವುದಿಲ್ಲ. ಈಗ ಇರುವ ಅವಕಾಶವನ್ನು ಬಿಟ್ಟರೆ ನಮಗೆ ಮುಂದೆ ನೇಮಕಾತಿ ಗಗನ ಕುಸುಮವಾಗಲಿದೆ ಎಂದು ಆಕಾಂಕ್ಷಿ ಪರಶುರಾಮ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಆದರೆ ಪಿ.ಯು ನಿರ್ದೇಶಕರಾದ ಎಂ.ಕನಗವಲ್ಲಿ, ಶಿಕ್ಷಣ ಇಲಾಖೆಯ ಉಮಾಮಹೇಶ್ವರ್ ರವರು ಈ ರೀತಿ ತುಂಬಿಕೊಳ್ಳಲು ತಾಂತ್ರಿಕ ಸಮಸ್ಯೆಗಳಿವೆ ಎಂದು ಸಚಿವರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ ಸರ್ಕಾರದ ಹಲವಾರು ಇಲಾಖೆಗಳು ಈ ವಿಧಾನದಲ್ಲಿ ನೇಮಕಾತಿ ಮಾಡಿಕೊಂಡಿರುವಾಗ ಈ ರೀತಿ ಅಡ್ಡಿಯಾಗುವುದು ಸರಿಯಲ್ಲ ಎಂಬುದು ಆಕಾಂಕ್ಷಿಗಳ ಅಭಿಪ್ರಾಯವಾಗಿದೆ..

ಈಗಾಗಲೇ ಗಂಗಾವತಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ರವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಲಾಗಿದ್ದು ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ. ಅದೇ ರೀತಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದ್ದು ಅವರು ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದು ನಾಗರಾಜ್ ಹುಡೇದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...