HomeUncategorizedಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಹೆಚ್ಚಳಕ್ಕಾಗಿ ಒತ್ತಾಯ: ಸಿಎಂ, ಶಿಕ್ಷಣ ಸಚಿವರ ಭೇಟಿ..

- Advertisement -
- Advertisement -

ಪದವಿಪೂರ್ವ ಉಪನ್ಯಾಸಕರ ನೇಮಕಾತಿ 2015ರ ಹುದ್ದೆಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಸೇರಿಸುವಂತೆ ಆಕಾಂಕ್ಷಿಗಳು ಒತ್ತಾಯ ಮಾಡಿದ್ದು ಇಂದು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

2011ರಿಂದ ಒಬ್ಬ ಉಪನ್ಯಾಸಕರನ್ನು ನೇಮಕಾತಿ ಮಾಡಿಲ್ಲ. 2015ರ ಸಾಲಿನ 1130 ಹುದ್ದೆಗಳ ನೇಮಕಾತಿಗೆ 2018ರಲ್ಲಿ ಪರೀಕ್ಷೆ ನಡೆದಿದ್ದು 2019ರ ಆಗಸ್ಟ್ ನಲ್ಲಿ ಅಂತಿಮ ಪಟ್ಟಿ ಪ್ರಕಟಿಸಿದ್ದಾರೆ. ಆದರೆ 2016 ರಿಂದ 2019ರವರೆಗೆ ಹಲವಾರು ಉಪನ್ಯಾಸಕ ಹುದ್ದೆಗಳು ಮರಣ, ನಿವೃತ್ತಿ, ಸ್ವಯಂ ನಿವೃತ್ತಿ ಇತ್ಯಾದಿ ಕಾರಣಗಳಿಗಾಗಿ 3407 ಹುದ್ದೆಗಳು ಖಾಲಿ ಉಳಿದಿವೆ.

ಹೀಗಿರುವಾಗ ಕೇವಲ 1130 ಹುದ್ದೆಗಳನ್ನು ತುಂಬುವ ಬದಲು 3407 ಖಾಲಿ ಹುದ್ದೆಗಳನ್ನು ಸೇರಿಸಿ ತುಂಬಬೇಕು ಎಂದು ಪದವಿಪೂರ್ವ ಉಪನ್ಯಾಸಕರ ಹುದ್ದೆಗಳ ಆಕಾಂಕ್ಷಿಗಳ ಪರವಾಗಿ ಪರಶುರಾಮ್, ನಾಗರಾಜ್ ಹುಡೇದ್ ಒತ್ತಾಯಿಸಿದ್ದಾರೆ.

1130 ಹುದ್ದೆಗಳಿಗೆ 65,000 ಅಭ್ಯರ್ಥಿಗಳು ಪರೀಕ್ಷೆ ಬರೆದು ಮೆರಿಟ್ ಇದ್ದ 1:2 ಆಧಾರದಲ್ಲಿ  2260 ಜನರನ್ನು ಆಯ್ಕೆ ಮಾಡಿ ಕೊನೆಗೆ ಅದರಲ್ಲಿ 1130 ಜನರನ್ನು ತುಂಬಲು ಸರಕಾರ ಚಿಂತಿಸಿದೆ. ಆದರೆ 2016 ಮತ್ತು 2017ರಲ್ಲಿ ನೇಮಕಾತಿ ಮಾಡಿಲ್ಲ. ಆಗಲೂ 2015ರ  ನೋಟಿಫಿಕೇಷನ್ ಅನ್ನೇ ಪುನಾರಾವರ್ತನೆ ಮಾಡಿದ್ದಾರೆ. 2017ರಲ್ಲಿಯೇ 1130 ಹುದ್ದೆಗಳ ಜೊತೆಗೆ ಇನ್ನೂ 1512 ಹುದ್ದೆಗಳು ತುಂಬದೇ ಉಳಿದಿದ್ದವು.. ಹಾಗಾಗಿ ನಮ್ಮ ಬೇಡಿಕೆಯೆಂದರೆ ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವ ಬದಲು 1:2 ಆಧಾರದಲ್ಲಿ ಆಯ್ಕೆಯಾಗಿರುವ ಎಲ್ಲಾ 2260 ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂಬುದಾಗಿದೆ ಎಂದು ನಾಗರಾಜ್ ಹುಡೇದ್ ತಿಳಿಸಿದ್ದಾರೆ.

2015ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ, 2017ರ ಎಸ್.ಡಿ.ಎ/ಎಫ್.ಡಿ.ಎ ನೇಮಕಾತಿ, 2018ರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗಳಲ್ಲಿ ಪ್ರಥಮ ಅಧಿಸೂಚನೆಗೆ ಅನುಗುಣವಾಗಿ ಎರಡನೇ ಅಧಿಸೂಚನೆಯನ್ನು ಹೊರಡಿಸಿ ಅಂದಿನ ದಿನಾಂಕದವರೆಗಿನ ಖಾಲಿ ಹುದ್ದೆಗಳನ್ನು ಸೇರಿಸಿ ನೇಮಕಾತಿ ಮಾಡಕೊಳ್ಳಲಾಗಿದೆ. ಹಾಗಾಗಿ ಇದೇ ಮಾದರಿಯನ್ನು ಪಿಯು ಉಪನ್ಯಾಸಕ ಹುದ್ದೆಗಳ ನೇಮಕಾತಿಗೂ ಅನ್ವಯಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

8 ವರ್ಷಗಳಿಂದ ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರಿಲ್ಲದೇ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿದೆ. ಫಲಿತಾಂಶವೂ ಸಹ ಕಡಿಮೆಯಾಗುತ್ತಿದೆ. ಮತ್ತೆ ನೇಮಕಾತಿ ಪ್ರಾರಂಭವಾಗಿ ಮುಗಿಯಲು ಮತ್ತೆ ಐದು ವರ್ಷಗಳೇ ಬೇಕಾಗುತ್ತದೆ. ಅಲ್ಲಿಯವರೆಗೆ ವಿದ್ಯಾರ್ಥಿಗಳಿಗೂ ಸಾಕಷ್ಟು ತೊಂದರೆಯಾಗುವುದರ ಜೊತೆಗೆ ಆಕಾಂಕ್ಷಿಗಳ ವಯೋಮಿತಿ ಸಹ ನಿರಂತರವಾಗಿ ಏರುತ್ತಲೇ ಇರುತ್ತದೆ ಹಾಗಾಗಿ ಅದಕ್ಕೆ 1:2 ಆಧಾರದಲ್ಲಿ ಆಯ್ಕೆಯಾಗಿರುವ ನಮ್ಮನ್ನು ಸೇರಿಸಬೇಕೆಂದು ಆಕಾಂಕ್ಷಿಗಳು ಪಟ್ಟು  ಹಿಡಿದಿದ್ದಾರೆ.

ಕಳೆದ ವರ್ಷ ನಡೆದ ಪರೀಕ್ಷೆಯಲ್ಲಿ ಕೇವಲ 1130 ಹುದ್ದೆಗಳು ಇದ್ದ ಕಾರಣ ನಾವು 1:2 ಪಟ್ಟಿ ಸೇರಿದ್ದೇವೆ. ಅತ್ಯಂತ ಕಡಿಮೆ ಹುದ್ದೆಗಳ ಇದ್ದ ಕಾರಣದಿಂದ ನಾವು ಆಯ್ಕೆಯಾಗಿಲ್ಲ. ಆಗಲೇ ಖಾಲಿ ಇದ್ದ ಹುದ್ದೆಗಳನ್ನು ಸೇರಿಸಿ ಪರೀಕ್ಷೆ ಮಾಡಿದ್ದಾರೆ ನಾವು ಕೂಡ 1:1 ರ ಅಂತಿಮ ಪಟ್ಟಿಯಲ್ಲಿಯೂ ಆಯ್ಕೆಯಾಗುತ್ತಿದ್ದೆವು. ನಮಗೆ ಈಗಾಗಲೇ ವಯೋಮಿತಿ ಮೀರುತ್ತಿದ್ದು ಮುಂದಿನ ನೇಮಕಾತಿಗೆ ಅರ್ಜಿ ಸಲ್ಲಿಸಲೂ ಕೂಡ ನಾವು ಅರ್ಹರಾಗಿರುವುದಿಲ್ಲ. ಈಗ ಇರುವ ಅವಕಾಶವನ್ನು ಬಿಟ್ಟರೆ ನಮಗೆ ಮುಂದೆ ನೇಮಕಾತಿ ಗಗನ ಕುಸುಮವಾಗಲಿದೆ ಎಂದು ಆಕಾಂಕ್ಷಿ ಪರಶುರಾಮ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಆದರೆ ಪಿ.ಯು ನಿರ್ದೇಶಕರಾದ ಎಂ.ಕನಗವಲ್ಲಿ, ಶಿಕ್ಷಣ ಇಲಾಖೆಯ ಉಮಾಮಹೇಶ್ವರ್ ರವರು ಈ ರೀತಿ ತುಂಬಿಕೊಳ್ಳಲು ತಾಂತ್ರಿಕ ಸಮಸ್ಯೆಗಳಿವೆ ಎಂದು ಸಚಿವರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ ಸರ್ಕಾರದ ಹಲವಾರು ಇಲಾಖೆಗಳು ಈ ವಿಧಾನದಲ್ಲಿ ನೇಮಕಾತಿ ಮಾಡಿಕೊಂಡಿರುವಾಗ ಈ ರೀತಿ ಅಡ್ಡಿಯಾಗುವುದು ಸರಿಯಲ್ಲ ಎಂಬುದು ಆಕಾಂಕ್ಷಿಗಳ ಅಭಿಪ್ರಾಯವಾಗಿದೆ..

ಈಗಾಗಲೇ ಗಂಗಾವತಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ರವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಲಾಗಿದ್ದು ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ. ಅದೇ ರೀತಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದ್ದು ಅವರು ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದು ನಾಗರಾಜ್ ಹುಡೇದ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...