Homeಸಿನಿಮಾಕ್ರೀಡೆಟೀಕಾಕಾರರಿಗೆ ನನ್ನ ಚಿನ್ನವೇ ಉತ್ತರ: ಪಿ.ವಿ ಸಿಂಧು ಮನದಾಳದ ಮಾತುಗಳು

ಟೀಕಾಕಾರರಿಗೆ ನನ್ನ ಚಿನ್ನವೇ ಉತ್ತರ: ಪಿ.ವಿ ಸಿಂಧು ಮನದಾಳದ ಮಾತುಗಳು

- Advertisement -
- Advertisement -

ಕೊನೆಯ ಎರಡು ವಿಶ್ವ ಚಾಂಪಿಯನ್‌ಶಿಪ್ ಫೈನಲ್‌ಗಳನ್ನು ಗೆದ್ದಿಲ್ಲ ಎಂಬ ಟೀಕೆಗೆ ಗುರಿಯಾದ ನಂತರ ತಾನು “ಕೋಪ ಮತ್ತು ದುಃಖ” ಎರೆನ್ನು ಅನುಭವಿಸಿದ್ದೆ ಎಂದಿರುವ ಪಿ.ವಿ ಸಿಂಧು 2019ರ ಆವೃತ್ತಿಯಲ್ಲಿ ಭಾನುವಾರ ನಾನು ಗೆದ್ದ ಚಿನ್ನದ ಪದಕವು “ನನ್ನನ್ನು ಪದೇ ಪದೇ ಪ್ರಶ್ನೆಗಳನ್ನು ಕೇಳಿದ ಜನರಿಗೆ” ಎಲ್ಲರಿಗೂ ನನ್ನ ಉತ್ತರವಾಗಿದೆ ಎಂದು ತಿಳಿಸಿದ್ದಾರೆ.

ಹೈದರಾಬಾದ್‌ನ 24 ವರ್ಷದ ಪಿ.ವಿ ಸಿಂಧು ಜಪಾನ್‌ನ ಪ್ರತಿಸ್ಪರ್ಧಿ ನೊಜೋಮಿ ಒಕುಹರಾ ಅವರನ್ನು 21-7, 21-7 ಸೆಟ್‌ಗಳಿಂದ ಸೋಲಿಸಿ ವಿಶ್ವ ಚಾಂಪಿಯನ್‌ಶಿಪ್ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಂತರ ಪತ್ರಿಕಾಗೊಷ್ಠಿಯಲ್ಲಿ ಅವರು ಮಾತನಾಡಿ ಈ ವಿಷಯ ತಿಳಿಸಿದ್ದಾರೆ.

2017 ಮತ್ತು 2018 ರ ಫೈನಲ್‌ನಲ್ಲಿ ಕ್ರಮವಾಗಿ ಒಕುಹರಾ ಮತ್ತು ಸ್ಪೇನ್‌ನ ಒಲಿಂಪಿಕ್ ಚಾಂಪಿಯನ್ ಕೆರೊಲಿನಾ ಮರಿನ್ ವಿರುದ್ಧ ಸೋತಿದ್ದ ಸಿಂಧು 2019ರ ನಿನ್ನೆಯ ಪಂದ್ಯದಲ್ಲಿ ಕೊನೆಗೂ ಗೆಲುವಿನ ನಗೆ ಬೀರಿದ್ದಾರೆ.

ಸಿಂಧು ಅವರು 2016 ರ ರಿಯೊ ಒಲಿಂಪಿಕ್ಸ್‌ನಿಂದೀಚೆಗೆ ಉತ್ತಮ ಪ್ರದರ್ಶನ ನೀಡಿಲ್ಲ ಎಂಬ ಟೀಕೆಗೆ ಗುರಿಯಾಗಿದ್ದರು. ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲದೆ ಗೋಲ್ಡ್ ಕೋಸ್ಟ್ ಕಾಮನ್‌ವೆಲ್ತ್ ಕ್ರೀಡಾಕೂಟ, ಜಕಾರ್ತಾ ಏಷ್ಯನ್ ಕ್ರೀಡಾಕೂಟದ ಫೈನಲ್‌ಗಳನ್ನು ಸಹ ಕಳೆದುಕೊಂಡಿದ್ದರು. ಅವರು ಕಳೆದ ವರ್ಷ ಥೈಲ್ಯಾಂಡ್ ಓಪನ್ ಮತ್ತು ಇಂಡಿಯಾ ಓಪನ್ ಪಂದ್ಯಾವಳಿಯಲ್ಲಿಯೂ ಕೇವಲ ರನ್ನರ್ಸ್ ಅಪ್ ಸ್ಥಾನ ಪಡೆದಿದ್ದರು.

ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಸಿಂಧುಗೆ ಇದು ಐದನೇ ಪದಕವಾಗಿದೆ. ಅವರು 2013 ಮತ್ತು 2014 ಆವೃತ್ತಿಗಳಲ್ಲಿ ತಲಾ ಕಂಚು ಗೆದ್ದರು.
ಸಿಂಧು ಈಗ ವಿಶ್ವ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಮಹಿಳಾ ಸಿಂಗಲ್ಸ್‌ನಲ್ಲಿ ಜಂಟಿ ಅತ್ಯಧಿಕ ಪದಕ ವಿಜೇತರಾಗಿದ್ದಾರೆ. ಮಾಜಿ ಒಲಿಂಪಿಕ್ ಚಾಂಪಿಯನ್ ಚೀನಾದ ಜಾಂಗ್ ನಿಂಗ್ ಸಹ 2001 ಮತ್ತು 2007 ರ ನಡುವೆ 1 ಚಿನ್ನ, 2 ಬೆಳ್ಳಿ ಮತ್ತು 2 ಕಂಚು ಗೆದ್ದಿದ್ದಾರೆ.

“ಎಲ್ಲರೂ ನನ್ನಿಂದ ಈ ಗೆಲುವನ್ನು ಬಯಸುತ್ತಿದ್ದರು. ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕದ ನಂತರ, ನನ್ನ ಮೇಲೆ ನಿರೀಕ್ಷೆಗಳು ನಿಜವಾಗಿಯೂ ಹೆಚ್ಚಾಗಿದ್ದವು. ನಾನು ಟೂರ್ನಮೆಂಟ್‌ಗೆ ಹೋದಾಗಲೆಲ್ಲಾ ಎಲ್ಲರೂ ಚಿನ್ನ ಗೆಲ್ಲುತ್ತಾರೆ ಎಂದು ಎಲ್ಲರೂ ನಿರೀಕ್ಷಿಸುತ್ತಾರೆ” ಎಂದು ಸಿಂಧು ಹೇಳಿದ್ದಾರೆ.

“ಒಂದು ವರ್ಷದ ನಂತರ, ನಾನು ಅದಕ್ಕಾಗಿ ಏನು ಮಾಡಬೇಕೆಂದು ಯೋಚಿಸಿದೆ. ಇತರರ ಬಗ್ಗೆ ಯೋಚಿಸುವ ಬದಲು, ನಾನು ನನಗಾಗಿ ಆಡಬೇಕು ಮತ್ತು ನನ್ನ 100 ಪ್ರತಿಶತವ ಸಾಮರ್ಥ್ಯವನ್ನು ಪಣಕೊಡ್ಡಬೇಕು ಆಗ ಮತ್ತು ಸಹಜವಾಗಿ ನಾನು ಗೆಲ್ಲುತ್ತೇನೆ ಏಕೆಂದರೆ ಇತರರ ಬಗ್ಗೆ ಯೋಚಿಸುವುದರಿಂದ ನನ್ನ ಮೇಲೆ ಹೆಚ್ಚುವರಿ ಒತ್ತಡ ಉಂಟಾಗುತ್ತದೆ” ಎಂದು ತಿಳಿಸಿದ್ದಾರೆ.

ಜನರು ಈಗಾಗಲೇ ಟೋಕಿಯೊದಲ್ಲಿ 2020ರಲ್ಲಿ ನಡೆಯುವ ಒಲಿಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವ ಬಗ್ಗೆ ಮಾತಾಡುತ್ತಿದ್ದಾರೆ. ಒಲಪಿಂಕ್ಸ್ ನಲ್ಲಿ ನಾನು ಪದಕ ಗಳಿಸಿಲ್ಲ. ಹಾಗಾಗಿ ಈ ಬಾರಿ ನಾನು ಉತ್ತಮವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಅನಿಸುತ್ತಿದೆ. ಆದರೆ ಈಗ ನಾನು ಬೇರೆ ಏನನ್ನೂ ಯೋಚಿಸಲು ಬಯಸುವುದಿಲ್ಲ ಬದಲಿಗೆ ಸಿಕ್ಕಿರುವ ಪ್ರಶಸ್ತಿಯನ್ನು ಆನಂದಿಸಲು ಬಯಸುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...