Homeಸಿನಿಮಾಕ್ರೀಡೆಟೀಕಾಕಾರರಿಗೆ ನನ್ನ ಚಿನ್ನವೇ ಉತ್ತರ: ಪಿ.ವಿ ಸಿಂಧು ಮನದಾಳದ ಮಾತುಗಳು

ಟೀಕಾಕಾರರಿಗೆ ನನ್ನ ಚಿನ್ನವೇ ಉತ್ತರ: ಪಿ.ವಿ ಸಿಂಧು ಮನದಾಳದ ಮಾತುಗಳು

- Advertisement -
- Advertisement -

ಕೊನೆಯ ಎರಡು ವಿಶ್ವ ಚಾಂಪಿಯನ್‌ಶಿಪ್ ಫೈನಲ್‌ಗಳನ್ನು ಗೆದ್ದಿಲ್ಲ ಎಂಬ ಟೀಕೆಗೆ ಗುರಿಯಾದ ನಂತರ ತಾನು “ಕೋಪ ಮತ್ತು ದುಃಖ” ಎರೆನ್ನು ಅನುಭವಿಸಿದ್ದೆ ಎಂದಿರುವ ಪಿ.ವಿ ಸಿಂಧು 2019ರ ಆವೃತ್ತಿಯಲ್ಲಿ ಭಾನುವಾರ ನಾನು ಗೆದ್ದ ಚಿನ್ನದ ಪದಕವು “ನನ್ನನ್ನು ಪದೇ ಪದೇ ಪ್ರಶ್ನೆಗಳನ್ನು ಕೇಳಿದ ಜನರಿಗೆ” ಎಲ್ಲರಿಗೂ ನನ್ನ ಉತ್ತರವಾಗಿದೆ ಎಂದು ತಿಳಿಸಿದ್ದಾರೆ.

ಹೈದರಾಬಾದ್‌ನ 24 ವರ್ಷದ ಪಿ.ವಿ ಸಿಂಧು ಜಪಾನ್‌ನ ಪ್ರತಿಸ್ಪರ್ಧಿ ನೊಜೋಮಿ ಒಕುಹರಾ ಅವರನ್ನು 21-7, 21-7 ಸೆಟ್‌ಗಳಿಂದ ಸೋಲಿಸಿ ವಿಶ್ವ ಚಾಂಪಿಯನ್‌ಶಿಪ್ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಂತರ ಪತ್ರಿಕಾಗೊಷ್ಠಿಯಲ್ಲಿ ಅವರು ಮಾತನಾಡಿ ಈ ವಿಷಯ ತಿಳಿಸಿದ್ದಾರೆ.

2017 ಮತ್ತು 2018 ರ ಫೈನಲ್‌ನಲ್ಲಿ ಕ್ರಮವಾಗಿ ಒಕುಹರಾ ಮತ್ತು ಸ್ಪೇನ್‌ನ ಒಲಿಂಪಿಕ್ ಚಾಂಪಿಯನ್ ಕೆರೊಲಿನಾ ಮರಿನ್ ವಿರುದ್ಧ ಸೋತಿದ್ದ ಸಿಂಧು 2019ರ ನಿನ್ನೆಯ ಪಂದ್ಯದಲ್ಲಿ ಕೊನೆಗೂ ಗೆಲುವಿನ ನಗೆ ಬೀರಿದ್ದಾರೆ.

ಸಿಂಧು ಅವರು 2016 ರ ರಿಯೊ ಒಲಿಂಪಿಕ್ಸ್‌ನಿಂದೀಚೆಗೆ ಉತ್ತಮ ಪ್ರದರ್ಶನ ನೀಡಿಲ್ಲ ಎಂಬ ಟೀಕೆಗೆ ಗುರಿಯಾಗಿದ್ದರು. ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲದೆ ಗೋಲ್ಡ್ ಕೋಸ್ಟ್ ಕಾಮನ್‌ವೆಲ್ತ್ ಕ್ರೀಡಾಕೂಟ, ಜಕಾರ್ತಾ ಏಷ್ಯನ್ ಕ್ರೀಡಾಕೂಟದ ಫೈನಲ್‌ಗಳನ್ನು ಸಹ ಕಳೆದುಕೊಂಡಿದ್ದರು. ಅವರು ಕಳೆದ ವರ್ಷ ಥೈಲ್ಯಾಂಡ್ ಓಪನ್ ಮತ್ತು ಇಂಡಿಯಾ ಓಪನ್ ಪಂದ್ಯಾವಳಿಯಲ್ಲಿಯೂ ಕೇವಲ ರನ್ನರ್ಸ್ ಅಪ್ ಸ್ಥಾನ ಪಡೆದಿದ್ದರು.

ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಸಿಂಧುಗೆ ಇದು ಐದನೇ ಪದಕವಾಗಿದೆ. ಅವರು 2013 ಮತ್ತು 2014 ಆವೃತ್ತಿಗಳಲ್ಲಿ ತಲಾ ಕಂಚು ಗೆದ್ದರು.
ಸಿಂಧು ಈಗ ವಿಶ್ವ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಮಹಿಳಾ ಸಿಂಗಲ್ಸ್‌ನಲ್ಲಿ ಜಂಟಿ ಅತ್ಯಧಿಕ ಪದಕ ವಿಜೇತರಾಗಿದ್ದಾರೆ. ಮಾಜಿ ಒಲಿಂಪಿಕ್ ಚಾಂಪಿಯನ್ ಚೀನಾದ ಜಾಂಗ್ ನಿಂಗ್ ಸಹ 2001 ಮತ್ತು 2007 ರ ನಡುವೆ 1 ಚಿನ್ನ, 2 ಬೆಳ್ಳಿ ಮತ್ತು 2 ಕಂಚು ಗೆದ್ದಿದ್ದಾರೆ.

“ಎಲ್ಲರೂ ನನ್ನಿಂದ ಈ ಗೆಲುವನ್ನು ಬಯಸುತ್ತಿದ್ದರು. ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕದ ನಂತರ, ನನ್ನ ಮೇಲೆ ನಿರೀಕ್ಷೆಗಳು ನಿಜವಾಗಿಯೂ ಹೆಚ್ಚಾಗಿದ್ದವು. ನಾನು ಟೂರ್ನಮೆಂಟ್‌ಗೆ ಹೋದಾಗಲೆಲ್ಲಾ ಎಲ್ಲರೂ ಚಿನ್ನ ಗೆಲ್ಲುತ್ತಾರೆ ಎಂದು ಎಲ್ಲರೂ ನಿರೀಕ್ಷಿಸುತ್ತಾರೆ” ಎಂದು ಸಿಂಧು ಹೇಳಿದ್ದಾರೆ.

“ಒಂದು ವರ್ಷದ ನಂತರ, ನಾನು ಅದಕ್ಕಾಗಿ ಏನು ಮಾಡಬೇಕೆಂದು ಯೋಚಿಸಿದೆ. ಇತರರ ಬಗ್ಗೆ ಯೋಚಿಸುವ ಬದಲು, ನಾನು ನನಗಾಗಿ ಆಡಬೇಕು ಮತ್ತು ನನ್ನ 100 ಪ್ರತಿಶತವ ಸಾಮರ್ಥ್ಯವನ್ನು ಪಣಕೊಡ್ಡಬೇಕು ಆಗ ಮತ್ತು ಸಹಜವಾಗಿ ನಾನು ಗೆಲ್ಲುತ್ತೇನೆ ಏಕೆಂದರೆ ಇತರರ ಬಗ್ಗೆ ಯೋಚಿಸುವುದರಿಂದ ನನ್ನ ಮೇಲೆ ಹೆಚ್ಚುವರಿ ಒತ್ತಡ ಉಂಟಾಗುತ್ತದೆ” ಎಂದು ತಿಳಿಸಿದ್ದಾರೆ.

ಜನರು ಈಗಾಗಲೇ ಟೋಕಿಯೊದಲ್ಲಿ 2020ರಲ್ಲಿ ನಡೆಯುವ ಒಲಿಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವ ಬಗ್ಗೆ ಮಾತಾಡುತ್ತಿದ್ದಾರೆ. ಒಲಪಿಂಕ್ಸ್ ನಲ್ಲಿ ನಾನು ಪದಕ ಗಳಿಸಿಲ್ಲ. ಹಾಗಾಗಿ ಈ ಬಾರಿ ನಾನು ಉತ್ತಮವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಅನಿಸುತ್ತಿದೆ. ಆದರೆ ಈಗ ನಾನು ಬೇರೆ ಏನನ್ನೂ ಯೋಚಿಸಲು ಬಯಸುವುದಿಲ್ಲ ಬದಲಿಗೆ ಸಿಕ್ಕಿರುವ ಪ್ರಶಸ್ತಿಯನ್ನು ಆನಂದಿಸಲು ಬಯಸುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...