Homeಸಿನಿಮಾಕ್ರೀಡೆಟೀಕಾಕಾರರಿಗೆ ನನ್ನ ಚಿನ್ನವೇ ಉತ್ತರ: ಪಿ.ವಿ ಸಿಂಧು ಮನದಾಳದ ಮಾತುಗಳು

ಟೀಕಾಕಾರರಿಗೆ ನನ್ನ ಚಿನ್ನವೇ ಉತ್ತರ: ಪಿ.ವಿ ಸಿಂಧು ಮನದಾಳದ ಮಾತುಗಳು

- Advertisement -
- Advertisement -

ಕೊನೆಯ ಎರಡು ವಿಶ್ವ ಚಾಂಪಿಯನ್‌ಶಿಪ್ ಫೈನಲ್‌ಗಳನ್ನು ಗೆದ್ದಿಲ್ಲ ಎಂಬ ಟೀಕೆಗೆ ಗುರಿಯಾದ ನಂತರ ತಾನು “ಕೋಪ ಮತ್ತು ದುಃಖ” ಎರೆನ್ನು ಅನುಭವಿಸಿದ್ದೆ ಎಂದಿರುವ ಪಿ.ವಿ ಸಿಂಧು 2019ರ ಆವೃತ್ತಿಯಲ್ಲಿ ಭಾನುವಾರ ನಾನು ಗೆದ್ದ ಚಿನ್ನದ ಪದಕವು “ನನ್ನನ್ನು ಪದೇ ಪದೇ ಪ್ರಶ್ನೆಗಳನ್ನು ಕೇಳಿದ ಜನರಿಗೆ” ಎಲ್ಲರಿಗೂ ನನ್ನ ಉತ್ತರವಾಗಿದೆ ಎಂದು ತಿಳಿಸಿದ್ದಾರೆ.

ಹೈದರಾಬಾದ್‌ನ 24 ವರ್ಷದ ಪಿ.ವಿ ಸಿಂಧು ಜಪಾನ್‌ನ ಪ್ರತಿಸ್ಪರ್ಧಿ ನೊಜೋಮಿ ಒಕುಹರಾ ಅವರನ್ನು 21-7, 21-7 ಸೆಟ್‌ಗಳಿಂದ ಸೋಲಿಸಿ ವಿಶ್ವ ಚಾಂಪಿಯನ್‌ಶಿಪ್ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಂತರ ಪತ್ರಿಕಾಗೊಷ್ಠಿಯಲ್ಲಿ ಅವರು ಮಾತನಾಡಿ ಈ ವಿಷಯ ತಿಳಿಸಿದ್ದಾರೆ.

2017 ಮತ್ತು 2018 ರ ಫೈನಲ್‌ನಲ್ಲಿ ಕ್ರಮವಾಗಿ ಒಕುಹರಾ ಮತ್ತು ಸ್ಪೇನ್‌ನ ಒಲಿಂಪಿಕ್ ಚಾಂಪಿಯನ್ ಕೆರೊಲಿನಾ ಮರಿನ್ ವಿರುದ್ಧ ಸೋತಿದ್ದ ಸಿಂಧು 2019ರ ನಿನ್ನೆಯ ಪಂದ್ಯದಲ್ಲಿ ಕೊನೆಗೂ ಗೆಲುವಿನ ನಗೆ ಬೀರಿದ್ದಾರೆ.

ಸಿಂಧು ಅವರು 2016 ರ ರಿಯೊ ಒಲಿಂಪಿಕ್ಸ್‌ನಿಂದೀಚೆಗೆ ಉತ್ತಮ ಪ್ರದರ್ಶನ ನೀಡಿಲ್ಲ ಎಂಬ ಟೀಕೆಗೆ ಗುರಿಯಾಗಿದ್ದರು. ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲದೆ ಗೋಲ್ಡ್ ಕೋಸ್ಟ್ ಕಾಮನ್‌ವೆಲ್ತ್ ಕ್ರೀಡಾಕೂಟ, ಜಕಾರ್ತಾ ಏಷ್ಯನ್ ಕ್ರೀಡಾಕೂಟದ ಫೈನಲ್‌ಗಳನ್ನು ಸಹ ಕಳೆದುಕೊಂಡಿದ್ದರು. ಅವರು ಕಳೆದ ವರ್ಷ ಥೈಲ್ಯಾಂಡ್ ಓಪನ್ ಮತ್ತು ಇಂಡಿಯಾ ಓಪನ್ ಪಂದ್ಯಾವಳಿಯಲ್ಲಿಯೂ ಕೇವಲ ರನ್ನರ್ಸ್ ಅಪ್ ಸ್ಥಾನ ಪಡೆದಿದ್ದರು.

ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಸಿಂಧುಗೆ ಇದು ಐದನೇ ಪದಕವಾಗಿದೆ. ಅವರು 2013 ಮತ್ತು 2014 ಆವೃತ್ತಿಗಳಲ್ಲಿ ತಲಾ ಕಂಚು ಗೆದ್ದರು.
ಸಿಂಧು ಈಗ ವಿಶ್ವ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಮಹಿಳಾ ಸಿಂಗಲ್ಸ್‌ನಲ್ಲಿ ಜಂಟಿ ಅತ್ಯಧಿಕ ಪದಕ ವಿಜೇತರಾಗಿದ್ದಾರೆ. ಮಾಜಿ ಒಲಿಂಪಿಕ್ ಚಾಂಪಿಯನ್ ಚೀನಾದ ಜಾಂಗ್ ನಿಂಗ್ ಸಹ 2001 ಮತ್ತು 2007 ರ ನಡುವೆ 1 ಚಿನ್ನ, 2 ಬೆಳ್ಳಿ ಮತ್ತು 2 ಕಂಚು ಗೆದ್ದಿದ್ದಾರೆ.

“ಎಲ್ಲರೂ ನನ್ನಿಂದ ಈ ಗೆಲುವನ್ನು ಬಯಸುತ್ತಿದ್ದರು. ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕದ ನಂತರ, ನನ್ನ ಮೇಲೆ ನಿರೀಕ್ಷೆಗಳು ನಿಜವಾಗಿಯೂ ಹೆಚ್ಚಾಗಿದ್ದವು. ನಾನು ಟೂರ್ನಮೆಂಟ್‌ಗೆ ಹೋದಾಗಲೆಲ್ಲಾ ಎಲ್ಲರೂ ಚಿನ್ನ ಗೆಲ್ಲುತ್ತಾರೆ ಎಂದು ಎಲ್ಲರೂ ನಿರೀಕ್ಷಿಸುತ್ತಾರೆ” ಎಂದು ಸಿಂಧು ಹೇಳಿದ್ದಾರೆ.

“ಒಂದು ವರ್ಷದ ನಂತರ, ನಾನು ಅದಕ್ಕಾಗಿ ಏನು ಮಾಡಬೇಕೆಂದು ಯೋಚಿಸಿದೆ. ಇತರರ ಬಗ್ಗೆ ಯೋಚಿಸುವ ಬದಲು, ನಾನು ನನಗಾಗಿ ಆಡಬೇಕು ಮತ್ತು ನನ್ನ 100 ಪ್ರತಿಶತವ ಸಾಮರ್ಥ್ಯವನ್ನು ಪಣಕೊಡ್ಡಬೇಕು ಆಗ ಮತ್ತು ಸಹಜವಾಗಿ ನಾನು ಗೆಲ್ಲುತ್ತೇನೆ ಏಕೆಂದರೆ ಇತರರ ಬಗ್ಗೆ ಯೋಚಿಸುವುದರಿಂದ ನನ್ನ ಮೇಲೆ ಹೆಚ್ಚುವರಿ ಒತ್ತಡ ಉಂಟಾಗುತ್ತದೆ” ಎಂದು ತಿಳಿಸಿದ್ದಾರೆ.

ಜನರು ಈಗಾಗಲೇ ಟೋಕಿಯೊದಲ್ಲಿ 2020ರಲ್ಲಿ ನಡೆಯುವ ಒಲಿಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವ ಬಗ್ಗೆ ಮಾತಾಡುತ್ತಿದ್ದಾರೆ. ಒಲಪಿಂಕ್ಸ್ ನಲ್ಲಿ ನಾನು ಪದಕ ಗಳಿಸಿಲ್ಲ. ಹಾಗಾಗಿ ಈ ಬಾರಿ ನಾನು ಉತ್ತಮವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಅನಿಸುತ್ತಿದೆ. ಆದರೆ ಈಗ ನಾನು ಬೇರೆ ಏನನ್ನೂ ಯೋಚಿಸಲು ಬಯಸುವುದಿಲ್ಲ ಬದಲಿಗೆ ಸಿಕ್ಕಿರುವ ಪ್ರಶಸ್ತಿಯನ್ನು ಆನಂದಿಸಲು ಬಯಸುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...