Homeಸಿನಿಮಾಕ್ರೀಡೆಟೀಕಾಕಾರರಿಗೆ ನನ್ನ ಚಿನ್ನವೇ ಉತ್ತರ: ಪಿ.ವಿ ಸಿಂಧು ಮನದಾಳದ ಮಾತುಗಳು

ಟೀಕಾಕಾರರಿಗೆ ನನ್ನ ಚಿನ್ನವೇ ಉತ್ತರ: ಪಿ.ವಿ ಸಿಂಧು ಮನದಾಳದ ಮಾತುಗಳು

- Advertisement -
- Advertisement -

ಕೊನೆಯ ಎರಡು ವಿಶ್ವ ಚಾಂಪಿಯನ್‌ಶಿಪ್ ಫೈನಲ್‌ಗಳನ್ನು ಗೆದ್ದಿಲ್ಲ ಎಂಬ ಟೀಕೆಗೆ ಗುರಿಯಾದ ನಂತರ ತಾನು “ಕೋಪ ಮತ್ತು ದುಃಖ” ಎರೆನ್ನು ಅನುಭವಿಸಿದ್ದೆ ಎಂದಿರುವ ಪಿ.ವಿ ಸಿಂಧು 2019ರ ಆವೃತ್ತಿಯಲ್ಲಿ ಭಾನುವಾರ ನಾನು ಗೆದ್ದ ಚಿನ್ನದ ಪದಕವು “ನನ್ನನ್ನು ಪದೇ ಪದೇ ಪ್ರಶ್ನೆಗಳನ್ನು ಕೇಳಿದ ಜನರಿಗೆ” ಎಲ್ಲರಿಗೂ ನನ್ನ ಉತ್ತರವಾಗಿದೆ ಎಂದು ತಿಳಿಸಿದ್ದಾರೆ.

ಹೈದರಾಬಾದ್‌ನ 24 ವರ್ಷದ ಪಿ.ವಿ ಸಿಂಧು ಜಪಾನ್‌ನ ಪ್ರತಿಸ್ಪರ್ಧಿ ನೊಜೋಮಿ ಒಕುಹರಾ ಅವರನ್ನು 21-7, 21-7 ಸೆಟ್‌ಗಳಿಂದ ಸೋಲಿಸಿ ವಿಶ್ವ ಚಾಂಪಿಯನ್‌ಶಿಪ್ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಂತರ ಪತ್ರಿಕಾಗೊಷ್ಠಿಯಲ್ಲಿ ಅವರು ಮಾತನಾಡಿ ಈ ವಿಷಯ ತಿಳಿಸಿದ್ದಾರೆ.

2017 ಮತ್ತು 2018 ರ ಫೈನಲ್‌ನಲ್ಲಿ ಕ್ರಮವಾಗಿ ಒಕುಹರಾ ಮತ್ತು ಸ್ಪೇನ್‌ನ ಒಲಿಂಪಿಕ್ ಚಾಂಪಿಯನ್ ಕೆರೊಲಿನಾ ಮರಿನ್ ವಿರುದ್ಧ ಸೋತಿದ್ದ ಸಿಂಧು 2019ರ ನಿನ್ನೆಯ ಪಂದ್ಯದಲ್ಲಿ ಕೊನೆಗೂ ಗೆಲುವಿನ ನಗೆ ಬೀರಿದ್ದಾರೆ.

ಸಿಂಧು ಅವರು 2016 ರ ರಿಯೊ ಒಲಿಂಪಿಕ್ಸ್‌ನಿಂದೀಚೆಗೆ ಉತ್ತಮ ಪ್ರದರ್ಶನ ನೀಡಿಲ್ಲ ಎಂಬ ಟೀಕೆಗೆ ಗುರಿಯಾಗಿದ್ದರು. ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲದೆ ಗೋಲ್ಡ್ ಕೋಸ್ಟ್ ಕಾಮನ್‌ವೆಲ್ತ್ ಕ್ರೀಡಾಕೂಟ, ಜಕಾರ್ತಾ ಏಷ್ಯನ್ ಕ್ರೀಡಾಕೂಟದ ಫೈನಲ್‌ಗಳನ್ನು ಸಹ ಕಳೆದುಕೊಂಡಿದ್ದರು. ಅವರು ಕಳೆದ ವರ್ಷ ಥೈಲ್ಯಾಂಡ್ ಓಪನ್ ಮತ್ತು ಇಂಡಿಯಾ ಓಪನ್ ಪಂದ್ಯಾವಳಿಯಲ್ಲಿಯೂ ಕೇವಲ ರನ್ನರ್ಸ್ ಅಪ್ ಸ್ಥಾನ ಪಡೆದಿದ್ದರು.

ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಸಿಂಧುಗೆ ಇದು ಐದನೇ ಪದಕವಾಗಿದೆ. ಅವರು 2013 ಮತ್ತು 2014 ಆವೃತ್ತಿಗಳಲ್ಲಿ ತಲಾ ಕಂಚು ಗೆದ್ದರು.
ಸಿಂಧು ಈಗ ವಿಶ್ವ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಮಹಿಳಾ ಸಿಂಗಲ್ಸ್‌ನಲ್ಲಿ ಜಂಟಿ ಅತ್ಯಧಿಕ ಪದಕ ವಿಜೇತರಾಗಿದ್ದಾರೆ. ಮಾಜಿ ಒಲಿಂಪಿಕ್ ಚಾಂಪಿಯನ್ ಚೀನಾದ ಜಾಂಗ್ ನಿಂಗ್ ಸಹ 2001 ಮತ್ತು 2007 ರ ನಡುವೆ 1 ಚಿನ್ನ, 2 ಬೆಳ್ಳಿ ಮತ್ತು 2 ಕಂಚು ಗೆದ್ದಿದ್ದಾರೆ.

“ಎಲ್ಲರೂ ನನ್ನಿಂದ ಈ ಗೆಲುವನ್ನು ಬಯಸುತ್ತಿದ್ದರು. ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕದ ನಂತರ, ನನ್ನ ಮೇಲೆ ನಿರೀಕ್ಷೆಗಳು ನಿಜವಾಗಿಯೂ ಹೆಚ್ಚಾಗಿದ್ದವು. ನಾನು ಟೂರ್ನಮೆಂಟ್‌ಗೆ ಹೋದಾಗಲೆಲ್ಲಾ ಎಲ್ಲರೂ ಚಿನ್ನ ಗೆಲ್ಲುತ್ತಾರೆ ಎಂದು ಎಲ್ಲರೂ ನಿರೀಕ್ಷಿಸುತ್ತಾರೆ” ಎಂದು ಸಿಂಧು ಹೇಳಿದ್ದಾರೆ.

“ಒಂದು ವರ್ಷದ ನಂತರ, ನಾನು ಅದಕ್ಕಾಗಿ ಏನು ಮಾಡಬೇಕೆಂದು ಯೋಚಿಸಿದೆ. ಇತರರ ಬಗ್ಗೆ ಯೋಚಿಸುವ ಬದಲು, ನಾನು ನನಗಾಗಿ ಆಡಬೇಕು ಮತ್ತು ನನ್ನ 100 ಪ್ರತಿಶತವ ಸಾಮರ್ಥ್ಯವನ್ನು ಪಣಕೊಡ್ಡಬೇಕು ಆಗ ಮತ್ತು ಸಹಜವಾಗಿ ನಾನು ಗೆಲ್ಲುತ್ತೇನೆ ಏಕೆಂದರೆ ಇತರರ ಬಗ್ಗೆ ಯೋಚಿಸುವುದರಿಂದ ನನ್ನ ಮೇಲೆ ಹೆಚ್ಚುವರಿ ಒತ್ತಡ ಉಂಟಾಗುತ್ತದೆ” ಎಂದು ತಿಳಿಸಿದ್ದಾರೆ.

ಜನರು ಈಗಾಗಲೇ ಟೋಕಿಯೊದಲ್ಲಿ 2020ರಲ್ಲಿ ನಡೆಯುವ ಒಲಿಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವ ಬಗ್ಗೆ ಮಾತಾಡುತ್ತಿದ್ದಾರೆ. ಒಲಪಿಂಕ್ಸ್ ನಲ್ಲಿ ನಾನು ಪದಕ ಗಳಿಸಿಲ್ಲ. ಹಾಗಾಗಿ ಈ ಬಾರಿ ನಾನು ಉತ್ತಮವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಅನಿಸುತ್ತಿದೆ. ಆದರೆ ಈಗ ನಾನು ಬೇರೆ ಏನನ್ನೂ ಯೋಚಿಸಲು ಬಯಸುವುದಿಲ್ಲ ಬದಲಿಗೆ ಸಿಕ್ಕಿರುವ ಪ್ರಶಸ್ತಿಯನ್ನು ಆನಂದಿಸಲು ಬಯಸುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...