Homeಸಿನಿಮಾಕ್ರೀಡೆಟೀಕಾಕಾರರಿಗೆ ನನ್ನ ಚಿನ್ನವೇ ಉತ್ತರ: ಪಿ.ವಿ ಸಿಂಧು ಮನದಾಳದ ಮಾತುಗಳು

ಟೀಕಾಕಾರರಿಗೆ ನನ್ನ ಚಿನ್ನವೇ ಉತ್ತರ: ಪಿ.ವಿ ಸಿಂಧು ಮನದಾಳದ ಮಾತುಗಳು

- Advertisement -
- Advertisement -

ಕೊನೆಯ ಎರಡು ವಿಶ್ವ ಚಾಂಪಿಯನ್‌ಶಿಪ್ ಫೈನಲ್‌ಗಳನ್ನು ಗೆದ್ದಿಲ್ಲ ಎಂಬ ಟೀಕೆಗೆ ಗುರಿಯಾದ ನಂತರ ತಾನು “ಕೋಪ ಮತ್ತು ದುಃಖ” ಎರೆನ್ನು ಅನುಭವಿಸಿದ್ದೆ ಎಂದಿರುವ ಪಿ.ವಿ ಸಿಂಧು 2019ರ ಆವೃತ್ತಿಯಲ್ಲಿ ಭಾನುವಾರ ನಾನು ಗೆದ್ದ ಚಿನ್ನದ ಪದಕವು “ನನ್ನನ್ನು ಪದೇ ಪದೇ ಪ್ರಶ್ನೆಗಳನ್ನು ಕೇಳಿದ ಜನರಿಗೆ” ಎಲ್ಲರಿಗೂ ನನ್ನ ಉತ್ತರವಾಗಿದೆ ಎಂದು ತಿಳಿಸಿದ್ದಾರೆ.

ಹೈದರಾಬಾದ್‌ನ 24 ವರ್ಷದ ಪಿ.ವಿ ಸಿಂಧು ಜಪಾನ್‌ನ ಪ್ರತಿಸ್ಪರ್ಧಿ ನೊಜೋಮಿ ಒಕುಹರಾ ಅವರನ್ನು 21-7, 21-7 ಸೆಟ್‌ಗಳಿಂದ ಸೋಲಿಸಿ ವಿಶ್ವ ಚಾಂಪಿಯನ್‌ಶಿಪ್ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಂತರ ಪತ್ರಿಕಾಗೊಷ್ಠಿಯಲ್ಲಿ ಅವರು ಮಾತನಾಡಿ ಈ ವಿಷಯ ತಿಳಿಸಿದ್ದಾರೆ.

2017 ಮತ್ತು 2018 ರ ಫೈನಲ್‌ನಲ್ಲಿ ಕ್ರಮವಾಗಿ ಒಕುಹರಾ ಮತ್ತು ಸ್ಪೇನ್‌ನ ಒಲಿಂಪಿಕ್ ಚಾಂಪಿಯನ್ ಕೆರೊಲಿನಾ ಮರಿನ್ ವಿರುದ್ಧ ಸೋತಿದ್ದ ಸಿಂಧು 2019ರ ನಿನ್ನೆಯ ಪಂದ್ಯದಲ್ಲಿ ಕೊನೆಗೂ ಗೆಲುವಿನ ನಗೆ ಬೀರಿದ್ದಾರೆ.

ಸಿಂಧು ಅವರು 2016 ರ ರಿಯೊ ಒಲಿಂಪಿಕ್ಸ್‌ನಿಂದೀಚೆಗೆ ಉತ್ತಮ ಪ್ರದರ್ಶನ ನೀಡಿಲ್ಲ ಎಂಬ ಟೀಕೆಗೆ ಗುರಿಯಾಗಿದ್ದರು. ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲದೆ ಗೋಲ್ಡ್ ಕೋಸ್ಟ್ ಕಾಮನ್‌ವೆಲ್ತ್ ಕ್ರೀಡಾಕೂಟ, ಜಕಾರ್ತಾ ಏಷ್ಯನ್ ಕ್ರೀಡಾಕೂಟದ ಫೈನಲ್‌ಗಳನ್ನು ಸಹ ಕಳೆದುಕೊಂಡಿದ್ದರು. ಅವರು ಕಳೆದ ವರ್ಷ ಥೈಲ್ಯಾಂಡ್ ಓಪನ್ ಮತ್ತು ಇಂಡಿಯಾ ಓಪನ್ ಪಂದ್ಯಾವಳಿಯಲ್ಲಿಯೂ ಕೇವಲ ರನ್ನರ್ಸ್ ಅಪ್ ಸ್ಥಾನ ಪಡೆದಿದ್ದರು.

ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಸಿಂಧುಗೆ ಇದು ಐದನೇ ಪದಕವಾಗಿದೆ. ಅವರು 2013 ಮತ್ತು 2014 ಆವೃತ್ತಿಗಳಲ್ಲಿ ತಲಾ ಕಂಚು ಗೆದ್ದರು.
ಸಿಂಧು ಈಗ ವಿಶ್ವ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಮಹಿಳಾ ಸಿಂಗಲ್ಸ್‌ನಲ್ಲಿ ಜಂಟಿ ಅತ್ಯಧಿಕ ಪದಕ ವಿಜೇತರಾಗಿದ್ದಾರೆ. ಮಾಜಿ ಒಲಿಂಪಿಕ್ ಚಾಂಪಿಯನ್ ಚೀನಾದ ಜಾಂಗ್ ನಿಂಗ್ ಸಹ 2001 ಮತ್ತು 2007 ರ ನಡುವೆ 1 ಚಿನ್ನ, 2 ಬೆಳ್ಳಿ ಮತ್ತು 2 ಕಂಚು ಗೆದ್ದಿದ್ದಾರೆ.

“ಎಲ್ಲರೂ ನನ್ನಿಂದ ಈ ಗೆಲುವನ್ನು ಬಯಸುತ್ತಿದ್ದರು. ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕದ ನಂತರ, ನನ್ನ ಮೇಲೆ ನಿರೀಕ್ಷೆಗಳು ನಿಜವಾಗಿಯೂ ಹೆಚ್ಚಾಗಿದ್ದವು. ನಾನು ಟೂರ್ನಮೆಂಟ್‌ಗೆ ಹೋದಾಗಲೆಲ್ಲಾ ಎಲ್ಲರೂ ಚಿನ್ನ ಗೆಲ್ಲುತ್ತಾರೆ ಎಂದು ಎಲ್ಲರೂ ನಿರೀಕ್ಷಿಸುತ್ತಾರೆ” ಎಂದು ಸಿಂಧು ಹೇಳಿದ್ದಾರೆ.

“ಒಂದು ವರ್ಷದ ನಂತರ, ನಾನು ಅದಕ್ಕಾಗಿ ಏನು ಮಾಡಬೇಕೆಂದು ಯೋಚಿಸಿದೆ. ಇತರರ ಬಗ್ಗೆ ಯೋಚಿಸುವ ಬದಲು, ನಾನು ನನಗಾಗಿ ಆಡಬೇಕು ಮತ್ತು ನನ್ನ 100 ಪ್ರತಿಶತವ ಸಾಮರ್ಥ್ಯವನ್ನು ಪಣಕೊಡ್ಡಬೇಕು ಆಗ ಮತ್ತು ಸಹಜವಾಗಿ ನಾನು ಗೆಲ್ಲುತ್ತೇನೆ ಏಕೆಂದರೆ ಇತರರ ಬಗ್ಗೆ ಯೋಚಿಸುವುದರಿಂದ ನನ್ನ ಮೇಲೆ ಹೆಚ್ಚುವರಿ ಒತ್ತಡ ಉಂಟಾಗುತ್ತದೆ” ಎಂದು ತಿಳಿಸಿದ್ದಾರೆ.

ಜನರು ಈಗಾಗಲೇ ಟೋಕಿಯೊದಲ್ಲಿ 2020ರಲ್ಲಿ ನಡೆಯುವ ಒಲಿಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವ ಬಗ್ಗೆ ಮಾತಾಡುತ್ತಿದ್ದಾರೆ. ಒಲಪಿಂಕ್ಸ್ ನಲ್ಲಿ ನಾನು ಪದಕ ಗಳಿಸಿಲ್ಲ. ಹಾಗಾಗಿ ಈ ಬಾರಿ ನಾನು ಉತ್ತಮವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಅನಿಸುತ್ತಿದೆ. ಆದರೆ ಈಗ ನಾನು ಬೇರೆ ಏನನ್ನೂ ಯೋಚಿಸಲು ಬಯಸುವುದಿಲ್ಲ ಬದಲಿಗೆ ಸಿಕ್ಕಿರುವ ಪ್ರಶಸ್ತಿಯನ್ನು ಆನಂದಿಸಲು ಬಯಸುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...