Homeಸಿನಿಮಾಕ್ರೀಡೆಟೀಕಾಕಾರರಿಗೆ ನನ್ನ ಚಿನ್ನವೇ ಉತ್ತರ: ಪಿ.ವಿ ಸಿಂಧು ಮನದಾಳದ ಮಾತುಗಳು

ಟೀಕಾಕಾರರಿಗೆ ನನ್ನ ಚಿನ್ನವೇ ಉತ್ತರ: ಪಿ.ವಿ ಸಿಂಧು ಮನದಾಳದ ಮಾತುಗಳು

- Advertisement -
- Advertisement -

ಕೊನೆಯ ಎರಡು ವಿಶ್ವ ಚಾಂಪಿಯನ್‌ಶಿಪ್ ಫೈನಲ್‌ಗಳನ್ನು ಗೆದ್ದಿಲ್ಲ ಎಂಬ ಟೀಕೆಗೆ ಗುರಿಯಾದ ನಂತರ ತಾನು “ಕೋಪ ಮತ್ತು ದುಃಖ” ಎರೆನ್ನು ಅನುಭವಿಸಿದ್ದೆ ಎಂದಿರುವ ಪಿ.ವಿ ಸಿಂಧು 2019ರ ಆವೃತ್ತಿಯಲ್ಲಿ ಭಾನುವಾರ ನಾನು ಗೆದ್ದ ಚಿನ್ನದ ಪದಕವು “ನನ್ನನ್ನು ಪದೇ ಪದೇ ಪ್ರಶ್ನೆಗಳನ್ನು ಕೇಳಿದ ಜನರಿಗೆ” ಎಲ್ಲರಿಗೂ ನನ್ನ ಉತ್ತರವಾಗಿದೆ ಎಂದು ತಿಳಿಸಿದ್ದಾರೆ.

ಹೈದರಾಬಾದ್‌ನ 24 ವರ್ಷದ ಪಿ.ವಿ ಸಿಂಧು ಜಪಾನ್‌ನ ಪ್ರತಿಸ್ಪರ್ಧಿ ನೊಜೋಮಿ ಒಕುಹರಾ ಅವರನ್ನು 21-7, 21-7 ಸೆಟ್‌ಗಳಿಂದ ಸೋಲಿಸಿ ವಿಶ್ವ ಚಾಂಪಿಯನ್‌ಶಿಪ್ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನಂತರ ಪತ್ರಿಕಾಗೊಷ್ಠಿಯಲ್ಲಿ ಅವರು ಮಾತನಾಡಿ ಈ ವಿಷಯ ತಿಳಿಸಿದ್ದಾರೆ.

2017 ಮತ್ತು 2018 ರ ಫೈನಲ್‌ನಲ್ಲಿ ಕ್ರಮವಾಗಿ ಒಕುಹರಾ ಮತ್ತು ಸ್ಪೇನ್‌ನ ಒಲಿಂಪಿಕ್ ಚಾಂಪಿಯನ್ ಕೆರೊಲಿನಾ ಮರಿನ್ ವಿರುದ್ಧ ಸೋತಿದ್ದ ಸಿಂಧು 2019ರ ನಿನ್ನೆಯ ಪಂದ್ಯದಲ್ಲಿ ಕೊನೆಗೂ ಗೆಲುವಿನ ನಗೆ ಬೀರಿದ್ದಾರೆ.

ಸಿಂಧು ಅವರು 2016 ರ ರಿಯೊ ಒಲಿಂಪಿಕ್ಸ್‌ನಿಂದೀಚೆಗೆ ಉತ್ತಮ ಪ್ರದರ್ಶನ ನೀಡಿಲ್ಲ ಎಂಬ ಟೀಕೆಗೆ ಗುರಿಯಾಗಿದ್ದರು. ವಿಶ್ವ ಚಾಂಪಿಯನ್‌ಶಿಪ್‌ಗಳಲ್ಲದೆ ಗೋಲ್ಡ್ ಕೋಸ್ಟ್ ಕಾಮನ್‌ವೆಲ್ತ್ ಕ್ರೀಡಾಕೂಟ, ಜಕಾರ್ತಾ ಏಷ್ಯನ್ ಕ್ರೀಡಾಕೂಟದ ಫೈನಲ್‌ಗಳನ್ನು ಸಹ ಕಳೆದುಕೊಂಡಿದ್ದರು. ಅವರು ಕಳೆದ ವರ್ಷ ಥೈಲ್ಯಾಂಡ್ ಓಪನ್ ಮತ್ತು ಇಂಡಿಯಾ ಓಪನ್ ಪಂದ್ಯಾವಳಿಯಲ್ಲಿಯೂ ಕೇವಲ ರನ್ನರ್ಸ್ ಅಪ್ ಸ್ಥಾನ ಪಡೆದಿದ್ದರು.

ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಸಿಂಧುಗೆ ಇದು ಐದನೇ ಪದಕವಾಗಿದೆ. ಅವರು 2013 ಮತ್ತು 2014 ಆವೃತ್ತಿಗಳಲ್ಲಿ ತಲಾ ಕಂಚು ಗೆದ್ದರು.
ಸಿಂಧು ಈಗ ವಿಶ್ವ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಮಹಿಳಾ ಸಿಂಗಲ್ಸ್‌ನಲ್ಲಿ ಜಂಟಿ ಅತ್ಯಧಿಕ ಪದಕ ವಿಜೇತರಾಗಿದ್ದಾರೆ. ಮಾಜಿ ಒಲಿಂಪಿಕ್ ಚಾಂಪಿಯನ್ ಚೀನಾದ ಜಾಂಗ್ ನಿಂಗ್ ಸಹ 2001 ಮತ್ತು 2007 ರ ನಡುವೆ 1 ಚಿನ್ನ, 2 ಬೆಳ್ಳಿ ಮತ್ತು 2 ಕಂಚು ಗೆದ್ದಿದ್ದಾರೆ.

“ಎಲ್ಲರೂ ನನ್ನಿಂದ ಈ ಗೆಲುವನ್ನು ಬಯಸುತ್ತಿದ್ದರು. ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕದ ನಂತರ, ನನ್ನ ಮೇಲೆ ನಿರೀಕ್ಷೆಗಳು ನಿಜವಾಗಿಯೂ ಹೆಚ್ಚಾಗಿದ್ದವು. ನಾನು ಟೂರ್ನಮೆಂಟ್‌ಗೆ ಹೋದಾಗಲೆಲ್ಲಾ ಎಲ್ಲರೂ ಚಿನ್ನ ಗೆಲ್ಲುತ್ತಾರೆ ಎಂದು ಎಲ್ಲರೂ ನಿರೀಕ್ಷಿಸುತ್ತಾರೆ” ಎಂದು ಸಿಂಧು ಹೇಳಿದ್ದಾರೆ.

“ಒಂದು ವರ್ಷದ ನಂತರ, ನಾನು ಅದಕ್ಕಾಗಿ ಏನು ಮಾಡಬೇಕೆಂದು ಯೋಚಿಸಿದೆ. ಇತರರ ಬಗ್ಗೆ ಯೋಚಿಸುವ ಬದಲು, ನಾನು ನನಗಾಗಿ ಆಡಬೇಕು ಮತ್ತು ನನ್ನ 100 ಪ್ರತಿಶತವ ಸಾಮರ್ಥ್ಯವನ್ನು ಪಣಕೊಡ್ಡಬೇಕು ಆಗ ಮತ್ತು ಸಹಜವಾಗಿ ನಾನು ಗೆಲ್ಲುತ್ತೇನೆ ಏಕೆಂದರೆ ಇತರರ ಬಗ್ಗೆ ಯೋಚಿಸುವುದರಿಂದ ನನ್ನ ಮೇಲೆ ಹೆಚ್ಚುವರಿ ಒತ್ತಡ ಉಂಟಾಗುತ್ತದೆ” ಎಂದು ತಿಳಿಸಿದ್ದಾರೆ.

ಜನರು ಈಗಾಗಲೇ ಟೋಕಿಯೊದಲ್ಲಿ 2020ರಲ್ಲಿ ನಡೆಯುವ ಒಲಿಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವ ಬಗ್ಗೆ ಮಾತಾಡುತ್ತಿದ್ದಾರೆ. ಒಲಪಿಂಕ್ಸ್ ನಲ್ಲಿ ನಾನು ಪದಕ ಗಳಿಸಿಲ್ಲ. ಹಾಗಾಗಿ ಈ ಬಾರಿ ನಾನು ಉತ್ತಮವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಅನಿಸುತ್ತಿದೆ. ಆದರೆ ಈಗ ನಾನು ಬೇರೆ ಏನನ್ನೂ ಯೋಚಿಸಲು ಬಯಸುವುದಿಲ್ಲ ಬದಲಿಗೆ ಸಿಕ್ಕಿರುವ ಪ್ರಶಸ್ತಿಯನ್ನು ಆನಂದಿಸಲು ಬಯಸುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು| ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...