Homeಚಳವಳಿರಾಜ ರಾಜ ಚೋಳ ವಿವಾದ: ಪ.ರಂಜಿತ್ ಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯ

ರಾಜ ರಾಜ ಚೋಳ ವಿವಾದ: ಪ.ರಂಜಿತ್ ಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯ

- Advertisement -
- Advertisement -

ರಾಜ ರಾಜ ಚೋಳ ಹೇಳಿಕೆ ವಿವಾದದಲ್ಲಿ ವಿಚಾರಣೆ ಎದುರಿಸುತ್ತಿದ್ದ ಪ.ರಂಜಿತ್ ರವರಿಗೆ ಮದ್ರಾಸ್ ಹೈಕೋರ್ಟ್‌ನ ಮಧುರೈ ನ್ಯಾಯಪೀಠವು ಜಾಮೀನು ನೀಡಿದೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ ರಾಜಮಣಿಕಂ ಅವರು ಕಾಲಾ ನಿರ್ದೇಶಕರನ್ನು ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಪರೂಪದ ಚಿತ್ರನಿರ್ದೇಶಕ ಪಾ.ರಂಜಿತ್‍ನ ಇತ್ತೀಚಿನ ಒಂದು ಕಾರ್ಯಕ್ರಮದಲ್ಲಿ ಮಾತನಾಡುತ್ತಾ “ಚೋಳರ ಕಾಲದ ರಾಜರಾಜ ಚೋಳನ ಆಳ್ವಿಕೆಯಲ್ಲಿ ದಲಿತರ ಮೇಲೆ ದಬ್ಬಾಳಿಕೆ, ದಲಿತರ ಭೂ ಕಬಳಿಕೆ ಮತ್ತು ದಲಿತ ಹೆಣ್ಣುಮಕ್ಕಳನ್ನು ದೇವದಾಸಿ ಮಾಡುವಂತಹ ಘಟನೆಗಳು ನಡೆದಿವೆ… ಇವುಗಳನ್ನೆಲ್ಲ ಸಿನೆಮಾ ಮಾಡಿ ತೋರಿಸಬೇಕು” ಎಂದಿದ್ದರು. ಇದಕ್ಕೆ ಬಾಲಾ ಎನ್ನುವವವರು ಪೋಲಿಸ್ ಸ್ಟೇಶನ್‍ನಲ್ಲಿ “ರಂಜಿತ್ ಅವರು ಮಾಡುತ್ತಿರುವ ಸಿನಿಮಾ, ಸಮಾಜದಲ್ಲಿ ಜಾತಿ ಜಾತಿಗಳ ಮಧ್ಯ ವೈಷಮ್ಯವನ್ನು ಬೆಳೆಸುತ್ತದೆ” ಎನ್ನುವ ಕಾರಣ ಕೊಟ್ಟು ದೂರನ್ನೂ ದಾಖಲಿಸಿದ್ದರು.

ಈ ತೀರ್ಪು ಒಂದು ರೀತಿಯಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಿಕ್ಕ ಗೆಲುವು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ. ಪ.ರಂಜಿತ್ ರವರು ಜೂನ್ 12 ರಂದು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಮೊದಲ ವಿಚಾರಣೆಯ ಸಮಯದಲ್ಲಿ ನಿರ್ದೇಶಕರ ಪರ ವಕೀಲರು ಈ ಭಾಷಣವು ಪ್ರಕಟಿತ ಪುಸ್ತಕಗಳ ಸಂಶೋಧನೆಯ ಮೇಲೆ ಆಧಾರಿತವಾಗಿದೆ ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಗುರಿಯನ್ನು ಹೊಂದಿಲ್ಲ ಎಂದು ವಾದಿಸಿದರು.

ಇದನ್ನು ಓದಿ: ಪ.ರಂಜಿತ್ ಬೆಂಬಲಕ್ಕೆ ನಿಂತ 300ಕ್ಕೂ ಹೆಚ್ಚು ಕಲಾವಿದರು. ಆನ್ ಲೈನ್ ಪಿಟಿಷನ್ ಆರಂಭ

ಜಾಮೀನು ನೀಡಿರುವ ನ್ಯಾಯಾಧೀಶರು ಭವಿಷ್ಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡದಂತೆ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಒಂದು ವೇಳೆ ಮೀರಿದ್ದಲ್ಲಿ ಜಾಮೀನು ರದ್ದುಗೊಳಿಸುವುದಾಗಿಯೂ ಹೇಳಿದ್ದಾರೆ. ಪ.ರಂಜಿತ್ ರವರು ತಮ್ಮ ವಿರುದ್ಧದ ಅರ್ಜಿಯನ್ನು ರದ್ದುಗೊಳಿಸುವಂತೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯೂ ಜುಲೈ 8ರಂದು ನಡೆಯಲಿದೆ.

ನ್ಯಾಯಮೂರ್ತಿ ಭಾರತಿದಾಸನ್ ರವರು ಪ್ರತಿಕ್ರಿಯಿಸಿ ವಾಕ್ ಸ್ವಾತಂತ್ರ್ಯಕ್ಕೆ ಮಿತಿಗಳಿವೆ ಎಂದು ಹೇಳಿದ್ದಲ್ಲದೇ, ರಾಜಾ ರಾಜ ಚೋಳ ದಲಿತರಿಂದ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ ಎಂಬುದಕ್ಕೆ ಪುರಾವೆ ಕೇಳಿದರು. ಮುಂದಿನ ವಿಚಾರಣೆಯ ವೇಳೆಗೆ ಸಾಕ್ಷ್ಯಗಳೊಂದಿಗೆ ಪ್ರತಿಕ್ರಿಯೆ ಅರ್ಜಿಯನ್ನು ಸಲ್ಲಿಸುವಂತೆ ಅವರು ತಿರುಪ್ಪಾನಂದಲ್ ಪೊಲೀಸರಿಗೆ ನಿರ್ದೇಶನ ನೀಡಿದರು.

ಬ್ಲೂ ಟೈಗರ್ಸ್ ಪಾರ್ಟಿ (ನೀಲಾ ಪುಲಿಗಲ್ ಇಯಕ್ಕಂ) ಯ ಸಂಸ್ಥಾಪಕ ಉಮರ್ ಫಾರೂಕ್ ಅವರ ನಿಧನದ ವಾರ್ಷಿಕೋತ್ಸವದ ನೆನಪಿಗಾಗಿ ಜೂನ್ 5 ರಂದು ಕುಂಬಕೋಣಂನ ತಿರುಪ್ಪಾನಂದಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ನಿರ್ದೇಶಕ ಪಾ ರಂಜಿತ್ ಮಾಡಿದ್ದ ಭಾಷಣ ವೈರಲ್ ಆಗಿತ್ತು.

ರಂಜಿತ್ ಅವರ ಜಾಮೀನು ಅರ್ಜಿಯಲ್ಲಿ, “ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ, ನಾನು ರಾಜ ರಾಜ ಚೋಳರ ಕುರಿತ ಕೆಲವು ಸತ್ಯಗಳನ್ನು ಮಾತ್ರ ಮಾತನಾಡಿದ್ದೇನೆ. ಜಾತಿವಾದವನ್ನು ತೆಗೆದುಹಾಕುವುದು ಹೇಗೆ? ಜಾತಿರಹಿತ ಸಮಾಜವನ್ನು ಹೇಗೆ ರಚಿಸುವುದು? ಭೂಹೀನ ಜನರ ಅವಸ್ಥೆ, ವಿಶೇಷವಾಗಿ ಉಮರ್ ಫಾರೂಕ್ ಅವರ ಸೆಂಥಾಮಿಜ್ ನಾತು ಚೆರಿಗಲ್ ನಲ್ಲಿ ಉಲ್ಲೇಖಿಸಲಾದ ಡೆಲ್ಟಾ ಪ್ರದೇಶಗಳ ಅವಸ್ಥೆ ಸೇರಿದಂತೆ ನಾನು ಈ ಎಲ್ಲದರ ಬಗ್ಗೆ ಮಾತನಾಡಿದೆ ಎಂದಿದ್ದಾರೆ”

ಆಧಾರ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...