Homeಚಳವಳಿರಾಜ ರಾಜ ಚೋಳ ವಿವಾದ: ಪ.ರಂಜಿತ್ ಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯ

ರಾಜ ರಾಜ ಚೋಳ ವಿವಾದ: ಪ.ರಂಜಿತ್ ಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯ

- Advertisement -
- Advertisement -

ರಾಜ ರಾಜ ಚೋಳ ಹೇಳಿಕೆ ವಿವಾದದಲ್ಲಿ ವಿಚಾರಣೆ ಎದುರಿಸುತ್ತಿದ್ದ ಪ.ರಂಜಿತ್ ರವರಿಗೆ ಮದ್ರಾಸ್ ಹೈಕೋರ್ಟ್‌ನ ಮಧುರೈ ನ್ಯಾಯಪೀಠವು ಜಾಮೀನು ನೀಡಿದೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ ರಾಜಮಣಿಕಂ ಅವರು ಕಾಲಾ ನಿರ್ದೇಶಕರನ್ನು ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಪರೂಪದ ಚಿತ್ರನಿರ್ದೇಶಕ ಪಾ.ರಂಜಿತ್‍ನ ಇತ್ತೀಚಿನ ಒಂದು ಕಾರ್ಯಕ್ರಮದಲ್ಲಿ ಮಾತನಾಡುತ್ತಾ “ಚೋಳರ ಕಾಲದ ರಾಜರಾಜ ಚೋಳನ ಆಳ್ವಿಕೆಯಲ್ಲಿ ದಲಿತರ ಮೇಲೆ ದಬ್ಬಾಳಿಕೆ, ದಲಿತರ ಭೂ ಕಬಳಿಕೆ ಮತ್ತು ದಲಿತ ಹೆಣ್ಣುಮಕ್ಕಳನ್ನು ದೇವದಾಸಿ ಮಾಡುವಂತಹ ಘಟನೆಗಳು ನಡೆದಿವೆ… ಇವುಗಳನ್ನೆಲ್ಲ ಸಿನೆಮಾ ಮಾಡಿ ತೋರಿಸಬೇಕು” ಎಂದಿದ್ದರು. ಇದಕ್ಕೆ ಬಾಲಾ ಎನ್ನುವವವರು ಪೋಲಿಸ್ ಸ್ಟೇಶನ್‍ನಲ್ಲಿ “ರಂಜಿತ್ ಅವರು ಮಾಡುತ್ತಿರುವ ಸಿನಿಮಾ, ಸಮಾಜದಲ್ಲಿ ಜಾತಿ ಜಾತಿಗಳ ಮಧ್ಯ ವೈಷಮ್ಯವನ್ನು ಬೆಳೆಸುತ್ತದೆ” ಎನ್ನುವ ಕಾರಣ ಕೊಟ್ಟು ದೂರನ್ನೂ ದಾಖಲಿಸಿದ್ದರು.

ಈ ತೀರ್ಪು ಒಂದು ರೀತಿಯಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಿಕ್ಕ ಗೆಲುವು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ. ಪ.ರಂಜಿತ್ ರವರು ಜೂನ್ 12 ರಂದು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಮೊದಲ ವಿಚಾರಣೆಯ ಸಮಯದಲ್ಲಿ ನಿರ್ದೇಶಕರ ಪರ ವಕೀಲರು ಈ ಭಾಷಣವು ಪ್ರಕಟಿತ ಪುಸ್ತಕಗಳ ಸಂಶೋಧನೆಯ ಮೇಲೆ ಆಧಾರಿತವಾಗಿದೆ ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಗುರಿಯನ್ನು ಹೊಂದಿಲ್ಲ ಎಂದು ವಾದಿಸಿದರು.

ಇದನ್ನು ಓದಿ: ಪ.ರಂಜಿತ್ ಬೆಂಬಲಕ್ಕೆ ನಿಂತ 300ಕ್ಕೂ ಹೆಚ್ಚು ಕಲಾವಿದರು. ಆನ್ ಲೈನ್ ಪಿಟಿಷನ್ ಆರಂಭ

ಜಾಮೀನು ನೀಡಿರುವ ನ್ಯಾಯಾಧೀಶರು ಭವಿಷ್ಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡದಂತೆ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಒಂದು ವೇಳೆ ಮೀರಿದ್ದಲ್ಲಿ ಜಾಮೀನು ರದ್ದುಗೊಳಿಸುವುದಾಗಿಯೂ ಹೇಳಿದ್ದಾರೆ. ಪ.ರಂಜಿತ್ ರವರು ತಮ್ಮ ವಿರುದ್ಧದ ಅರ್ಜಿಯನ್ನು ರದ್ದುಗೊಳಿಸುವಂತೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯೂ ಜುಲೈ 8ರಂದು ನಡೆಯಲಿದೆ.

ನ್ಯಾಯಮೂರ್ತಿ ಭಾರತಿದಾಸನ್ ರವರು ಪ್ರತಿಕ್ರಿಯಿಸಿ ವಾಕ್ ಸ್ವಾತಂತ್ರ್ಯಕ್ಕೆ ಮಿತಿಗಳಿವೆ ಎಂದು ಹೇಳಿದ್ದಲ್ಲದೇ, ರಾಜಾ ರಾಜ ಚೋಳ ದಲಿತರಿಂದ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ ಎಂಬುದಕ್ಕೆ ಪುರಾವೆ ಕೇಳಿದರು. ಮುಂದಿನ ವಿಚಾರಣೆಯ ವೇಳೆಗೆ ಸಾಕ್ಷ್ಯಗಳೊಂದಿಗೆ ಪ್ರತಿಕ್ರಿಯೆ ಅರ್ಜಿಯನ್ನು ಸಲ್ಲಿಸುವಂತೆ ಅವರು ತಿರುಪ್ಪಾನಂದಲ್ ಪೊಲೀಸರಿಗೆ ನಿರ್ದೇಶನ ನೀಡಿದರು.

ಬ್ಲೂ ಟೈಗರ್ಸ್ ಪಾರ್ಟಿ (ನೀಲಾ ಪುಲಿಗಲ್ ಇಯಕ್ಕಂ) ಯ ಸಂಸ್ಥಾಪಕ ಉಮರ್ ಫಾರೂಕ್ ಅವರ ನಿಧನದ ವಾರ್ಷಿಕೋತ್ಸವದ ನೆನಪಿಗಾಗಿ ಜೂನ್ 5 ರಂದು ಕುಂಬಕೋಣಂನ ತಿರುಪ್ಪಾನಂದಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ನಿರ್ದೇಶಕ ಪಾ ರಂಜಿತ್ ಮಾಡಿದ್ದ ಭಾಷಣ ವೈರಲ್ ಆಗಿತ್ತು.

ರಂಜಿತ್ ಅವರ ಜಾಮೀನು ಅರ್ಜಿಯಲ್ಲಿ, “ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ, ನಾನು ರಾಜ ರಾಜ ಚೋಳರ ಕುರಿತ ಕೆಲವು ಸತ್ಯಗಳನ್ನು ಮಾತ್ರ ಮಾತನಾಡಿದ್ದೇನೆ. ಜಾತಿವಾದವನ್ನು ತೆಗೆದುಹಾಕುವುದು ಹೇಗೆ? ಜಾತಿರಹಿತ ಸಮಾಜವನ್ನು ಹೇಗೆ ರಚಿಸುವುದು? ಭೂಹೀನ ಜನರ ಅವಸ್ಥೆ, ವಿಶೇಷವಾಗಿ ಉಮರ್ ಫಾರೂಕ್ ಅವರ ಸೆಂಥಾಮಿಜ್ ನಾತು ಚೆರಿಗಲ್ ನಲ್ಲಿ ಉಲ್ಲೇಖಿಸಲಾದ ಡೆಲ್ಟಾ ಪ್ರದೇಶಗಳ ಅವಸ್ಥೆ ಸೇರಿದಂತೆ ನಾನು ಈ ಎಲ್ಲದರ ಬಗ್ಗೆ ಮಾತನಾಡಿದೆ ಎಂದಿದ್ದಾರೆ”

ಆಧಾರ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...