Homeಚಳವಳಿರಾಜ ರಾಜ ಚೋಳ ವಿವಾದ: ಪ.ರಂಜಿತ್ ಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯ

ರಾಜ ರಾಜ ಚೋಳ ವಿವಾದ: ಪ.ರಂಜಿತ್ ಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯ

- Advertisement -
- Advertisement -

ರಾಜ ರಾಜ ಚೋಳ ಹೇಳಿಕೆ ವಿವಾದದಲ್ಲಿ ವಿಚಾರಣೆ ಎದುರಿಸುತ್ತಿದ್ದ ಪ.ರಂಜಿತ್ ರವರಿಗೆ ಮದ್ರಾಸ್ ಹೈಕೋರ್ಟ್‌ನ ಮಧುರೈ ನ್ಯಾಯಪೀಠವು ಜಾಮೀನು ನೀಡಿದೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ ರಾಜಮಣಿಕಂ ಅವರು ಕಾಲಾ ನಿರ್ದೇಶಕರನ್ನು ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಪರೂಪದ ಚಿತ್ರನಿರ್ದೇಶಕ ಪಾ.ರಂಜಿತ್‍ನ ಇತ್ತೀಚಿನ ಒಂದು ಕಾರ್ಯಕ್ರಮದಲ್ಲಿ ಮಾತನಾಡುತ್ತಾ “ಚೋಳರ ಕಾಲದ ರಾಜರಾಜ ಚೋಳನ ಆಳ್ವಿಕೆಯಲ್ಲಿ ದಲಿತರ ಮೇಲೆ ದಬ್ಬಾಳಿಕೆ, ದಲಿತರ ಭೂ ಕಬಳಿಕೆ ಮತ್ತು ದಲಿತ ಹೆಣ್ಣುಮಕ್ಕಳನ್ನು ದೇವದಾಸಿ ಮಾಡುವಂತಹ ಘಟನೆಗಳು ನಡೆದಿವೆ… ಇವುಗಳನ್ನೆಲ್ಲ ಸಿನೆಮಾ ಮಾಡಿ ತೋರಿಸಬೇಕು” ಎಂದಿದ್ದರು. ಇದಕ್ಕೆ ಬಾಲಾ ಎನ್ನುವವವರು ಪೋಲಿಸ್ ಸ್ಟೇಶನ್‍ನಲ್ಲಿ “ರಂಜಿತ್ ಅವರು ಮಾಡುತ್ತಿರುವ ಸಿನಿಮಾ, ಸಮಾಜದಲ್ಲಿ ಜಾತಿ ಜಾತಿಗಳ ಮಧ್ಯ ವೈಷಮ್ಯವನ್ನು ಬೆಳೆಸುತ್ತದೆ” ಎನ್ನುವ ಕಾರಣ ಕೊಟ್ಟು ದೂರನ್ನೂ ದಾಖಲಿಸಿದ್ದರು.

ಈ ತೀರ್ಪು ಒಂದು ರೀತಿಯಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಿಕ್ಕ ಗೆಲುವು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ. ಪ.ರಂಜಿತ್ ರವರು ಜೂನ್ 12 ರಂದು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಮೊದಲ ವಿಚಾರಣೆಯ ಸಮಯದಲ್ಲಿ ನಿರ್ದೇಶಕರ ಪರ ವಕೀಲರು ಈ ಭಾಷಣವು ಪ್ರಕಟಿತ ಪುಸ್ತಕಗಳ ಸಂಶೋಧನೆಯ ಮೇಲೆ ಆಧಾರಿತವಾಗಿದೆ ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಗುರಿಯನ್ನು ಹೊಂದಿಲ್ಲ ಎಂದು ವಾದಿಸಿದರು.

ಇದನ್ನು ಓದಿ: ಪ.ರಂಜಿತ್ ಬೆಂಬಲಕ್ಕೆ ನಿಂತ 300ಕ್ಕೂ ಹೆಚ್ಚು ಕಲಾವಿದರು. ಆನ್ ಲೈನ್ ಪಿಟಿಷನ್ ಆರಂಭ

ಜಾಮೀನು ನೀಡಿರುವ ನ್ಯಾಯಾಧೀಶರು ಭವಿಷ್ಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡದಂತೆ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಒಂದು ವೇಳೆ ಮೀರಿದ್ದಲ್ಲಿ ಜಾಮೀನು ರದ್ದುಗೊಳಿಸುವುದಾಗಿಯೂ ಹೇಳಿದ್ದಾರೆ. ಪ.ರಂಜಿತ್ ರವರು ತಮ್ಮ ವಿರುದ್ಧದ ಅರ್ಜಿಯನ್ನು ರದ್ದುಗೊಳಿಸುವಂತೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯೂ ಜುಲೈ 8ರಂದು ನಡೆಯಲಿದೆ.

ನ್ಯಾಯಮೂರ್ತಿ ಭಾರತಿದಾಸನ್ ರವರು ಪ್ರತಿಕ್ರಿಯಿಸಿ ವಾಕ್ ಸ್ವಾತಂತ್ರ್ಯಕ್ಕೆ ಮಿತಿಗಳಿವೆ ಎಂದು ಹೇಳಿದ್ದಲ್ಲದೇ, ರಾಜಾ ರಾಜ ಚೋಳ ದಲಿತರಿಂದ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ ಎಂಬುದಕ್ಕೆ ಪುರಾವೆ ಕೇಳಿದರು. ಮುಂದಿನ ವಿಚಾರಣೆಯ ವೇಳೆಗೆ ಸಾಕ್ಷ್ಯಗಳೊಂದಿಗೆ ಪ್ರತಿಕ್ರಿಯೆ ಅರ್ಜಿಯನ್ನು ಸಲ್ಲಿಸುವಂತೆ ಅವರು ತಿರುಪ್ಪಾನಂದಲ್ ಪೊಲೀಸರಿಗೆ ನಿರ್ದೇಶನ ನೀಡಿದರು.

ಬ್ಲೂ ಟೈಗರ್ಸ್ ಪಾರ್ಟಿ (ನೀಲಾ ಪುಲಿಗಲ್ ಇಯಕ್ಕಂ) ಯ ಸಂಸ್ಥಾಪಕ ಉಮರ್ ಫಾರೂಕ್ ಅವರ ನಿಧನದ ವಾರ್ಷಿಕೋತ್ಸವದ ನೆನಪಿಗಾಗಿ ಜೂನ್ 5 ರಂದು ಕುಂಬಕೋಣಂನ ತಿರುಪ್ಪಾನಂದಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ನಿರ್ದೇಶಕ ಪಾ ರಂಜಿತ್ ಮಾಡಿದ್ದ ಭಾಷಣ ವೈರಲ್ ಆಗಿತ್ತು.

ರಂಜಿತ್ ಅವರ ಜಾಮೀನು ಅರ್ಜಿಯಲ್ಲಿ, “ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ, ನಾನು ರಾಜ ರಾಜ ಚೋಳರ ಕುರಿತ ಕೆಲವು ಸತ್ಯಗಳನ್ನು ಮಾತ್ರ ಮಾತನಾಡಿದ್ದೇನೆ. ಜಾತಿವಾದವನ್ನು ತೆಗೆದುಹಾಕುವುದು ಹೇಗೆ? ಜಾತಿರಹಿತ ಸಮಾಜವನ್ನು ಹೇಗೆ ರಚಿಸುವುದು? ಭೂಹೀನ ಜನರ ಅವಸ್ಥೆ, ವಿಶೇಷವಾಗಿ ಉಮರ್ ಫಾರೂಕ್ ಅವರ ಸೆಂಥಾಮಿಜ್ ನಾತು ಚೆರಿಗಲ್ ನಲ್ಲಿ ಉಲ್ಲೇಖಿಸಲಾದ ಡೆಲ್ಟಾ ಪ್ರದೇಶಗಳ ಅವಸ್ಥೆ ಸೇರಿದಂತೆ ನಾನು ಈ ಎಲ್ಲದರ ಬಗ್ಗೆ ಮಾತನಾಡಿದೆ ಎಂದಿದ್ದಾರೆ”

ಆಧಾರ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...