Homeಚಳವಳಿರಾಜ ರಾಜ ಚೋಳ ವಿವಾದ: ಪ.ರಂಜಿತ್ ಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯ

ರಾಜ ರಾಜ ಚೋಳ ವಿವಾದ: ಪ.ರಂಜಿತ್ ಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯ

- Advertisement -
- Advertisement -

ರಾಜ ರಾಜ ಚೋಳ ಹೇಳಿಕೆ ವಿವಾದದಲ್ಲಿ ವಿಚಾರಣೆ ಎದುರಿಸುತ್ತಿದ್ದ ಪ.ರಂಜಿತ್ ರವರಿಗೆ ಮದ್ರಾಸ್ ಹೈಕೋರ್ಟ್‌ನ ಮಧುರೈ ನ್ಯಾಯಪೀಠವು ಜಾಮೀನು ನೀಡಿದೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ ರಾಜಮಣಿಕಂ ಅವರು ಕಾಲಾ ನಿರ್ದೇಶಕರನ್ನು ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಪರೂಪದ ಚಿತ್ರನಿರ್ದೇಶಕ ಪಾ.ರಂಜಿತ್‍ನ ಇತ್ತೀಚಿನ ಒಂದು ಕಾರ್ಯಕ್ರಮದಲ್ಲಿ ಮಾತನಾಡುತ್ತಾ “ಚೋಳರ ಕಾಲದ ರಾಜರಾಜ ಚೋಳನ ಆಳ್ವಿಕೆಯಲ್ಲಿ ದಲಿತರ ಮೇಲೆ ದಬ್ಬಾಳಿಕೆ, ದಲಿತರ ಭೂ ಕಬಳಿಕೆ ಮತ್ತು ದಲಿತ ಹೆಣ್ಣುಮಕ್ಕಳನ್ನು ದೇವದಾಸಿ ಮಾಡುವಂತಹ ಘಟನೆಗಳು ನಡೆದಿವೆ… ಇವುಗಳನ್ನೆಲ್ಲ ಸಿನೆಮಾ ಮಾಡಿ ತೋರಿಸಬೇಕು” ಎಂದಿದ್ದರು. ಇದಕ್ಕೆ ಬಾಲಾ ಎನ್ನುವವವರು ಪೋಲಿಸ್ ಸ್ಟೇಶನ್‍ನಲ್ಲಿ “ರಂಜಿತ್ ಅವರು ಮಾಡುತ್ತಿರುವ ಸಿನಿಮಾ, ಸಮಾಜದಲ್ಲಿ ಜಾತಿ ಜಾತಿಗಳ ಮಧ್ಯ ವೈಷಮ್ಯವನ್ನು ಬೆಳೆಸುತ್ತದೆ” ಎನ್ನುವ ಕಾರಣ ಕೊಟ್ಟು ದೂರನ್ನೂ ದಾಖಲಿಸಿದ್ದರು.

ಈ ತೀರ್ಪು ಒಂದು ರೀತಿಯಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಿಕ್ಕ ಗೆಲುವು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ. ಪ.ರಂಜಿತ್ ರವರು ಜೂನ್ 12 ರಂದು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಮೊದಲ ವಿಚಾರಣೆಯ ಸಮಯದಲ್ಲಿ ನಿರ್ದೇಶಕರ ಪರ ವಕೀಲರು ಈ ಭಾಷಣವು ಪ್ರಕಟಿತ ಪುಸ್ತಕಗಳ ಸಂಶೋಧನೆಯ ಮೇಲೆ ಆಧಾರಿತವಾಗಿದೆ ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಗುರಿಯನ್ನು ಹೊಂದಿಲ್ಲ ಎಂದು ವಾದಿಸಿದರು.

ಇದನ್ನು ಓದಿ: ಪ.ರಂಜಿತ್ ಬೆಂಬಲಕ್ಕೆ ನಿಂತ 300ಕ್ಕೂ ಹೆಚ್ಚು ಕಲಾವಿದರು. ಆನ್ ಲೈನ್ ಪಿಟಿಷನ್ ಆರಂಭ

ಜಾಮೀನು ನೀಡಿರುವ ನ್ಯಾಯಾಧೀಶರು ಭವಿಷ್ಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡದಂತೆ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಒಂದು ವೇಳೆ ಮೀರಿದ್ದಲ್ಲಿ ಜಾಮೀನು ರದ್ದುಗೊಳಿಸುವುದಾಗಿಯೂ ಹೇಳಿದ್ದಾರೆ. ಪ.ರಂಜಿತ್ ರವರು ತಮ್ಮ ವಿರುದ್ಧದ ಅರ್ಜಿಯನ್ನು ರದ್ದುಗೊಳಿಸುವಂತೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯೂ ಜುಲೈ 8ರಂದು ನಡೆಯಲಿದೆ.

ನ್ಯಾಯಮೂರ್ತಿ ಭಾರತಿದಾಸನ್ ರವರು ಪ್ರತಿಕ್ರಿಯಿಸಿ ವಾಕ್ ಸ್ವಾತಂತ್ರ್ಯಕ್ಕೆ ಮಿತಿಗಳಿವೆ ಎಂದು ಹೇಳಿದ್ದಲ್ಲದೇ, ರಾಜಾ ರಾಜ ಚೋಳ ದಲಿತರಿಂದ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ ಎಂಬುದಕ್ಕೆ ಪುರಾವೆ ಕೇಳಿದರು. ಮುಂದಿನ ವಿಚಾರಣೆಯ ವೇಳೆಗೆ ಸಾಕ್ಷ್ಯಗಳೊಂದಿಗೆ ಪ್ರತಿಕ್ರಿಯೆ ಅರ್ಜಿಯನ್ನು ಸಲ್ಲಿಸುವಂತೆ ಅವರು ತಿರುಪ್ಪಾನಂದಲ್ ಪೊಲೀಸರಿಗೆ ನಿರ್ದೇಶನ ನೀಡಿದರು.

ಬ್ಲೂ ಟೈಗರ್ಸ್ ಪಾರ್ಟಿ (ನೀಲಾ ಪುಲಿಗಲ್ ಇಯಕ್ಕಂ) ಯ ಸಂಸ್ಥಾಪಕ ಉಮರ್ ಫಾರೂಕ್ ಅವರ ನಿಧನದ ವಾರ್ಷಿಕೋತ್ಸವದ ನೆನಪಿಗಾಗಿ ಜೂನ್ 5 ರಂದು ಕುಂಬಕೋಣಂನ ತಿರುಪ್ಪಾನಂದಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ನಿರ್ದೇಶಕ ಪಾ ರಂಜಿತ್ ಮಾಡಿದ್ದ ಭಾಷಣ ವೈರಲ್ ಆಗಿತ್ತು.

ರಂಜಿತ್ ಅವರ ಜಾಮೀನು ಅರ್ಜಿಯಲ್ಲಿ, “ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ, ನಾನು ರಾಜ ರಾಜ ಚೋಳರ ಕುರಿತ ಕೆಲವು ಸತ್ಯಗಳನ್ನು ಮಾತ್ರ ಮಾತನಾಡಿದ್ದೇನೆ. ಜಾತಿವಾದವನ್ನು ತೆಗೆದುಹಾಕುವುದು ಹೇಗೆ? ಜಾತಿರಹಿತ ಸಮಾಜವನ್ನು ಹೇಗೆ ರಚಿಸುವುದು? ಭೂಹೀನ ಜನರ ಅವಸ್ಥೆ, ವಿಶೇಷವಾಗಿ ಉಮರ್ ಫಾರೂಕ್ ಅವರ ಸೆಂಥಾಮಿಜ್ ನಾತು ಚೆರಿಗಲ್ ನಲ್ಲಿ ಉಲ್ಲೇಖಿಸಲಾದ ಡೆಲ್ಟಾ ಪ್ರದೇಶಗಳ ಅವಸ್ಥೆ ಸೇರಿದಂತೆ ನಾನು ಈ ಎಲ್ಲದರ ಬಗ್ಗೆ ಮಾತನಾಡಿದೆ ಎಂದಿದ್ದಾರೆ”

ಆಧಾರ: ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...