Homeಅಂತರಾಷ್ಟ್ರೀಯವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ

ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ

- Advertisement -
- Advertisement -

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ, ಬಿಲಿಯನೇರ್ ಗೌತಮ್ ಅದಾನಿ ಅವರು ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಅವರು ಕಳೆದ ತಿಂಗಳಷ್ಟೆ ಎಲ್‌‌ವಿಎಂಹೆಚ್ ಮಾಲೀಕ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

ಅದಾನಿ ಕಳೆದ ತಿಂಗಳಷ್ಟೆ ವಿಶ್ವದ ಮೂರನೇ ಅತ್ಯಂತ ಶ್ರೀಮಂತರಾಗುವುದರೊಂದಿಗೆ ಈ ಸ್ಥಾನಕ್ಕೆ ಏರಿದ ಮೊದಲ ಭಾರತೀಯ ಮತ್ತು ಏಷ್ಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ರಿಲಯನ್ಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಚೀನಾದ ಜಾಕ್ ಮಾ ಕೂಡ ಇದನ್ನು ಸಾಧಿಸಲು ಸಾಧ್ಯವಾಗಿರಲಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಟೆಸ್ಲಾ ಮುಖ್ಯಸ್ಥ ಎಲೋನ್‌ ಮಸ್ಕ್‌ 273.5 ಬಿಲಿಯನ್‌‌ ಡಾಲರ್‌‌‌‌‌ ನಿವ್ವಳ ಮೌಲ್ಯದೊಂದಿಗೆ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಉಳಿದಿದ್ದಾರೆ. ಗೌತಮ್ ಅದಾನಿ ಪ್ರಸ್ತುತ 154.7 ಬಿಲಿಯನ್ ಡಾಲರ್‌‌ ಮೌಲ್ಯವನ್ನು ಆಸ್ತಿಯನ್ನು ಹೊಂದಿದ್ದಾರೆ ಎಂದು ಫೋರ್ಬ್ಸ್ ವರದಿ ಮಾಡಿದೆ. ಕಳೆದ ಸ್ವಲ್ಪ ಸಮಯದಿಂದ ಅದಾನಿಯ ಶ್ರೀಮಂತಿಕೆ ಸ್ಥಿರವಾಗಿ ಏರುತ್ತಿದೆ.

ಇದನ್ನೂ ಓದಿ: ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

ಶ್ರೀಮಂತರ ಪಟ್ಟಿಯಲ್ಲಿ ಅರ್ನಾಲ್ಟ್‌ ಮೂರನೇ ಸ್ಥಾನಕ್ಕೆ ಏರಿದರೆ, ಬೆಜೋಸ್‌‌ ಎರಡನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಇಳಿದಿದ್ದಾರೆ. ಫೋಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದ ಮತ್ತೊಬ್ಬ ಭಾರತೀಯ ಮುಖೇಶ್ ಅಂಬಾನಿ 92 ಶತಕೋಟಿ ಡಾಲರ್‌‌ನೊಂದಿಗೆ ಎಂಟನೇ ಸ್ಥಾನದಲ್ಲಿದ್ದಾರೆ.

ಸರಕುಗಳ ವ್ಯಾಪಾರದೊಂದಿಗೆ 1980 ರ ದಶಕದ ಉತ್ತರಾರ್ಧದಲ್ಲಿ ಅದಾನಿ ಗ್ರೂಪ್‌ ಪ್ರಾರಂಭವಾಯಿತು. ನಂತರ ಗಣಿಗಳು, ಬಂದರುಗಳು ಮತ್ತು ವಿದ್ಯುತ್ ಸ್ಥಾವರಳು, ವಿಮಾನ ನಿಲ್ದಾಣಗಳು, ಡೇಟಾ ಕೇಂದ್ರಗಳು ಮತ್ತು ರಕ್ಷಣಾ ಕ್ಷೇತ್ರದಲ್ಲೂ ಅದಾನಿ ಗ್ರೂಪ್ ಹೂಡಿಕೆ ಮಾಡಿದ್ದು, ಕಳೆದ ಕೆಲವು ವರ್ಷಗಳಿಂದ ಆಕ್ರಮಣಕಾರಿಯಾಗಿ ತನ್ನ ವ್ಯಾಪಾರದ ಸಾಮ್ರಾಜ್ಯವನ್ನು ವಿಸ್ತರಣೆ ಮಾಡಿದೆ.

ದೇಶದ ಪ್ರಮುಖ ಸುದ್ದಿ ಮಾಧ್ಯಮವಾದ ಎನ್‌ಡಿಟಿವಿ ಮತ್ತು ಕ್ರೆಡಿಟ್‌‌‌ಸೈಟ್‌ ಅನ್ನು ಸ್ವಾಧೀನಪಡಿಸಿಕೊಳ್ಳಲು ಅದಾನಿ ಗ್ರೂಪ್ ಇತ್ತೀಚೆಗೆ ಆಕ್ರಮಣಕಾರಿ ಕ್ರಮವನ್ನು ಕೈಗೊಂಡಿತ್ತು.

“ವಿಶ್ವದ ಶ್ರಿಮಂತ ವ್ಯಕ್ತಿಗಳಾದ ಅಮೆರಿಕಾದ ಕೆಲವು ಬಿಲಿಯೇರ್‌ಗಳು ತಮ್ಮ ಶ್ರಿಮಂತಿಕೆಯ ಪಟ್ಟಿಯಲ್ಲಿ ಇಳಿಕೆ ಕಂಡಿದ್ದು ಅವರು ಮಾಡುತ್ತಿರುವ ಲೋಕೊಪಯೋಗಿ ಯೋಜನೆಗಳು ಕೂಡಾ ಕಾರಣ” ಎಂದು ಬ್ಲೂಮ್‌ಬರ್ಗ್ ಕಳೆದ ತಿಂಗಳು ಉಲ್ಲೇಖಿಸಿತ್ತು.

ಇದನ್ನೂ ಓದಿ: ಬಹುಜನ ಭಾರತ: ಎನ್.ಡಿ.ಟಿ.ವಿ ಅದಾನಿ ಕೈವಶ; ಮತ್ತೊಂದು ಚಾನೆಲ್ ಮೋದಿ ಪದತಲಕ್ಕೆ

ಜುಲೈನಲ್ಲಿ ಬಿಲ್ ಗೇಟ್ಸ್ ಅವರು ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್‌ಗೆ 20 ಶತಕೋಟಿ ಡಾಲರ್‌‌ ಅನ್ನು ವರ್ಗಾಯಿಸುತ್ತಿರುವುದಾಗಿ ಹೇಳಿದ್ದಾರೆ. ವಾರೆನ್ ಬಫೆಟ್ ಕೂಡಾ ಈಗಾಗಲೇ 35 ಶತಕೋಟಿ ಡಾಲರ್‌‌ಗಿಂತ ಹೆಚ್ಚಿನ ಹಣವನ್ನು ಚಾರಿಟಿಗೆ ದೇಣಿಗೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 2.21 lahk crores ಸಾಲ ಅದಾನಿ ಸಮೂಹದ ಸಾಲದ ಒಟ್ಟು ಮೊತ್ತ.. ಹೀಗೆ ಜನರ ದುಡ್ಡನ್ನ ಸಾಲ ಪಡೆದು ಪ್ರಪಂಚದ 2ಅಷ್ಟೇ ಅಲ್ಲ ಮೊದಲನೇ ಶ್ರೀಮಂತನಾದರೂ ಇದರಿಂದ ಯಾವೊಬ್ಬ ಭಾರತೀಯನ ಬದುಕು ಉದ್ದಾರವಾಗೋಲ್ಲ…. ಅದನಿಗೆ ಅಭಿನಂದನೆಗಳು 😏😏💐💐

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...