Homeಮುಖಪುಟಈ ಉನ್ಮಾದವನ್ನು ಸೃಷ್ಟಿಸಿದವರ್‍ಯಾರು? ನನ್ನ ಮಂಗಳೂರಿಗೆ ಏನಾಗಿದೆ?

ಈ ಉನ್ಮಾದವನ್ನು ಸೃಷ್ಟಿಸಿದವರ್‍ಯಾರು? ನನ್ನ ಮಂಗಳೂರಿಗೆ ಏನಾಗಿದೆ?

ಕೊರೊನಾ ಕಾರಣಕ್ಕೆ ಮೃತಪಟ್ಟ ಶವದ ಅಂತ್ಯಸಂಸ್ಕಾರಕ್ಕೆ ಅವಕಾಶಕೊಡದ ಮಂಗಳೂರಿನ ಅಮಾನವೀಯ ಘಟನೆಯ ಕುರಿತು ಅಲ್ಲಿನವರೇ ಆದ ಬಾಪು ಅಮ್ಮೆಂಬಳರವರ ಲೇಖನ

- Advertisement -
- Advertisement -

ಉನ್ಮಾದವನ್ನು ಯಾವ ರೀತಿ ಹರಡಲಾಗುತ್ತದೆ ಮತ್ತು ಅದು ನಮ್ಮನ್ನು ಹೇಗೆ ಆಟವಾಡಿಸುತ್ತದೆ ಎಂಬುವುದು ಮಂಗಳೂರಿನ ಘಟನೆ ಸ್ಪಷ್ಟ ಚಿತ್ರಣ ನೀಡುತ್ತದೆ. ಎಲ್ಲೋ ದೂರದ ಸುಶಿಕ್ಷಿತರಲ್ಲದ ಉತ್ತರದ ರಾಜ್ಯಗಳ ಜನರು ಈ ರೀತಿ ನಡೆದು ಕೊಂಡಿದ್ದರೆ, ರೋಗದ ಬಗ್ಗೆ ಅವರಿಗೆ ಅರಿವಿಲ್ಲ ಹಾಗಾಗಿ ಅವರ ತಪ್ಪಿಲ್ಲ ಎಂದು ಸುಮ್ಮನಿದ್ದು ಬಿಡಬಹುದಾಗಿತ್ತು. ಆದರೆ ಇದೆಲ್ಲ ನಡೆದಿರುವುದು ಪ್ರಜ್ಞಾವಂತರೆಂದು ನಮಗೆ ನಾವೇ ಹೇಳಿಕೊಳ್ಳುವ ನನ್ನೂರು ಮಂಗಳೂರಿನಲ್ಲಿ ಎನ್ನುವುದು ನನಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಎಷ್ಟೊಂದು ಅಮಾನವೀಯ ಘಟನೆ ಇದು. ಹಿರಿಯ ಜೀವವೊಂದು ಅವರು ಮಾಡದ ತಪ್ಪಿಗೆ ಸಾವಿಗೀಡಾದ ನಂತರವೂ ಒಂದು ಘನತೆಯ ಅಂತಿಮ ಸಂಸ್ಕಾರಕ್ಕೆ ನನ್ನೂರಿನ ಜನ ಅವಕಾಶ ಕೊಟ್ಟಿಲ್ಲ ಎಂದರೆ ಯಾವ ಪ್ರಜ್ಞೆ, ಎಂತಹ ಪ್ರಜ್ಞಾವಂತರು ? ಎಂತಹ ಕ್ರೂರತೆ ಇದು??

ಜಿಲ್ಲಾಡಳಿತ ಕೊರೊನಾ ಕಾರಣಕ್ಕೆ ಮೃತಪಟ್ಟ ಆ ಹಿರಿಯರ ಶವವನ್ನು ಆಂಬುಲೆನ್ಸ್‌ನಲ್ಲಿಟ್ಟು ಅಂತಿಮ ಸಂಸ್ಕಾರಕ್ಕಾಗಿ ಅರ್ಧ ಜಿಲ್ಲೆ ಅಲೆದಾಡಿದೆ. ಹೋದಲ್ಲೆಲ್ಲ ಜನರ ವಿರೋಧ ಕಂಡುಬಂದಿದೆ. ಅಂದರೆ ಅರ್ಥ ಮಾಡಿಕೊಳ್ಳಿ ಒಂದು ದೊಡ್ಡ ಗುಂಪಿನ ಜನರು ಉನ್ಮಾದಕ್ಕೆ ಒಳಗಾಗಿ ತಾವೇನು ಮಾಡುತ್ತಿದ್ದೇವೆ, ಇದು ಸರಿಯಾದ ನಡೆಯೇ ಎಂಬ ಬಗ್ಗೆ ಚಿಂತಿಸುವಷ್ಟೂ ವಿವೇಚನೆ ಕಳೆದುಕೊಂಡಿದೆ. ಅವರಿಗೆ ತಿಳಿ ಹೇಳುವವರೂ ಆ ಹೊತ್ತಿನಲ್ಲಿ ಯಾರೂ ಇರಲಿಲ್ಲ. ಒಂದು ವೇಳೆ ಹೇಳಿದ್ದರೂ ಕೇಳುತ್ತಿದ್ದರೆ? ಅದೂ ಇಲ್ಲ. ಪಚ್ಚನಾಡಿ ಸ್ಮಶಾನದಲ್ಲಿ ಶಾಸಕ ಭರತ್ ಶೆಟ್ಟಿ ನಡೆದುಕೊಂಡ ರೀತಿ ನಾಗರಿಕ ಸಮಾಜ ಎಂದು ಹೇಳುವ ಯಾರಾದರೂ ತಲೆತಗ್ಗಿಸಬೇಕಾದಂತ ವಿಷಯ. ಒಬ್ಬ ಸ್ವತಃ ಡಾಕ್ಟರ್ ಆಗಿರುವ ಅವರು, ಶವ ಇಲ್ಲಿ ಸುಟ್ಟರೆ ಕೊರೊನಾ ಹರಡಲ್ಲ ಎಂದು ಹೇಳುತ್ತಲೆ, ಅಂತಿಮ ಸಂಸ್ಕಾರದ ಬಗ್ಗೆ ನನಗೆ ಮಾಹಿತಿ ನೀಡಿಲ್ಲ, ನನ್ನ ಜನ ಒಪ್ಪುತ್ತಿಲ್ಲ ಎಂದು ಹೇಳಿ ಕೊನೆವರೆಗೂ ಅಂತಿಮ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡಲಿಲ್ಲ. ಶವದಿಂದ ಕೊರೊನಾ ಹರಡುವುದಿಲ್ಲ ಎಂದು ಗೊತ್ತಿದ್ದರೂ ಜನರು ಒಪ್ಪುತ್ತಿಲ್ಲ ಎಂದು ಎಲ್ಲವೂ ಹಾಗೆ ಒಪ್ಪಿ ಬಿಡುವುದೆ. ಅದನ್ನು ವಿವೇಚಿಸಿ ಅವರಿಗೆ ತಿಳಿಹೇಳುವ ಹಾಗೂ ಈ ಅಮಾನವೀಯ ನಡೆಯ ವಿರುದ್ದ ನಿಲ್ಲುವ ನೈತಿಕ ಪ್ರಜ್ಞೆಯಾದರೂ ಬೇಡವೆ.

ಸುರತ್ಕಲ್ ಶಾಸಕ ಭರತ್‌ ಶೆಟ್ಟಿ

ಶಾಸಕ ಹಾಗೂ ಸ್ವತಃ ಡಾಕ್ಟರ್ ಕೂಡಾ ಆಗಿರುವ ಭರತ್ ಶೆಟ್ಟಿಗೆ ಅಲ್ಲಿರುವ ಜನರಿಗೆ ತಿಳಿ ಹೇಳಿ ಅಂತಿಮ ಸಂಸ್ಕಾರಕ್ಕೆ ಒಪ್ಪಿಸುವ ಧೈರ್ಯ ಯಾಕೆ ಬರಲಿಲ್ಲ?. ಮುಖ್ಯವಾಗಿ ಜನರು ಉದ್ರೇಕಗೊಳ್ಳಬಹುದು, ನನ್ನ ಮತದಾರರೇ ನನಗೆ ತಿರುಗಿ ಬೀಳಬಹುದು ಎಂಬ ಭಯ. ಹಾಗೆ ನೋಡಿದರೆ ಇಲ್ಲಿ ಇಂತಹ ಉನ್ಮಾದವನ್ನು ನಿಜಕ್ಕೂ ಸೃಷ್ಟಿಸಿದವರು ಯಾರು? ಇವರುಗಳು ತಾನೆ. ನಿಜ ಗೊತ್ತಿದ್ದರೂ ಅಲ್ಲಿ ಸೇರಿರುವ ಜನರು ಒಪ್ಪಿಕೊಳ್ಳುತ್ತಿಲ್ಲ ಯಾಕೆಂದರೆ ಒಪ್ಪಿಕೊಳ್ಳದೆ ಇರುವಂತಹ ಮನಸ್ಸುಗಳನ್ನು ಈಗಾಗಲೇ ಇಲ್ಲಿ ಸೃಷ್ಟಿಸಿಯಾಗಿದೆ. ಇಂತಹ ಉನ್ಮಾದವನ್ನು ಸೃಷ್ಟಿಸಿದವರಿಗೆ ಈಗ ಅದರ ವಿರುದ್ಧ ಮಾತನಾಡಲು ಭಯವಿದೆ. ಅದೇ ಕಾರಣಕ್ಕೆ ಸಾವಿಗೀಡಾದ ವ್ಯಕ್ತಿಯ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಕೂಡಾ, ಸ್ಮಶಾನ ಸಿಗದಿದ್ದರೆ ನನ್ನ ಜಮೀನಿನಲ್ಲಿ ಸಂಸ್ಕಾರ ಮಾಡಿ ಎಂದಿದ್ದು. ಈಗ ಅವರನ್ನು ಮಾನವೀಯತೆಯ ಹರಿಕಾರ ಎನ್ನುತ್ತಾ ಕೆಲವರು ಕೊಂಡಾಡುತ್ತಿದ್ದಾರೆ, ಬಿಡಿ. ಆದರೆ ನಿಜವಾಗಿಯೂ ಒಬ್ಬ ಶಾಸಕನ ಕರ್ತವ್ಯ ಯಾವುದು?.

ಕೊರೊನಾ ಸೋಂಕಿತರು ಸತ್ತರೆ ಜಿಲ್ಲಾಡಳಿತ ಅಂತಿಮ ಸಂಸ್ಕಾರದ ಬಗ್ಗೆ ಶಾಸಕರಿಗೆ ಮಾಹಿತಿ ನೀಡಲೇಬೇಕು ಎಂದು ನಿಯಮವೇನು ಇಲ್ಲ. ಸಾರ್ವಜನಿಕರಿಗಂತೂ ಇಂತಹ ಯಾವುದೇ ಮಾಹಿತಿ ನೀಡುವುದಿಲ್ಲ. ಆದರೆ ಜಿಲ್ಲಾಡಳಿತ ‌ಶವ ಸಂಸ್ಕಾರ ಮಾಡಬೇಕು ಎಂದು ತೀರ್ಮಾನಿಸಿದ ಕಡೆಯಲ್ಲೆಲ್ಲ ಜನ ಸೇರಿದ್ದರೆಂದರೆ ಉನ್ಮಾದಕ್ಕೆ ಒಳಪಡಿಸುವ ನೆಟ್ವರ್ಕ್ ಎಷ್ಟೊಂದು ವೇಗವಾಗಿ ಕೆಲಸ ಮಾಡುತ್ತಿದೆ ಎಂಬುವುದು ಅರ್ಥ ಮಾಡಿಕೊಳ್ಳಬಹುದು. ಜಿಲ್ಲಾಡಳಿತ ಅಂತಿಮ ಸಂಸ್ಕಾರಕ್ಕೆ ತೀರ್ಮಾನಿಸಿದ ಸ್ಮಶಾನವಿರುವ ಭಾಗದ ಜನರಿಗೆ ಅಷ್ಟೊಂದು ವೇಗದಲ್ಲಿ ಸಂದೇಶಗಳು ತಲುಪಿ, ಅಲ್ಲಿ ಅಂತಿಮ ಸಂಸ್ಕಾರ ಮಾಡಲು ಬಿಡಬಾರದು ಎಂದು ವಿವೇಚನೆಯಿಲ್ಲದ ತೀರ್ಮಾನವನ್ನು ಒಂದು ದೊಡ್ಡ ಜನ ಸಮೂಹ ತೀರ್ಮಾನಿಸುತ್ತದೆಯಂದರೆ, ಅದಕ್ಕಿಂತಲೂ ಹೆಚ್ಚಿನ ಅಪಾಯ ಏನಿದೆ. ಕೊರೊನಾ ಬಗ್ಗೆ ಜನರಿಗೆ ಸರ್ಕಾರ ಇಷ್ಟೆಲ್ಲ ಮಾಹಿತಿಯನ್ನು ನೀಡಿದರೂ ಮಂಗಳೂರಿನಂತಹ ಸುಶಿಕ್ಷಿತ ಜನರೆ ಅದನ್ನು ಮನನ ಮಾಡಿಕೊಂಡಿಲ್ಲವೆಂದರೆ ಸಮಾಜದ ದಾರಿ ಎಲ್ಲಿಗಿದೆ ಹೇಳಿ.

ಕೊರೊನಾ ಈಗಾಗಲೆ ಎಲ್ಲಾ ಕಡೆಗೂ ಹಬ್ಬುತ್ತಿದೆ. ಈ ಸೋಂಕು ಯಾರಿಗೂ ಹರಡಬಹುದು. ಒಂದು ವೇಳೆ ಅಲ್ಲಿ ಅಂತಿಮ ಸಂಸ್ಕಾರ ಮಾಡದಂತೆ ತಡೆದ ಜನರಿಗೂ ಇದೆ ರೀತಿಯ ಪರಿಸ್ಥಿತಿ ಬಂದಿದ್ದರೆ (ಹಾಗೆ ಆಗದಿರಲಿ) ಏನಾಗುತ್ತಿತ್ತು. ಅಲ್ಲಿ ಸೇರಿದ ಯಾರೂ ಸಾವಿಗೀಡಾದ ಕುಟುಂಬದವರ ಸ್ಥಾನದಲ್ಲಿ ನಿಂತು ನೋಡಲೇ ಇಲ್ಲ. ಆ ಕುಟುಂಬದವರು ಎಷ್ಟು ನೊಂದಿರಬಹುದು, ಮನೆಯ ಹಿರಿಯರನ್ನು ಕಳೆದುಕೊಂಡ ನೋವಿನ ಜೊತೆಗೆ, ಅಂತಿಮ ಸಂಸ್ಕಾರ ಮಾಡಲಾಗುತ್ತಿಲ್ಲ ಎಂಬ ನೋವು ಅವರನ್ನು ಹಿಂಡಿ ಹಿಪ್ಪೆ ಮಾಡಿರುತ್ತದೆ. ಆದರೆ ಅಲ್ಲಿ ಸೇರಿದ ಯಾರಿಗೂ ಇದರ ಬಗ್ಗೆ ಆಲೋಚಿಸುವಷ್ಟು ವ್ಯಯದಾನವಿರಲಿಲ್ಲ. ಸಾಮೂಹಿಕ ಉನ್ಮಾದವೊಂದು ಏನೆಲ್ಲ ಮಾಡಿ ಬಿಡುತ್ತದೆ ನೋಡಿ. ಶವದ ಅಂತಿಮ ಸಂಸ್ಕಾರ ನಮ್ಮ ಹತ್ತಿರದ ಸ್ಮಶಾನದಲ್ಲಿ ಮಾಡುತ್ತಿದ್ದಾರೆಂಬ ಸಂದೇಶ ಭಯ ಹುಟ್ಟಿಸುವ ರೀತಿಯಲ್ಲಿ ಬಂದಿರುತ್ತದೆ, ಅದರಿಂದಾಗಿ ಅಂತಿಮ ಸಂಸ್ಕಾರ ಮಾಡಲು ಬಿಡಲೇಬಾರದು ಎಂಬ ತಲೆಗಡರಿದ ಉನ್ಮಾದದಿಂದಾಗಿ ಬಾಕಿ ಎಲ್ಲವೂ ಮಂಕಾಗುತ್ತದೆ. ಅವರು ಆಲೋಚನೆಯ ಶಕ್ತಿಯನ್ನೇ ಕಳೆದುಕೊಂಡಿರುತ್ತಾರೆ. ನಿಜಕ್ಕೂ ಮಾನವೀಯತೆ ಎಂದರೆ ಏನು, ಎಲ್ಲವನ್ನೂ ಮೀರಿ ಮನುಷ್ಯನ ಸಂಕಷ್ಟಗಳಿಗೆ ನೆರವಾಗುವುದು, ಅವರ ನೋವಿಗೆ ಸಾಂತ್ವನವಾಗುವುದು, ಅವರ ಭಾರಗಳಿಗೆ ಬೆನ್ನಾಗುವುದು. ಆದರೆ ನನ್ನ ಮಂಗಳೂರಿಗೆ ಏನಾಗಿದೆ…


ಇದನ್ನೂ ಓದಿ: ಪಾದರಾಯನಪುರ ಮತ್ತು ಚನ್ನೈ ವೈದ್ಯನ ಸಾವಿನ ಘಟನೆ: ಇದು ನಮ್ಮೊಳಗಿನ ವೈರಸ್! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜ್ಞಾವಂತರ ಜಿಲ್ಲೆ ಎಂದು ಕರೆಸಿಕೊಂಡಿರುವ ಜಿಲ್ಲೆಯಲ್ಲಿಯೇ ಹೀಗಾಗಿರುವುದು ದುರಂತ.
    “ಸಾವಿಲ್ಲದ ಮನೆಯಿಂದ ಸಾಸಿವೆಯನ್ನು ತಾ” ಎಂದು ಬುದ್ದ ಹೇಳಿ, ಎರಡೂವರೆ ಸಾವಿರ ವರ್ಷಗಳು ಕಳೆದಿದ್ದರೂ ನಾವಿನ್ನೂ ಬುದ್ದಿ ಕಲಿತಿಲ್ಲ ಎಂದರೆ, ಕಲಿಯುವುದಾದರೂ ಯಾವಾಗ?
    ನಾಗರೀಕತೆಯ ಸವಲತ್ತುಗಳು ಹೆಚ್ಚಿದಂತೆಲ್ಲ ಮನುಷ್ಯ ಮಾನವನಾಗಬೇಕೇ ಹೊರತು ರಕ್ಕಸನಾಗಬಾರದು.

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...