Homeಮುಖಪುಟಈ ಉನ್ಮಾದವನ್ನು ಸೃಷ್ಟಿಸಿದವರ್‍ಯಾರು? ನನ್ನ ಮಂಗಳೂರಿಗೆ ಏನಾಗಿದೆ?

ಈ ಉನ್ಮಾದವನ್ನು ಸೃಷ್ಟಿಸಿದವರ್‍ಯಾರು? ನನ್ನ ಮಂಗಳೂರಿಗೆ ಏನಾಗಿದೆ?

ಕೊರೊನಾ ಕಾರಣಕ್ಕೆ ಮೃತಪಟ್ಟ ಶವದ ಅಂತ್ಯಸಂಸ್ಕಾರಕ್ಕೆ ಅವಕಾಶಕೊಡದ ಮಂಗಳೂರಿನ ಅಮಾನವೀಯ ಘಟನೆಯ ಕುರಿತು ಅಲ್ಲಿನವರೇ ಆದ ಬಾಪು ಅಮ್ಮೆಂಬಳರವರ ಲೇಖನ

- Advertisement -
- Advertisement -

ಉನ್ಮಾದವನ್ನು ಯಾವ ರೀತಿ ಹರಡಲಾಗುತ್ತದೆ ಮತ್ತು ಅದು ನಮ್ಮನ್ನು ಹೇಗೆ ಆಟವಾಡಿಸುತ್ತದೆ ಎಂಬುವುದು ಮಂಗಳೂರಿನ ಘಟನೆ ಸ್ಪಷ್ಟ ಚಿತ್ರಣ ನೀಡುತ್ತದೆ. ಎಲ್ಲೋ ದೂರದ ಸುಶಿಕ್ಷಿತರಲ್ಲದ ಉತ್ತರದ ರಾಜ್ಯಗಳ ಜನರು ಈ ರೀತಿ ನಡೆದು ಕೊಂಡಿದ್ದರೆ, ರೋಗದ ಬಗ್ಗೆ ಅವರಿಗೆ ಅರಿವಿಲ್ಲ ಹಾಗಾಗಿ ಅವರ ತಪ್ಪಿಲ್ಲ ಎಂದು ಸುಮ್ಮನಿದ್ದು ಬಿಡಬಹುದಾಗಿತ್ತು. ಆದರೆ ಇದೆಲ್ಲ ನಡೆದಿರುವುದು ಪ್ರಜ್ಞಾವಂತರೆಂದು ನಮಗೆ ನಾವೇ ಹೇಳಿಕೊಳ್ಳುವ ನನ್ನೂರು ಮಂಗಳೂರಿನಲ್ಲಿ ಎನ್ನುವುದು ನನಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಎಷ್ಟೊಂದು ಅಮಾನವೀಯ ಘಟನೆ ಇದು. ಹಿರಿಯ ಜೀವವೊಂದು ಅವರು ಮಾಡದ ತಪ್ಪಿಗೆ ಸಾವಿಗೀಡಾದ ನಂತರವೂ ಒಂದು ಘನತೆಯ ಅಂತಿಮ ಸಂಸ್ಕಾರಕ್ಕೆ ನನ್ನೂರಿನ ಜನ ಅವಕಾಶ ಕೊಟ್ಟಿಲ್ಲ ಎಂದರೆ ಯಾವ ಪ್ರಜ್ಞೆ, ಎಂತಹ ಪ್ರಜ್ಞಾವಂತರು ? ಎಂತಹ ಕ್ರೂರತೆ ಇದು??

ಜಿಲ್ಲಾಡಳಿತ ಕೊರೊನಾ ಕಾರಣಕ್ಕೆ ಮೃತಪಟ್ಟ ಆ ಹಿರಿಯರ ಶವವನ್ನು ಆಂಬುಲೆನ್ಸ್‌ನಲ್ಲಿಟ್ಟು ಅಂತಿಮ ಸಂಸ್ಕಾರಕ್ಕಾಗಿ ಅರ್ಧ ಜಿಲ್ಲೆ ಅಲೆದಾಡಿದೆ. ಹೋದಲ್ಲೆಲ್ಲ ಜನರ ವಿರೋಧ ಕಂಡುಬಂದಿದೆ. ಅಂದರೆ ಅರ್ಥ ಮಾಡಿಕೊಳ್ಳಿ ಒಂದು ದೊಡ್ಡ ಗುಂಪಿನ ಜನರು ಉನ್ಮಾದಕ್ಕೆ ಒಳಗಾಗಿ ತಾವೇನು ಮಾಡುತ್ತಿದ್ದೇವೆ, ಇದು ಸರಿಯಾದ ನಡೆಯೇ ಎಂಬ ಬಗ್ಗೆ ಚಿಂತಿಸುವಷ್ಟೂ ವಿವೇಚನೆ ಕಳೆದುಕೊಂಡಿದೆ. ಅವರಿಗೆ ತಿಳಿ ಹೇಳುವವರೂ ಆ ಹೊತ್ತಿನಲ್ಲಿ ಯಾರೂ ಇರಲಿಲ್ಲ. ಒಂದು ವೇಳೆ ಹೇಳಿದ್ದರೂ ಕೇಳುತ್ತಿದ್ದರೆ? ಅದೂ ಇಲ್ಲ. ಪಚ್ಚನಾಡಿ ಸ್ಮಶಾನದಲ್ಲಿ ಶಾಸಕ ಭರತ್ ಶೆಟ್ಟಿ ನಡೆದುಕೊಂಡ ರೀತಿ ನಾಗರಿಕ ಸಮಾಜ ಎಂದು ಹೇಳುವ ಯಾರಾದರೂ ತಲೆತಗ್ಗಿಸಬೇಕಾದಂತ ವಿಷಯ. ಒಬ್ಬ ಸ್ವತಃ ಡಾಕ್ಟರ್ ಆಗಿರುವ ಅವರು, ಶವ ಇಲ್ಲಿ ಸುಟ್ಟರೆ ಕೊರೊನಾ ಹರಡಲ್ಲ ಎಂದು ಹೇಳುತ್ತಲೆ, ಅಂತಿಮ ಸಂಸ್ಕಾರದ ಬಗ್ಗೆ ನನಗೆ ಮಾಹಿತಿ ನೀಡಿಲ್ಲ, ನನ್ನ ಜನ ಒಪ್ಪುತ್ತಿಲ್ಲ ಎಂದು ಹೇಳಿ ಕೊನೆವರೆಗೂ ಅಂತಿಮ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡಲಿಲ್ಲ. ಶವದಿಂದ ಕೊರೊನಾ ಹರಡುವುದಿಲ್ಲ ಎಂದು ಗೊತ್ತಿದ್ದರೂ ಜನರು ಒಪ್ಪುತ್ತಿಲ್ಲ ಎಂದು ಎಲ್ಲವೂ ಹಾಗೆ ಒಪ್ಪಿ ಬಿಡುವುದೆ. ಅದನ್ನು ವಿವೇಚಿಸಿ ಅವರಿಗೆ ತಿಳಿಹೇಳುವ ಹಾಗೂ ಈ ಅಮಾನವೀಯ ನಡೆಯ ವಿರುದ್ದ ನಿಲ್ಲುವ ನೈತಿಕ ಪ್ರಜ್ಞೆಯಾದರೂ ಬೇಡವೆ.

ಸುರತ್ಕಲ್ ಶಾಸಕ ಭರತ್‌ ಶೆಟ್ಟಿ

ಶಾಸಕ ಹಾಗೂ ಸ್ವತಃ ಡಾಕ್ಟರ್ ಕೂಡಾ ಆಗಿರುವ ಭರತ್ ಶೆಟ್ಟಿಗೆ ಅಲ್ಲಿರುವ ಜನರಿಗೆ ತಿಳಿ ಹೇಳಿ ಅಂತಿಮ ಸಂಸ್ಕಾರಕ್ಕೆ ಒಪ್ಪಿಸುವ ಧೈರ್ಯ ಯಾಕೆ ಬರಲಿಲ್ಲ?. ಮುಖ್ಯವಾಗಿ ಜನರು ಉದ್ರೇಕಗೊಳ್ಳಬಹುದು, ನನ್ನ ಮತದಾರರೇ ನನಗೆ ತಿರುಗಿ ಬೀಳಬಹುದು ಎಂಬ ಭಯ. ಹಾಗೆ ನೋಡಿದರೆ ಇಲ್ಲಿ ಇಂತಹ ಉನ್ಮಾದವನ್ನು ನಿಜಕ್ಕೂ ಸೃಷ್ಟಿಸಿದವರು ಯಾರು? ಇವರುಗಳು ತಾನೆ. ನಿಜ ಗೊತ್ತಿದ್ದರೂ ಅಲ್ಲಿ ಸೇರಿರುವ ಜನರು ಒಪ್ಪಿಕೊಳ್ಳುತ್ತಿಲ್ಲ ಯಾಕೆಂದರೆ ಒಪ್ಪಿಕೊಳ್ಳದೆ ಇರುವಂತಹ ಮನಸ್ಸುಗಳನ್ನು ಈಗಾಗಲೇ ಇಲ್ಲಿ ಸೃಷ್ಟಿಸಿಯಾಗಿದೆ. ಇಂತಹ ಉನ್ಮಾದವನ್ನು ಸೃಷ್ಟಿಸಿದವರಿಗೆ ಈಗ ಅದರ ವಿರುದ್ಧ ಮಾತನಾಡಲು ಭಯವಿದೆ. ಅದೇ ಕಾರಣಕ್ಕೆ ಸಾವಿಗೀಡಾದ ವ್ಯಕ್ತಿಯ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಕೂಡಾ, ಸ್ಮಶಾನ ಸಿಗದಿದ್ದರೆ ನನ್ನ ಜಮೀನಿನಲ್ಲಿ ಸಂಸ್ಕಾರ ಮಾಡಿ ಎಂದಿದ್ದು. ಈಗ ಅವರನ್ನು ಮಾನವೀಯತೆಯ ಹರಿಕಾರ ಎನ್ನುತ್ತಾ ಕೆಲವರು ಕೊಂಡಾಡುತ್ತಿದ್ದಾರೆ, ಬಿಡಿ. ಆದರೆ ನಿಜವಾಗಿಯೂ ಒಬ್ಬ ಶಾಸಕನ ಕರ್ತವ್ಯ ಯಾವುದು?.

ಕೊರೊನಾ ಸೋಂಕಿತರು ಸತ್ತರೆ ಜಿಲ್ಲಾಡಳಿತ ಅಂತಿಮ ಸಂಸ್ಕಾರದ ಬಗ್ಗೆ ಶಾಸಕರಿಗೆ ಮಾಹಿತಿ ನೀಡಲೇಬೇಕು ಎಂದು ನಿಯಮವೇನು ಇಲ್ಲ. ಸಾರ್ವಜನಿಕರಿಗಂತೂ ಇಂತಹ ಯಾವುದೇ ಮಾಹಿತಿ ನೀಡುವುದಿಲ್ಲ. ಆದರೆ ಜಿಲ್ಲಾಡಳಿತ ‌ಶವ ಸಂಸ್ಕಾರ ಮಾಡಬೇಕು ಎಂದು ತೀರ್ಮಾನಿಸಿದ ಕಡೆಯಲ್ಲೆಲ್ಲ ಜನ ಸೇರಿದ್ದರೆಂದರೆ ಉನ್ಮಾದಕ್ಕೆ ಒಳಪಡಿಸುವ ನೆಟ್ವರ್ಕ್ ಎಷ್ಟೊಂದು ವೇಗವಾಗಿ ಕೆಲಸ ಮಾಡುತ್ತಿದೆ ಎಂಬುವುದು ಅರ್ಥ ಮಾಡಿಕೊಳ್ಳಬಹುದು. ಜಿಲ್ಲಾಡಳಿತ ಅಂತಿಮ ಸಂಸ್ಕಾರಕ್ಕೆ ತೀರ್ಮಾನಿಸಿದ ಸ್ಮಶಾನವಿರುವ ಭಾಗದ ಜನರಿಗೆ ಅಷ್ಟೊಂದು ವೇಗದಲ್ಲಿ ಸಂದೇಶಗಳು ತಲುಪಿ, ಅಲ್ಲಿ ಅಂತಿಮ ಸಂಸ್ಕಾರ ಮಾಡಲು ಬಿಡಬಾರದು ಎಂದು ವಿವೇಚನೆಯಿಲ್ಲದ ತೀರ್ಮಾನವನ್ನು ಒಂದು ದೊಡ್ಡ ಜನ ಸಮೂಹ ತೀರ್ಮಾನಿಸುತ್ತದೆಯಂದರೆ, ಅದಕ್ಕಿಂತಲೂ ಹೆಚ್ಚಿನ ಅಪಾಯ ಏನಿದೆ. ಕೊರೊನಾ ಬಗ್ಗೆ ಜನರಿಗೆ ಸರ್ಕಾರ ಇಷ್ಟೆಲ್ಲ ಮಾಹಿತಿಯನ್ನು ನೀಡಿದರೂ ಮಂಗಳೂರಿನಂತಹ ಸುಶಿಕ್ಷಿತ ಜನರೆ ಅದನ್ನು ಮನನ ಮಾಡಿಕೊಂಡಿಲ್ಲವೆಂದರೆ ಸಮಾಜದ ದಾರಿ ಎಲ್ಲಿಗಿದೆ ಹೇಳಿ.

ಕೊರೊನಾ ಈಗಾಗಲೆ ಎಲ್ಲಾ ಕಡೆಗೂ ಹಬ್ಬುತ್ತಿದೆ. ಈ ಸೋಂಕು ಯಾರಿಗೂ ಹರಡಬಹುದು. ಒಂದು ವೇಳೆ ಅಲ್ಲಿ ಅಂತಿಮ ಸಂಸ್ಕಾರ ಮಾಡದಂತೆ ತಡೆದ ಜನರಿಗೂ ಇದೆ ರೀತಿಯ ಪರಿಸ್ಥಿತಿ ಬಂದಿದ್ದರೆ (ಹಾಗೆ ಆಗದಿರಲಿ) ಏನಾಗುತ್ತಿತ್ತು. ಅಲ್ಲಿ ಸೇರಿದ ಯಾರೂ ಸಾವಿಗೀಡಾದ ಕುಟುಂಬದವರ ಸ್ಥಾನದಲ್ಲಿ ನಿಂತು ನೋಡಲೇ ಇಲ್ಲ. ಆ ಕುಟುಂಬದವರು ಎಷ್ಟು ನೊಂದಿರಬಹುದು, ಮನೆಯ ಹಿರಿಯರನ್ನು ಕಳೆದುಕೊಂಡ ನೋವಿನ ಜೊತೆಗೆ, ಅಂತಿಮ ಸಂಸ್ಕಾರ ಮಾಡಲಾಗುತ್ತಿಲ್ಲ ಎಂಬ ನೋವು ಅವರನ್ನು ಹಿಂಡಿ ಹಿಪ್ಪೆ ಮಾಡಿರುತ್ತದೆ. ಆದರೆ ಅಲ್ಲಿ ಸೇರಿದ ಯಾರಿಗೂ ಇದರ ಬಗ್ಗೆ ಆಲೋಚಿಸುವಷ್ಟು ವ್ಯಯದಾನವಿರಲಿಲ್ಲ. ಸಾಮೂಹಿಕ ಉನ್ಮಾದವೊಂದು ಏನೆಲ್ಲ ಮಾಡಿ ಬಿಡುತ್ತದೆ ನೋಡಿ. ಶವದ ಅಂತಿಮ ಸಂಸ್ಕಾರ ನಮ್ಮ ಹತ್ತಿರದ ಸ್ಮಶಾನದಲ್ಲಿ ಮಾಡುತ್ತಿದ್ದಾರೆಂಬ ಸಂದೇಶ ಭಯ ಹುಟ್ಟಿಸುವ ರೀತಿಯಲ್ಲಿ ಬಂದಿರುತ್ತದೆ, ಅದರಿಂದಾಗಿ ಅಂತಿಮ ಸಂಸ್ಕಾರ ಮಾಡಲು ಬಿಡಲೇಬಾರದು ಎಂಬ ತಲೆಗಡರಿದ ಉನ್ಮಾದದಿಂದಾಗಿ ಬಾಕಿ ಎಲ್ಲವೂ ಮಂಕಾಗುತ್ತದೆ. ಅವರು ಆಲೋಚನೆಯ ಶಕ್ತಿಯನ್ನೇ ಕಳೆದುಕೊಂಡಿರುತ್ತಾರೆ. ನಿಜಕ್ಕೂ ಮಾನವೀಯತೆ ಎಂದರೆ ಏನು, ಎಲ್ಲವನ್ನೂ ಮೀರಿ ಮನುಷ್ಯನ ಸಂಕಷ್ಟಗಳಿಗೆ ನೆರವಾಗುವುದು, ಅವರ ನೋವಿಗೆ ಸಾಂತ್ವನವಾಗುವುದು, ಅವರ ಭಾರಗಳಿಗೆ ಬೆನ್ನಾಗುವುದು. ಆದರೆ ನನ್ನ ಮಂಗಳೂರಿಗೆ ಏನಾಗಿದೆ…


ಇದನ್ನೂ ಓದಿ: ಪಾದರಾಯನಪುರ ಮತ್ತು ಚನ್ನೈ ವೈದ್ಯನ ಸಾವಿನ ಘಟನೆ: ಇದು ನಮ್ಮೊಳಗಿನ ವೈರಸ್! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜ್ಞಾವಂತರ ಜಿಲ್ಲೆ ಎಂದು ಕರೆಸಿಕೊಂಡಿರುವ ಜಿಲ್ಲೆಯಲ್ಲಿಯೇ ಹೀಗಾಗಿರುವುದು ದುರಂತ.
    “ಸಾವಿಲ್ಲದ ಮನೆಯಿಂದ ಸಾಸಿವೆಯನ್ನು ತಾ” ಎಂದು ಬುದ್ದ ಹೇಳಿ, ಎರಡೂವರೆ ಸಾವಿರ ವರ್ಷಗಳು ಕಳೆದಿದ್ದರೂ ನಾವಿನ್ನೂ ಬುದ್ದಿ ಕಲಿತಿಲ್ಲ ಎಂದರೆ, ಕಲಿಯುವುದಾದರೂ ಯಾವಾಗ?
    ನಾಗರೀಕತೆಯ ಸವಲತ್ತುಗಳು ಹೆಚ್ಚಿದಂತೆಲ್ಲ ಮನುಷ್ಯ ಮಾನವನಾಗಬೇಕೇ ಹೊರತು ರಕ್ಕಸನಾಗಬಾರದು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...