Homeಮುಖಪುಟಈ ಉನ್ಮಾದವನ್ನು ಸೃಷ್ಟಿಸಿದವರ್‍ಯಾರು? ನನ್ನ ಮಂಗಳೂರಿಗೆ ಏನಾಗಿದೆ?

ಈ ಉನ್ಮಾದವನ್ನು ಸೃಷ್ಟಿಸಿದವರ್‍ಯಾರು? ನನ್ನ ಮಂಗಳೂರಿಗೆ ಏನಾಗಿದೆ?

ಕೊರೊನಾ ಕಾರಣಕ್ಕೆ ಮೃತಪಟ್ಟ ಶವದ ಅಂತ್ಯಸಂಸ್ಕಾರಕ್ಕೆ ಅವಕಾಶಕೊಡದ ಮಂಗಳೂರಿನ ಅಮಾನವೀಯ ಘಟನೆಯ ಕುರಿತು ಅಲ್ಲಿನವರೇ ಆದ ಬಾಪು ಅಮ್ಮೆಂಬಳರವರ ಲೇಖನ

- Advertisement -
- Advertisement -

ಉನ್ಮಾದವನ್ನು ಯಾವ ರೀತಿ ಹರಡಲಾಗುತ್ತದೆ ಮತ್ತು ಅದು ನಮ್ಮನ್ನು ಹೇಗೆ ಆಟವಾಡಿಸುತ್ತದೆ ಎಂಬುವುದು ಮಂಗಳೂರಿನ ಘಟನೆ ಸ್ಪಷ್ಟ ಚಿತ್ರಣ ನೀಡುತ್ತದೆ. ಎಲ್ಲೋ ದೂರದ ಸುಶಿಕ್ಷಿತರಲ್ಲದ ಉತ್ತರದ ರಾಜ್ಯಗಳ ಜನರು ಈ ರೀತಿ ನಡೆದು ಕೊಂಡಿದ್ದರೆ, ರೋಗದ ಬಗ್ಗೆ ಅವರಿಗೆ ಅರಿವಿಲ್ಲ ಹಾಗಾಗಿ ಅವರ ತಪ್ಪಿಲ್ಲ ಎಂದು ಸುಮ್ಮನಿದ್ದು ಬಿಡಬಹುದಾಗಿತ್ತು. ಆದರೆ ಇದೆಲ್ಲ ನಡೆದಿರುವುದು ಪ್ರಜ್ಞಾವಂತರೆಂದು ನಮಗೆ ನಾವೇ ಹೇಳಿಕೊಳ್ಳುವ ನನ್ನೂರು ಮಂಗಳೂರಿನಲ್ಲಿ ಎನ್ನುವುದು ನನಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಎಷ್ಟೊಂದು ಅಮಾನವೀಯ ಘಟನೆ ಇದು. ಹಿರಿಯ ಜೀವವೊಂದು ಅವರು ಮಾಡದ ತಪ್ಪಿಗೆ ಸಾವಿಗೀಡಾದ ನಂತರವೂ ಒಂದು ಘನತೆಯ ಅಂತಿಮ ಸಂಸ್ಕಾರಕ್ಕೆ ನನ್ನೂರಿನ ಜನ ಅವಕಾಶ ಕೊಟ್ಟಿಲ್ಲ ಎಂದರೆ ಯಾವ ಪ್ರಜ್ಞೆ, ಎಂತಹ ಪ್ರಜ್ಞಾವಂತರು ? ಎಂತಹ ಕ್ರೂರತೆ ಇದು??

ಜಿಲ್ಲಾಡಳಿತ ಕೊರೊನಾ ಕಾರಣಕ್ಕೆ ಮೃತಪಟ್ಟ ಆ ಹಿರಿಯರ ಶವವನ್ನು ಆಂಬುಲೆನ್ಸ್‌ನಲ್ಲಿಟ್ಟು ಅಂತಿಮ ಸಂಸ್ಕಾರಕ್ಕಾಗಿ ಅರ್ಧ ಜಿಲ್ಲೆ ಅಲೆದಾಡಿದೆ. ಹೋದಲ್ಲೆಲ್ಲ ಜನರ ವಿರೋಧ ಕಂಡುಬಂದಿದೆ. ಅಂದರೆ ಅರ್ಥ ಮಾಡಿಕೊಳ್ಳಿ ಒಂದು ದೊಡ್ಡ ಗುಂಪಿನ ಜನರು ಉನ್ಮಾದಕ್ಕೆ ಒಳಗಾಗಿ ತಾವೇನು ಮಾಡುತ್ತಿದ್ದೇವೆ, ಇದು ಸರಿಯಾದ ನಡೆಯೇ ಎಂಬ ಬಗ್ಗೆ ಚಿಂತಿಸುವಷ್ಟೂ ವಿವೇಚನೆ ಕಳೆದುಕೊಂಡಿದೆ. ಅವರಿಗೆ ತಿಳಿ ಹೇಳುವವರೂ ಆ ಹೊತ್ತಿನಲ್ಲಿ ಯಾರೂ ಇರಲಿಲ್ಲ. ಒಂದು ವೇಳೆ ಹೇಳಿದ್ದರೂ ಕೇಳುತ್ತಿದ್ದರೆ? ಅದೂ ಇಲ್ಲ. ಪಚ್ಚನಾಡಿ ಸ್ಮಶಾನದಲ್ಲಿ ಶಾಸಕ ಭರತ್ ಶೆಟ್ಟಿ ನಡೆದುಕೊಂಡ ರೀತಿ ನಾಗರಿಕ ಸಮಾಜ ಎಂದು ಹೇಳುವ ಯಾರಾದರೂ ತಲೆತಗ್ಗಿಸಬೇಕಾದಂತ ವಿಷಯ. ಒಬ್ಬ ಸ್ವತಃ ಡಾಕ್ಟರ್ ಆಗಿರುವ ಅವರು, ಶವ ಇಲ್ಲಿ ಸುಟ್ಟರೆ ಕೊರೊನಾ ಹರಡಲ್ಲ ಎಂದು ಹೇಳುತ್ತಲೆ, ಅಂತಿಮ ಸಂಸ್ಕಾರದ ಬಗ್ಗೆ ನನಗೆ ಮಾಹಿತಿ ನೀಡಿಲ್ಲ, ನನ್ನ ಜನ ಒಪ್ಪುತ್ತಿಲ್ಲ ಎಂದು ಹೇಳಿ ಕೊನೆವರೆಗೂ ಅಂತಿಮ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡಲಿಲ್ಲ. ಶವದಿಂದ ಕೊರೊನಾ ಹರಡುವುದಿಲ್ಲ ಎಂದು ಗೊತ್ತಿದ್ದರೂ ಜನರು ಒಪ್ಪುತ್ತಿಲ್ಲ ಎಂದು ಎಲ್ಲವೂ ಹಾಗೆ ಒಪ್ಪಿ ಬಿಡುವುದೆ. ಅದನ್ನು ವಿವೇಚಿಸಿ ಅವರಿಗೆ ತಿಳಿಹೇಳುವ ಹಾಗೂ ಈ ಅಮಾನವೀಯ ನಡೆಯ ವಿರುದ್ದ ನಿಲ್ಲುವ ನೈತಿಕ ಪ್ರಜ್ಞೆಯಾದರೂ ಬೇಡವೆ.

ಸುರತ್ಕಲ್ ಶಾಸಕ ಭರತ್‌ ಶೆಟ್ಟಿ

ಶಾಸಕ ಹಾಗೂ ಸ್ವತಃ ಡಾಕ್ಟರ್ ಕೂಡಾ ಆಗಿರುವ ಭರತ್ ಶೆಟ್ಟಿಗೆ ಅಲ್ಲಿರುವ ಜನರಿಗೆ ತಿಳಿ ಹೇಳಿ ಅಂತಿಮ ಸಂಸ್ಕಾರಕ್ಕೆ ಒಪ್ಪಿಸುವ ಧೈರ್ಯ ಯಾಕೆ ಬರಲಿಲ್ಲ?. ಮುಖ್ಯವಾಗಿ ಜನರು ಉದ್ರೇಕಗೊಳ್ಳಬಹುದು, ನನ್ನ ಮತದಾರರೇ ನನಗೆ ತಿರುಗಿ ಬೀಳಬಹುದು ಎಂಬ ಭಯ. ಹಾಗೆ ನೋಡಿದರೆ ಇಲ್ಲಿ ಇಂತಹ ಉನ್ಮಾದವನ್ನು ನಿಜಕ್ಕೂ ಸೃಷ್ಟಿಸಿದವರು ಯಾರು? ಇವರುಗಳು ತಾನೆ. ನಿಜ ಗೊತ್ತಿದ್ದರೂ ಅಲ್ಲಿ ಸೇರಿರುವ ಜನರು ಒಪ್ಪಿಕೊಳ್ಳುತ್ತಿಲ್ಲ ಯಾಕೆಂದರೆ ಒಪ್ಪಿಕೊಳ್ಳದೆ ಇರುವಂತಹ ಮನಸ್ಸುಗಳನ್ನು ಈಗಾಗಲೇ ಇಲ್ಲಿ ಸೃಷ್ಟಿಸಿಯಾಗಿದೆ. ಇಂತಹ ಉನ್ಮಾದವನ್ನು ಸೃಷ್ಟಿಸಿದವರಿಗೆ ಈಗ ಅದರ ವಿರುದ್ಧ ಮಾತನಾಡಲು ಭಯವಿದೆ. ಅದೇ ಕಾರಣಕ್ಕೆ ಸಾವಿಗೀಡಾದ ವ್ಯಕ್ತಿಯ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಕೂಡಾ, ಸ್ಮಶಾನ ಸಿಗದಿದ್ದರೆ ನನ್ನ ಜಮೀನಿನಲ್ಲಿ ಸಂಸ್ಕಾರ ಮಾಡಿ ಎಂದಿದ್ದು. ಈಗ ಅವರನ್ನು ಮಾನವೀಯತೆಯ ಹರಿಕಾರ ಎನ್ನುತ್ತಾ ಕೆಲವರು ಕೊಂಡಾಡುತ್ತಿದ್ದಾರೆ, ಬಿಡಿ. ಆದರೆ ನಿಜವಾಗಿಯೂ ಒಬ್ಬ ಶಾಸಕನ ಕರ್ತವ್ಯ ಯಾವುದು?.

ಕೊರೊನಾ ಸೋಂಕಿತರು ಸತ್ತರೆ ಜಿಲ್ಲಾಡಳಿತ ಅಂತಿಮ ಸಂಸ್ಕಾರದ ಬಗ್ಗೆ ಶಾಸಕರಿಗೆ ಮಾಹಿತಿ ನೀಡಲೇಬೇಕು ಎಂದು ನಿಯಮವೇನು ಇಲ್ಲ. ಸಾರ್ವಜನಿಕರಿಗಂತೂ ಇಂತಹ ಯಾವುದೇ ಮಾಹಿತಿ ನೀಡುವುದಿಲ್ಲ. ಆದರೆ ಜಿಲ್ಲಾಡಳಿತ ‌ಶವ ಸಂಸ್ಕಾರ ಮಾಡಬೇಕು ಎಂದು ತೀರ್ಮಾನಿಸಿದ ಕಡೆಯಲ್ಲೆಲ್ಲ ಜನ ಸೇರಿದ್ದರೆಂದರೆ ಉನ್ಮಾದಕ್ಕೆ ಒಳಪಡಿಸುವ ನೆಟ್ವರ್ಕ್ ಎಷ್ಟೊಂದು ವೇಗವಾಗಿ ಕೆಲಸ ಮಾಡುತ್ತಿದೆ ಎಂಬುವುದು ಅರ್ಥ ಮಾಡಿಕೊಳ್ಳಬಹುದು. ಜಿಲ್ಲಾಡಳಿತ ಅಂತಿಮ ಸಂಸ್ಕಾರಕ್ಕೆ ತೀರ್ಮಾನಿಸಿದ ಸ್ಮಶಾನವಿರುವ ಭಾಗದ ಜನರಿಗೆ ಅಷ್ಟೊಂದು ವೇಗದಲ್ಲಿ ಸಂದೇಶಗಳು ತಲುಪಿ, ಅಲ್ಲಿ ಅಂತಿಮ ಸಂಸ್ಕಾರ ಮಾಡಲು ಬಿಡಬಾರದು ಎಂದು ವಿವೇಚನೆಯಿಲ್ಲದ ತೀರ್ಮಾನವನ್ನು ಒಂದು ದೊಡ್ಡ ಜನ ಸಮೂಹ ತೀರ್ಮಾನಿಸುತ್ತದೆಯಂದರೆ, ಅದಕ್ಕಿಂತಲೂ ಹೆಚ್ಚಿನ ಅಪಾಯ ಏನಿದೆ. ಕೊರೊನಾ ಬಗ್ಗೆ ಜನರಿಗೆ ಸರ್ಕಾರ ಇಷ್ಟೆಲ್ಲ ಮಾಹಿತಿಯನ್ನು ನೀಡಿದರೂ ಮಂಗಳೂರಿನಂತಹ ಸುಶಿಕ್ಷಿತ ಜನರೆ ಅದನ್ನು ಮನನ ಮಾಡಿಕೊಂಡಿಲ್ಲವೆಂದರೆ ಸಮಾಜದ ದಾರಿ ಎಲ್ಲಿಗಿದೆ ಹೇಳಿ.

ಕೊರೊನಾ ಈಗಾಗಲೆ ಎಲ್ಲಾ ಕಡೆಗೂ ಹಬ್ಬುತ್ತಿದೆ. ಈ ಸೋಂಕು ಯಾರಿಗೂ ಹರಡಬಹುದು. ಒಂದು ವೇಳೆ ಅಲ್ಲಿ ಅಂತಿಮ ಸಂಸ್ಕಾರ ಮಾಡದಂತೆ ತಡೆದ ಜನರಿಗೂ ಇದೆ ರೀತಿಯ ಪರಿಸ್ಥಿತಿ ಬಂದಿದ್ದರೆ (ಹಾಗೆ ಆಗದಿರಲಿ) ಏನಾಗುತ್ತಿತ್ತು. ಅಲ್ಲಿ ಸೇರಿದ ಯಾರೂ ಸಾವಿಗೀಡಾದ ಕುಟುಂಬದವರ ಸ್ಥಾನದಲ್ಲಿ ನಿಂತು ನೋಡಲೇ ಇಲ್ಲ. ಆ ಕುಟುಂಬದವರು ಎಷ್ಟು ನೊಂದಿರಬಹುದು, ಮನೆಯ ಹಿರಿಯರನ್ನು ಕಳೆದುಕೊಂಡ ನೋವಿನ ಜೊತೆಗೆ, ಅಂತಿಮ ಸಂಸ್ಕಾರ ಮಾಡಲಾಗುತ್ತಿಲ್ಲ ಎಂಬ ನೋವು ಅವರನ್ನು ಹಿಂಡಿ ಹಿಪ್ಪೆ ಮಾಡಿರುತ್ತದೆ. ಆದರೆ ಅಲ್ಲಿ ಸೇರಿದ ಯಾರಿಗೂ ಇದರ ಬಗ್ಗೆ ಆಲೋಚಿಸುವಷ್ಟು ವ್ಯಯದಾನವಿರಲಿಲ್ಲ. ಸಾಮೂಹಿಕ ಉನ್ಮಾದವೊಂದು ಏನೆಲ್ಲ ಮಾಡಿ ಬಿಡುತ್ತದೆ ನೋಡಿ. ಶವದ ಅಂತಿಮ ಸಂಸ್ಕಾರ ನಮ್ಮ ಹತ್ತಿರದ ಸ್ಮಶಾನದಲ್ಲಿ ಮಾಡುತ್ತಿದ್ದಾರೆಂಬ ಸಂದೇಶ ಭಯ ಹುಟ್ಟಿಸುವ ರೀತಿಯಲ್ಲಿ ಬಂದಿರುತ್ತದೆ, ಅದರಿಂದಾಗಿ ಅಂತಿಮ ಸಂಸ್ಕಾರ ಮಾಡಲು ಬಿಡಲೇಬಾರದು ಎಂಬ ತಲೆಗಡರಿದ ಉನ್ಮಾದದಿಂದಾಗಿ ಬಾಕಿ ಎಲ್ಲವೂ ಮಂಕಾಗುತ್ತದೆ. ಅವರು ಆಲೋಚನೆಯ ಶಕ್ತಿಯನ್ನೇ ಕಳೆದುಕೊಂಡಿರುತ್ತಾರೆ. ನಿಜಕ್ಕೂ ಮಾನವೀಯತೆ ಎಂದರೆ ಏನು, ಎಲ್ಲವನ್ನೂ ಮೀರಿ ಮನುಷ್ಯನ ಸಂಕಷ್ಟಗಳಿಗೆ ನೆರವಾಗುವುದು, ಅವರ ನೋವಿಗೆ ಸಾಂತ್ವನವಾಗುವುದು, ಅವರ ಭಾರಗಳಿಗೆ ಬೆನ್ನಾಗುವುದು. ಆದರೆ ನನ್ನ ಮಂಗಳೂರಿಗೆ ಏನಾಗಿದೆ…


ಇದನ್ನೂ ಓದಿ: ಪಾದರಾಯನಪುರ ಮತ್ತು ಚನ್ನೈ ವೈದ್ಯನ ಸಾವಿನ ಘಟನೆ: ಇದು ನಮ್ಮೊಳಗಿನ ವೈರಸ್! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜ್ಞಾವಂತರ ಜಿಲ್ಲೆ ಎಂದು ಕರೆಸಿಕೊಂಡಿರುವ ಜಿಲ್ಲೆಯಲ್ಲಿಯೇ ಹೀಗಾಗಿರುವುದು ದುರಂತ.
    “ಸಾವಿಲ್ಲದ ಮನೆಯಿಂದ ಸಾಸಿವೆಯನ್ನು ತಾ” ಎಂದು ಬುದ್ದ ಹೇಳಿ, ಎರಡೂವರೆ ಸಾವಿರ ವರ್ಷಗಳು ಕಳೆದಿದ್ದರೂ ನಾವಿನ್ನೂ ಬುದ್ದಿ ಕಲಿತಿಲ್ಲ ಎಂದರೆ, ಕಲಿಯುವುದಾದರೂ ಯಾವಾಗ?
    ನಾಗರೀಕತೆಯ ಸವಲತ್ತುಗಳು ಹೆಚ್ಚಿದಂತೆಲ್ಲ ಮನುಷ್ಯ ಮಾನವನಾಗಬೇಕೇ ಹೊರತು ರಕ್ಕಸನಾಗಬಾರದು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....