Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಹಾಭಾರತದ ಬಗ್ಗೆ ರಾಹುಲ್‌ ಗಾಂಧಿ ತಪ್ಪುತಪ್ಪಾಗಿ ಹೇಳಿದ್ದಾರೆ ಎನ್ನಲಾಗಿರುವ ಈ ಟ್ವೀಟ್ ಎಡಿಟ್‌ ಮಾಡಿರುವಂತದ್ದು!

ಫ್ಯಾಕ್ಟ್‌ಚೆಕ್: ಮಹಾಭಾರತದ ಬಗ್ಗೆ ರಾಹುಲ್‌ ಗಾಂಧಿ ತಪ್ಪುತಪ್ಪಾಗಿ ಹೇಳಿದ್ದಾರೆ ಎನ್ನಲಾಗಿರುವ ಈ ಟ್ವೀಟ್ ಎಡಿಟ್‌ ಮಾಡಿರುವಂತದ್ದು!

- Advertisement -
- Advertisement -

ಕಾಂಗ್ರೆಸ್‌‌‌‌ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ ಎನ್ನಲಾಗಿರುವ ಟ್ವೀಟ್‌ ಒಂದರ ಸ್ಕ್ರೀನ್‌ಶಾರ್ಟ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಹಿಂದೂಗಳ ಪವಿತ್ರ ಗ್ರಂಥಗಳಾದ ಮಹಾಭಾರತ ಮತ್ತು ರಾಮಾಯಣದ ಬಗ್ಗೆ ಅವರು ತಪ್ಪು ತಪ್ಪಾಗಿ ಬರೆದಿದ್ದಾರೆ ಎಂದು ಪ್ರತಿಪಾದಿಸಲಾಗಿದೆ. ಹೀಗಾಗಿ ಅವರಿಗೆ ಗ್ರಂಥಗಳ ಬಗ್ಗೆ ಜ್ಞಾನದ ಕೊರೆತೆಯಿದೆ ಎಂದು ಸಾಮಾಜಿಕ ಜಾಲತಾಣಗಳದ ಪೋಸ್ಟ್‌ ಪ್ರತಿಪಾದಿಸುತ್ತಿದೆ.

ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಆರೋಪಿಸಲಾಗಿರುವ ಚಿತ್ರದಲ್ಲಿ ಅವರು, ಅರ್ಜುನನಿಗೆ ಕೃಷ್ಣನ ಬದಲಾಗಿ ಭಗವಾನ್ ರಾಮ ಮಾರ್ಗದರ್ಶಿ ಎಂದು ಹೇಳಿದ್ದಾರೆ ಮತ್ತು ಪಾಂಡವರಾದ ಯುಧೀಷ್ಠಿರ, ಲಕ್ಷ್ಮಣ, ಅರ್ಜುನ್, ಗಣೇಶ ಮತ್ತು ಶತ್ರುಘ್ನ ಸಿನ್ಹಾ ಒಟ್ಟು ಸೇರಿ ರಾವಣನನ್ನು ಕೊಂಡಿದ್ದಾರೆ ಎಂದು ಬರೆಯಲಾಗಿದೆ. ಅಲ್ಲದೆ, ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಆರೋಪಿಸಲಾಗಿರುವ ಈ ಟ್ವೀಟ್‌‌ ಕಾಂಗ್ರೆಸ್ ಪಕ್ಷವನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಕೌರವರಿಗೆ ಹೋಲಿಸಿದೆ. ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಆರೋಪಿತ ಟ್ವೀಟ್ ಅನ್ನು ಎಚ್ಚರಿಕೆಯಿಂದ ಗಮನಿಸಿದಾಗ, 19 ಮಾರ್ಚ್ 2018 ರಂದು ಟ್ವೀಟ್ ಮಾಡಲಾಗಿದೆ ಎಂದು ನಾವು ಕಾಣಬಹುದಾಗಿದೆ. ಟ್ವಿಟರ್ ಅಡ್ವಾನ್ಸ್‌‌ ಸರ್ಚ್ ಬಳಸಿಕೊಂಡು ರಾಹುಲ್ ಗಾಂಧಿ ಅಂತಹ ಯಾವುದೇ ಟ್ವೀಟ್ ಅನ್ನು  2018 ರ ಮಾರ್ಚ್ 19 ರಂದು ಮಾಡಿದ್ದಾರೆಯೇ ಎಂದು ಪರಿಶೀಲಿಸಿದಾಗ ನಮಗೆ ಅವರ ಅಧಿಕೃತ ಖಾತೆಯಲ್ಲಿ ಯಾವುದೇ ಟ್ವೀಟ್‌ ಸಿಕ್ಕಿಲ್ಲ. ಒಂದು ವೇಳೆ ರಾಹುಲ್ ಗಾಂಧಿ ಇಂತಹ ಟ್ವೀಟ್ ಮಾಡಿದ್ದರೆ, ಹಲವಾರು ಸುದ್ದಿ ವೆಬ್‌ಸೈಟ್‌ಗಳು ಈ ಮಾಹಿತಿಯನ್ನು ವರದಿ ಮಾಡುವ ಲೇಖನಗಳನ್ನು ಪ್ರಕಟಿಸಿರುತ್ತಿದ್ದವು. ಆದರೆ ಈ ಮಾಹಿತಿಯ ಬಗ್ಗೆ ವರದಿ ಮಾಡಿರುವ ಒಂದೇ ಒಂದು ಸುದ್ದಿಯನ್ನು ನಮಗೆ ಕಂಡುಕೊಳ್ಳಲಾಗಿಲ್ಲ.

ಇದನ್ನೂ ಓದಿ:ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ರಾಹುಲ್ ಗಾಂಧಿಯವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಮಾಡಿದ ಸಾಮಾನ್ಯ ಟ್ವೀಟ್ ಅನ್ನು ಸ್ಕ್ರೀನ್‌ಶಾಟ್‌ನಲ್ಲಿರುವ ಟ್ವೀಟ್‌ನೊಂದಿಗೆ ಹೋಲಿಸಿದಾಗ, ಈ ಎರಡೂ ಟ್ವೀಟ್‌ಗಳಲ್ಲಿ ನಮಗೆ ಹಲವು ವ್ಯತ್ಯಾಸಗಳನ್ನು ಗಮನಿಸಬಹುದು. ಪೋಸ್ಟ್‌ನಲ್ಲಿ ಹಂಚಿಕೊಂಡ ಟ್ವೀಟ್‌ಗೆ ರಾಹುಲ್ ಗಾಂಧಿಯವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಂತೆ ಯಾವುದೇ ನೀಲಿ ಟಿಕ್ ಮಾರ್ಕ್ ಇಲ್ಲ. ಅಲ್ಲದೆ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಆರೋಪಿತ ಟ್ವೀಟ್ ಅನ್ನು ಟ್ವೀಟ್ ಮಾಡಿದ ಡಿವೈಸ್‌‌‌ನ ಹೆಸರು ಕಾಣುವುದಿಲ್ಲ. ಸಾಮಾನ್ಯವಾಗಿ ಯಾವುದೇ ಟ್ವಿಟರ್ ಬಳಕೆದಾರರು ಟ್ವೀಟ್ ಮಾಡಿದಾಗ ಅವರು ಟ್ವೀಟ್‌ ಮಾಡಿರುವ ಡಿವೈಸ್‌‌ ಅನ್ನು ಟ್ವೀಟ್ ಪ್ರದರ್ಶಿಸುತ್ತದೆ.

ಇದನ್ನೂ ಓದಿ:ಫ್ಯಾಕ್ಟ್‌‌ಚೆಕ್‌: ಮೋದಿ ಪ್ರಭಾವದಿಂದ ದಲ್ವೀರ್ ಭಂಡಾರಿ ಅಂತಾರಾಷ್ಟ್ರೀಯ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದು ನಿಜವೇ?

2018 ರ ಕಾಂಗ್ರೆಸ್ ಪ್ಲೀನರಿ ಮತ್ತು ಕರ್ನಾಟಕ ಚುನಾವಣಾ ಸಭೆಗಳಲ್ಲಿ, ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಮಹಾಭಾರತದ ಕೌರವರಿಗೆ ಹೋಲಿಸಿದ್ದರು. ಆದರೆ ಟ್ವೀಟ್ ಸ್ಕ್ರೀನ್‌ಶಾಟ್‌ನಲ್ಲಿ ಆರೋಪಿಸಿದ ರೀತಿಯಲ್ಲಿ ರಾಹುಲ್ ಗಾಂಧಿ ಎಂದಿಗೂ ಹೇಳಿಕೆ ನೀಡಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಮಹಾಭಾರತದ ಕುರಿತು ರಾಹುಲ್ ಗಾಂಧಿಯವರ ಉದ್ದೇಶಿತ ಟ್ವೀಟ್‌ನ ಚಿತ್ರವು ಎಡಿಟ್‌ ಮಾಡಿರುವುದಾಗಿದೆ.

ಪ್ರತಿಪಾದನೆ: ರಾಹುಲ್ ಗಾಂಧಿ ಮಹಾಭಾರತದ ಪಾತ್ರಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ.
ವಾಸ್ತವ: ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ಟ್ವೀಟ್ ಎಡಿಟ್‌ ಮಾಡಿರುವ ಚಿತ್ರವಾಗಿದೆ. ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯಲ್ಲಿ ಅಂತಹ ಯಾವುದೇ ಟ್ವೀಟ್ ಮಾಡಿಲ್ಲ. ರಾಹುಲ್ ಗಾಂಧಿ ಅವರು 2018 ರಲ್ಲಿ ಕಾಂಗ್ರೆಸ್ ಪಕ್ಷದ ನಾಯಕರನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಕೌರವರಿಗೆ ಹೋಲಿಸಿದ್ದಾರೆ. ಆದರೆ ಅವರು ಎಂದಿಗೂ ಟ್ವೀಟ್‌ನಲ್ಲಿ ಆರೋಪಿಸಿದಂತಹ ಹೇಳಿಕೆಗಳನ್ನು ಮಾಡಲಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನು ಓದಿ:Fact Check: ಕಸಬ್‌ನ ಮರಣದಂಡನೆಯನ್ನು ರದ್ದುಗೊಳಿಸಲು ಕೋರಿ ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಹಾಕಿರಲಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...