Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಹಾಭಾರತದ ಬಗ್ಗೆ ರಾಹುಲ್‌ ಗಾಂಧಿ ತಪ್ಪುತಪ್ಪಾಗಿ ಹೇಳಿದ್ದಾರೆ ಎನ್ನಲಾಗಿರುವ ಈ ಟ್ವೀಟ್ ಎಡಿಟ್‌ ಮಾಡಿರುವಂತದ್ದು!

ಫ್ಯಾಕ್ಟ್‌ಚೆಕ್: ಮಹಾಭಾರತದ ಬಗ್ಗೆ ರಾಹುಲ್‌ ಗಾಂಧಿ ತಪ್ಪುತಪ್ಪಾಗಿ ಹೇಳಿದ್ದಾರೆ ಎನ್ನಲಾಗಿರುವ ಈ ಟ್ವೀಟ್ ಎಡಿಟ್‌ ಮಾಡಿರುವಂತದ್ದು!

- Advertisement -
- Advertisement -

ಕಾಂಗ್ರೆಸ್‌‌‌‌ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ ಎನ್ನಲಾಗಿರುವ ಟ್ವೀಟ್‌ ಒಂದರ ಸ್ಕ್ರೀನ್‌ಶಾರ್ಟ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಹಿಂದೂಗಳ ಪವಿತ್ರ ಗ್ರಂಥಗಳಾದ ಮಹಾಭಾರತ ಮತ್ತು ರಾಮಾಯಣದ ಬಗ್ಗೆ ಅವರು ತಪ್ಪು ತಪ್ಪಾಗಿ ಬರೆದಿದ್ದಾರೆ ಎಂದು ಪ್ರತಿಪಾದಿಸಲಾಗಿದೆ. ಹೀಗಾಗಿ ಅವರಿಗೆ ಗ್ರಂಥಗಳ ಬಗ್ಗೆ ಜ್ಞಾನದ ಕೊರೆತೆಯಿದೆ ಎಂದು ಸಾಮಾಜಿಕ ಜಾಲತಾಣಗಳದ ಪೋಸ್ಟ್‌ ಪ್ರತಿಪಾದಿಸುತ್ತಿದೆ.

ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಆರೋಪಿಸಲಾಗಿರುವ ಚಿತ್ರದಲ್ಲಿ ಅವರು, ಅರ್ಜುನನಿಗೆ ಕೃಷ್ಣನ ಬದಲಾಗಿ ಭಗವಾನ್ ರಾಮ ಮಾರ್ಗದರ್ಶಿ ಎಂದು ಹೇಳಿದ್ದಾರೆ ಮತ್ತು ಪಾಂಡವರಾದ ಯುಧೀಷ್ಠಿರ, ಲಕ್ಷ್ಮಣ, ಅರ್ಜುನ್, ಗಣೇಶ ಮತ್ತು ಶತ್ರುಘ್ನ ಸಿನ್ಹಾ ಒಟ್ಟು ಸೇರಿ ರಾವಣನನ್ನು ಕೊಂಡಿದ್ದಾರೆ ಎಂದು ಬರೆಯಲಾಗಿದೆ. ಅಲ್ಲದೆ, ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಆರೋಪಿಸಲಾಗಿರುವ ಈ ಟ್ವೀಟ್‌‌ ಕಾಂಗ್ರೆಸ್ ಪಕ್ಷವನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಕೌರವರಿಗೆ ಹೋಲಿಸಿದೆ. ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಆರೋಪಿತ ಟ್ವೀಟ್ ಅನ್ನು ಎಚ್ಚರಿಕೆಯಿಂದ ಗಮನಿಸಿದಾಗ, 19 ಮಾರ್ಚ್ 2018 ರಂದು ಟ್ವೀಟ್ ಮಾಡಲಾಗಿದೆ ಎಂದು ನಾವು ಕಾಣಬಹುದಾಗಿದೆ. ಟ್ವಿಟರ್ ಅಡ್ವಾನ್ಸ್‌‌ ಸರ್ಚ್ ಬಳಸಿಕೊಂಡು ರಾಹುಲ್ ಗಾಂಧಿ ಅಂತಹ ಯಾವುದೇ ಟ್ವೀಟ್ ಅನ್ನು  2018 ರ ಮಾರ್ಚ್ 19 ರಂದು ಮಾಡಿದ್ದಾರೆಯೇ ಎಂದು ಪರಿಶೀಲಿಸಿದಾಗ ನಮಗೆ ಅವರ ಅಧಿಕೃತ ಖಾತೆಯಲ್ಲಿ ಯಾವುದೇ ಟ್ವೀಟ್‌ ಸಿಕ್ಕಿಲ್ಲ. ಒಂದು ವೇಳೆ ರಾಹುಲ್ ಗಾಂಧಿ ಇಂತಹ ಟ್ವೀಟ್ ಮಾಡಿದ್ದರೆ, ಹಲವಾರು ಸುದ್ದಿ ವೆಬ್‌ಸೈಟ್‌ಗಳು ಈ ಮಾಹಿತಿಯನ್ನು ವರದಿ ಮಾಡುವ ಲೇಖನಗಳನ್ನು ಪ್ರಕಟಿಸಿರುತ್ತಿದ್ದವು. ಆದರೆ ಈ ಮಾಹಿತಿಯ ಬಗ್ಗೆ ವರದಿ ಮಾಡಿರುವ ಒಂದೇ ಒಂದು ಸುದ್ದಿಯನ್ನು ನಮಗೆ ಕಂಡುಕೊಳ್ಳಲಾಗಿಲ್ಲ.

ಇದನ್ನೂ ಓದಿ:ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ರಾಹುಲ್ ಗಾಂಧಿಯವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಮಾಡಿದ ಸಾಮಾನ್ಯ ಟ್ವೀಟ್ ಅನ್ನು ಸ್ಕ್ರೀನ್‌ಶಾಟ್‌ನಲ್ಲಿರುವ ಟ್ವೀಟ್‌ನೊಂದಿಗೆ ಹೋಲಿಸಿದಾಗ, ಈ ಎರಡೂ ಟ್ವೀಟ್‌ಗಳಲ್ಲಿ ನಮಗೆ ಹಲವು ವ್ಯತ್ಯಾಸಗಳನ್ನು ಗಮನಿಸಬಹುದು. ಪೋಸ್ಟ್‌ನಲ್ಲಿ ಹಂಚಿಕೊಂಡ ಟ್ವೀಟ್‌ಗೆ ರಾಹುಲ್ ಗಾಂಧಿಯವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಂತೆ ಯಾವುದೇ ನೀಲಿ ಟಿಕ್ ಮಾರ್ಕ್ ಇಲ್ಲ. ಅಲ್ಲದೆ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಆರೋಪಿತ ಟ್ವೀಟ್ ಅನ್ನು ಟ್ವೀಟ್ ಮಾಡಿದ ಡಿವೈಸ್‌‌‌ನ ಹೆಸರು ಕಾಣುವುದಿಲ್ಲ. ಸಾಮಾನ್ಯವಾಗಿ ಯಾವುದೇ ಟ್ವಿಟರ್ ಬಳಕೆದಾರರು ಟ್ವೀಟ್ ಮಾಡಿದಾಗ ಅವರು ಟ್ವೀಟ್‌ ಮಾಡಿರುವ ಡಿವೈಸ್‌‌ ಅನ್ನು ಟ್ವೀಟ್ ಪ್ರದರ್ಶಿಸುತ್ತದೆ.

ಇದನ್ನೂ ಓದಿ:ಫ್ಯಾಕ್ಟ್‌‌ಚೆಕ್‌: ಮೋದಿ ಪ್ರಭಾವದಿಂದ ದಲ್ವೀರ್ ಭಂಡಾರಿ ಅಂತಾರಾಷ್ಟ್ರೀಯ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದು ನಿಜವೇ?

2018 ರ ಕಾಂಗ್ರೆಸ್ ಪ್ಲೀನರಿ ಮತ್ತು ಕರ್ನಾಟಕ ಚುನಾವಣಾ ಸಭೆಗಳಲ್ಲಿ, ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಮಹಾಭಾರತದ ಕೌರವರಿಗೆ ಹೋಲಿಸಿದ್ದರು. ಆದರೆ ಟ್ವೀಟ್ ಸ್ಕ್ರೀನ್‌ಶಾಟ್‌ನಲ್ಲಿ ಆರೋಪಿಸಿದ ರೀತಿಯಲ್ಲಿ ರಾಹುಲ್ ಗಾಂಧಿ ಎಂದಿಗೂ ಹೇಳಿಕೆ ನೀಡಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಮಹಾಭಾರತದ ಕುರಿತು ರಾಹುಲ್ ಗಾಂಧಿಯವರ ಉದ್ದೇಶಿತ ಟ್ವೀಟ್‌ನ ಚಿತ್ರವು ಎಡಿಟ್‌ ಮಾಡಿರುವುದಾಗಿದೆ.

ಪ್ರತಿಪಾದನೆ: ರಾಹುಲ್ ಗಾಂಧಿ ಮಹಾಭಾರತದ ಪಾತ್ರಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ.
ವಾಸ್ತವ: ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ಟ್ವೀಟ್ ಎಡಿಟ್‌ ಮಾಡಿರುವ ಚಿತ್ರವಾಗಿದೆ. ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯಲ್ಲಿ ಅಂತಹ ಯಾವುದೇ ಟ್ವೀಟ್ ಮಾಡಿಲ್ಲ. ರಾಹುಲ್ ಗಾಂಧಿ ಅವರು 2018 ರಲ್ಲಿ ಕಾಂಗ್ರೆಸ್ ಪಕ್ಷದ ನಾಯಕರನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಕೌರವರಿಗೆ ಹೋಲಿಸಿದ್ದಾರೆ. ಆದರೆ ಅವರು ಎಂದಿಗೂ ಟ್ವೀಟ್‌ನಲ್ಲಿ ಆರೋಪಿಸಿದಂತಹ ಹೇಳಿಕೆಗಳನ್ನು ಮಾಡಲಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನು ಓದಿ:Fact Check: ಕಸಬ್‌ನ ಮರಣದಂಡನೆಯನ್ನು ರದ್ದುಗೊಳಿಸಲು ಕೋರಿ ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಹಾಕಿರಲಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...