Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಹಾಭಾರತದ ಬಗ್ಗೆ ರಾಹುಲ್‌ ಗಾಂಧಿ ತಪ್ಪುತಪ್ಪಾಗಿ ಹೇಳಿದ್ದಾರೆ ಎನ್ನಲಾಗಿರುವ ಈ ಟ್ವೀಟ್ ಎಡಿಟ್‌ ಮಾಡಿರುವಂತದ್ದು!

ಫ್ಯಾಕ್ಟ್‌ಚೆಕ್: ಮಹಾಭಾರತದ ಬಗ್ಗೆ ರಾಹುಲ್‌ ಗಾಂಧಿ ತಪ್ಪುತಪ್ಪಾಗಿ ಹೇಳಿದ್ದಾರೆ ಎನ್ನಲಾಗಿರುವ ಈ ಟ್ವೀಟ್ ಎಡಿಟ್‌ ಮಾಡಿರುವಂತದ್ದು!

- Advertisement -
- Advertisement -

ಕಾಂಗ್ರೆಸ್‌‌‌‌ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ ಎನ್ನಲಾಗಿರುವ ಟ್ವೀಟ್‌ ಒಂದರ ಸ್ಕ್ರೀನ್‌ಶಾರ್ಟ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಹಿಂದೂಗಳ ಪವಿತ್ರ ಗ್ರಂಥಗಳಾದ ಮಹಾಭಾರತ ಮತ್ತು ರಾಮಾಯಣದ ಬಗ್ಗೆ ಅವರು ತಪ್ಪು ತಪ್ಪಾಗಿ ಬರೆದಿದ್ದಾರೆ ಎಂದು ಪ್ರತಿಪಾದಿಸಲಾಗಿದೆ. ಹೀಗಾಗಿ ಅವರಿಗೆ ಗ್ರಂಥಗಳ ಬಗ್ಗೆ ಜ್ಞಾನದ ಕೊರೆತೆಯಿದೆ ಎಂದು ಸಾಮಾಜಿಕ ಜಾಲತಾಣಗಳದ ಪೋಸ್ಟ್‌ ಪ್ರತಿಪಾದಿಸುತ್ತಿದೆ.

ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಆರೋಪಿಸಲಾಗಿರುವ ಚಿತ್ರದಲ್ಲಿ ಅವರು, ಅರ್ಜುನನಿಗೆ ಕೃಷ್ಣನ ಬದಲಾಗಿ ಭಗವಾನ್ ರಾಮ ಮಾರ್ಗದರ್ಶಿ ಎಂದು ಹೇಳಿದ್ದಾರೆ ಮತ್ತು ಪಾಂಡವರಾದ ಯುಧೀಷ್ಠಿರ, ಲಕ್ಷ್ಮಣ, ಅರ್ಜುನ್, ಗಣೇಶ ಮತ್ತು ಶತ್ರುಘ್ನ ಸಿನ್ಹಾ ಒಟ್ಟು ಸೇರಿ ರಾವಣನನ್ನು ಕೊಂಡಿದ್ದಾರೆ ಎಂದು ಬರೆಯಲಾಗಿದೆ. ಅಲ್ಲದೆ, ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಆರೋಪಿಸಲಾಗಿರುವ ಈ ಟ್ವೀಟ್‌‌ ಕಾಂಗ್ರೆಸ್ ಪಕ್ಷವನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಕೌರವರಿಗೆ ಹೋಲಿಸಿದೆ. ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಆರೋಪಿತ ಟ್ವೀಟ್ ಅನ್ನು ಎಚ್ಚರಿಕೆಯಿಂದ ಗಮನಿಸಿದಾಗ, 19 ಮಾರ್ಚ್ 2018 ರಂದು ಟ್ವೀಟ್ ಮಾಡಲಾಗಿದೆ ಎಂದು ನಾವು ಕಾಣಬಹುದಾಗಿದೆ. ಟ್ವಿಟರ್ ಅಡ್ವಾನ್ಸ್‌‌ ಸರ್ಚ್ ಬಳಸಿಕೊಂಡು ರಾಹುಲ್ ಗಾಂಧಿ ಅಂತಹ ಯಾವುದೇ ಟ್ವೀಟ್ ಅನ್ನು  2018 ರ ಮಾರ್ಚ್ 19 ರಂದು ಮಾಡಿದ್ದಾರೆಯೇ ಎಂದು ಪರಿಶೀಲಿಸಿದಾಗ ನಮಗೆ ಅವರ ಅಧಿಕೃತ ಖಾತೆಯಲ್ಲಿ ಯಾವುದೇ ಟ್ವೀಟ್‌ ಸಿಕ್ಕಿಲ್ಲ. ಒಂದು ವೇಳೆ ರಾಹುಲ್ ಗಾಂಧಿ ಇಂತಹ ಟ್ವೀಟ್ ಮಾಡಿದ್ದರೆ, ಹಲವಾರು ಸುದ್ದಿ ವೆಬ್‌ಸೈಟ್‌ಗಳು ಈ ಮಾಹಿತಿಯನ್ನು ವರದಿ ಮಾಡುವ ಲೇಖನಗಳನ್ನು ಪ್ರಕಟಿಸಿರುತ್ತಿದ್ದವು. ಆದರೆ ಈ ಮಾಹಿತಿಯ ಬಗ್ಗೆ ವರದಿ ಮಾಡಿರುವ ಒಂದೇ ಒಂದು ಸುದ್ದಿಯನ್ನು ನಮಗೆ ಕಂಡುಕೊಳ್ಳಲಾಗಿಲ್ಲ.

ಇದನ್ನೂ ಓದಿ:ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ರಾಹುಲ್ ಗಾಂಧಿಯವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಮಾಡಿದ ಸಾಮಾನ್ಯ ಟ್ವೀಟ್ ಅನ್ನು ಸ್ಕ್ರೀನ್‌ಶಾಟ್‌ನಲ್ಲಿರುವ ಟ್ವೀಟ್‌ನೊಂದಿಗೆ ಹೋಲಿಸಿದಾಗ, ಈ ಎರಡೂ ಟ್ವೀಟ್‌ಗಳಲ್ಲಿ ನಮಗೆ ಹಲವು ವ್ಯತ್ಯಾಸಗಳನ್ನು ಗಮನಿಸಬಹುದು. ಪೋಸ್ಟ್‌ನಲ್ಲಿ ಹಂಚಿಕೊಂಡ ಟ್ವೀಟ್‌ಗೆ ರಾಹುಲ್ ಗಾಂಧಿಯವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಂತೆ ಯಾವುದೇ ನೀಲಿ ಟಿಕ್ ಮಾರ್ಕ್ ಇಲ್ಲ. ಅಲ್ಲದೆ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಆರೋಪಿತ ಟ್ವೀಟ್ ಅನ್ನು ಟ್ವೀಟ್ ಮಾಡಿದ ಡಿವೈಸ್‌‌‌ನ ಹೆಸರು ಕಾಣುವುದಿಲ್ಲ. ಸಾಮಾನ್ಯವಾಗಿ ಯಾವುದೇ ಟ್ವಿಟರ್ ಬಳಕೆದಾರರು ಟ್ವೀಟ್ ಮಾಡಿದಾಗ ಅವರು ಟ್ವೀಟ್‌ ಮಾಡಿರುವ ಡಿವೈಸ್‌‌ ಅನ್ನು ಟ್ವೀಟ್ ಪ್ರದರ್ಶಿಸುತ್ತದೆ.

ಇದನ್ನೂ ಓದಿ:ಫ್ಯಾಕ್ಟ್‌‌ಚೆಕ್‌: ಮೋದಿ ಪ್ರಭಾವದಿಂದ ದಲ್ವೀರ್ ಭಂಡಾರಿ ಅಂತಾರಾಷ್ಟ್ರೀಯ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದು ನಿಜವೇ?

2018 ರ ಕಾಂಗ್ರೆಸ್ ಪ್ಲೀನರಿ ಮತ್ತು ಕರ್ನಾಟಕ ಚುನಾವಣಾ ಸಭೆಗಳಲ್ಲಿ, ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಮಹಾಭಾರತದ ಕೌರವರಿಗೆ ಹೋಲಿಸಿದ್ದರು. ಆದರೆ ಟ್ವೀಟ್ ಸ್ಕ್ರೀನ್‌ಶಾಟ್‌ನಲ್ಲಿ ಆರೋಪಿಸಿದ ರೀತಿಯಲ್ಲಿ ರಾಹುಲ್ ಗಾಂಧಿ ಎಂದಿಗೂ ಹೇಳಿಕೆ ನೀಡಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಮಹಾಭಾರತದ ಕುರಿತು ರಾಹುಲ್ ಗಾಂಧಿಯವರ ಉದ್ದೇಶಿತ ಟ್ವೀಟ್‌ನ ಚಿತ್ರವು ಎಡಿಟ್‌ ಮಾಡಿರುವುದಾಗಿದೆ.

ಪ್ರತಿಪಾದನೆ: ರಾಹುಲ್ ಗಾಂಧಿ ಮಹಾಭಾರತದ ಪಾತ್ರಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ.
ವಾಸ್ತವ: ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ಟ್ವೀಟ್ ಎಡಿಟ್‌ ಮಾಡಿರುವ ಚಿತ್ರವಾಗಿದೆ. ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯಲ್ಲಿ ಅಂತಹ ಯಾವುದೇ ಟ್ವೀಟ್ ಮಾಡಿಲ್ಲ. ರಾಹುಲ್ ಗಾಂಧಿ ಅವರು 2018 ರಲ್ಲಿ ಕಾಂಗ್ರೆಸ್ ಪಕ್ಷದ ನಾಯಕರನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಕೌರವರಿಗೆ ಹೋಲಿಸಿದ್ದಾರೆ. ಆದರೆ ಅವರು ಎಂದಿಗೂ ಟ್ವೀಟ್‌ನಲ್ಲಿ ಆರೋಪಿಸಿದಂತಹ ಹೇಳಿಕೆಗಳನ್ನು ಮಾಡಲಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನು ಓದಿ:Fact Check: ಕಸಬ್‌ನ ಮರಣದಂಡನೆಯನ್ನು ರದ್ದುಗೊಳಿಸಲು ಕೋರಿ ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಹಾಕಿರಲಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...