Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಹಾಭಾರತದ ಬಗ್ಗೆ ರಾಹುಲ್‌ ಗಾಂಧಿ ತಪ್ಪುತಪ್ಪಾಗಿ ಹೇಳಿದ್ದಾರೆ ಎನ್ನಲಾಗಿರುವ ಈ ಟ್ವೀಟ್ ಎಡಿಟ್‌ ಮಾಡಿರುವಂತದ್ದು!

ಫ್ಯಾಕ್ಟ್‌ಚೆಕ್: ಮಹಾಭಾರತದ ಬಗ್ಗೆ ರಾಹುಲ್‌ ಗಾಂಧಿ ತಪ್ಪುತಪ್ಪಾಗಿ ಹೇಳಿದ್ದಾರೆ ಎನ್ನಲಾಗಿರುವ ಈ ಟ್ವೀಟ್ ಎಡಿಟ್‌ ಮಾಡಿರುವಂತದ್ದು!

- Advertisement -
- Advertisement -

ಕಾಂಗ್ರೆಸ್‌‌‌‌ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ ಎನ್ನಲಾಗಿರುವ ಟ್ವೀಟ್‌ ಒಂದರ ಸ್ಕ್ರೀನ್‌ಶಾರ್ಟ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಹಿಂದೂಗಳ ಪವಿತ್ರ ಗ್ರಂಥಗಳಾದ ಮಹಾಭಾರತ ಮತ್ತು ರಾಮಾಯಣದ ಬಗ್ಗೆ ಅವರು ತಪ್ಪು ತಪ್ಪಾಗಿ ಬರೆದಿದ್ದಾರೆ ಎಂದು ಪ್ರತಿಪಾದಿಸಲಾಗಿದೆ. ಹೀಗಾಗಿ ಅವರಿಗೆ ಗ್ರಂಥಗಳ ಬಗ್ಗೆ ಜ್ಞಾನದ ಕೊರೆತೆಯಿದೆ ಎಂದು ಸಾಮಾಜಿಕ ಜಾಲತಾಣಗಳದ ಪೋಸ್ಟ್‌ ಪ್ರತಿಪಾದಿಸುತ್ತಿದೆ.

ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಆರೋಪಿಸಲಾಗಿರುವ ಚಿತ್ರದಲ್ಲಿ ಅವರು, ಅರ್ಜುನನಿಗೆ ಕೃಷ್ಣನ ಬದಲಾಗಿ ಭಗವಾನ್ ರಾಮ ಮಾರ್ಗದರ್ಶಿ ಎಂದು ಹೇಳಿದ್ದಾರೆ ಮತ್ತು ಪಾಂಡವರಾದ ಯುಧೀಷ್ಠಿರ, ಲಕ್ಷ್ಮಣ, ಅರ್ಜುನ್, ಗಣೇಶ ಮತ್ತು ಶತ್ರುಘ್ನ ಸಿನ್ಹಾ ಒಟ್ಟು ಸೇರಿ ರಾವಣನನ್ನು ಕೊಂಡಿದ್ದಾರೆ ಎಂದು ಬರೆಯಲಾಗಿದೆ. ಅಲ್ಲದೆ, ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಆರೋಪಿಸಲಾಗಿರುವ ಈ ಟ್ವೀಟ್‌‌ ಕಾಂಗ್ರೆಸ್ ಪಕ್ಷವನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಕೌರವರಿಗೆ ಹೋಲಿಸಿದೆ. ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಆರೋಪಿತ ಟ್ವೀಟ್ ಅನ್ನು ಎಚ್ಚರಿಕೆಯಿಂದ ಗಮನಿಸಿದಾಗ, 19 ಮಾರ್ಚ್ 2018 ರಂದು ಟ್ವೀಟ್ ಮಾಡಲಾಗಿದೆ ಎಂದು ನಾವು ಕಾಣಬಹುದಾಗಿದೆ. ಟ್ವಿಟರ್ ಅಡ್ವಾನ್ಸ್‌‌ ಸರ್ಚ್ ಬಳಸಿಕೊಂಡು ರಾಹುಲ್ ಗಾಂಧಿ ಅಂತಹ ಯಾವುದೇ ಟ್ವೀಟ್ ಅನ್ನು  2018 ರ ಮಾರ್ಚ್ 19 ರಂದು ಮಾಡಿದ್ದಾರೆಯೇ ಎಂದು ಪರಿಶೀಲಿಸಿದಾಗ ನಮಗೆ ಅವರ ಅಧಿಕೃತ ಖಾತೆಯಲ್ಲಿ ಯಾವುದೇ ಟ್ವೀಟ್‌ ಸಿಕ್ಕಿಲ್ಲ. ಒಂದು ವೇಳೆ ರಾಹುಲ್ ಗಾಂಧಿ ಇಂತಹ ಟ್ವೀಟ್ ಮಾಡಿದ್ದರೆ, ಹಲವಾರು ಸುದ್ದಿ ವೆಬ್‌ಸೈಟ್‌ಗಳು ಈ ಮಾಹಿತಿಯನ್ನು ವರದಿ ಮಾಡುವ ಲೇಖನಗಳನ್ನು ಪ್ರಕಟಿಸಿರುತ್ತಿದ್ದವು. ಆದರೆ ಈ ಮಾಹಿತಿಯ ಬಗ್ಗೆ ವರದಿ ಮಾಡಿರುವ ಒಂದೇ ಒಂದು ಸುದ್ದಿಯನ್ನು ನಮಗೆ ಕಂಡುಕೊಳ್ಳಲಾಗಿಲ್ಲ.

ಇದನ್ನೂ ಓದಿ:ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ರಾಹುಲ್ ಗಾಂಧಿಯವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಮಾಡಿದ ಸಾಮಾನ್ಯ ಟ್ವೀಟ್ ಅನ್ನು ಸ್ಕ್ರೀನ್‌ಶಾಟ್‌ನಲ್ಲಿರುವ ಟ್ವೀಟ್‌ನೊಂದಿಗೆ ಹೋಲಿಸಿದಾಗ, ಈ ಎರಡೂ ಟ್ವೀಟ್‌ಗಳಲ್ಲಿ ನಮಗೆ ಹಲವು ವ್ಯತ್ಯಾಸಗಳನ್ನು ಗಮನಿಸಬಹುದು. ಪೋಸ್ಟ್‌ನಲ್ಲಿ ಹಂಚಿಕೊಂಡ ಟ್ವೀಟ್‌ಗೆ ರಾಹುಲ್ ಗಾಂಧಿಯವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಂತೆ ಯಾವುದೇ ನೀಲಿ ಟಿಕ್ ಮಾರ್ಕ್ ಇಲ್ಲ. ಅಲ್ಲದೆ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಆರೋಪಿತ ಟ್ವೀಟ್ ಅನ್ನು ಟ್ವೀಟ್ ಮಾಡಿದ ಡಿವೈಸ್‌‌‌ನ ಹೆಸರು ಕಾಣುವುದಿಲ್ಲ. ಸಾಮಾನ್ಯವಾಗಿ ಯಾವುದೇ ಟ್ವಿಟರ್ ಬಳಕೆದಾರರು ಟ್ವೀಟ್ ಮಾಡಿದಾಗ ಅವರು ಟ್ವೀಟ್‌ ಮಾಡಿರುವ ಡಿವೈಸ್‌‌ ಅನ್ನು ಟ್ವೀಟ್ ಪ್ರದರ್ಶಿಸುತ್ತದೆ.

ಇದನ್ನೂ ಓದಿ:ಫ್ಯಾಕ್ಟ್‌‌ಚೆಕ್‌: ಮೋದಿ ಪ್ರಭಾವದಿಂದ ದಲ್ವೀರ್ ಭಂಡಾರಿ ಅಂತಾರಾಷ್ಟ್ರೀಯ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದು ನಿಜವೇ?

2018 ರ ಕಾಂಗ್ರೆಸ್ ಪ್ಲೀನರಿ ಮತ್ತು ಕರ್ನಾಟಕ ಚುನಾವಣಾ ಸಭೆಗಳಲ್ಲಿ, ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಮಹಾಭಾರತದ ಕೌರವರಿಗೆ ಹೋಲಿಸಿದ್ದರು. ಆದರೆ ಟ್ವೀಟ್ ಸ್ಕ್ರೀನ್‌ಶಾಟ್‌ನಲ್ಲಿ ಆರೋಪಿಸಿದ ರೀತಿಯಲ್ಲಿ ರಾಹುಲ್ ಗಾಂಧಿ ಎಂದಿಗೂ ಹೇಳಿಕೆ ನೀಡಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಮಹಾಭಾರತದ ಕುರಿತು ರಾಹುಲ್ ಗಾಂಧಿಯವರ ಉದ್ದೇಶಿತ ಟ್ವೀಟ್‌ನ ಚಿತ್ರವು ಎಡಿಟ್‌ ಮಾಡಿರುವುದಾಗಿದೆ.

ಪ್ರತಿಪಾದನೆ: ರಾಹುಲ್ ಗಾಂಧಿ ಮಹಾಭಾರತದ ಪಾತ್ರಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ.
ವಾಸ್ತವ: ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ಟ್ವೀಟ್ ಎಡಿಟ್‌ ಮಾಡಿರುವ ಚಿತ್ರವಾಗಿದೆ. ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯಲ್ಲಿ ಅಂತಹ ಯಾವುದೇ ಟ್ವೀಟ್ ಮಾಡಿಲ್ಲ. ರಾಹುಲ್ ಗಾಂಧಿ ಅವರು 2018 ರಲ್ಲಿ ಕಾಂಗ್ರೆಸ್ ಪಕ್ಷದ ನಾಯಕರನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಕೌರವರಿಗೆ ಹೋಲಿಸಿದ್ದಾರೆ. ಆದರೆ ಅವರು ಎಂದಿಗೂ ಟ್ವೀಟ್‌ನಲ್ಲಿ ಆರೋಪಿಸಿದಂತಹ ಹೇಳಿಕೆಗಳನ್ನು ಮಾಡಲಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನು ಓದಿ:Fact Check: ಕಸಬ್‌ನ ಮರಣದಂಡನೆಯನ್ನು ರದ್ದುಗೊಳಿಸಲು ಕೋರಿ ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಹಾಕಿರಲಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...