Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಹಾಭಾರತದ ಬಗ್ಗೆ ರಾಹುಲ್‌ ಗಾಂಧಿ ತಪ್ಪುತಪ್ಪಾಗಿ ಹೇಳಿದ್ದಾರೆ ಎನ್ನಲಾಗಿರುವ ಈ ಟ್ವೀಟ್ ಎಡಿಟ್‌ ಮಾಡಿರುವಂತದ್ದು!

ಫ್ಯಾಕ್ಟ್‌ಚೆಕ್: ಮಹಾಭಾರತದ ಬಗ್ಗೆ ರಾಹುಲ್‌ ಗಾಂಧಿ ತಪ್ಪುತಪ್ಪಾಗಿ ಹೇಳಿದ್ದಾರೆ ಎನ್ನಲಾಗಿರುವ ಈ ಟ್ವೀಟ್ ಎಡಿಟ್‌ ಮಾಡಿರುವಂತದ್ದು!

- Advertisement -
- Advertisement -

ಕಾಂಗ್ರೆಸ್‌‌‌‌ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ ಎನ್ನಲಾಗಿರುವ ಟ್ವೀಟ್‌ ಒಂದರ ಸ್ಕ್ರೀನ್‌ಶಾರ್ಟ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಹಿಂದೂಗಳ ಪವಿತ್ರ ಗ್ರಂಥಗಳಾದ ಮಹಾಭಾರತ ಮತ್ತು ರಾಮಾಯಣದ ಬಗ್ಗೆ ಅವರು ತಪ್ಪು ತಪ್ಪಾಗಿ ಬರೆದಿದ್ದಾರೆ ಎಂದು ಪ್ರತಿಪಾದಿಸಲಾಗಿದೆ. ಹೀಗಾಗಿ ಅವರಿಗೆ ಗ್ರಂಥಗಳ ಬಗ್ಗೆ ಜ್ಞಾನದ ಕೊರೆತೆಯಿದೆ ಎಂದು ಸಾಮಾಜಿಕ ಜಾಲತಾಣಗಳದ ಪೋಸ್ಟ್‌ ಪ್ರತಿಪಾದಿಸುತ್ತಿದೆ.

ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಆರೋಪಿಸಲಾಗಿರುವ ಚಿತ್ರದಲ್ಲಿ ಅವರು, ಅರ್ಜುನನಿಗೆ ಕೃಷ್ಣನ ಬದಲಾಗಿ ಭಗವಾನ್ ರಾಮ ಮಾರ್ಗದರ್ಶಿ ಎಂದು ಹೇಳಿದ್ದಾರೆ ಮತ್ತು ಪಾಂಡವರಾದ ಯುಧೀಷ್ಠಿರ, ಲಕ್ಷ್ಮಣ, ಅರ್ಜುನ್, ಗಣೇಶ ಮತ್ತು ಶತ್ರುಘ್ನ ಸಿನ್ಹಾ ಒಟ್ಟು ಸೇರಿ ರಾವಣನನ್ನು ಕೊಂಡಿದ್ದಾರೆ ಎಂದು ಬರೆಯಲಾಗಿದೆ. ಅಲ್ಲದೆ, ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಆರೋಪಿಸಲಾಗಿರುವ ಈ ಟ್ವೀಟ್‌‌ ಕಾಂಗ್ರೆಸ್ ಪಕ್ಷವನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಕೌರವರಿಗೆ ಹೋಲಿಸಿದೆ. ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಆರೋಪಿತ ಟ್ವೀಟ್ ಅನ್ನು ಎಚ್ಚರಿಕೆಯಿಂದ ಗಮನಿಸಿದಾಗ, 19 ಮಾರ್ಚ್ 2018 ರಂದು ಟ್ವೀಟ್ ಮಾಡಲಾಗಿದೆ ಎಂದು ನಾವು ಕಾಣಬಹುದಾಗಿದೆ. ಟ್ವಿಟರ್ ಅಡ್ವಾನ್ಸ್‌‌ ಸರ್ಚ್ ಬಳಸಿಕೊಂಡು ರಾಹುಲ್ ಗಾಂಧಿ ಅಂತಹ ಯಾವುದೇ ಟ್ವೀಟ್ ಅನ್ನು  2018 ರ ಮಾರ್ಚ್ 19 ರಂದು ಮಾಡಿದ್ದಾರೆಯೇ ಎಂದು ಪರಿಶೀಲಿಸಿದಾಗ ನಮಗೆ ಅವರ ಅಧಿಕೃತ ಖಾತೆಯಲ್ಲಿ ಯಾವುದೇ ಟ್ವೀಟ್‌ ಸಿಕ್ಕಿಲ್ಲ. ಒಂದು ವೇಳೆ ರಾಹುಲ್ ಗಾಂಧಿ ಇಂತಹ ಟ್ವೀಟ್ ಮಾಡಿದ್ದರೆ, ಹಲವಾರು ಸುದ್ದಿ ವೆಬ್‌ಸೈಟ್‌ಗಳು ಈ ಮಾಹಿತಿಯನ್ನು ವರದಿ ಮಾಡುವ ಲೇಖನಗಳನ್ನು ಪ್ರಕಟಿಸಿರುತ್ತಿದ್ದವು. ಆದರೆ ಈ ಮಾಹಿತಿಯ ಬಗ್ಗೆ ವರದಿ ಮಾಡಿರುವ ಒಂದೇ ಒಂದು ಸುದ್ದಿಯನ್ನು ನಮಗೆ ಕಂಡುಕೊಳ್ಳಲಾಗಿಲ್ಲ.

ಇದನ್ನೂ ಓದಿ:ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ರಾಹುಲ್ ಗಾಂಧಿಯವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಮಾಡಿದ ಸಾಮಾನ್ಯ ಟ್ವೀಟ್ ಅನ್ನು ಸ್ಕ್ರೀನ್‌ಶಾಟ್‌ನಲ್ಲಿರುವ ಟ್ವೀಟ್‌ನೊಂದಿಗೆ ಹೋಲಿಸಿದಾಗ, ಈ ಎರಡೂ ಟ್ವೀಟ್‌ಗಳಲ್ಲಿ ನಮಗೆ ಹಲವು ವ್ಯತ್ಯಾಸಗಳನ್ನು ಗಮನಿಸಬಹುದು. ಪೋಸ್ಟ್‌ನಲ್ಲಿ ಹಂಚಿಕೊಂಡ ಟ್ವೀಟ್‌ಗೆ ರಾಹುಲ್ ಗಾಂಧಿಯವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಂತೆ ಯಾವುದೇ ನೀಲಿ ಟಿಕ್ ಮಾರ್ಕ್ ಇಲ್ಲ. ಅಲ್ಲದೆ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಆರೋಪಿತ ಟ್ವೀಟ್ ಅನ್ನು ಟ್ವೀಟ್ ಮಾಡಿದ ಡಿವೈಸ್‌‌‌ನ ಹೆಸರು ಕಾಣುವುದಿಲ್ಲ. ಸಾಮಾನ್ಯವಾಗಿ ಯಾವುದೇ ಟ್ವಿಟರ್ ಬಳಕೆದಾರರು ಟ್ವೀಟ್ ಮಾಡಿದಾಗ ಅವರು ಟ್ವೀಟ್‌ ಮಾಡಿರುವ ಡಿವೈಸ್‌‌ ಅನ್ನು ಟ್ವೀಟ್ ಪ್ರದರ್ಶಿಸುತ್ತದೆ.

ಇದನ್ನೂ ಓದಿ:ಫ್ಯಾಕ್ಟ್‌‌ಚೆಕ್‌: ಮೋದಿ ಪ್ರಭಾವದಿಂದ ದಲ್ವೀರ್ ಭಂಡಾರಿ ಅಂತಾರಾಷ್ಟ್ರೀಯ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದು ನಿಜವೇ?

2018 ರ ಕಾಂಗ್ರೆಸ್ ಪ್ಲೀನರಿ ಮತ್ತು ಕರ್ನಾಟಕ ಚುನಾವಣಾ ಸಭೆಗಳಲ್ಲಿ, ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಮಹಾಭಾರತದ ಕೌರವರಿಗೆ ಹೋಲಿಸಿದ್ದರು. ಆದರೆ ಟ್ವೀಟ್ ಸ್ಕ್ರೀನ್‌ಶಾಟ್‌ನಲ್ಲಿ ಆರೋಪಿಸಿದ ರೀತಿಯಲ್ಲಿ ರಾಹುಲ್ ಗಾಂಧಿ ಎಂದಿಗೂ ಹೇಳಿಕೆ ನೀಡಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಮಹಾಭಾರತದ ಕುರಿತು ರಾಹುಲ್ ಗಾಂಧಿಯವರ ಉದ್ದೇಶಿತ ಟ್ವೀಟ್‌ನ ಚಿತ್ರವು ಎಡಿಟ್‌ ಮಾಡಿರುವುದಾಗಿದೆ.

ಪ್ರತಿಪಾದನೆ: ರಾಹುಲ್ ಗಾಂಧಿ ಮಹಾಭಾರತದ ಪಾತ್ರಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ.
ವಾಸ್ತವ: ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ಟ್ವೀಟ್ ಎಡಿಟ್‌ ಮಾಡಿರುವ ಚಿತ್ರವಾಗಿದೆ. ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯಲ್ಲಿ ಅಂತಹ ಯಾವುದೇ ಟ್ವೀಟ್ ಮಾಡಿಲ್ಲ. ರಾಹುಲ್ ಗಾಂಧಿ ಅವರು 2018 ರಲ್ಲಿ ಕಾಂಗ್ರೆಸ್ ಪಕ್ಷದ ನಾಯಕರನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಕೌರವರಿಗೆ ಹೋಲಿಸಿದ್ದಾರೆ. ಆದರೆ ಅವರು ಎಂದಿಗೂ ಟ್ವೀಟ್‌ನಲ್ಲಿ ಆರೋಪಿಸಿದಂತಹ ಹೇಳಿಕೆಗಳನ್ನು ಮಾಡಲಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನು ಓದಿ:Fact Check: ಕಸಬ್‌ನ ಮರಣದಂಡನೆಯನ್ನು ರದ್ದುಗೊಳಿಸಲು ಕೋರಿ ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಹಾಕಿರಲಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...