Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಹಾಭಾರತದ ಬಗ್ಗೆ ರಾಹುಲ್‌ ಗಾಂಧಿ ತಪ್ಪುತಪ್ಪಾಗಿ ಹೇಳಿದ್ದಾರೆ ಎನ್ನಲಾಗಿರುವ ಈ ಟ್ವೀಟ್ ಎಡಿಟ್‌ ಮಾಡಿರುವಂತದ್ದು!

ಫ್ಯಾಕ್ಟ್‌ಚೆಕ್: ಮಹಾಭಾರತದ ಬಗ್ಗೆ ರಾಹುಲ್‌ ಗಾಂಧಿ ತಪ್ಪುತಪ್ಪಾಗಿ ಹೇಳಿದ್ದಾರೆ ಎನ್ನಲಾಗಿರುವ ಈ ಟ್ವೀಟ್ ಎಡಿಟ್‌ ಮಾಡಿರುವಂತದ್ದು!

- Advertisement -
- Advertisement -

ಕಾಂಗ್ರೆಸ್‌‌‌‌ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ ಎನ್ನಲಾಗಿರುವ ಟ್ವೀಟ್‌ ಒಂದರ ಸ್ಕ್ರೀನ್‌ಶಾರ್ಟ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಹಿಂದೂಗಳ ಪವಿತ್ರ ಗ್ರಂಥಗಳಾದ ಮಹಾಭಾರತ ಮತ್ತು ರಾಮಾಯಣದ ಬಗ್ಗೆ ಅವರು ತಪ್ಪು ತಪ್ಪಾಗಿ ಬರೆದಿದ್ದಾರೆ ಎಂದು ಪ್ರತಿಪಾದಿಸಲಾಗಿದೆ. ಹೀಗಾಗಿ ಅವರಿಗೆ ಗ್ರಂಥಗಳ ಬಗ್ಗೆ ಜ್ಞಾನದ ಕೊರೆತೆಯಿದೆ ಎಂದು ಸಾಮಾಜಿಕ ಜಾಲತಾಣಗಳದ ಪೋಸ್ಟ್‌ ಪ್ರತಿಪಾದಿಸುತ್ತಿದೆ.

ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಆರೋಪಿಸಲಾಗಿರುವ ಚಿತ್ರದಲ್ಲಿ ಅವರು, ಅರ್ಜುನನಿಗೆ ಕೃಷ್ಣನ ಬದಲಾಗಿ ಭಗವಾನ್ ರಾಮ ಮಾರ್ಗದರ್ಶಿ ಎಂದು ಹೇಳಿದ್ದಾರೆ ಮತ್ತು ಪಾಂಡವರಾದ ಯುಧೀಷ್ಠಿರ, ಲಕ್ಷ್ಮಣ, ಅರ್ಜುನ್, ಗಣೇಶ ಮತ್ತು ಶತ್ರುಘ್ನ ಸಿನ್ಹಾ ಒಟ್ಟು ಸೇರಿ ರಾವಣನನ್ನು ಕೊಂಡಿದ್ದಾರೆ ಎಂದು ಬರೆಯಲಾಗಿದೆ. ಅಲ್ಲದೆ, ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಆರೋಪಿಸಲಾಗಿರುವ ಈ ಟ್ವೀಟ್‌‌ ಕಾಂಗ್ರೆಸ್ ಪಕ್ಷವನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಕೌರವರಿಗೆ ಹೋಲಿಸಿದೆ. ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಆರೋಪಿತ ಟ್ವೀಟ್ ಅನ್ನು ಎಚ್ಚರಿಕೆಯಿಂದ ಗಮನಿಸಿದಾಗ, 19 ಮಾರ್ಚ್ 2018 ರಂದು ಟ್ವೀಟ್ ಮಾಡಲಾಗಿದೆ ಎಂದು ನಾವು ಕಾಣಬಹುದಾಗಿದೆ. ಟ್ವಿಟರ್ ಅಡ್ವಾನ್ಸ್‌‌ ಸರ್ಚ್ ಬಳಸಿಕೊಂಡು ರಾಹುಲ್ ಗಾಂಧಿ ಅಂತಹ ಯಾವುದೇ ಟ್ವೀಟ್ ಅನ್ನು  2018 ರ ಮಾರ್ಚ್ 19 ರಂದು ಮಾಡಿದ್ದಾರೆಯೇ ಎಂದು ಪರಿಶೀಲಿಸಿದಾಗ ನಮಗೆ ಅವರ ಅಧಿಕೃತ ಖಾತೆಯಲ್ಲಿ ಯಾವುದೇ ಟ್ವೀಟ್‌ ಸಿಕ್ಕಿಲ್ಲ. ಒಂದು ವೇಳೆ ರಾಹುಲ್ ಗಾಂಧಿ ಇಂತಹ ಟ್ವೀಟ್ ಮಾಡಿದ್ದರೆ, ಹಲವಾರು ಸುದ್ದಿ ವೆಬ್‌ಸೈಟ್‌ಗಳು ಈ ಮಾಹಿತಿಯನ್ನು ವರದಿ ಮಾಡುವ ಲೇಖನಗಳನ್ನು ಪ್ರಕಟಿಸಿರುತ್ತಿದ್ದವು. ಆದರೆ ಈ ಮಾಹಿತಿಯ ಬಗ್ಗೆ ವರದಿ ಮಾಡಿರುವ ಒಂದೇ ಒಂದು ಸುದ್ದಿಯನ್ನು ನಮಗೆ ಕಂಡುಕೊಳ್ಳಲಾಗಿಲ್ಲ.

ಇದನ್ನೂ ಓದಿ:ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ರಾಹುಲ್ ಗಾಂಧಿಯವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಮಾಡಿದ ಸಾಮಾನ್ಯ ಟ್ವೀಟ್ ಅನ್ನು ಸ್ಕ್ರೀನ್‌ಶಾಟ್‌ನಲ್ಲಿರುವ ಟ್ವೀಟ್‌ನೊಂದಿಗೆ ಹೋಲಿಸಿದಾಗ, ಈ ಎರಡೂ ಟ್ವೀಟ್‌ಗಳಲ್ಲಿ ನಮಗೆ ಹಲವು ವ್ಯತ್ಯಾಸಗಳನ್ನು ಗಮನಿಸಬಹುದು. ಪೋಸ್ಟ್‌ನಲ್ಲಿ ಹಂಚಿಕೊಂಡ ಟ್ವೀಟ್‌ಗೆ ರಾಹುಲ್ ಗಾಂಧಿಯವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಂತೆ ಯಾವುದೇ ನೀಲಿ ಟಿಕ್ ಮಾರ್ಕ್ ಇಲ್ಲ. ಅಲ್ಲದೆ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಆರೋಪಿತ ಟ್ವೀಟ್ ಅನ್ನು ಟ್ವೀಟ್ ಮಾಡಿದ ಡಿವೈಸ್‌‌‌ನ ಹೆಸರು ಕಾಣುವುದಿಲ್ಲ. ಸಾಮಾನ್ಯವಾಗಿ ಯಾವುದೇ ಟ್ವಿಟರ್ ಬಳಕೆದಾರರು ಟ್ವೀಟ್ ಮಾಡಿದಾಗ ಅವರು ಟ್ವೀಟ್‌ ಮಾಡಿರುವ ಡಿವೈಸ್‌‌ ಅನ್ನು ಟ್ವೀಟ್ ಪ್ರದರ್ಶಿಸುತ್ತದೆ.

ಇದನ್ನೂ ಓದಿ:ಫ್ಯಾಕ್ಟ್‌‌ಚೆಕ್‌: ಮೋದಿ ಪ್ರಭಾವದಿಂದ ದಲ್ವೀರ್ ಭಂಡಾರಿ ಅಂತಾರಾಷ್ಟ್ರೀಯ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದು ನಿಜವೇ?

2018 ರ ಕಾಂಗ್ರೆಸ್ ಪ್ಲೀನರಿ ಮತ್ತು ಕರ್ನಾಟಕ ಚುನಾವಣಾ ಸಭೆಗಳಲ್ಲಿ, ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಮಹಾಭಾರತದ ಕೌರವರಿಗೆ ಹೋಲಿಸಿದ್ದರು. ಆದರೆ ಟ್ವೀಟ್ ಸ್ಕ್ರೀನ್‌ಶಾಟ್‌ನಲ್ಲಿ ಆರೋಪಿಸಿದ ರೀತಿಯಲ್ಲಿ ರಾಹುಲ್ ಗಾಂಧಿ ಎಂದಿಗೂ ಹೇಳಿಕೆ ನೀಡಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಮಹಾಭಾರತದ ಕುರಿತು ರಾಹುಲ್ ಗಾಂಧಿಯವರ ಉದ್ದೇಶಿತ ಟ್ವೀಟ್‌ನ ಚಿತ್ರವು ಎಡಿಟ್‌ ಮಾಡಿರುವುದಾಗಿದೆ.

ಪ್ರತಿಪಾದನೆ: ರಾಹುಲ್ ಗಾಂಧಿ ಮಹಾಭಾರತದ ಪಾತ್ರಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ.
ವಾಸ್ತವ: ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ಟ್ವೀಟ್ ಎಡಿಟ್‌ ಮಾಡಿರುವ ಚಿತ್ರವಾಗಿದೆ. ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯಲ್ಲಿ ಅಂತಹ ಯಾವುದೇ ಟ್ವೀಟ್ ಮಾಡಿಲ್ಲ. ರಾಹುಲ್ ಗಾಂಧಿ ಅವರು 2018 ರಲ್ಲಿ ಕಾಂಗ್ರೆಸ್ ಪಕ್ಷದ ನಾಯಕರನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಕೌರವರಿಗೆ ಹೋಲಿಸಿದ್ದಾರೆ. ಆದರೆ ಅವರು ಎಂದಿಗೂ ಟ್ವೀಟ್‌ನಲ್ಲಿ ಆರೋಪಿಸಿದಂತಹ ಹೇಳಿಕೆಗಳನ್ನು ಮಾಡಲಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನು ಓದಿ:Fact Check: ಕಸಬ್‌ನ ಮರಣದಂಡನೆಯನ್ನು ರದ್ದುಗೊಳಿಸಲು ಕೋರಿ ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಹಾಕಿರಲಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...