Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮಹಾಭಾರತದ ಬಗ್ಗೆ ರಾಹುಲ್‌ ಗಾಂಧಿ ತಪ್ಪುತಪ್ಪಾಗಿ ಹೇಳಿದ್ದಾರೆ ಎನ್ನಲಾಗಿರುವ ಈ ಟ್ವೀಟ್ ಎಡಿಟ್‌ ಮಾಡಿರುವಂತದ್ದು!

ಫ್ಯಾಕ್ಟ್‌ಚೆಕ್: ಮಹಾಭಾರತದ ಬಗ್ಗೆ ರಾಹುಲ್‌ ಗಾಂಧಿ ತಪ್ಪುತಪ್ಪಾಗಿ ಹೇಳಿದ್ದಾರೆ ಎನ್ನಲಾಗಿರುವ ಈ ಟ್ವೀಟ್ ಎಡಿಟ್‌ ಮಾಡಿರುವಂತದ್ದು!

- Advertisement -
- Advertisement -

ಕಾಂಗ್ರೆಸ್‌‌‌‌ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ ಎನ್ನಲಾಗಿರುವ ಟ್ವೀಟ್‌ ಒಂದರ ಸ್ಕ್ರೀನ್‌ಶಾರ್ಟ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಹಿಂದೂಗಳ ಪವಿತ್ರ ಗ್ರಂಥಗಳಾದ ಮಹಾಭಾರತ ಮತ್ತು ರಾಮಾಯಣದ ಬಗ್ಗೆ ಅವರು ತಪ್ಪು ತಪ್ಪಾಗಿ ಬರೆದಿದ್ದಾರೆ ಎಂದು ಪ್ರತಿಪಾದಿಸಲಾಗಿದೆ. ಹೀಗಾಗಿ ಅವರಿಗೆ ಗ್ರಂಥಗಳ ಬಗ್ಗೆ ಜ್ಞಾನದ ಕೊರೆತೆಯಿದೆ ಎಂದು ಸಾಮಾಜಿಕ ಜಾಲತಾಣಗಳದ ಪೋಸ್ಟ್‌ ಪ್ರತಿಪಾದಿಸುತ್ತಿದೆ.

ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಆರೋಪಿಸಲಾಗಿರುವ ಚಿತ್ರದಲ್ಲಿ ಅವರು, ಅರ್ಜುನನಿಗೆ ಕೃಷ್ಣನ ಬದಲಾಗಿ ಭಗವಾನ್ ರಾಮ ಮಾರ್ಗದರ್ಶಿ ಎಂದು ಹೇಳಿದ್ದಾರೆ ಮತ್ತು ಪಾಂಡವರಾದ ಯುಧೀಷ್ಠಿರ, ಲಕ್ಷ್ಮಣ, ಅರ್ಜುನ್, ಗಣೇಶ ಮತ್ತು ಶತ್ರುಘ್ನ ಸಿನ್ಹಾ ಒಟ್ಟು ಸೇರಿ ರಾವಣನನ್ನು ಕೊಂಡಿದ್ದಾರೆ ಎಂದು ಬರೆಯಲಾಗಿದೆ. ಅಲ್ಲದೆ, ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಆರೋಪಿಸಲಾಗಿರುವ ಈ ಟ್ವೀಟ್‌‌ ಕಾಂಗ್ರೆಸ್ ಪಕ್ಷವನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಕೌರವರಿಗೆ ಹೋಲಿಸಿದೆ. ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ಆಹಾರದ ಮೇಲೆ ಉಗುಳುವುದು ಹಲಾಲ್‌ನ ಭಾಗವೆಂದು ಮುಸ್ಲಿಮರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿಲ್ಲ

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಆರೋಪಿತ ಟ್ವೀಟ್ ಅನ್ನು ಎಚ್ಚರಿಕೆಯಿಂದ ಗಮನಿಸಿದಾಗ, 19 ಮಾರ್ಚ್ 2018 ರಂದು ಟ್ವೀಟ್ ಮಾಡಲಾಗಿದೆ ಎಂದು ನಾವು ಕಾಣಬಹುದಾಗಿದೆ. ಟ್ವಿಟರ್ ಅಡ್ವಾನ್ಸ್‌‌ ಸರ್ಚ್ ಬಳಸಿಕೊಂಡು ರಾಹುಲ್ ಗಾಂಧಿ ಅಂತಹ ಯಾವುದೇ ಟ್ವೀಟ್ ಅನ್ನು  2018 ರ ಮಾರ್ಚ್ 19 ರಂದು ಮಾಡಿದ್ದಾರೆಯೇ ಎಂದು ಪರಿಶೀಲಿಸಿದಾಗ ನಮಗೆ ಅವರ ಅಧಿಕೃತ ಖಾತೆಯಲ್ಲಿ ಯಾವುದೇ ಟ್ವೀಟ್‌ ಸಿಕ್ಕಿಲ್ಲ. ಒಂದು ವೇಳೆ ರಾಹುಲ್ ಗಾಂಧಿ ಇಂತಹ ಟ್ವೀಟ್ ಮಾಡಿದ್ದರೆ, ಹಲವಾರು ಸುದ್ದಿ ವೆಬ್‌ಸೈಟ್‌ಗಳು ಈ ಮಾಹಿತಿಯನ್ನು ವರದಿ ಮಾಡುವ ಲೇಖನಗಳನ್ನು ಪ್ರಕಟಿಸಿರುತ್ತಿದ್ದವು. ಆದರೆ ಈ ಮಾಹಿತಿಯ ಬಗ್ಗೆ ವರದಿ ಮಾಡಿರುವ ಒಂದೇ ಒಂದು ಸುದ್ದಿಯನ್ನು ನಮಗೆ ಕಂಡುಕೊಳ್ಳಲಾಗಿಲ್ಲ.

ಇದನ್ನೂ ಓದಿ:ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ

ರಾಹುಲ್ ಗಾಂಧಿಯವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಮಾಡಿದ ಸಾಮಾನ್ಯ ಟ್ವೀಟ್ ಅನ್ನು ಸ್ಕ್ರೀನ್‌ಶಾಟ್‌ನಲ್ಲಿರುವ ಟ್ವೀಟ್‌ನೊಂದಿಗೆ ಹೋಲಿಸಿದಾಗ, ಈ ಎರಡೂ ಟ್ವೀಟ್‌ಗಳಲ್ಲಿ ನಮಗೆ ಹಲವು ವ್ಯತ್ಯಾಸಗಳನ್ನು ಗಮನಿಸಬಹುದು. ಪೋಸ್ಟ್‌ನಲ್ಲಿ ಹಂಚಿಕೊಂಡ ಟ್ವೀಟ್‌ಗೆ ರಾಹುಲ್ ಗಾಂಧಿಯವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಂತೆ ಯಾವುದೇ ನೀಲಿ ಟಿಕ್ ಮಾರ್ಕ್ ಇಲ್ಲ. ಅಲ್ಲದೆ, ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾದ ಆರೋಪಿತ ಟ್ವೀಟ್ ಅನ್ನು ಟ್ವೀಟ್ ಮಾಡಿದ ಡಿವೈಸ್‌‌‌ನ ಹೆಸರು ಕಾಣುವುದಿಲ್ಲ. ಸಾಮಾನ್ಯವಾಗಿ ಯಾವುದೇ ಟ್ವಿಟರ್ ಬಳಕೆದಾರರು ಟ್ವೀಟ್ ಮಾಡಿದಾಗ ಅವರು ಟ್ವೀಟ್‌ ಮಾಡಿರುವ ಡಿವೈಸ್‌‌ ಅನ್ನು ಟ್ವೀಟ್ ಪ್ರದರ್ಶಿಸುತ್ತದೆ.

ಇದನ್ನೂ ಓದಿ:ಫ್ಯಾಕ್ಟ್‌‌ಚೆಕ್‌: ಮೋದಿ ಪ್ರಭಾವದಿಂದ ದಲ್ವೀರ್ ಭಂಡಾರಿ ಅಂತಾರಾಷ್ಟ್ರೀಯ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದು ನಿಜವೇ?

2018 ರ ಕಾಂಗ್ರೆಸ್ ಪ್ಲೀನರಿ ಮತ್ತು ಕರ್ನಾಟಕ ಚುನಾವಣಾ ಸಭೆಗಳಲ್ಲಿ, ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಮಹಾಭಾರತದ ಕೌರವರಿಗೆ ಹೋಲಿಸಿದ್ದರು. ಆದರೆ ಟ್ವೀಟ್ ಸ್ಕ್ರೀನ್‌ಶಾಟ್‌ನಲ್ಲಿ ಆರೋಪಿಸಿದ ರೀತಿಯಲ್ಲಿ ರಾಹುಲ್ ಗಾಂಧಿ ಎಂದಿಗೂ ಹೇಳಿಕೆ ನೀಡಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಮಹಾಭಾರತದ ಕುರಿತು ರಾಹುಲ್ ಗಾಂಧಿಯವರ ಉದ್ದೇಶಿತ ಟ್ವೀಟ್‌ನ ಚಿತ್ರವು ಎಡಿಟ್‌ ಮಾಡಿರುವುದಾಗಿದೆ.

ಪ್ರತಿಪಾದನೆ: ರಾಹುಲ್ ಗಾಂಧಿ ಮಹಾಭಾರತದ ಪಾತ್ರಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ.
ವಾಸ್ತವ: ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ಟ್ವೀಟ್ ಎಡಿಟ್‌ ಮಾಡಿರುವ ಚಿತ್ರವಾಗಿದೆ. ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯಲ್ಲಿ ಅಂತಹ ಯಾವುದೇ ಟ್ವೀಟ್ ಮಾಡಿಲ್ಲ. ರಾಹುಲ್ ಗಾಂಧಿ ಅವರು 2018 ರಲ್ಲಿ ಕಾಂಗ್ರೆಸ್ ಪಕ್ಷದ ನಾಯಕರನ್ನು ಪಾಂಡವರಿಗೆ ಮತ್ತು ಬಿಜೆಪಿ ನಾಯಕರನ್ನು ಕೌರವರಿಗೆ ಹೋಲಿಸಿದ್ದಾರೆ. ಆದರೆ ಅವರು ಎಂದಿಗೂ ಟ್ವೀಟ್‌ನಲ್ಲಿ ಆರೋಪಿಸಿದಂತಹ ಹೇಳಿಕೆಗಳನ್ನು ಮಾಡಲಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನು ಓದಿ:Fact Check: ಕಸಬ್‌ನ ಮರಣದಂಡನೆಯನ್ನು ರದ್ದುಗೊಳಿಸಲು ಕೋರಿ ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಹಾಕಿರಲಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...