Homeಮುಖಪುಟದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

ದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

- Advertisement -
- Advertisement -

ಕೆ.ಎಂ.ಕಮಲ್ ನಿರ್ದೇಶಿಸಿದ ಮಲಯಾಳಂ ಚಿತ್ರ ‘ಪಡ’  ನೈಜ ಘಟನೆಗಳನ್ನು ಆಧರಿಸಿದ ಮೂಡಿ ಮಂದಿದೆ. ಅಕ್ಟೋಬರ್ 4, 1996ರಂದು, ಆಗಿನ ಪಾಲಕ್ಕಾಡ್ ಜಿಲ್ಲಾಧಿಕಾರಿಯಾಗಿದ್ದ ಡಬ್ಲ್ಯುಆರ್ ರೆಡ್ಡಿ ಅವರನ್ನು ನಾಲ್ವರು ಆದಿವಾಸಿ ಹಕ್ಕುಗಳ ಕಾರ್ಯಕರ್ತರು ಒತ್ತೆಯಾಳಾಗಿ ಇರಿಸಿಕೊಂಡ ಕಥಾ ಹಂದರವನ್ನು ಈ ಸಿನಿಮಾ ಹೊಂದಿದೆ.

“ತಮಿಳು ಚಿತ್ರರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿದ್ದ ದಮನಿತರ ಭೂಮಿ ಹಕ್ಕು ಕಥನ, ಈಗ ಮಲಯಾಳಂಗೂ ಕಾಲಿಟ್ಟಿದೆ” ಎಂದು ಸಿನಿಮಾ ನಿರ್ದೇಶಕ ಕಮಲ್ ಹೇಳಿರುವುದಾಗಿ ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.

1996ರಲ್ಲಿ ಇ.ಕೆ.ನಾಯನಾರ್ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌‌ (ಎಲ್‌ಡಿಎಫ್‌) ಸರ್ಕಾರವು ಅಂಗೀಕರಿಸಿದ ಆದಿವಾಸಿ ಭೂ ಕಾಯಿದೆ 1975ರ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳಬೇಕೆಂಬ ಹೋರಾಟ ನಡೆದಿತ್ತು. ಅನೇಕ ಬುಡಕಟ್ಟು ಜನರು ತಿದ್ದುಪಡಿಯನ್ನು ವಿರೋಧಿಸಿದರು. ಎರಡು ಗಂಟೆಗಳ ಪಡ ಸಿನಿಮಾ ಈ ಕಥಾ ಹಂದರವನ್ನು ಹೊಂದಿದೆ.

ಕುಂಚಾಕೊ ಬೋಬನ್, ವಿನಾಯಕನ್, ದಿಲೀಶ್ ಪೋತನ್ ಮತ್ತು ಜೋಜು ಜಾರ್ಜ್ ಮುಖ್ಯಭೂಮಿಯಲ್ಲಿ ನಟಿಸಿರುವ ಈ ಸಿನಿಮಾಕ್ಕೆ ವಿಮರ್ಶಕರಿಂದ ಭಾರೀ ಮೆಚ್ಚುಗೆ ಸಿಕ್ಕಿದೆ. ತುಳಿತಕ್ಕೊಳಗಾದವರ ಭೂಮಿಯ ಹಕ್ಕುಗಳ ಬಗ್ಗೆ ಮಾತನಾಡುವ ಕೆಲವು ಮಲಯಾಳಂ ಚಲನಚಿತ್ರಗಳಲ್ಲಿ ಇದೂ ಒಂದಾಗಿದೆ ಎಂದು ಬಣ್ಣಿಸಲಾಗಿದೆ.

2016ರಲ್ಲಿ ತೆರೆಕಂಡ, ರಾಜೀವ್ ರವಿ ನಿರ್ದೇಶನದ ‘ಕಮ್ಮಟ್ಟಿ ಪಾಡಂ’ ಸಿನಿಮಾ ಕೊಚ್ಚಿಯ ಕೊಳೆಗೇರಿ ಪ್ರದೇಶದಲ್ಲಿ ದಲಿತರು ತಮ್ಮ ಭೂಮಿಯನ್ನು ಕಳೆದುಕೊಂಡಿದ್ದನ್ನು ಹೇಳುತ್ತದೆ. ರಿಯಲ್ ಎಸ್ಟೇಟ್ ಮಾಫಿಯಾಗಳಿಂದಾಗಿ ದಮನಿತರು ಭೂಮಿ ವಂಚಿತರಾಗುವುದನ್ನು ಕಮ್ಮಟ್ಟಿಪಾಡಂ ಚಿತ್ರಿಸಿತ್ತು. ಮಲೆಯಾಳಂ ಚಿತ್ರರಂಗದಲ್ಲಿ ಭೂಮಿ ಹಕ್ಕನ್ನು ಪ್ರತಿಪಾದಿಸುವ ಮತ್ತೊಂದು ಸಿನಿಮಾವಾಗಿ ‘ಪಡ’ ಹೊರಹೊಮ್ಮಿದೆ.

ನೆರೆಯ ತಮಿಳು ಚಿತ್ರರಂಗ ದಮನಿತ ಸಮುದಾಯದ ಪ್ರತಿರೋಧವನ್ನು ದೊಡ್ಡ ಮಟ್ಟದಲ್ಲಿ ತೋರಿಸುತ್ತಿದೆ. ಮಲಯಾಳಂ ಚಿತ್ರರಂಗವು ಈ ವಿಷಯದಲ್ಲಿ ಅಷ್ಟಾಗಿ ಗಮನ ಸೆಳೆದಿಲ್ಲ. ಆದರೆ ತಮಿಳುನಾಡಿನಲ್ಲಿ ದಮನಿತರ ಕಥೆಗಳು ಯಶಸ್ವಿಯಾಗಿವೆ. ರಾಜಕೀಯ ವಿದ್ಯಮಾನವಾಗಿ ಹೊಮ್ಮಿವೆ. ಉದಾಹರಣೆಗೆ ನಿರ್ದೇಶಕ ಪಾ.ರಂಜಿತ್ ಅವರು ಕಾಲಾ (2018) ಚಿತ್ರದಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ಅವರ ಮೂಲಕ ದಲಿತರ ಭೂಮಿಯ ಹಕ್ಕುಗಳ ಬಗ್ಗೆ ಮಾತನಾಡಿದ್ದಾರೆ. ನಟ ಧನುಷ್ ಅಭಿನಯದ ವೆಟ್ರಿಮಾರನ್ ನಿರ್ದೇಶನದ ಅಸುರನ್‌, ಮಾರಿ ಸೆಲ್ವರಾಜ್ ನಿರ್ದೇಶನದ ಕರ್ಣನ್ (2021) ಪ್ರತಿರೋಧದ ಕಥನಗಳನ್ನು ಹೊಂದಿವೆ. ಟಿ.ಜಿ.ಜ್ಞಾನವೇಲ್ ಅವರ ‘ಜೈ ಭೀಮ್’ (2021) ಇರುಳ ಬುಡಕಟ್ಟಿನ ಮಹಿಳೆಯ ಪರವಾಗಿ ನ್ಯಾಯಕ್ಕಾಗಿ ಹೋರಾಡುವ ವಕೀಲರ ಕುರಿತ್ತಾದ್ದಾಗಿದೆ.

‘ದಿ ನ್ಯೂಸ್‌ ಮಿನಿಟ್‌’ ಜಾಲತಾಣದೊಂದಿಗೆ ಮಾತನಾಡಿರುವ ಪಡ ನಿರ್ದೇಶಕ ಕಮಲ್, “ಮಲಯಾಳಂ ಚಿತ್ರರಂಗವು ಯಾವಾಗಲೂ ಜಾತಿಯ ಬಗ್ಗೆ ಮಾತನಾಡುವುದರಿಂದ ದೂರವಿರುತ್ತದೆ. ವರ್ಗ ವ್ಯತ್ಯಾಸಗಳು ಸಾಮಾನ್ಯವಾಗಿ ಸಿನಿಮಾ, ರಂಗಭೂಮಿ ಮತ್ತು ಸಂಗೀತದಲ್ಲಿ ಪ್ರತಿಫಲಿಸುತ್ತದೆ. ಆದರೆ ಸಮಾಜದಲ್ಲಿನ ಅಧಿಕಾರ ರಚನೆಗಳನ್ನು ವ್ಯಾಖ್ಯಾನಿಸುವ ಜಾತಿಯ ವಿಷಯಕ್ಕೆ ಬಂದರೆ, ಮಲಯಾಳಂ ಚಿತ್ರರಂಗ ಈ ವಿಷಯದಿಂದ ವಿಮುಖವಾಗಿತ್ತು. ಆದರೆ ಜಾತಿ ಸಮಸ್ಯೆಯನ್ನು ಸಕ್ರಿಯವಾಗಿ ಒಡೆದುಹಾಕುವಲ್ಲಿ ತಮಿಳು ಚಿತ್ರರಂಗ ಮಾತ್ರ ಯಶಸ್ವಿಯಾಗಿದೆ” ಎಂದಿದ್ದಾರೆ.

ಐತಿಹಾಸಿಕವಾಗಿ, ಆದಿವಾಸಿ ಜನರು ಹಿಂದೂ ಎಂದು ಗುರುತಿಸಿಕೊಳ್ಳಲಿಲ್ಲ. ಆದ್ದರಿಂದ ಹಿಂದೂ ಸಮಾಜದ ಜಾತಿ ರಚನೆಗಳಿಂದ ಹೊರಗಿದ್ದರು. ಆದರೆ ಅವರ ಸಂಸ್ಕೃತಿಯ ಅಳಿವಿನಿಂದಾಗಿ ಅವರು ಜಾತಿ ಪದ್ಧತಿ ಮತ್ತು ಬಹಿಷ್ಕಾರಕ್ಕೆ ಒಳಗಾಗುತ್ತಾರೆ. ಪಡ ಸಿನಿಮಾದ ಒಂದು ಒಂದು ಪಾತ್ರವು ಆದಿವಾಸಿ ಜನರ ಹಕ್ಕುಗಳನ್ನು ನಿರ್ಲಕ್ಷಿಸುವ ‘ಸವರ್ಣ ರಾಜ್ಯ’ವನ್ನು ಪ್ರಶ್ನಿಸುತ್ತದೆ. ಮುಖ್ಯವಾಹಿನಿಯ ಮಲಯಾಳಂ ಚಲನಚಿತ್ರದಲ್ಲಿ ಸರ್ಕಾರವನ್ನು ಹೀಗೆ ವಿವರಿಸಿರುವುದು ಬಹುಶಃ ಇದೇ ಮೊದಲು ಎಂದು ನ್ಯೂಸ್‌ ಮಿನಿಟ್‌ ವರದಿ ಹೇಳುತ್ತದೆ.

ಈ ಘಟನೆ ನಡೆದಾಗ ಪತ್ರಿಕೋದ್ಯಮದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದೆ ಎನ್ನುವ ಕಮಲ್ ಘಟನೆಯನ್ನು ನೆನೆದಿದ್ದಾರೆ. “ಆ ಸಮಯದಲ್ಲಿ, ಕೇರಳದಲ್ಲಿ ಮಿಲಿಟೆಂಟ್ ಕ್ರಮಗಳು ವಿರಳವಾಗಿತ್ತು. ಈ ಘಟನೆಯು ತೀವ್ರತೆಯನ್ನು ಪಡೆದುಕೊಂಡಿತು. ಹಲವಾರು ಗಂಟೆಗಳ ಕಾಲ ಒತ್ತೆ ಇಟ್ಟುಕೊಳ್ಳಲಾಗಿತ್ತು. ನನಗೆ ನೆನಪಿರುವಂತೆ, ರಾಜಕೀಯ ವರ್ಗವು ಈ ವಿಷಯದಲ್ಲಿ ಮೌನವಾಗಿದೆ. ರಾಜಕೀಯ ವರ್ಗ ಈ ಪ್ರಕರಣವನ್ನು ಆಗಿನ ಮುಖ್ಯ ಕಾರ್ಯದರ್ಶಿ ಒಳಗೊಂಡ ಬಿಕ್ಕಟ್ಟು ನಿರ್ವಹಣಾ ತಂಡಕ್ಕೆ ಬಿಟ್ಟು ಜಾರಿಕೊಂಡಿತು. ನಂತರ, ಘಟನೆಯ ಬಗ್ಗೆ ಒಂದು ವಾರ ಅಥವಾ ಅದಕ್ಕಿಂತ ಹೆಚ್ಚು ಕಾಲ ಮಾಧ್ಯಮಗಳಲ್ಲಿ ಚರ್ಚೆಗಳು ಪ್ರಧಾನವಾಗಿ ನಡೆದಿದ್ದರಿಂದ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲಾ ರಾಜಕೀಯ ನಾಯಕರು ಪ್ರತಿಕ್ರಿಯಿಸಲು ಪ್ರಾರಂಭಿಸಿದರು. ಆದರೆ ಆರೋಪ ಪ್ರತ್ಯಾರೋಪಗಳು ನಡೆದವು. ಅವರು ಕಾನೂನಿನ ಕುರಿತಾಗಲಿ, ಆದಿವಾಸಿಗಳು ಎತ್ತಿರುವ ಪ್ರಶ್ನೆಗಳ ಕುರಿತಾಗಲೀ ಆಸಕ್ತಿ ಹೊಂದಿರಲಿಲ್ಲ” ಎಂದು ನಿರ್ದೇಶಕರು ತಿಳಿಸಿದ್ದಾರೆ.


ಇದನ್ನೂ ಓದಿರಿ: ಸಿದ್ದರಾಮಯ್ಯ ವಿರುದ್ಧ ದ್ವೇಷ ಹರಡುತ್ತಿರುವ ಕನ್ನಡ ಮಾಧ್ಯಮಗಳು: ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...