Homeಮುಖಪುಟದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

ದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

- Advertisement -
- Advertisement -

ಕೆ.ಎಂ.ಕಮಲ್ ನಿರ್ದೇಶಿಸಿದ ಮಲಯಾಳಂ ಚಿತ್ರ ‘ಪಡ’  ನೈಜ ಘಟನೆಗಳನ್ನು ಆಧರಿಸಿದ ಮೂಡಿ ಮಂದಿದೆ. ಅಕ್ಟೋಬರ್ 4, 1996ರಂದು, ಆಗಿನ ಪಾಲಕ್ಕಾಡ್ ಜಿಲ್ಲಾಧಿಕಾರಿಯಾಗಿದ್ದ ಡಬ್ಲ್ಯುಆರ್ ರೆಡ್ಡಿ ಅವರನ್ನು ನಾಲ್ವರು ಆದಿವಾಸಿ ಹಕ್ಕುಗಳ ಕಾರ್ಯಕರ್ತರು ಒತ್ತೆಯಾಳಾಗಿ ಇರಿಸಿಕೊಂಡ ಕಥಾ ಹಂದರವನ್ನು ಈ ಸಿನಿಮಾ ಹೊಂದಿದೆ.

“ತಮಿಳು ಚಿತ್ರರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿದ್ದ ದಮನಿತರ ಭೂಮಿ ಹಕ್ಕು ಕಥನ, ಈಗ ಮಲಯಾಳಂಗೂ ಕಾಲಿಟ್ಟಿದೆ” ಎಂದು ಸಿನಿಮಾ ನಿರ್ದೇಶಕ ಕಮಲ್ ಹೇಳಿರುವುದಾಗಿ ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.

1996ರಲ್ಲಿ ಇ.ಕೆ.ನಾಯನಾರ್ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌‌ (ಎಲ್‌ಡಿಎಫ್‌) ಸರ್ಕಾರವು ಅಂಗೀಕರಿಸಿದ ಆದಿವಾಸಿ ಭೂ ಕಾಯಿದೆ 1975ರ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳಬೇಕೆಂಬ ಹೋರಾಟ ನಡೆದಿತ್ತು. ಅನೇಕ ಬುಡಕಟ್ಟು ಜನರು ತಿದ್ದುಪಡಿಯನ್ನು ವಿರೋಧಿಸಿದರು. ಎರಡು ಗಂಟೆಗಳ ಪಡ ಸಿನಿಮಾ ಈ ಕಥಾ ಹಂದರವನ್ನು ಹೊಂದಿದೆ.

ಕುಂಚಾಕೊ ಬೋಬನ್, ವಿನಾಯಕನ್, ದಿಲೀಶ್ ಪೋತನ್ ಮತ್ತು ಜೋಜು ಜಾರ್ಜ್ ಮುಖ್ಯಭೂಮಿಯಲ್ಲಿ ನಟಿಸಿರುವ ಈ ಸಿನಿಮಾಕ್ಕೆ ವಿಮರ್ಶಕರಿಂದ ಭಾರೀ ಮೆಚ್ಚುಗೆ ಸಿಕ್ಕಿದೆ. ತುಳಿತಕ್ಕೊಳಗಾದವರ ಭೂಮಿಯ ಹಕ್ಕುಗಳ ಬಗ್ಗೆ ಮಾತನಾಡುವ ಕೆಲವು ಮಲಯಾಳಂ ಚಲನಚಿತ್ರಗಳಲ್ಲಿ ಇದೂ ಒಂದಾಗಿದೆ ಎಂದು ಬಣ್ಣಿಸಲಾಗಿದೆ.

2016ರಲ್ಲಿ ತೆರೆಕಂಡ, ರಾಜೀವ್ ರವಿ ನಿರ್ದೇಶನದ ‘ಕಮ್ಮಟ್ಟಿ ಪಾಡಂ’ ಸಿನಿಮಾ ಕೊಚ್ಚಿಯ ಕೊಳೆಗೇರಿ ಪ್ರದೇಶದಲ್ಲಿ ದಲಿತರು ತಮ್ಮ ಭೂಮಿಯನ್ನು ಕಳೆದುಕೊಂಡಿದ್ದನ್ನು ಹೇಳುತ್ತದೆ. ರಿಯಲ್ ಎಸ್ಟೇಟ್ ಮಾಫಿಯಾಗಳಿಂದಾಗಿ ದಮನಿತರು ಭೂಮಿ ವಂಚಿತರಾಗುವುದನ್ನು ಕಮ್ಮಟ್ಟಿಪಾಡಂ ಚಿತ್ರಿಸಿತ್ತು. ಮಲೆಯಾಳಂ ಚಿತ್ರರಂಗದಲ್ಲಿ ಭೂಮಿ ಹಕ್ಕನ್ನು ಪ್ರತಿಪಾದಿಸುವ ಮತ್ತೊಂದು ಸಿನಿಮಾವಾಗಿ ‘ಪಡ’ ಹೊರಹೊಮ್ಮಿದೆ.

ನೆರೆಯ ತಮಿಳು ಚಿತ್ರರಂಗ ದಮನಿತ ಸಮುದಾಯದ ಪ್ರತಿರೋಧವನ್ನು ದೊಡ್ಡ ಮಟ್ಟದಲ್ಲಿ ತೋರಿಸುತ್ತಿದೆ. ಮಲಯಾಳಂ ಚಿತ್ರರಂಗವು ಈ ವಿಷಯದಲ್ಲಿ ಅಷ್ಟಾಗಿ ಗಮನ ಸೆಳೆದಿಲ್ಲ. ಆದರೆ ತಮಿಳುನಾಡಿನಲ್ಲಿ ದಮನಿತರ ಕಥೆಗಳು ಯಶಸ್ವಿಯಾಗಿವೆ. ರಾಜಕೀಯ ವಿದ್ಯಮಾನವಾಗಿ ಹೊಮ್ಮಿವೆ. ಉದಾಹರಣೆಗೆ ನಿರ್ದೇಶಕ ಪಾ.ರಂಜಿತ್ ಅವರು ಕಾಲಾ (2018) ಚಿತ್ರದಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ಅವರ ಮೂಲಕ ದಲಿತರ ಭೂಮಿಯ ಹಕ್ಕುಗಳ ಬಗ್ಗೆ ಮಾತನಾಡಿದ್ದಾರೆ. ನಟ ಧನುಷ್ ಅಭಿನಯದ ವೆಟ್ರಿಮಾರನ್ ನಿರ್ದೇಶನದ ಅಸುರನ್‌, ಮಾರಿ ಸೆಲ್ವರಾಜ್ ನಿರ್ದೇಶನದ ಕರ್ಣನ್ (2021) ಪ್ರತಿರೋಧದ ಕಥನಗಳನ್ನು ಹೊಂದಿವೆ. ಟಿ.ಜಿ.ಜ್ಞಾನವೇಲ್ ಅವರ ‘ಜೈ ಭೀಮ್’ (2021) ಇರುಳ ಬುಡಕಟ್ಟಿನ ಮಹಿಳೆಯ ಪರವಾಗಿ ನ್ಯಾಯಕ್ಕಾಗಿ ಹೋರಾಡುವ ವಕೀಲರ ಕುರಿತ್ತಾದ್ದಾಗಿದೆ.

‘ದಿ ನ್ಯೂಸ್‌ ಮಿನಿಟ್‌’ ಜಾಲತಾಣದೊಂದಿಗೆ ಮಾತನಾಡಿರುವ ಪಡ ನಿರ್ದೇಶಕ ಕಮಲ್, “ಮಲಯಾಳಂ ಚಿತ್ರರಂಗವು ಯಾವಾಗಲೂ ಜಾತಿಯ ಬಗ್ಗೆ ಮಾತನಾಡುವುದರಿಂದ ದೂರವಿರುತ್ತದೆ. ವರ್ಗ ವ್ಯತ್ಯಾಸಗಳು ಸಾಮಾನ್ಯವಾಗಿ ಸಿನಿಮಾ, ರಂಗಭೂಮಿ ಮತ್ತು ಸಂಗೀತದಲ್ಲಿ ಪ್ರತಿಫಲಿಸುತ್ತದೆ. ಆದರೆ ಸಮಾಜದಲ್ಲಿನ ಅಧಿಕಾರ ರಚನೆಗಳನ್ನು ವ್ಯಾಖ್ಯಾನಿಸುವ ಜಾತಿಯ ವಿಷಯಕ್ಕೆ ಬಂದರೆ, ಮಲಯಾಳಂ ಚಿತ್ರರಂಗ ಈ ವಿಷಯದಿಂದ ವಿಮುಖವಾಗಿತ್ತು. ಆದರೆ ಜಾತಿ ಸಮಸ್ಯೆಯನ್ನು ಸಕ್ರಿಯವಾಗಿ ಒಡೆದುಹಾಕುವಲ್ಲಿ ತಮಿಳು ಚಿತ್ರರಂಗ ಮಾತ್ರ ಯಶಸ್ವಿಯಾಗಿದೆ” ಎಂದಿದ್ದಾರೆ.

ಐತಿಹಾಸಿಕವಾಗಿ, ಆದಿವಾಸಿ ಜನರು ಹಿಂದೂ ಎಂದು ಗುರುತಿಸಿಕೊಳ್ಳಲಿಲ್ಲ. ಆದ್ದರಿಂದ ಹಿಂದೂ ಸಮಾಜದ ಜಾತಿ ರಚನೆಗಳಿಂದ ಹೊರಗಿದ್ದರು. ಆದರೆ ಅವರ ಸಂಸ್ಕೃತಿಯ ಅಳಿವಿನಿಂದಾಗಿ ಅವರು ಜಾತಿ ಪದ್ಧತಿ ಮತ್ತು ಬಹಿಷ್ಕಾರಕ್ಕೆ ಒಳಗಾಗುತ್ತಾರೆ. ಪಡ ಸಿನಿಮಾದ ಒಂದು ಒಂದು ಪಾತ್ರವು ಆದಿವಾಸಿ ಜನರ ಹಕ್ಕುಗಳನ್ನು ನಿರ್ಲಕ್ಷಿಸುವ ‘ಸವರ್ಣ ರಾಜ್ಯ’ವನ್ನು ಪ್ರಶ್ನಿಸುತ್ತದೆ. ಮುಖ್ಯವಾಹಿನಿಯ ಮಲಯಾಳಂ ಚಲನಚಿತ್ರದಲ್ಲಿ ಸರ್ಕಾರವನ್ನು ಹೀಗೆ ವಿವರಿಸಿರುವುದು ಬಹುಶಃ ಇದೇ ಮೊದಲು ಎಂದು ನ್ಯೂಸ್‌ ಮಿನಿಟ್‌ ವರದಿ ಹೇಳುತ್ತದೆ.

ಈ ಘಟನೆ ನಡೆದಾಗ ಪತ್ರಿಕೋದ್ಯಮದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದೆ ಎನ್ನುವ ಕಮಲ್ ಘಟನೆಯನ್ನು ನೆನೆದಿದ್ದಾರೆ. “ಆ ಸಮಯದಲ್ಲಿ, ಕೇರಳದಲ್ಲಿ ಮಿಲಿಟೆಂಟ್ ಕ್ರಮಗಳು ವಿರಳವಾಗಿತ್ತು. ಈ ಘಟನೆಯು ತೀವ್ರತೆಯನ್ನು ಪಡೆದುಕೊಂಡಿತು. ಹಲವಾರು ಗಂಟೆಗಳ ಕಾಲ ಒತ್ತೆ ಇಟ್ಟುಕೊಳ್ಳಲಾಗಿತ್ತು. ನನಗೆ ನೆನಪಿರುವಂತೆ, ರಾಜಕೀಯ ವರ್ಗವು ಈ ವಿಷಯದಲ್ಲಿ ಮೌನವಾಗಿದೆ. ರಾಜಕೀಯ ವರ್ಗ ಈ ಪ್ರಕರಣವನ್ನು ಆಗಿನ ಮುಖ್ಯ ಕಾರ್ಯದರ್ಶಿ ಒಳಗೊಂಡ ಬಿಕ್ಕಟ್ಟು ನಿರ್ವಹಣಾ ತಂಡಕ್ಕೆ ಬಿಟ್ಟು ಜಾರಿಕೊಂಡಿತು. ನಂತರ, ಘಟನೆಯ ಬಗ್ಗೆ ಒಂದು ವಾರ ಅಥವಾ ಅದಕ್ಕಿಂತ ಹೆಚ್ಚು ಕಾಲ ಮಾಧ್ಯಮಗಳಲ್ಲಿ ಚರ್ಚೆಗಳು ಪ್ರಧಾನವಾಗಿ ನಡೆದಿದ್ದರಿಂದ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲಾ ರಾಜಕೀಯ ನಾಯಕರು ಪ್ರತಿಕ್ರಿಯಿಸಲು ಪ್ರಾರಂಭಿಸಿದರು. ಆದರೆ ಆರೋಪ ಪ್ರತ್ಯಾರೋಪಗಳು ನಡೆದವು. ಅವರು ಕಾನೂನಿನ ಕುರಿತಾಗಲಿ, ಆದಿವಾಸಿಗಳು ಎತ್ತಿರುವ ಪ್ರಶ್ನೆಗಳ ಕುರಿತಾಗಲೀ ಆಸಕ್ತಿ ಹೊಂದಿರಲಿಲ್ಲ” ಎಂದು ನಿರ್ದೇಶಕರು ತಿಳಿಸಿದ್ದಾರೆ.


ಇದನ್ನೂ ಓದಿರಿ: ಸಿದ್ದರಾಮಯ್ಯ ವಿರುದ್ಧ ದ್ವೇಷ ಹರಡುತ್ತಿರುವ ಕನ್ನಡ ಮಾಧ್ಯಮಗಳು: ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...