Homeಮುಖಪುಟದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

ದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

- Advertisement -
- Advertisement -

ಕೆ.ಎಂ.ಕಮಲ್ ನಿರ್ದೇಶಿಸಿದ ಮಲಯಾಳಂ ಚಿತ್ರ ‘ಪಡ’  ನೈಜ ಘಟನೆಗಳನ್ನು ಆಧರಿಸಿದ ಮೂಡಿ ಮಂದಿದೆ. ಅಕ್ಟೋಬರ್ 4, 1996ರಂದು, ಆಗಿನ ಪಾಲಕ್ಕಾಡ್ ಜಿಲ್ಲಾಧಿಕಾರಿಯಾಗಿದ್ದ ಡಬ್ಲ್ಯುಆರ್ ರೆಡ್ಡಿ ಅವರನ್ನು ನಾಲ್ವರು ಆದಿವಾಸಿ ಹಕ್ಕುಗಳ ಕಾರ್ಯಕರ್ತರು ಒತ್ತೆಯಾಳಾಗಿ ಇರಿಸಿಕೊಂಡ ಕಥಾ ಹಂದರವನ್ನು ಈ ಸಿನಿಮಾ ಹೊಂದಿದೆ.

“ತಮಿಳು ಚಿತ್ರರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿದ್ದ ದಮನಿತರ ಭೂಮಿ ಹಕ್ಕು ಕಥನ, ಈಗ ಮಲಯಾಳಂಗೂ ಕಾಲಿಟ್ಟಿದೆ” ಎಂದು ಸಿನಿಮಾ ನಿರ್ದೇಶಕ ಕಮಲ್ ಹೇಳಿರುವುದಾಗಿ ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.

1996ರಲ್ಲಿ ಇ.ಕೆ.ನಾಯನಾರ್ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌‌ (ಎಲ್‌ಡಿಎಫ್‌) ಸರ್ಕಾರವು ಅಂಗೀಕರಿಸಿದ ಆದಿವಾಸಿ ಭೂ ಕಾಯಿದೆ 1975ರ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳಬೇಕೆಂಬ ಹೋರಾಟ ನಡೆದಿತ್ತು. ಅನೇಕ ಬುಡಕಟ್ಟು ಜನರು ತಿದ್ದುಪಡಿಯನ್ನು ವಿರೋಧಿಸಿದರು. ಎರಡು ಗಂಟೆಗಳ ಪಡ ಸಿನಿಮಾ ಈ ಕಥಾ ಹಂದರವನ್ನು ಹೊಂದಿದೆ.

ಕುಂಚಾಕೊ ಬೋಬನ್, ವಿನಾಯಕನ್, ದಿಲೀಶ್ ಪೋತನ್ ಮತ್ತು ಜೋಜು ಜಾರ್ಜ್ ಮುಖ್ಯಭೂಮಿಯಲ್ಲಿ ನಟಿಸಿರುವ ಈ ಸಿನಿಮಾಕ್ಕೆ ವಿಮರ್ಶಕರಿಂದ ಭಾರೀ ಮೆಚ್ಚುಗೆ ಸಿಕ್ಕಿದೆ. ತುಳಿತಕ್ಕೊಳಗಾದವರ ಭೂಮಿಯ ಹಕ್ಕುಗಳ ಬಗ್ಗೆ ಮಾತನಾಡುವ ಕೆಲವು ಮಲಯಾಳಂ ಚಲನಚಿತ್ರಗಳಲ್ಲಿ ಇದೂ ಒಂದಾಗಿದೆ ಎಂದು ಬಣ್ಣಿಸಲಾಗಿದೆ.

2016ರಲ್ಲಿ ತೆರೆಕಂಡ, ರಾಜೀವ್ ರವಿ ನಿರ್ದೇಶನದ ‘ಕಮ್ಮಟ್ಟಿ ಪಾಡಂ’ ಸಿನಿಮಾ ಕೊಚ್ಚಿಯ ಕೊಳೆಗೇರಿ ಪ್ರದೇಶದಲ್ಲಿ ದಲಿತರು ತಮ್ಮ ಭೂಮಿಯನ್ನು ಕಳೆದುಕೊಂಡಿದ್ದನ್ನು ಹೇಳುತ್ತದೆ. ರಿಯಲ್ ಎಸ್ಟೇಟ್ ಮಾಫಿಯಾಗಳಿಂದಾಗಿ ದಮನಿತರು ಭೂಮಿ ವಂಚಿತರಾಗುವುದನ್ನು ಕಮ್ಮಟ್ಟಿಪಾಡಂ ಚಿತ್ರಿಸಿತ್ತು. ಮಲೆಯಾಳಂ ಚಿತ್ರರಂಗದಲ್ಲಿ ಭೂಮಿ ಹಕ್ಕನ್ನು ಪ್ರತಿಪಾದಿಸುವ ಮತ್ತೊಂದು ಸಿನಿಮಾವಾಗಿ ‘ಪಡ’ ಹೊರಹೊಮ್ಮಿದೆ.

ನೆರೆಯ ತಮಿಳು ಚಿತ್ರರಂಗ ದಮನಿತ ಸಮುದಾಯದ ಪ್ರತಿರೋಧವನ್ನು ದೊಡ್ಡ ಮಟ್ಟದಲ್ಲಿ ತೋರಿಸುತ್ತಿದೆ. ಮಲಯಾಳಂ ಚಿತ್ರರಂಗವು ಈ ವಿಷಯದಲ್ಲಿ ಅಷ್ಟಾಗಿ ಗಮನ ಸೆಳೆದಿಲ್ಲ. ಆದರೆ ತಮಿಳುನಾಡಿನಲ್ಲಿ ದಮನಿತರ ಕಥೆಗಳು ಯಶಸ್ವಿಯಾಗಿವೆ. ರಾಜಕೀಯ ವಿದ್ಯಮಾನವಾಗಿ ಹೊಮ್ಮಿವೆ. ಉದಾಹರಣೆಗೆ ನಿರ್ದೇಶಕ ಪಾ.ರಂಜಿತ್ ಅವರು ಕಾಲಾ (2018) ಚಿತ್ರದಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ಅವರ ಮೂಲಕ ದಲಿತರ ಭೂಮಿಯ ಹಕ್ಕುಗಳ ಬಗ್ಗೆ ಮಾತನಾಡಿದ್ದಾರೆ. ನಟ ಧನುಷ್ ಅಭಿನಯದ ವೆಟ್ರಿಮಾರನ್ ನಿರ್ದೇಶನದ ಅಸುರನ್‌, ಮಾರಿ ಸೆಲ್ವರಾಜ್ ನಿರ್ದೇಶನದ ಕರ್ಣನ್ (2021) ಪ್ರತಿರೋಧದ ಕಥನಗಳನ್ನು ಹೊಂದಿವೆ. ಟಿ.ಜಿ.ಜ್ಞಾನವೇಲ್ ಅವರ ‘ಜೈ ಭೀಮ್’ (2021) ಇರುಳ ಬುಡಕಟ್ಟಿನ ಮಹಿಳೆಯ ಪರವಾಗಿ ನ್ಯಾಯಕ್ಕಾಗಿ ಹೋರಾಡುವ ವಕೀಲರ ಕುರಿತ್ತಾದ್ದಾಗಿದೆ.

‘ದಿ ನ್ಯೂಸ್‌ ಮಿನಿಟ್‌’ ಜಾಲತಾಣದೊಂದಿಗೆ ಮಾತನಾಡಿರುವ ಪಡ ನಿರ್ದೇಶಕ ಕಮಲ್, “ಮಲಯಾಳಂ ಚಿತ್ರರಂಗವು ಯಾವಾಗಲೂ ಜಾತಿಯ ಬಗ್ಗೆ ಮಾತನಾಡುವುದರಿಂದ ದೂರವಿರುತ್ತದೆ. ವರ್ಗ ವ್ಯತ್ಯಾಸಗಳು ಸಾಮಾನ್ಯವಾಗಿ ಸಿನಿಮಾ, ರಂಗಭೂಮಿ ಮತ್ತು ಸಂಗೀತದಲ್ಲಿ ಪ್ರತಿಫಲಿಸುತ್ತದೆ. ಆದರೆ ಸಮಾಜದಲ್ಲಿನ ಅಧಿಕಾರ ರಚನೆಗಳನ್ನು ವ್ಯಾಖ್ಯಾನಿಸುವ ಜಾತಿಯ ವಿಷಯಕ್ಕೆ ಬಂದರೆ, ಮಲಯಾಳಂ ಚಿತ್ರರಂಗ ಈ ವಿಷಯದಿಂದ ವಿಮುಖವಾಗಿತ್ತು. ಆದರೆ ಜಾತಿ ಸಮಸ್ಯೆಯನ್ನು ಸಕ್ರಿಯವಾಗಿ ಒಡೆದುಹಾಕುವಲ್ಲಿ ತಮಿಳು ಚಿತ್ರರಂಗ ಮಾತ್ರ ಯಶಸ್ವಿಯಾಗಿದೆ” ಎಂದಿದ್ದಾರೆ.

ಐತಿಹಾಸಿಕವಾಗಿ, ಆದಿವಾಸಿ ಜನರು ಹಿಂದೂ ಎಂದು ಗುರುತಿಸಿಕೊಳ್ಳಲಿಲ್ಲ. ಆದ್ದರಿಂದ ಹಿಂದೂ ಸಮಾಜದ ಜಾತಿ ರಚನೆಗಳಿಂದ ಹೊರಗಿದ್ದರು. ಆದರೆ ಅವರ ಸಂಸ್ಕೃತಿಯ ಅಳಿವಿನಿಂದಾಗಿ ಅವರು ಜಾತಿ ಪದ್ಧತಿ ಮತ್ತು ಬಹಿಷ್ಕಾರಕ್ಕೆ ಒಳಗಾಗುತ್ತಾರೆ. ಪಡ ಸಿನಿಮಾದ ಒಂದು ಒಂದು ಪಾತ್ರವು ಆದಿವಾಸಿ ಜನರ ಹಕ್ಕುಗಳನ್ನು ನಿರ್ಲಕ್ಷಿಸುವ ‘ಸವರ್ಣ ರಾಜ್ಯ’ವನ್ನು ಪ್ರಶ್ನಿಸುತ್ತದೆ. ಮುಖ್ಯವಾಹಿನಿಯ ಮಲಯಾಳಂ ಚಲನಚಿತ್ರದಲ್ಲಿ ಸರ್ಕಾರವನ್ನು ಹೀಗೆ ವಿವರಿಸಿರುವುದು ಬಹುಶಃ ಇದೇ ಮೊದಲು ಎಂದು ನ್ಯೂಸ್‌ ಮಿನಿಟ್‌ ವರದಿ ಹೇಳುತ್ತದೆ.

ಈ ಘಟನೆ ನಡೆದಾಗ ಪತ್ರಿಕೋದ್ಯಮದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದೆ ಎನ್ನುವ ಕಮಲ್ ಘಟನೆಯನ್ನು ನೆನೆದಿದ್ದಾರೆ. “ಆ ಸಮಯದಲ್ಲಿ, ಕೇರಳದಲ್ಲಿ ಮಿಲಿಟೆಂಟ್ ಕ್ರಮಗಳು ವಿರಳವಾಗಿತ್ತು. ಈ ಘಟನೆಯು ತೀವ್ರತೆಯನ್ನು ಪಡೆದುಕೊಂಡಿತು. ಹಲವಾರು ಗಂಟೆಗಳ ಕಾಲ ಒತ್ತೆ ಇಟ್ಟುಕೊಳ್ಳಲಾಗಿತ್ತು. ನನಗೆ ನೆನಪಿರುವಂತೆ, ರಾಜಕೀಯ ವರ್ಗವು ಈ ವಿಷಯದಲ್ಲಿ ಮೌನವಾಗಿದೆ. ರಾಜಕೀಯ ವರ್ಗ ಈ ಪ್ರಕರಣವನ್ನು ಆಗಿನ ಮುಖ್ಯ ಕಾರ್ಯದರ್ಶಿ ಒಳಗೊಂಡ ಬಿಕ್ಕಟ್ಟು ನಿರ್ವಹಣಾ ತಂಡಕ್ಕೆ ಬಿಟ್ಟು ಜಾರಿಕೊಂಡಿತು. ನಂತರ, ಘಟನೆಯ ಬಗ್ಗೆ ಒಂದು ವಾರ ಅಥವಾ ಅದಕ್ಕಿಂತ ಹೆಚ್ಚು ಕಾಲ ಮಾಧ್ಯಮಗಳಲ್ಲಿ ಚರ್ಚೆಗಳು ಪ್ರಧಾನವಾಗಿ ನಡೆದಿದ್ದರಿಂದ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲಾ ರಾಜಕೀಯ ನಾಯಕರು ಪ್ರತಿಕ್ರಿಯಿಸಲು ಪ್ರಾರಂಭಿಸಿದರು. ಆದರೆ ಆರೋಪ ಪ್ರತ್ಯಾರೋಪಗಳು ನಡೆದವು. ಅವರು ಕಾನೂನಿನ ಕುರಿತಾಗಲಿ, ಆದಿವಾಸಿಗಳು ಎತ್ತಿರುವ ಪ್ರಶ್ನೆಗಳ ಕುರಿತಾಗಲೀ ಆಸಕ್ತಿ ಹೊಂದಿರಲಿಲ್ಲ” ಎಂದು ನಿರ್ದೇಶಕರು ತಿಳಿಸಿದ್ದಾರೆ.


ಇದನ್ನೂ ಓದಿರಿ: ಸಿದ್ದರಾಮಯ್ಯ ವಿರುದ್ಧ ದ್ವೇಷ ಹರಡುತ್ತಿರುವ ಕನ್ನಡ ಮಾಧ್ಯಮಗಳು: ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...