Homeಮುಖಪುಟದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

ದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

- Advertisement -
- Advertisement -

ಕೆ.ಎಂ.ಕಮಲ್ ನಿರ್ದೇಶಿಸಿದ ಮಲಯಾಳಂ ಚಿತ್ರ ‘ಪಡ’  ನೈಜ ಘಟನೆಗಳನ್ನು ಆಧರಿಸಿದ ಮೂಡಿ ಮಂದಿದೆ. ಅಕ್ಟೋಬರ್ 4, 1996ರಂದು, ಆಗಿನ ಪಾಲಕ್ಕಾಡ್ ಜಿಲ್ಲಾಧಿಕಾರಿಯಾಗಿದ್ದ ಡಬ್ಲ್ಯುಆರ್ ರೆಡ್ಡಿ ಅವರನ್ನು ನಾಲ್ವರು ಆದಿವಾಸಿ ಹಕ್ಕುಗಳ ಕಾರ್ಯಕರ್ತರು ಒತ್ತೆಯಾಳಾಗಿ ಇರಿಸಿಕೊಂಡ ಕಥಾ ಹಂದರವನ್ನು ಈ ಸಿನಿಮಾ ಹೊಂದಿದೆ.

“ತಮಿಳು ಚಿತ್ರರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿದ್ದ ದಮನಿತರ ಭೂಮಿ ಹಕ್ಕು ಕಥನ, ಈಗ ಮಲಯಾಳಂಗೂ ಕಾಲಿಟ್ಟಿದೆ” ಎಂದು ಸಿನಿಮಾ ನಿರ್ದೇಶಕ ಕಮಲ್ ಹೇಳಿರುವುದಾಗಿ ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.

1996ರಲ್ಲಿ ಇ.ಕೆ.ನಾಯನಾರ್ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌‌ (ಎಲ್‌ಡಿಎಫ್‌) ಸರ್ಕಾರವು ಅಂಗೀಕರಿಸಿದ ಆದಿವಾಸಿ ಭೂ ಕಾಯಿದೆ 1975ರ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳಬೇಕೆಂಬ ಹೋರಾಟ ನಡೆದಿತ್ತು. ಅನೇಕ ಬುಡಕಟ್ಟು ಜನರು ತಿದ್ದುಪಡಿಯನ್ನು ವಿರೋಧಿಸಿದರು. ಎರಡು ಗಂಟೆಗಳ ಪಡ ಸಿನಿಮಾ ಈ ಕಥಾ ಹಂದರವನ್ನು ಹೊಂದಿದೆ.

ಕುಂಚಾಕೊ ಬೋಬನ್, ವಿನಾಯಕನ್, ದಿಲೀಶ್ ಪೋತನ್ ಮತ್ತು ಜೋಜು ಜಾರ್ಜ್ ಮುಖ್ಯಭೂಮಿಯಲ್ಲಿ ನಟಿಸಿರುವ ಈ ಸಿನಿಮಾಕ್ಕೆ ವಿಮರ್ಶಕರಿಂದ ಭಾರೀ ಮೆಚ್ಚುಗೆ ಸಿಕ್ಕಿದೆ. ತುಳಿತಕ್ಕೊಳಗಾದವರ ಭೂಮಿಯ ಹಕ್ಕುಗಳ ಬಗ್ಗೆ ಮಾತನಾಡುವ ಕೆಲವು ಮಲಯಾಳಂ ಚಲನಚಿತ್ರಗಳಲ್ಲಿ ಇದೂ ಒಂದಾಗಿದೆ ಎಂದು ಬಣ್ಣಿಸಲಾಗಿದೆ.

2016ರಲ್ಲಿ ತೆರೆಕಂಡ, ರಾಜೀವ್ ರವಿ ನಿರ್ದೇಶನದ ‘ಕಮ್ಮಟ್ಟಿ ಪಾಡಂ’ ಸಿನಿಮಾ ಕೊಚ್ಚಿಯ ಕೊಳೆಗೇರಿ ಪ್ರದೇಶದಲ್ಲಿ ದಲಿತರು ತಮ್ಮ ಭೂಮಿಯನ್ನು ಕಳೆದುಕೊಂಡಿದ್ದನ್ನು ಹೇಳುತ್ತದೆ. ರಿಯಲ್ ಎಸ್ಟೇಟ್ ಮಾಫಿಯಾಗಳಿಂದಾಗಿ ದಮನಿತರು ಭೂಮಿ ವಂಚಿತರಾಗುವುದನ್ನು ಕಮ್ಮಟ್ಟಿಪಾಡಂ ಚಿತ್ರಿಸಿತ್ತು. ಮಲೆಯಾಳಂ ಚಿತ್ರರಂಗದಲ್ಲಿ ಭೂಮಿ ಹಕ್ಕನ್ನು ಪ್ರತಿಪಾದಿಸುವ ಮತ್ತೊಂದು ಸಿನಿಮಾವಾಗಿ ‘ಪಡ’ ಹೊರಹೊಮ್ಮಿದೆ.

ನೆರೆಯ ತಮಿಳು ಚಿತ್ರರಂಗ ದಮನಿತ ಸಮುದಾಯದ ಪ್ರತಿರೋಧವನ್ನು ದೊಡ್ಡ ಮಟ್ಟದಲ್ಲಿ ತೋರಿಸುತ್ತಿದೆ. ಮಲಯಾಳಂ ಚಿತ್ರರಂಗವು ಈ ವಿಷಯದಲ್ಲಿ ಅಷ್ಟಾಗಿ ಗಮನ ಸೆಳೆದಿಲ್ಲ. ಆದರೆ ತಮಿಳುನಾಡಿನಲ್ಲಿ ದಮನಿತರ ಕಥೆಗಳು ಯಶಸ್ವಿಯಾಗಿವೆ. ರಾಜಕೀಯ ವಿದ್ಯಮಾನವಾಗಿ ಹೊಮ್ಮಿವೆ. ಉದಾಹರಣೆಗೆ ನಿರ್ದೇಶಕ ಪಾ.ರಂಜಿತ್ ಅವರು ಕಾಲಾ (2018) ಚಿತ್ರದಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ಅವರ ಮೂಲಕ ದಲಿತರ ಭೂಮಿಯ ಹಕ್ಕುಗಳ ಬಗ್ಗೆ ಮಾತನಾಡಿದ್ದಾರೆ. ನಟ ಧನುಷ್ ಅಭಿನಯದ ವೆಟ್ರಿಮಾರನ್ ನಿರ್ದೇಶನದ ಅಸುರನ್‌, ಮಾರಿ ಸೆಲ್ವರಾಜ್ ನಿರ್ದೇಶನದ ಕರ್ಣನ್ (2021) ಪ್ರತಿರೋಧದ ಕಥನಗಳನ್ನು ಹೊಂದಿವೆ. ಟಿ.ಜಿ.ಜ್ಞಾನವೇಲ್ ಅವರ ‘ಜೈ ಭೀಮ್’ (2021) ಇರುಳ ಬುಡಕಟ್ಟಿನ ಮಹಿಳೆಯ ಪರವಾಗಿ ನ್ಯಾಯಕ್ಕಾಗಿ ಹೋರಾಡುವ ವಕೀಲರ ಕುರಿತ್ತಾದ್ದಾಗಿದೆ.

‘ದಿ ನ್ಯೂಸ್‌ ಮಿನಿಟ್‌’ ಜಾಲತಾಣದೊಂದಿಗೆ ಮಾತನಾಡಿರುವ ಪಡ ನಿರ್ದೇಶಕ ಕಮಲ್, “ಮಲಯಾಳಂ ಚಿತ್ರರಂಗವು ಯಾವಾಗಲೂ ಜಾತಿಯ ಬಗ್ಗೆ ಮಾತನಾಡುವುದರಿಂದ ದೂರವಿರುತ್ತದೆ. ವರ್ಗ ವ್ಯತ್ಯಾಸಗಳು ಸಾಮಾನ್ಯವಾಗಿ ಸಿನಿಮಾ, ರಂಗಭೂಮಿ ಮತ್ತು ಸಂಗೀತದಲ್ಲಿ ಪ್ರತಿಫಲಿಸುತ್ತದೆ. ಆದರೆ ಸಮಾಜದಲ್ಲಿನ ಅಧಿಕಾರ ರಚನೆಗಳನ್ನು ವ್ಯಾಖ್ಯಾನಿಸುವ ಜಾತಿಯ ವಿಷಯಕ್ಕೆ ಬಂದರೆ, ಮಲಯಾಳಂ ಚಿತ್ರರಂಗ ಈ ವಿಷಯದಿಂದ ವಿಮುಖವಾಗಿತ್ತು. ಆದರೆ ಜಾತಿ ಸಮಸ್ಯೆಯನ್ನು ಸಕ್ರಿಯವಾಗಿ ಒಡೆದುಹಾಕುವಲ್ಲಿ ತಮಿಳು ಚಿತ್ರರಂಗ ಮಾತ್ರ ಯಶಸ್ವಿಯಾಗಿದೆ” ಎಂದಿದ್ದಾರೆ.

ಐತಿಹಾಸಿಕವಾಗಿ, ಆದಿವಾಸಿ ಜನರು ಹಿಂದೂ ಎಂದು ಗುರುತಿಸಿಕೊಳ್ಳಲಿಲ್ಲ. ಆದ್ದರಿಂದ ಹಿಂದೂ ಸಮಾಜದ ಜಾತಿ ರಚನೆಗಳಿಂದ ಹೊರಗಿದ್ದರು. ಆದರೆ ಅವರ ಸಂಸ್ಕೃತಿಯ ಅಳಿವಿನಿಂದಾಗಿ ಅವರು ಜಾತಿ ಪದ್ಧತಿ ಮತ್ತು ಬಹಿಷ್ಕಾರಕ್ಕೆ ಒಳಗಾಗುತ್ತಾರೆ. ಪಡ ಸಿನಿಮಾದ ಒಂದು ಒಂದು ಪಾತ್ರವು ಆದಿವಾಸಿ ಜನರ ಹಕ್ಕುಗಳನ್ನು ನಿರ್ಲಕ್ಷಿಸುವ ‘ಸವರ್ಣ ರಾಜ್ಯ’ವನ್ನು ಪ್ರಶ್ನಿಸುತ್ತದೆ. ಮುಖ್ಯವಾಹಿನಿಯ ಮಲಯಾಳಂ ಚಲನಚಿತ್ರದಲ್ಲಿ ಸರ್ಕಾರವನ್ನು ಹೀಗೆ ವಿವರಿಸಿರುವುದು ಬಹುಶಃ ಇದೇ ಮೊದಲು ಎಂದು ನ್ಯೂಸ್‌ ಮಿನಿಟ್‌ ವರದಿ ಹೇಳುತ್ತದೆ.

ಈ ಘಟನೆ ನಡೆದಾಗ ಪತ್ರಿಕೋದ್ಯಮದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದೆ ಎನ್ನುವ ಕಮಲ್ ಘಟನೆಯನ್ನು ನೆನೆದಿದ್ದಾರೆ. “ಆ ಸಮಯದಲ್ಲಿ, ಕೇರಳದಲ್ಲಿ ಮಿಲಿಟೆಂಟ್ ಕ್ರಮಗಳು ವಿರಳವಾಗಿತ್ತು. ಈ ಘಟನೆಯು ತೀವ್ರತೆಯನ್ನು ಪಡೆದುಕೊಂಡಿತು. ಹಲವಾರು ಗಂಟೆಗಳ ಕಾಲ ಒತ್ತೆ ಇಟ್ಟುಕೊಳ್ಳಲಾಗಿತ್ತು. ನನಗೆ ನೆನಪಿರುವಂತೆ, ರಾಜಕೀಯ ವರ್ಗವು ಈ ವಿಷಯದಲ್ಲಿ ಮೌನವಾಗಿದೆ. ರಾಜಕೀಯ ವರ್ಗ ಈ ಪ್ರಕರಣವನ್ನು ಆಗಿನ ಮುಖ್ಯ ಕಾರ್ಯದರ್ಶಿ ಒಳಗೊಂಡ ಬಿಕ್ಕಟ್ಟು ನಿರ್ವಹಣಾ ತಂಡಕ್ಕೆ ಬಿಟ್ಟು ಜಾರಿಕೊಂಡಿತು. ನಂತರ, ಘಟನೆಯ ಬಗ್ಗೆ ಒಂದು ವಾರ ಅಥವಾ ಅದಕ್ಕಿಂತ ಹೆಚ್ಚು ಕಾಲ ಮಾಧ್ಯಮಗಳಲ್ಲಿ ಚರ್ಚೆಗಳು ಪ್ರಧಾನವಾಗಿ ನಡೆದಿದ್ದರಿಂದ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲಾ ರಾಜಕೀಯ ನಾಯಕರು ಪ್ರತಿಕ್ರಿಯಿಸಲು ಪ್ರಾರಂಭಿಸಿದರು. ಆದರೆ ಆರೋಪ ಪ್ರತ್ಯಾರೋಪಗಳು ನಡೆದವು. ಅವರು ಕಾನೂನಿನ ಕುರಿತಾಗಲಿ, ಆದಿವಾಸಿಗಳು ಎತ್ತಿರುವ ಪ್ರಶ್ನೆಗಳ ಕುರಿತಾಗಲೀ ಆಸಕ್ತಿ ಹೊಂದಿರಲಿಲ್ಲ” ಎಂದು ನಿರ್ದೇಶಕರು ತಿಳಿಸಿದ್ದಾರೆ.


ಇದನ್ನೂ ಓದಿರಿ: ಸಿದ್ದರಾಮಯ್ಯ ವಿರುದ್ಧ ದ್ವೇಷ ಹರಡುತ್ತಿರುವ ಕನ್ನಡ ಮಾಧ್ಯಮಗಳು: ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....