Homeಮುಖಪುಟದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

ದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

- Advertisement -
- Advertisement -

ಕೆ.ಎಂ.ಕಮಲ್ ನಿರ್ದೇಶಿಸಿದ ಮಲಯಾಳಂ ಚಿತ್ರ ‘ಪಡ’  ನೈಜ ಘಟನೆಗಳನ್ನು ಆಧರಿಸಿದ ಮೂಡಿ ಮಂದಿದೆ. ಅಕ್ಟೋಬರ್ 4, 1996ರಂದು, ಆಗಿನ ಪಾಲಕ್ಕಾಡ್ ಜಿಲ್ಲಾಧಿಕಾರಿಯಾಗಿದ್ದ ಡಬ್ಲ್ಯುಆರ್ ರೆಡ್ಡಿ ಅವರನ್ನು ನಾಲ್ವರು ಆದಿವಾಸಿ ಹಕ್ಕುಗಳ ಕಾರ್ಯಕರ್ತರು ಒತ್ತೆಯಾಳಾಗಿ ಇರಿಸಿಕೊಂಡ ಕಥಾ ಹಂದರವನ್ನು ಈ ಸಿನಿಮಾ ಹೊಂದಿದೆ.

“ತಮಿಳು ಚಿತ್ರರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿದ್ದ ದಮನಿತರ ಭೂಮಿ ಹಕ್ಕು ಕಥನ, ಈಗ ಮಲಯಾಳಂಗೂ ಕಾಲಿಟ್ಟಿದೆ” ಎಂದು ಸಿನಿಮಾ ನಿರ್ದೇಶಕ ಕಮಲ್ ಹೇಳಿರುವುದಾಗಿ ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.

1996ರಲ್ಲಿ ಇ.ಕೆ.ನಾಯನಾರ್ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌‌ (ಎಲ್‌ಡಿಎಫ್‌) ಸರ್ಕಾರವು ಅಂಗೀಕರಿಸಿದ ಆದಿವಾಸಿ ಭೂ ಕಾಯಿದೆ 1975ರ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳಬೇಕೆಂಬ ಹೋರಾಟ ನಡೆದಿತ್ತು. ಅನೇಕ ಬುಡಕಟ್ಟು ಜನರು ತಿದ್ದುಪಡಿಯನ್ನು ವಿರೋಧಿಸಿದರು. ಎರಡು ಗಂಟೆಗಳ ಪಡ ಸಿನಿಮಾ ಈ ಕಥಾ ಹಂದರವನ್ನು ಹೊಂದಿದೆ.

ಕುಂಚಾಕೊ ಬೋಬನ್, ವಿನಾಯಕನ್, ದಿಲೀಶ್ ಪೋತನ್ ಮತ್ತು ಜೋಜು ಜಾರ್ಜ್ ಮುಖ್ಯಭೂಮಿಯಲ್ಲಿ ನಟಿಸಿರುವ ಈ ಸಿನಿಮಾಕ್ಕೆ ವಿಮರ್ಶಕರಿಂದ ಭಾರೀ ಮೆಚ್ಚುಗೆ ಸಿಕ್ಕಿದೆ. ತುಳಿತಕ್ಕೊಳಗಾದವರ ಭೂಮಿಯ ಹಕ್ಕುಗಳ ಬಗ್ಗೆ ಮಾತನಾಡುವ ಕೆಲವು ಮಲಯಾಳಂ ಚಲನಚಿತ್ರಗಳಲ್ಲಿ ಇದೂ ಒಂದಾಗಿದೆ ಎಂದು ಬಣ್ಣಿಸಲಾಗಿದೆ.

2016ರಲ್ಲಿ ತೆರೆಕಂಡ, ರಾಜೀವ್ ರವಿ ನಿರ್ದೇಶನದ ‘ಕಮ್ಮಟ್ಟಿ ಪಾಡಂ’ ಸಿನಿಮಾ ಕೊಚ್ಚಿಯ ಕೊಳೆಗೇರಿ ಪ್ರದೇಶದಲ್ಲಿ ದಲಿತರು ತಮ್ಮ ಭೂಮಿಯನ್ನು ಕಳೆದುಕೊಂಡಿದ್ದನ್ನು ಹೇಳುತ್ತದೆ. ರಿಯಲ್ ಎಸ್ಟೇಟ್ ಮಾಫಿಯಾಗಳಿಂದಾಗಿ ದಮನಿತರು ಭೂಮಿ ವಂಚಿತರಾಗುವುದನ್ನು ಕಮ್ಮಟ್ಟಿಪಾಡಂ ಚಿತ್ರಿಸಿತ್ತು. ಮಲೆಯಾಳಂ ಚಿತ್ರರಂಗದಲ್ಲಿ ಭೂಮಿ ಹಕ್ಕನ್ನು ಪ್ರತಿಪಾದಿಸುವ ಮತ್ತೊಂದು ಸಿನಿಮಾವಾಗಿ ‘ಪಡ’ ಹೊರಹೊಮ್ಮಿದೆ.

ನೆರೆಯ ತಮಿಳು ಚಿತ್ರರಂಗ ದಮನಿತ ಸಮುದಾಯದ ಪ್ರತಿರೋಧವನ್ನು ದೊಡ್ಡ ಮಟ್ಟದಲ್ಲಿ ತೋರಿಸುತ್ತಿದೆ. ಮಲಯಾಳಂ ಚಿತ್ರರಂಗವು ಈ ವಿಷಯದಲ್ಲಿ ಅಷ್ಟಾಗಿ ಗಮನ ಸೆಳೆದಿಲ್ಲ. ಆದರೆ ತಮಿಳುನಾಡಿನಲ್ಲಿ ದಮನಿತರ ಕಥೆಗಳು ಯಶಸ್ವಿಯಾಗಿವೆ. ರಾಜಕೀಯ ವಿದ್ಯಮಾನವಾಗಿ ಹೊಮ್ಮಿವೆ. ಉದಾಹರಣೆಗೆ ನಿರ್ದೇಶಕ ಪಾ.ರಂಜಿತ್ ಅವರು ಕಾಲಾ (2018) ಚಿತ್ರದಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ಅವರ ಮೂಲಕ ದಲಿತರ ಭೂಮಿಯ ಹಕ್ಕುಗಳ ಬಗ್ಗೆ ಮಾತನಾಡಿದ್ದಾರೆ. ನಟ ಧನುಷ್ ಅಭಿನಯದ ವೆಟ್ರಿಮಾರನ್ ನಿರ್ದೇಶನದ ಅಸುರನ್‌, ಮಾರಿ ಸೆಲ್ವರಾಜ್ ನಿರ್ದೇಶನದ ಕರ್ಣನ್ (2021) ಪ್ರತಿರೋಧದ ಕಥನಗಳನ್ನು ಹೊಂದಿವೆ. ಟಿ.ಜಿ.ಜ್ಞಾನವೇಲ್ ಅವರ ‘ಜೈ ಭೀಮ್’ (2021) ಇರುಳ ಬುಡಕಟ್ಟಿನ ಮಹಿಳೆಯ ಪರವಾಗಿ ನ್ಯಾಯಕ್ಕಾಗಿ ಹೋರಾಡುವ ವಕೀಲರ ಕುರಿತ್ತಾದ್ದಾಗಿದೆ.

‘ದಿ ನ್ಯೂಸ್‌ ಮಿನಿಟ್‌’ ಜಾಲತಾಣದೊಂದಿಗೆ ಮಾತನಾಡಿರುವ ಪಡ ನಿರ್ದೇಶಕ ಕಮಲ್, “ಮಲಯಾಳಂ ಚಿತ್ರರಂಗವು ಯಾವಾಗಲೂ ಜಾತಿಯ ಬಗ್ಗೆ ಮಾತನಾಡುವುದರಿಂದ ದೂರವಿರುತ್ತದೆ. ವರ್ಗ ವ್ಯತ್ಯಾಸಗಳು ಸಾಮಾನ್ಯವಾಗಿ ಸಿನಿಮಾ, ರಂಗಭೂಮಿ ಮತ್ತು ಸಂಗೀತದಲ್ಲಿ ಪ್ರತಿಫಲಿಸುತ್ತದೆ. ಆದರೆ ಸಮಾಜದಲ್ಲಿನ ಅಧಿಕಾರ ರಚನೆಗಳನ್ನು ವ್ಯಾಖ್ಯಾನಿಸುವ ಜಾತಿಯ ವಿಷಯಕ್ಕೆ ಬಂದರೆ, ಮಲಯಾಳಂ ಚಿತ್ರರಂಗ ಈ ವಿಷಯದಿಂದ ವಿಮುಖವಾಗಿತ್ತು. ಆದರೆ ಜಾತಿ ಸಮಸ್ಯೆಯನ್ನು ಸಕ್ರಿಯವಾಗಿ ಒಡೆದುಹಾಕುವಲ್ಲಿ ತಮಿಳು ಚಿತ್ರರಂಗ ಮಾತ್ರ ಯಶಸ್ವಿಯಾಗಿದೆ” ಎಂದಿದ್ದಾರೆ.

ಐತಿಹಾಸಿಕವಾಗಿ, ಆದಿವಾಸಿ ಜನರು ಹಿಂದೂ ಎಂದು ಗುರುತಿಸಿಕೊಳ್ಳಲಿಲ್ಲ. ಆದ್ದರಿಂದ ಹಿಂದೂ ಸಮಾಜದ ಜಾತಿ ರಚನೆಗಳಿಂದ ಹೊರಗಿದ್ದರು. ಆದರೆ ಅವರ ಸಂಸ್ಕೃತಿಯ ಅಳಿವಿನಿಂದಾಗಿ ಅವರು ಜಾತಿ ಪದ್ಧತಿ ಮತ್ತು ಬಹಿಷ್ಕಾರಕ್ಕೆ ಒಳಗಾಗುತ್ತಾರೆ. ಪಡ ಸಿನಿಮಾದ ಒಂದು ಒಂದು ಪಾತ್ರವು ಆದಿವಾಸಿ ಜನರ ಹಕ್ಕುಗಳನ್ನು ನಿರ್ಲಕ್ಷಿಸುವ ‘ಸವರ್ಣ ರಾಜ್ಯ’ವನ್ನು ಪ್ರಶ್ನಿಸುತ್ತದೆ. ಮುಖ್ಯವಾಹಿನಿಯ ಮಲಯಾಳಂ ಚಲನಚಿತ್ರದಲ್ಲಿ ಸರ್ಕಾರವನ್ನು ಹೀಗೆ ವಿವರಿಸಿರುವುದು ಬಹುಶಃ ಇದೇ ಮೊದಲು ಎಂದು ನ್ಯೂಸ್‌ ಮಿನಿಟ್‌ ವರದಿ ಹೇಳುತ್ತದೆ.

ಈ ಘಟನೆ ನಡೆದಾಗ ಪತ್ರಿಕೋದ್ಯಮದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದೆ ಎನ್ನುವ ಕಮಲ್ ಘಟನೆಯನ್ನು ನೆನೆದಿದ್ದಾರೆ. “ಆ ಸಮಯದಲ್ಲಿ, ಕೇರಳದಲ್ಲಿ ಮಿಲಿಟೆಂಟ್ ಕ್ರಮಗಳು ವಿರಳವಾಗಿತ್ತು. ಈ ಘಟನೆಯು ತೀವ್ರತೆಯನ್ನು ಪಡೆದುಕೊಂಡಿತು. ಹಲವಾರು ಗಂಟೆಗಳ ಕಾಲ ಒತ್ತೆ ಇಟ್ಟುಕೊಳ್ಳಲಾಗಿತ್ತು. ನನಗೆ ನೆನಪಿರುವಂತೆ, ರಾಜಕೀಯ ವರ್ಗವು ಈ ವಿಷಯದಲ್ಲಿ ಮೌನವಾಗಿದೆ. ರಾಜಕೀಯ ವರ್ಗ ಈ ಪ್ರಕರಣವನ್ನು ಆಗಿನ ಮುಖ್ಯ ಕಾರ್ಯದರ್ಶಿ ಒಳಗೊಂಡ ಬಿಕ್ಕಟ್ಟು ನಿರ್ವಹಣಾ ತಂಡಕ್ಕೆ ಬಿಟ್ಟು ಜಾರಿಕೊಂಡಿತು. ನಂತರ, ಘಟನೆಯ ಬಗ್ಗೆ ಒಂದು ವಾರ ಅಥವಾ ಅದಕ್ಕಿಂತ ಹೆಚ್ಚು ಕಾಲ ಮಾಧ್ಯಮಗಳಲ್ಲಿ ಚರ್ಚೆಗಳು ಪ್ರಧಾನವಾಗಿ ನಡೆದಿದ್ದರಿಂದ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲಾ ರಾಜಕೀಯ ನಾಯಕರು ಪ್ರತಿಕ್ರಿಯಿಸಲು ಪ್ರಾರಂಭಿಸಿದರು. ಆದರೆ ಆರೋಪ ಪ್ರತ್ಯಾರೋಪಗಳು ನಡೆದವು. ಅವರು ಕಾನೂನಿನ ಕುರಿತಾಗಲಿ, ಆದಿವಾಸಿಗಳು ಎತ್ತಿರುವ ಪ್ರಶ್ನೆಗಳ ಕುರಿತಾಗಲೀ ಆಸಕ್ತಿ ಹೊಂದಿರಲಿಲ್ಲ” ಎಂದು ನಿರ್ದೇಶಕರು ತಿಳಿಸಿದ್ದಾರೆ.


ಇದನ್ನೂ ಓದಿರಿ: ಸಿದ್ದರಾಮಯ್ಯ ವಿರುದ್ಧ ದ್ವೇಷ ಹರಡುತ್ತಿರುವ ಕನ್ನಡ ಮಾಧ್ಯಮಗಳು: ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...