Homeಚಳವಳಿಭತ್ತ ಖರೀದಿ ವಿಳಂಬ | ಪಂಜಾಬ್ ರೈತರಿಂದ ಪ್ರತಿಭಟನಾ ರ‍್ಯಾಲಿ; ಬಂಧನ

ಭತ್ತ ಖರೀದಿ ವಿಳಂಬ | ಪಂಜಾಬ್ ರೈತರಿಂದ ಪ್ರತಿಭಟನಾ ರ‍್ಯಾಲಿ; ಬಂಧನ

- Advertisement -
- Advertisement -

ನಡೆಯುತ್ತಿರುವ ಖಾರಿಫ್ ಮಾರುಕಟ್ಟೆ ಋತುವಿನಲ್ಲಿ ಭತ್ತದ ಖರೀದಿ ವಿಳಂಬವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಮಾತುಕತೆಗೆ ಆಹ್ವಾನವನ್ನು ಸ್ವೀಕರಿಸಿದ್ದಾರೆ. ರಾಜ್ಯದಾದ್ಯಂತ ಧಾನ್ಯ ಮಾರುಕಟ್ಟೆಗಳು ಬೆಳೆಯನ್ನು ಖರೀದಿ ಮಾಡುವವರೆಗೆ ತಾವು ಚಂಡೀಗಢದಲ್ಲಿಯೇ ಇರುತ್ತೇವೆ ಎಂದು ರೈತರು ಪ್ರತಿಜ್ಞೆ ಮಾಡಿದ್ದಾರೆ. ಭತ್ತ ಖರೀದಿ ವಿಳಂಬ 

ಪ್ರತಿಭಟನಾನಿರತ ರೈತರು ಚಂಡೀಗಢದಿಂದ ಸಿಎಂ ಮಾನ್ ಅವರ ನಿವಾಸಕ್ಕೆ ಘೇರಾವ್ ಮಾಡಲು ಪ್ರಯತ್ನಿಸಿದ್ದು, ಆದರೆ ಅವರ ಹಲವಾರು ಮುಖಂಡರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಕೆಲವರು ಸೆಕ್ಟರ್ 35 ರ ಕಿಸಾನ್ ಭವನವನ್ನು ತಲುಪಿದ್ದು, ಭವನ ಪ್ರವೇಶಿಸಲು ಯಶಸ್ವಿಯಾಗಿದ್ದಾರೆ. ಭದ್ರತಾ ಪಡೆಗಳು ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಕ್ಷಿಪ್ರ ಕಾರ್ಯಾಚರಣೆ ಪಡೆ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಭತ್ತ ಖರೀದಿ ವಿಳಂಬದ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ, ಅಕ್ಕಿ ಗಿರಣಿದಾರರು ಮತ್ತು ಕಮಿಷನ್ ಏಜೆಂಟರು ರಾಜಧಾನಿ ಚಂಡೀಗಢಕ್ಕೆ ಮೆರವಣಿಗೆ ಮಾಡಲು ಕರೆ ನೀಡಿದ್ದರು. ನಿನ್ನೆ ಸಂಜೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪ್ರತಿಭಟನಾ ನಿರತ ರೈತರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. ಭತ್ತ ಖರೀದಿ ವಿಳಂಬ 

ಪ್ರತಿಭಟನೆ ಕುರಿತು ಮಾತನಾಡಿದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಹಿರಿಯ ನಾಯಕ ಹರಿಂದರ್ ಸಿಂಗ್ ಲಖೋವಾಲ್, “ಪಂಜಾಬ್ ಪೊಲೀಸರು ಮತ್ತು ಚಂಡೀಗಢ ಪೊಲೀಸರು ನಮ್ಮನ್ನು ತಡೆಯಲು ಪ್ರಯತ್ನಿಸಿದರು. ಆದರೆ ನಾವು ಚಂಡೀಗಢ ತಲುಪುವಲ್ಲಿ ಯಶಸ್ವಿಯಾಗಿದ್ದೇವೆ. ಕೆಲವು ರೈತರು ಮತ್ತು ಇತರ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ನಾವು ಕಿಸಾನ್ ಭವನವನ್ನು ತಲುಪಿದ ನಂತರ, ನಾವು ಇಲ್ಲಿಯೇ ಇರಲಿದ್ದು, ಭತ್ತದ ಖರೀದಿ ಪೂರ್ಣ ಪ್ರಮಾಣದಲ್ಲಿ ಪ್ರಾರಂಭವಾಗುವವರೆಗೆ ನಾವು ಹೊರಗೆ ಹೋಗುವುದಿಲ್ಲ” ಎಂದು ಹೇಳಿದ್ದಾರೆ.

“ಮುಖ್ಯಮಂತ್ರಿಯವರು ನಮ್ಮನ್ನು ಭೇಟಿಯಾಗಿ ಮಾತುಕತೆ ನಡೆಸಲು ನಮಗೆ ಆಹ್ವಾನ ನೀಡಿದ್ದಾರೆ. ನಾವು ಆಹ್ವಾನವನ್ನು ಸ್ವೀಕರಿಸಿದ್ದೇವೆ ಮತ್ತು ನಾವು ನಾಳೆ ಅವರನ್ನು ಭೇಟಿ ಮಾಡುತ್ತೇವೆ. ಆದರೂ, ಖರೀದಿ ಪ್ರಾರಂಭವಾಗುವವರೆಗೆ ನಾವು ಹಿಂತಿರುಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ನಮ್ಮಲ್ಲಿ ಸುಮಾರು 200 ರಿಂದ 300 ಜನರು ಕಿಸಾನ್ ಭವನದಲ್ಲಿ ಉಳಿಯುತ್ತೇವೆ. ನಾಳೆ ಸಿಎಂ ಮಾನ್ ಅವರನ್ನು ಭೇಟಿಯಾದ ನಂತರ ಮುಂದಿನ ಕ್ರಮವನ್ನು ನಿರ್ಧರಿಸಲಾಗುವುದು. ಬಲ್ಬೀರ್ ಸಿಂಗ್ ರಾಜೇವಾಲ್ ಸೇರಿದಂತೆ ಬಂಧಿತ ನಾಯಕರು ಈಗ ಇಲ್ಲಿಗೆ ತಲುಪಿದ್ದಾರೆ” ಎಂದು ಅವರು ಹೇಳಿದ್ದಾರೆ. ಹಿಂದಿನ ದಿನ ರೈತ ಮುಖಂಡರಾದ ರುಲ್ದು ಸಿಂಗ್ ಮಾನ್ಸಾ, ಮಂಜಿತ್ ಧನೆರ್, ತಾರ್ಸೆಮ್ ಸಿಂಗ್, ಅಂಗ್ರೇಜ್ ಸಿಂಗ್, ಗುರ್ಮೀತ್ ಸಿಂಗ್ ಮೆಹ್ಮಾ ಸೇರಿದಂತೆ ಇತರರನ್ನು ಪೊಲೀಸರು ಬಂಧಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅತ್ಯಚಾರ ಸಂತ್ರಸ್ತೆಯ ಅಪಹರಣ | ಭವಾನಿ ರೇವಣ್ಣಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನು ತಡೆಹಿಡಿಯಲು ಸುಪ್ರೀಂ ನಕಾರ

ಅತ್ಯಚಾರ ಸಂತ್ರಸ್ತೆಯ ಅಪಹರಣ | ಭವಾನಿ ರೇವಣ್ಣಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನು ತಡೆಹಿಡಿಯಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...