Homeಚಳವಳಿಭತ್ತ ಖರೀದಿ ವಿಳಂಬ | ಪಂಜಾಬ್ ರೈತರಿಂದ ಪ್ರತಿಭಟನಾ ರ‍್ಯಾಲಿ; ಬಂಧನ

ಭತ್ತ ಖರೀದಿ ವಿಳಂಬ | ಪಂಜಾಬ್ ರೈತರಿಂದ ಪ್ರತಿಭಟನಾ ರ‍್ಯಾಲಿ; ಬಂಧನ

- Advertisement -
- Advertisement -

ನಡೆಯುತ್ತಿರುವ ಖಾರಿಫ್ ಮಾರುಕಟ್ಟೆ ಋತುವಿನಲ್ಲಿ ಭತ್ತದ ಖರೀದಿ ವಿಳಂಬವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಮಾತುಕತೆಗೆ ಆಹ್ವಾನವನ್ನು ಸ್ವೀಕರಿಸಿದ್ದಾರೆ. ರಾಜ್ಯದಾದ್ಯಂತ ಧಾನ್ಯ ಮಾರುಕಟ್ಟೆಗಳು ಬೆಳೆಯನ್ನು ಖರೀದಿ ಮಾಡುವವರೆಗೆ ತಾವು ಚಂಡೀಗಢದಲ್ಲಿಯೇ ಇರುತ್ತೇವೆ ಎಂದು ರೈತರು ಪ್ರತಿಜ್ಞೆ ಮಾಡಿದ್ದಾರೆ. ಭತ್ತ ಖರೀದಿ ವಿಳಂಬ 

ಪ್ರತಿಭಟನಾನಿರತ ರೈತರು ಚಂಡೀಗಢದಿಂದ ಸಿಎಂ ಮಾನ್ ಅವರ ನಿವಾಸಕ್ಕೆ ಘೇರಾವ್ ಮಾಡಲು ಪ್ರಯತ್ನಿಸಿದ್ದು, ಆದರೆ ಅವರ ಹಲವಾರು ಮುಖಂಡರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಕೆಲವರು ಸೆಕ್ಟರ್ 35 ರ ಕಿಸಾನ್ ಭವನವನ್ನು ತಲುಪಿದ್ದು, ಭವನ ಪ್ರವೇಶಿಸಲು ಯಶಸ್ವಿಯಾಗಿದ್ದಾರೆ. ಭದ್ರತಾ ಪಡೆಗಳು ಬ್ಯಾರಿಕೇಡ್‌ಗಳನ್ನು ಹಾಕಿದ್ದು, ಕ್ಷಿಪ್ರ ಕಾರ್ಯಾಚರಣೆ ಪಡೆ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಭತ್ತ ಖರೀದಿ ವಿಳಂಬದ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ, ಅಕ್ಕಿ ಗಿರಣಿದಾರರು ಮತ್ತು ಕಮಿಷನ್ ಏಜೆಂಟರು ರಾಜಧಾನಿ ಚಂಡೀಗಢಕ್ಕೆ ಮೆರವಣಿಗೆ ಮಾಡಲು ಕರೆ ನೀಡಿದ್ದರು. ನಿನ್ನೆ ಸಂಜೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪ್ರತಿಭಟನಾ ನಿರತ ರೈತರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. ಭತ್ತ ಖರೀದಿ ವಿಳಂಬ 

ಪ್ರತಿಭಟನೆ ಕುರಿತು ಮಾತನಾಡಿದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಹಿರಿಯ ನಾಯಕ ಹರಿಂದರ್ ಸಿಂಗ್ ಲಖೋವಾಲ್, “ಪಂಜಾಬ್ ಪೊಲೀಸರು ಮತ್ತು ಚಂಡೀಗಢ ಪೊಲೀಸರು ನಮ್ಮನ್ನು ತಡೆಯಲು ಪ್ರಯತ್ನಿಸಿದರು. ಆದರೆ ನಾವು ಚಂಡೀಗಢ ತಲುಪುವಲ್ಲಿ ಯಶಸ್ವಿಯಾಗಿದ್ದೇವೆ. ಕೆಲವು ರೈತರು ಮತ್ತು ಇತರ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ನಾವು ಕಿಸಾನ್ ಭವನವನ್ನು ತಲುಪಿದ ನಂತರ, ನಾವು ಇಲ್ಲಿಯೇ ಇರಲಿದ್ದು, ಭತ್ತದ ಖರೀದಿ ಪೂರ್ಣ ಪ್ರಮಾಣದಲ್ಲಿ ಪ್ರಾರಂಭವಾಗುವವರೆಗೆ ನಾವು ಹೊರಗೆ ಹೋಗುವುದಿಲ್ಲ” ಎಂದು ಹೇಳಿದ್ದಾರೆ.

“ಮುಖ್ಯಮಂತ್ರಿಯವರು ನಮ್ಮನ್ನು ಭೇಟಿಯಾಗಿ ಮಾತುಕತೆ ನಡೆಸಲು ನಮಗೆ ಆಹ್ವಾನ ನೀಡಿದ್ದಾರೆ. ನಾವು ಆಹ್ವಾನವನ್ನು ಸ್ವೀಕರಿಸಿದ್ದೇವೆ ಮತ್ತು ನಾವು ನಾಳೆ ಅವರನ್ನು ಭೇಟಿ ಮಾಡುತ್ತೇವೆ. ಆದರೂ, ಖರೀದಿ ಪ್ರಾರಂಭವಾಗುವವರೆಗೆ ನಾವು ಹಿಂತಿರುಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ನಮ್ಮಲ್ಲಿ ಸುಮಾರು 200 ರಿಂದ 300 ಜನರು ಕಿಸಾನ್ ಭವನದಲ್ಲಿ ಉಳಿಯುತ್ತೇವೆ. ನಾಳೆ ಸಿಎಂ ಮಾನ್ ಅವರನ್ನು ಭೇಟಿಯಾದ ನಂತರ ಮುಂದಿನ ಕ್ರಮವನ್ನು ನಿರ್ಧರಿಸಲಾಗುವುದು. ಬಲ್ಬೀರ್ ಸಿಂಗ್ ರಾಜೇವಾಲ್ ಸೇರಿದಂತೆ ಬಂಧಿತ ನಾಯಕರು ಈಗ ಇಲ್ಲಿಗೆ ತಲುಪಿದ್ದಾರೆ” ಎಂದು ಅವರು ಹೇಳಿದ್ದಾರೆ. ಹಿಂದಿನ ದಿನ ರೈತ ಮುಖಂಡರಾದ ರುಲ್ದು ಸಿಂಗ್ ಮಾನ್ಸಾ, ಮಂಜಿತ್ ಧನೆರ್, ತಾರ್ಸೆಮ್ ಸಿಂಗ್, ಅಂಗ್ರೇಜ್ ಸಿಂಗ್, ಗುರ್ಮೀತ್ ಸಿಂಗ್ ಮೆಹ್ಮಾ ಸೇರಿದಂತೆ ಇತರರನ್ನು ಪೊಲೀಸರು ಬಂಧಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅತ್ಯಚಾರ ಸಂತ್ರಸ್ತೆಯ ಅಪಹರಣ | ಭವಾನಿ ರೇವಣ್ಣಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನು ತಡೆಹಿಡಿಯಲು ಸುಪ್ರೀಂ ನಕಾರ

ಅತ್ಯಚಾರ ಸಂತ್ರಸ್ತೆಯ ಅಪಹರಣ | ಭವಾನಿ ರೇವಣ್ಣಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನು ತಡೆಹಿಡಿಯಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...