Homeಕರ್ನಾಟಕಹಿರಿಯ ನಟ ಅನಂತ್‌ ನಾಗ್‌ಗೆ ಪದ್ಮ ಪ್ರಶಸ್ತಿ ಆಗ್ರಹಿಸಿ ಆನಲೈನ್‌ ಅಭಿಯಾನ

ಹಿರಿಯ ನಟ ಅನಂತ್‌ ನಾಗ್‌ಗೆ ಪದ್ಮ ಪ್ರಶಸ್ತಿ ಆಗ್ರಹಿಸಿ ಆನಲೈನ್‌ ಅಭಿಯಾನ

ಅನಂತ್‌ ನಾಗ್‌ ಅವರ 5 ದಶಕಗಳ ಸಿನಿ ಪ್ರಯಾಣದಲ್ಲಿ ಒಂದೇ ಒಂದು ರಾಷ್ಟ್ರ ಪ್ರಶಸ್ತಿ ಸಿಗದಿರುವುದು ಆಶ್ಚರ್ಯವನ್ನು ಹುಟ್ಟಿಸುತ್ತದೆ.

- Advertisement -
- Advertisement -

ಸೆಪ್ಟೆಂಬರ್‌ 15ರ ವರೆಗೆ ಪದ್ಮ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವಂತೆ ಪ್ರಧಾನಿ ಮೋದಿ ಭಾನುವಾರ ದೇಶವಾಸಿಗಳಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಕನ್ನಡದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂಬ ಆನ್‌ಲೈನ್‌ ಅಭಿಯಾನ ಆರಂಭವಾಗಿದೆ.

ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದು ಅನಂತ್‌ ನಾಗ್‌ ಅವರಿಗೆ ಪದ್ಮ ಪುರಸ್ಕಾರವನ್ನು ನೀಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಆನ್‌ಸ್ಕ್ರೀನ್‌ನಲ್ಲಿ ಮಾತ್ರ ಪ್ರತಿಭಾವಂತ ನಟ; ಉಳಿದಂತೆ ಅಂತಃಕರಣವುಳ್ಳ ಸಾಮಾನ್ಯ ಮನುಷ್ಯನಾಗಿದ್ದ ಸಂಚಾರಿ ವಿಜಯ್

ಖ್ಯಾತ ನಟ ರಿಷಭ್‌ ಶೆಟ್ಟಿ ಈ ಸಂಬಂಧ ಟ್ವೀಟ್‌ ಮಾಡಿ ಅನಂತ ನಾಗ್ ಕನ್ನಡ ಮತ್ತು ಭಾರತ ಚಲನಚಿತ್ರರಂಗಕ್ಕೆ ಅಸಾಧಾರಣ ಕೊಡುಗೆ ನೀಡಿದ್ದಾರೆ, ಆದ್ದರಿಂದ ಅವರಿಗೆ ಪದ್ಮಾ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ನಟ ರಕ್ಷಿತ್ ಸೆಟ್ಟಿ, ನಿರ್ದೇಶಕ ಹೇಮಂತ್ ರಾವ್ ಸಾರಿದಂತೆ ಅನೇಕ ನಟ, ನಿರ್ದೇಶಕರು ಅನಂತ್‌ ನಾಗ್‌ ಪದ್ಮ ಪ್ರಶಸ್ತಿಗೆ ಅತ್ಯಂತ ಅರ್ಹರಾಗಿದ್ದಾರೆ ಎಂದು ಹೇಳಿದ್ದು ಅಭಿಯಾನಕ್ಕೆ ಕೈಜೋಡಿಸಿದ್ದಾರೆ.

ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾಗುವ ಪದ್ಮ ಪ್ರಶಸ್ತಿಗಳು ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಸಾರ್ವಜನಿಕ ಸೇವೆಗಳನ್ನು ಒಳಗೊಂಡ ಅನೇಕ ವಿಭಾಗಗಳಲ್ಲಿ ವ್ಯಕ್ತಿಗಳ ಸಾಧನೆಗಳನ್ನು ಪರಿಗಣಿಸಿ ವಾರ್ಷಿಕ ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ-ಪದ್ಮವಿಭೂಷಣ್ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ್ (ಉನ್ನತ-ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾಮಾನ್ಯವಾಗಿ ಪದ್ಮ ಪ್ರಶಸ್ತಿಯನ್ನು ಸಮಿತಿಯಿಂದ ನಾಮನಿರ್ದೇಶನಗೊಂಡ ಸಾಧಕರಿಗೆ ನೀಡಲಾಗುತ್ತದೆ. ಈ ವರ್ಷ ಸರ್ಕಾರ ಸಾರ್ವಜನಿಕರಿಗೂ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವ ಅವಕಾಶ ನೀಡಿದೆ.

ಇದನ್ನೂ ಓದಿ: ನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

ಅನಂತ್ ನಾಗ್ ಕನ್ನಡ, ಮರಾಠಿ, ತೆಲುಗು, ತಮಿಳು, ಮಲಯಾಳಂ, ಮತ್ತು ಹಿಂದಿ ಭಾಷೆಗಳಲ್ಲಿ 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ಪ್ರಮುಖ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

ಅನಂತ್ ನಾಗ್ ಕನ್ನಡ, ಮರಾಠಿ, ತೆಲುಗು, ತಮಿಳು, ಮಲಯಾಳಂ, ಮತ್ತು ಹಿಂದಿ ಭಾಷೆಗಳಲ್ಲಿ 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ಪ್ರಮುಖ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರು ಸ್ವತಂತ್ರ ಚಲನಚಿತ್ರಗಳು ಮತ್ತು ಮಾಲ್ಗುಡಿ ಡೇಸ್‌ನಂತಹ ದೂರದರ್ಶನ ಸರಣಿಯಲ್ಲೂ ಕಾಣಿಸಿಕೊಂಡಿದ್ದಾರೆ ಮತ್ತು ನಾಟಕಗಳಲ್ಲಿಯೂ ನಟಿಸಿದ್ದಾರೆ.

ಇದನ್ನೂ ಓದಿ: ವಂಚನೆ ಪ್ರಕರಣ: ವಿವಾದಕ್ಕೆ ತೆರೆ ಎಳೆದಿದ್ದೇವೆ ಎಂದ ನಟ ದರ್ಶನ್

ಅನಂತ್‌ ನಾಗ್‌ ಅವರ ಮನೋಜ್ಞ ಅಭಿನಯಕ್ಕೆ ಇದುವರೆಗೆ 7 ರಾಜ್ಯ ಪ್ರಶಸ್ತಿಗಳು ಒಲಿದು ಬಂದಿವೆ.  ಸಂಕಲ್ಪ (1973) ಎಂಬ ಚಲನಚಿತ್ರದೊಂದಿಗೆ ಪಾದಾರ್ಪಣೆ ಮಾಡಿದ ಹಿರಿಯ ನಟ ನಾಗ್‌ ನಂತರ ಶ್ಯಾಮ್ ಬೆನೆಗಲ್ ಅವರ ಅಂಕುರ್ ಚಿತ್ರದಲ್ಲಿ ಕಾಣಿಸಿಕೊಂಡರು. ಬೆನಗಲ್‌ ಅವರೊಂದಿಗೆ ಸ್ವತಂತ್ರ ಚಲನಚಿತ್ರಗಳ ಸಿನೆಮಾ ಜಗತ್ತಿನಲ್ಲಿ ತೊಡಗಿದರು. ಗೋಧಿ ಬಣ್ಣ ಸಾಧಾರಣ ಮೈಕಟ್ಟು (2016) ಚಿತ್ರದಲ್ಲಿನ ಅನಂತ್‌ ನಾಗ್‌  ಅವರ ಅಲ್‌ಜೈಮರ್‌ ರೋಗಿಯ ಪಾತ್ರ ದೇಶ ವಿದೇಶಗಳ ಚಿತ್ರೋತ್ಸವದಲ್ಲಿ ಮೆಚ್ಚುಗೆಯನ್ನು ಗಳಿಸಿತ್ತು.  

ವಯಸ್ಸು ಮಾಗಿದಂತೆಲ್ಲ ಅನಂತ್‌ ನಾಗ್ ನಟನೆಯಲ್ಲಿ ಮೊನಚು, ಸೂಕ್ಷತೆ ಕಾಣಿಸಿಕೊಳ್ಲುತ್ತಿದ್ದು ಅವರನ್ನು  ಭಾರತದ ಅತ್ಯುತ್ತಮ ನಟರಲ್ಲಿ ಒಬ್ಬರನ್ನಾಗಿ ಪರಿಗಣಿಸಲಾಗುತ್ತದೆ. ಅಮಿತಾಬ್‌ ಬಚ್ಚನ್‌, ಇರ್ಫಾನ್‌ ಖಾನ್‌, ನಾಸಿರುದ್ದೀನ್‌ ಶಾ, ಕಮಲ್ ಹಾಸನ್, ಪ್ರಕಾಶ್‌ ರಾಜ್‌ ಮುಂತಾದ ಹಿರಿಯ ನಟರಿಗೆ ನಟನೆಯಲ್ಲಿ ರಾಷ್ಟ್ರ ಪ್ರಶಸ್ತಿಗಳು ಲಭಿಸಿದೆ. ಅನಂತ್‌ ನಾಗ್‌ ಅವರ 5 ದಶಕಗಳ ಸಿನಿ ಪ್ರಯಾಣದಲ್ಲಿ ರಾಷ್ಟ್ರ ಪ್ರಶಸ್ತಿ ಸಿಗದಿರುವುದು ಆಶ್ಚರ್ಯವನ್ನು ಹುಟ್ಟಿಸುತ್ತದೆ.

ಇತ್ತೀಚಿನ ತಮ್ಮ ಕೆಲವು ಹೆಳಿಕೆಗಳಿಂದ ಅನಂತ್‌ ನಾಗ್‌ ಕೆಲವು ವಿವಾದಗಳನ್ನು ಮೈಮೇಲೆ ಎಳೆದು ಕೊಂಡಿದ್ದರು. ಅದರ ಹೊರತಾಗಿ ಅನಂತ್‌ ನಾಗ್‌ ಪದ್ಮ ಪ್ರಶಸ್ತಿಗೆ ಕನ್ನಡ ಚಿತ್ರರಂಗದಿಂದ ಸೂಕ್ತ ಆಯ್ಕೆ ಎಂದು ಹಲವರು ಅಭಿಪ್ರಾಪಟ್ಟಿದ್ದಾರೆ.

ಇದನ್ನೂ ಓದಿ:  ಪದ್ಮ ಪ್ರಶಸ್ತಿಗೆ ಸಾಧಕರ ಹೆಸರು ಸೂಚಿಸುವಂತೆ ದೇಶವಾಸಿಗಳಲ್ಲಿ ಪ್ರಧಾನಿ ಮನವಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...