Homeಕರ್ನಾಟಕಹಿರಿಯ ನಟ ಅನಂತ್‌ ನಾಗ್‌ಗೆ ಪದ್ಮ ಪ್ರಶಸ್ತಿ ಆಗ್ರಹಿಸಿ ಆನಲೈನ್‌ ಅಭಿಯಾನ

ಹಿರಿಯ ನಟ ಅನಂತ್‌ ನಾಗ್‌ಗೆ ಪದ್ಮ ಪ್ರಶಸ್ತಿ ಆಗ್ರಹಿಸಿ ಆನಲೈನ್‌ ಅಭಿಯಾನ

ಅನಂತ್‌ ನಾಗ್‌ ಅವರ 5 ದಶಕಗಳ ಸಿನಿ ಪ್ರಯಾಣದಲ್ಲಿ ಒಂದೇ ಒಂದು ರಾಷ್ಟ್ರ ಪ್ರಶಸ್ತಿ ಸಿಗದಿರುವುದು ಆಶ್ಚರ್ಯವನ್ನು ಹುಟ್ಟಿಸುತ್ತದೆ.

- Advertisement -
- Advertisement -

ಸೆಪ್ಟೆಂಬರ್‌ 15ರ ವರೆಗೆ ಪದ್ಮ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವಂತೆ ಪ್ರಧಾನಿ ಮೋದಿ ಭಾನುವಾರ ದೇಶವಾಸಿಗಳಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಕನ್ನಡದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂಬ ಆನ್‌ಲೈನ್‌ ಅಭಿಯಾನ ಆರಂಭವಾಗಿದೆ.

ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದು ಅನಂತ್‌ ನಾಗ್‌ ಅವರಿಗೆ ಪದ್ಮ ಪುರಸ್ಕಾರವನ್ನು ನೀಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಆನ್‌ಸ್ಕ್ರೀನ್‌ನಲ್ಲಿ ಮಾತ್ರ ಪ್ರತಿಭಾವಂತ ನಟ; ಉಳಿದಂತೆ ಅಂತಃಕರಣವುಳ್ಳ ಸಾಮಾನ್ಯ ಮನುಷ್ಯನಾಗಿದ್ದ ಸಂಚಾರಿ ವಿಜಯ್

ಖ್ಯಾತ ನಟ ರಿಷಭ್‌ ಶೆಟ್ಟಿ ಈ ಸಂಬಂಧ ಟ್ವೀಟ್‌ ಮಾಡಿ ಅನಂತ ನಾಗ್ ಕನ್ನಡ ಮತ್ತು ಭಾರತ ಚಲನಚಿತ್ರರಂಗಕ್ಕೆ ಅಸಾಧಾರಣ ಕೊಡುಗೆ ನೀಡಿದ್ದಾರೆ, ಆದ್ದರಿಂದ ಅವರಿಗೆ ಪದ್ಮಾ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ನಟ ರಕ್ಷಿತ್ ಸೆಟ್ಟಿ, ನಿರ್ದೇಶಕ ಹೇಮಂತ್ ರಾವ್ ಸಾರಿದಂತೆ ಅನೇಕ ನಟ, ನಿರ್ದೇಶಕರು ಅನಂತ್‌ ನಾಗ್‌ ಪದ್ಮ ಪ್ರಶಸ್ತಿಗೆ ಅತ್ಯಂತ ಅರ್ಹರಾಗಿದ್ದಾರೆ ಎಂದು ಹೇಳಿದ್ದು ಅಭಿಯಾನಕ್ಕೆ ಕೈಜೋಡಿಸಿದ್ದಾರೆ.

ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾಗುವ ಪದ್ಮ ಪ್ರಶಸ್ತಿಗಳು ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಸಾರ್ವಜನಿಕ ಸೇವೆಗಳನ್ನು ಒಳಗೊಂಡ ಅನೇಕ ವಿಭಾಗಗಳಲ್ಲಿ ವ್ಯಕ್ತಿಗಳ ಸಾಧನೆಗಳನ್ನು ಪರಿಗಣಿಸಿ ವಾರ್ಷಿಕ ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ-ಪದ್ಮವಿಭೂಷಣ್ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ್ (ಉನ್ನತ-ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾಮಾನ್ಯವಾಗಿ ಪದ್ಮ ಪ್ರಶಸ್ತಿಯನ್ನು ಸಮಿತಿಯಿಂದ ನಾಮನಿರ್ದೇಶನಗೊಂಡ ಸಾಧಕರಿಗೆ ನೀಡಲಾಗುತ್ತದೆ. ಈ ವರ್ಷ ಸರ್ಕಾರ ಸಾರ್ವಜನಿಕರಿಗೂ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವ ಅವಕಾಶ ನೀಡಿದೆ.

ಇದನ್ನೂ ಓದಿ: ನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

ಅನಂತ್ ನಾಗ್ ಕನ್ನಡ, ಮರಾಠಿ, ತೆಲುಗು, ತಮಿಳು, ಮಲಯಾಳಂ, ಮತ್ತು ಹಿಂದಿ ಭಾಷೆಗಳಲ್ಲಿ 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ಪ್ರಮುಖ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

ಅನಂತ್ ನಾಗ್ ಕನ್ನಡ, ಮರಾಠಿ, ತೆಲುಗು, ತಮಿಳು, ಮಲಯಾಳಂ, ಮತ್ತು ಹಿಂದಿ ಭಾಷೆಗಳಲ್ಲಿ 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ಪ್ರಮುಖ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರು ಸ್ವತಂತ್ರ ಚಲನಚಿತ್ರಗಳು ಮತ್ತು ಮಾಲ್ಗುಡಿ ಡೇಸ್‌ನಂತಹ ದೂರದರ್ಶನ ಸರಣಿಯಲ್ಲೂ ಕಾಣಿಸಿಕೊಂಡಿದ್ದಾರೆ ಮತ್ತು ನಾಟಕಗಳಲ್ಲಿಯೂ ನಟಿಸಿದ್ದಾರೆ.

ಇದನ್ನೂ ಓದಿ: ವಂಚನೆ ಪ್ರಕರಣ: ವಿವಾದಕ್ಕೆ ತೆರೆ ಎಳೆದಿದ್ದೇವೆ ಎಂದ ನಟ ದರ್ಶನ್

ಅನಂತ್‌ ನಾಗ್‌ ಅವರ ಮನೋಜ್ಞ ಅಭಿನಯಕ್ಕೆ ಇದುವರೆಗೆ 7 ರಾಜ್ಯ ಪ್ರಶಸ್ತಿಗಳು ಒಲಿದು ಬಂದಿವೆ.  ಸಂಕಲ್ಪ (1973) ಎಂಬ ಚಲನಚಿತ್ರದೊಂದಿಗೆ ಪಾದಾರ್ಪಣೆ ಮಾಡಿದ ಹಿರಿಯ ನಟ ನಾಗ್‌ ನಂತರ ಶ್ಯಾಮ್ ಬೆನೆಗಲ್ ಅವರ ಅಂಕುರ್ ಚಿತ್ರದಲ್ಲಿ ಕಾಣಿಸಿಕೊಂಡರು. ಬೆನಗಲ್‌ ಅವರೊಂದಿಗೆ ಸ್ವತಂತ್ರ ಚಲನಚಿತ್ರಗಳ ಸಿನೆಮಾ ಜಗತ್ತಿನಲ್ಲಿ ತೊಡಗಿದರು. ಗೋಧಿ ಬಣ್ಣ ಸಾಧಾರಣ ಮೈಕಟ್ಟು (2016) ಚಿತ್ರದಲ್ಲಿನ ಅನಂತ್‌ ನಾಗ್‌  ಅವರ ಅಲ್‌ಜೈಮರ್‌ ರೋಗಿಯ ಪಾತ್ರ ದೇಶ ವಿದೇಶಗಳ ಚಿತ್ರೋತ್ಸವದಲ್ಲಿ ಮೆಚ್ಚುಗೆಯನ್ನು ಗಳಿಸಿತ್ತು.  

ವಯಸ್ಸು ಮಾಗಿದಂತೆಲ್ಲ ಅನಂತ್‌ ನಾಗ್ ನಟನೆಯಲ್ಲಿ ಮೊನಚು, ಸೂಕ್ಷತೆ ಕಾಣಿಸಿಕೊಳ್ಲುತ್ತಿದ್ದು ಅವರನ್ನು  ಭಾರತದ ಅತ್ಯುತ್ತಮ ನಟರಲ್ಲಿ ಒಬ್ಬರನ್ನಾಗಿ ಪರಿಗಣಿಸಲಾಗುತ್ತದೆ. ಅಮಿತಾಬ್‌ ಬಚ್ಚನ್‌, ಇರ್ಫಾನ್‌ ಖಾನ್‌, ನಾಸಿರುದ್ದೀನ್‌ ಶಾ, ಕಮಲ್ ಹಾಸನ್, ಪ್ರಕಾಶ್‌ ರಾಜ್‌ ಮುಂತಾದ ಹಿರಿಯ ನಟರಿಗೆ ನಟನೆಯಲ್ಲಿ ರಾಷ್ಟ್ರ ಪ್ರಶಸ್ತಿಗಳು ಲಭಿಸಿದೆ. ಅನಂತ್‌ ನಾಗ್‌ ಅವರ 5 ದಶಕಗಳ ಸಿನಿ ಪ್ರಯಾಣದಲ್ಲಿ ರಾಷ್ಟ್ರ ಪ್ರಶಸ್ತಿ ಸಿಗದಿರುವುದು ಆಶ್ಚರ್ಯವನ್ನು ಹುಟ್ಟಿಸುತ್ತದೆ.

ಇತ್ತೀಚಿನ ತಮ್ಮ ಕೆಲವು ಹೆಳಿಕೆಗಳಿಂದ ಅನಂತ್‌ ನಾಗ್‌ ಕೆಲವು ವಿವಾದಗಳನ್ನು ಮೈಮೇಲೆ ಎಳೆದು ಕೊಂಡಿದ್ದರು. ಅದರ ಹೊರತಾಗಿ ಅನಂತ್‌ ನಾಗ್‌ ಪದ್ಮ ಪ್ರಶಸ್ತಿಗೆ ಕನ್ನಡ ಚಿತ್ರರಂಗದಿಂದ ಸೂಕ್ತ ಆಯ್ಕೆ ಎಂದು ಹಲವರು ಅಭಿಪ್ರಾಪಟ್ಟಿದ್ದಾರೆ.

ಇದನ್ನೂ ಓದಿ:  ಪದ್ಮ ಪ್ರಶಸ್ತಿಗೆ ಸಾಧಕರ ಹೆಸರು ಸೂಚಿಸುವಂತೆ ದೇಶವಾಸಿಗಳಲ್ಲಿ ಪ್ರಧಾನಿ ಮನವಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...