Homeಕರ್ನಾಟಕಹಿರಿಯ ನಟ ಅನಂತ್‌ ನಾಗ್‌ಗೆ ಪದ್ಮ ಪ್ರಶಸ್ತಿ ಆಗ್ರಹಿಸಿ ಆನಲೈನ್‌ ಅಭಿಯಾನ

ಹಿರಿಯ ನಟ ಅನಂತ್‌ ನಾಗ್‌ಗೆ ಪದ್ಮ ಪ್ರಶಸ್ತಿ ಆಗ್ರಹಿಸಿ ಆನಲೈನ್‌ ಅಭಿಯಾನ

ಅನಂತ್‌ ನಾಗ್‌ ಅವರ 5 ದಶಕಗಳ ಸಿನಿ ಪ್ರಯಾಣದಲ್ಲಿ ಒಂದೇ ಒಂದು ರಾಷ್ಟ್ರ ಪ್ರಶಸ್ತಿ ಸಿಗದಿರುವುದು ಆಶ್ಚರ್ಯವನ್ನು ಹುಟ್ಟಿಸುತ್ತದೆ.

- Advertisement -
- Advertisement -

ಸೆಪ್ಟೆಂಬರ್‌ 15ರ ವರೆಗೆ ಪದ್ಮ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವಂತೆ ಪ್ರಧಾನಿ ಮೋದಿ ಭಾನುವಾರ ದೇಶವಾಸಿಗಳಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಕನ್ನಡದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂಬ ಆನ್‌ಲೈನ್‌ ಅಭಿಯಾನ ಆರಂಭವಾಗಿದೆ.

ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದು ಅನಂತ್‌ ನಾಗ್‌ ಅವರಿಗೆ ಪದ್ಮ ಪುರಸ್ಕಾರವನ್ನು ನೀಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಆನ್‌ಸ್ಕ್ರೀನ್‌ನಲ್ಲಿ ಮಾತ್ರ ಪ್ರತಿಭಾವಂತ ನಟ; ಉಳಿದಂತೆ ಅಂತಃಕರಣವುಳ್ಳ ಸಾಮಾನ್ಯ ಮನುಷ್ಯನಾಗಿದ್ದ ಸಂಚಾರಿ ವಿಜಯ್

ಖ್ಯಾತ ನಟ ರಿಷಭ್‌ ಶೆಟ್ಟಿ ಈ ಸಂಬಂಧ ಟ್ವೀಟ್‌ ಮಾಡಿ ಅನಂತ ನಾಗ್ ಕನ್ನಡ ಮತ್ತು ಭಾರತ ಚಲನಚಿತ್ರರಂಗಕ್ಕೆ ಅಸಾಧಾರಣ ಕೊಡುಗೆ ನೀಡಿದ್ದಾರೆ, ಆದ್ದರಿಂದ ಅವರಿಗೆ ಪದ್ಮಾ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ನಟ ರಕ್ಷಿತ್ ಸೆಟ್ಟಿ, ನಿರ್ದೇಶಕ ಹೇಮಂತ್ ರಾವ್ ಸಾರಿದಂತೆ ಅನೇಕ ನಟ, ನಿರ್ದೇಶಕರು ಅನಂತ್‌ ನಾಗ್‌ ಪದ್ಮ ಪ್ರಶಸ್ತಿಗೆ ಅತ್ಯಂತ ಅರ್ಹರಾಗಿದ್ದಾರೆ ಎಂದು ಹೇಳಿದ್ದು ಅಭಿಯಾನಕ್ಕೆ ಕೈಜೋಡಿಸಿದ್ದಾರೆ.

ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾಗುವ ಪದ್ಮ ಪ್ರಶಸ್ತಿಗಳು ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಸಾರ್ವಜನಿಕ ಸೇವೆಗಳನ್ನು ಒಳಗೊಂಡ ಅನೇಕ ವಿಭಾಗಗಳಲ್ಲಿ ವ್ಯಕ್ತಿಗಳ ಸಾಧನೆಗಳನ್ನು ಪರಿಗಣಿಸಿ ವಾರ್ಷಿಕ ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ-ಪದ್ಮವಿಭೂಷಣ್ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ್ (ಉನ್ನತ-ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾಮಾನ್ಯವಾಗಿ ಪದ್ಮ ಪ್ರಶಸ್ತಿಯನ್ನು ಸಮಿತಿಯಿಂದ ನಾಮನಿರ್ದೇಶನಗೊಂಡ ಸಾಧಕರಿಗೆ ನೀಡಲಾಗುತ್ತದೆ. ಈ ವರ್ಷ ಸರ್ಕಾರ ಸಾರ್ವಜನಿಕರಿಗೂ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವ ಅವಕಾಶ ನೀಡಿದೆ.

ಇದನ್ನೂ ಓದಿ: ನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

ಅನಂತ್ ನಾಗ್ ಕನ್ನಡ, ಮರಾಠಿ, ತೆಲುಗು, ತಮಿಳು, ಮಲಯಾಳಂ, ಮತ್ತು ಹಿಂದಿ ಭಾಷೆಗಳಲ್ಲಿ 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ಪ್ರಮುಖ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

ಅನಂತ್ ನಾಗ್ ಕನ್ನಡ, ಮರಾಠಿ, ತೆಲುಗು, ತಮಿಳು, ಮಲಯಾಳಂ, ಮತ್ತು ಹಿಂದಿ ಭಾಷೆಗಳಲ್ಲಿ 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ಪ್ರಮುಖ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರು ಸ್ವತಂತ್ರ ಚಲನಚಿತ್ರಗಳು ಮತ್ತು ಮಾಲ್ಗುಡಿ ಡೇಸ್‌ನಂತಹ ದೂರದರ್ಶನ ಸರಣಿಯಲ್ಲೂ ಕಾಣಿಸಿಕೊಂಡಿದ್ದಾರೆ ಮತ್ತು ನಾಟಕಗಳಲ್ಲಿಯೂ ನಟಿಸಿದ್ದಾರೆ.

ಇದನ್ನೂ ಓದಿ: ವಂಚನೆ ಪ್ರಕರಣ: ವಿವಾದಕ್ಕೆ ತೆರೆ ಎಳೆದಿದ್ದೇವೆ ಎಂದ ನಟ ದರ್ಶನ್

ಅನಂತ್‌ ನಾಗ್‌ ಅವರ ಮನೋಜ್ಞ ಅಭಿನಯಕ್ಕೆ ಇದುವರೆಗೆ 7 ರಾಜ್ಯ ಪ್ರಶಸ್ತಿಗಳು ಒಲಿದು ಬಂದಿವೆ.  ಸಂಕಲ್ಪ (1973) ಎಂಬ ಚಲನಚಿತ್ರದೊಂದಿಗೆ ಪಾದಾರ್ಪಣೆ ಮಾಡಿದ ಹಿರಿಯ ನಟ ನಾಗ್‌ ನಂತರ ಶ್ಯಾಮ್ ಬೆನೆಗಲ್ ಅವರ ಅಂಕುರ್ ಚಿತ್ರದಲ್ಲಿ ಕಾಣಿಸಿಕೊಂಡರು. ಬೆನಗಲ್‌ ಅವರೊಂದಿಗೆ ಸ್ವತಂತ್ರ ಚಲನಚಿತ್ರಗಳ ಸಿನೆಮಾ ಜಗತ್ತಿನಲ್ಲಿ ತೊಡಗಿದರು. ಗೋಧಿ ಬಣ್ಣ ಸಾಧಾರಣ ಮೈಕಟ್ಟು (2016) ಚಿತ್ರದಲ್ಲಿನ ಅನಂತ್‌ ನಾಗ್‌  ಅವರ ಅಲ್‌ಜೈಮರ್‌ ರೋಗಿಯ ಪಾತ್ರ ದೇಶ ವಿದೇಶಗಳ ಚಿತ್ರೋತ್ಸವದಲ್ಲಿ ಮೆಚ್ಚುಗೆಯನ್ನು ಗಳಿಸಿತ್ತು.  

ವಯಸ್ಸು ಮಾಗಿದಂತೆಲ್ಲ ಅನಂತ್‌ ನಾಗ್ ನಟನೆಯಲ್ಲಿ ಮೊನಚು, ಸೂಕ್ಷತೆ ಕಾಣಿಸಿಕೊಳ್ಲುತ್ತಿದ್ದು ಅವರನ್ನು  ಭಾರತದ ಅತ್ಯುತ್ತಮ ನಟರಲ್ಲಿ ಒಬ್ಬರನ್ನಾಗಿ ಪರಿಗಣಿಸಲಾಗುತ್ತದೆ. ಅಮಿತಾಬ್‌ ಬಚ್ಚನ್‌, ಇರ್ಫಾನ್‌ ಖಾನ್‌, ನಾಸಿರುದ್ದೀನ್‌ ಶಾ, ಕಮಲ್ ಹಾಸನ್, ಪ್ರಕಾಶ್‌ ರಾಜ್‌ ಮುಂತಾದ ಹಿರಿಯ ನಟರಿಗೆ ನಟನೆಯಲ್ಲಿ ರಾಷ್ಟ್ರ ಪ್ರಶಸ್ತಿಗಳು ಲಭಿಸಿದೆ. ಅನಂತ್‌ ನಾಗ್‌ ಅವರ 5 ದಶಕಗಳ ಸಿನಿ ಪ್ರಯಾಣದಲ್ಲಿ ರಾಷ್ಟ್ರ ಪ್ರಶಸ್ತಿ ಸಿಗದಿರುವುದು ಆಶ್ಚರ್ಯವನ್ನು ಹುಟ್ಟಿಸುತ್ತದೆ.

ಇತ್ತೀಚಿನ ತಮ್ಮ ಕೆಲವು ಹೆಳಿಕೆಗಳಿಂದ ಅನಂತ್‌ ನಾಗ್‌ ಕೆಲವು ವಿವಾದಗಳನ್ನು ಮೈಮೇಲೆ ಎಳೆದು ಕೊಂಡಿದ್ದರು. ಅದರ ಹೊರತಾಗಿ ಅನಂತ್‌ ನಾಗ್‌ ಪದ್ಮ ಪ್ರಶಸ್ತಿಗೆ ಕನ್ನಡ ಚಿತ್ರರಂಗದಿಂದ ಸೂಕ್ತ ಆಯ್ಕೆ ಎಂದು ಹಲವರು ಅಭಿಪ್ರಾಪಟ್ಟಿದ್ದಾರೆ.

ಇದನ್ನೂ ಓದಿ:  ಪದ್ಮ ಪ್ರಶಸ್ತಿಗೆ ಸಾಧಕರ ಹೆಸರು ಸೂಚಿಸುವಂತೆ ದೇಶವಾಸಿಗಳಲ್ಲಿ ಪ್ರಧಾನಿ ಮನವಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...