Homeಕರ್ನಾಟಕಹಿರಿಯ ನಟ ಅನಂತ್‌ ನಾಗ್‌ಗೆ ಪದ್ಮ ಪ್ರಶಸ್ತಿ ಆಗ್ರಹಿಸಿ ಆನಲೈನ್‌ ಅಭಿಯಾನ

ಹಿರಿಯ ನಟ ಅನಂತ್‌ ನಾಗ್‌ಗೆ ಪದ್ಮ ಪ್ರಶಸ್ತಿ ಆಗ್ರಹಿಸಿ ಆನಲೈನ್‌ ಅಭಿಯಾನ

ಅನಂತ್‌ ನಾಗ್‌ ಅವರ 5 ದಶಕಗಳ ಸಿನಿ ಪ್ರಯಾಣದಲ್ಲಿ ಒಂದೇ ಒಂದು ರಾಷ್ಟ್ರ ಪ್ರಶಸ್ತಿ ಸಿಗದಿರುವುದು ಆಶ್ಚರ್ಯವನ್ನು ಹುಟ್ಟಿಸುತ್ತದೆ.

- Advertisement -
- Advertisement -

ಸೆಪ್ಟೆಂಬರ್‌ 15ರ ವರೆಗೆ ಪದ್ಮ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವಂತೆ ಪ್ರಧಾನಿ ಮೋದಿ ಭಾನುವಾರ ದೇಶವಾಸಿಗಳಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಕನ್ನಡದ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂಬ ಆನ್‌ಲೈನ್‌ ಅಭಿಯಾನ ಆರಂಭವಾಗಿದೆ.

ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದು ಅನಂತ್‌ ನಾಗ್‌ ಅವರಿಗೆ ಪದ್ಮ ಪುರಸ್ಕಾರವನ್ನು ನೀಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಆನ್‌ಸ್ಕ್ರೀನ್‌ನಲ್ಲಿ ಮಾತ್ರ ಪ್ರತಿಭಾವಂತ ನಟ; ಉಳಿದಂತೆ ಅಂತಃಕರಣವುಳ್ಳ ಸಾಮಾನ್ಯ ಮನುಷ್ಯನಾಗಿದ್ದ ಸಂಚಾರಿ ವಿಜಯ್

ಖ್ಯಾತ ನಟ ರಿಷಭ್‌ ಶೆಟ್ಟಿ ಈ ಸಂಬಂಧ ಟ್ವೀಟ್‌ ಮಾಡಿ ಅನಂತ ನಾಗ್ ಕನ್ನಡ ಮತ್ತು ಭಾರತ ಚಲನಚಿತ್ರರಂಗಕ್ಕೆ ಅಸಾಧಾರಣ ಕೊಡುಗೆ ನೀಡಿದ್ದಾರೆ, ಆದ್ದರಿಂದ ಅವರಿಗೆ ಪದ್ಮಾ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ನಟ ರಕ್ಷಿತ್ ಸೆಟ್ಟಿ, ನಿರ್ದೇಶಕ ಹೇಮಂತ್ ರಾವ್ ಸಾರಿದಂತೆ ಅನೇಕ ನಟ, ನಿರ್ದೇಶಕರು ಅನಂತ್‌ ನಾಗ್‌ ಪದ್ಮ ಪ್ರಶಸ್ತಿಗೆ ಅತ್ಯಂತ ಅರ್ಹರಾಗಿದ್ದಾರೆ ಎಂದು ಹೇಳಿದ್ದು ಅಭಿಯಾನಕ್ಕೆ ಕೈಜೋಡಿಸಿದ್ದಾರೆ.

ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾಗುವ ಪದ್ಮ ಪ್ರಶಸ್ತಿಗಳು ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾಗಿದೆ. ಸಾರ್ವಜನಿಕ ಸೇವೆಗಳನ್ನು ಒಳಗೊಂಡ ಅನೇಕ ವಿಭಾಗಗಳಲ್ಲಿ ವ್ಯಕ್ತಿಗಳ ಸಾಧನೆಗಳನ್ನು ಪರಿಗಣಿಸಿ ವಾರ್ಷಿಕ ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ-ಪದ್ಮವಿಭೂಷಣ್ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ್ (ಉನ್ನತ-ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾಮಾನ್ಯವಾಗಿ ಪದ್ಮ ಪ್ರಶಸ್ತಿಯನ್ನು ಸಮಿತಿಯಿಂದ ನಾಮನಿರ್ದೇಶನಗೊಂಡ ಸಾಧಕರಿಗೆ ನೀಡಲಾಗುತ್ತದೆ. ಈ ವರ್ಷ ಸರ್ಕಾರ ಸಾರ್ವಜನಿಕರಿಗೂ ಪ್ರಶಸ್ತಿಗೆ ಸಾಧಕರ ಹೆಸರನ್ನು ಸೂಚಿಸುವ ಅವಕಾಶ ನೀಡಿದೆ.

ಇದನ್ನೂ ಓದಿ: ನಟ ದರ್ಶನ್ ಹೆಸರಿನಲ್ಲಿ ವಂಚನೆ ಪ್ರಕರಣ: ಮಹಿಳೆಯನ್ನು ಬಂಧಿಸಿದ ಪೊಲೀಸರು

ಅನಂತ್ ನಾಗ್ ಕನ್ನಡ, ಮರಾಠಿ, ತೆಲುಗು, ತಮಿಳು, ಮಲಯಾಳಂ, ಮತ್ತು ಹಿಂದಿ ಭಾಷೆಗಳಲ್ಲಿ 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ಪ್ರಮುಖ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

ಅನಂತ್ ನಾಗ್ ಕನ್ನಡ, ಮರಾಠಿ, ತೆಲುಗು, ತಮಿಳು, ಮಲಯಾಳಂ, ಮತ್ತು ಹಿಂದಿ ಭಾಷೆಗಳಲ್ಲಿ 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ಪ್ರಮುಖ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅವರು ಸ್ವತಂತ್ರ ಚಲನಚಿತ್ರಗಳು ಮತ್ತು ಮಾಲ್ಗುಡಿ ಡೇಸ್‌ನಂತಹ ದೂರದರ್ಶನ ಸರಣಿಯಲ್ಲೂ ಕಾಣಿಸಿಕೊಂಡಿದ್ದಾರೆ ಮತ್ತು ನಾಟಕಗಳಲ್ಲಿಯೂ ನಟಿಸಿದ್ದಾರೆ.

ಇದನ್ನೂ ಓದಿ: ವಂಚನೆ ಪ್ರಕರಣ: ವಿವಾದಕ್ಕೆ ತೆರೆ ಎಳೆದಿದ್ದೇವೆ ಎಂದ ನಟ ದರ್ಶನ್

ಅನಂತ್‌ ನಾಗ್‌ ಅವರ ಮನೋಜ್ಞ ಅಭಿನಯಕ್ಕೆ ಇದುವರೆಗೆ 7 ರಾಜ್ಯ ಪ್ರಶಸ್ತಿಗಳು ಒಲಿದು ಬಂದಿವೆ.  ಸಂಕಲ್ಪ (1973) ಎಂಬ ಚಲನಚಿತ್ರದೊಂದಿಗೆ ಪಾದಾರ್ಪಣೆ ಮಾಡಿದ ಹಿರಿಯ ನಟ ನಾಗ್‌ ನಂತರ ಶ್ಯಾಮ್ ಬೆನೆಗಲ್ ಅವರ ಅಂಕುರ್ ಚಿತ್ರದಲ್ಲಿ ಕಾಣಿಸಿಕೊಂಡರು. ಬೆನಗಲ್‌ ಅವರೊಂದಿಗೆ ಸ್ವತಂತ್ರ ಚಲನಚಿತ್ರಗಳ ಸಿನೆಮಾ ಜಗತ್ತಿನಲ್ಲಿ ತೊಡಗಿದರು. ಗೋಧಿ ಬಣ್ಣ ಸಾಧಾರಣ ಮೈಕಟ್ಟು (2016) ಚಿತ್ರದಲ್ಲಿನ ಅನಂತ್‌ ನಾಗ್‌  ಅವರ ಅಲ್‌ಜೈಮರ್‌ ರೋಗಿಯ ಪಾತ್ರ ದೇಶ ವಿದೇಶಗಳ ಚಿತ್ರೋತ್ಸವದಲ್ಲಿ ಮೆಚ್ಚುಗೆಯನ್ನು ಗಳಿಸಿತ್ತು.  

ವಯಸ್ಸು ಮಾಗಿದಂತೆಲ್ಲ ಅನಂತ್‌ ನಾಗ್ ನಟನೆಯಲ್ಲಿ ಮೊನಚು, ಸೂಕ್ಷತೆ ಕಾಣಿಸಿಕೊಳ್ಲುತ್ತಿದ್ದು ಅವರನ್ನು  ಭಾರತದ ಅತ್ಯುತ್ತಮ ನಟರಲ್ಲಿ ಒಬ್ಬರನ್ನಾಗಿ ಪರಿಗಣಿಸಲಾಗುತ್ತದೆ. ಅಮಿತಾಬ್‌ ಬಚ್ಚನ್‌, ಇರ್ಫಾನ್‌ ಖಾನ್‌, ನಾಸಿರುದ್ದೀನ್‌ ಶಾ, ಕಮಲ್ ಹಾಸನ್, ಪ್ರಕಾಶ್‌ ರಾಜ್‌ ಮುಂತಾದ ಹಿರಿಯ ನಟರಿಗೆ ನಟನೆಯಲ್ಲಿ ರಾಷ್ಟ್ರ ಪ್ರಶಸ್ತಿಗಳು ಲಭಿಸಿದೆ. ಅನಂತ್‌ ನಾಗ್‌ ಅವರ 5 ದಶಕಗಳ ಸಿನಿ ಪ್ರಯಾಣದಲ್ಲಿ ರಾಷ್ಟ್ರ ಪ್ರಶಸ್ತಿ ಸಿಗದಿರುವುದು ಆಶ್ಚರ್ಯವನ್ನು ಹುಟ್ಟಿಸುತ್ತದೆ.

ಇತ್ತೀಚಿನ ತಮ್ಮ ಕೆಲವು ಹೆಳಿಕೆಗಳಿಂದ ಅನಂತ್‌ ನಾಗ್‌ ಕೆಲವು ವಿವಾದಗಳನ್ನು ಮೈಮೇಲೆ ಎಳೆದು ಕೊಂಡಿದ್ದರು. ಅದರ ಹೊರತಾಗಿ ಅನಂತ್‌ ನಾಗ್‌ ಪದ್ಮ ಪ್ರಶಸ್ತಿಗೆ ಕನ್ನಡ ಚಿತ್ರರಂಗದಿಂದ ಸೂಕ್ತ ಆಯ್ಕೆ ಎಂದು ಹಲವರು ಅಭಿಪ್ರಾಪಟ್ಟಿದ್ದಾರೆ.

ಇದನ್ನೂ ಓದಿ:  ಪದ್ಮ ಪ್ರಶಸ್ತಿಗೆ ಸಾಧಕರ ಹೆಸರು ಸೂಚಿಸುವಂತೆ ದೇಶವಾಸಿಗಳಲ್ಲಿ ಪ್ರಧಾನಿ ಮನವಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...