Homeಮುಖಪುಟಪದ್ಮ ಪ್ರಶಸ್ತಿ: ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರನ್ನು ಶಿಫಾರಸ್ಸು ಮಾಡಲಿರುವ ದೆಹಲಿ ಸರ್ಕಾರ

ಪದ್ಮ ಪ್ರಶಸ್ತಿ: ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರನ್ನು ಶಿಫಾರಸ್ಸು ಮಾಡಲಿರುವ ದೆಹಲಿ ಸರ್ಕಾರ

- Advertisement -
- Advertisement -

ಈ ವರ್ಷದ ಪದ್ಮ ಪ್ರಶಸ್ತಿಗಾಗಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಹೆಸರನ್ನು ಕಳುಹಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಮಂಗಳವಾರ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ವರ್ಷದ ಪದ್ಮ ಪ್ರಶಸ್ತಿಗಳಿಗೆ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಹೆಸರನ್ನು ಕಳುಹಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ. ನಾವು ಅವರಿಗೆ ಕೃತಜ್ಞರಾಗಿರುತ್ತೇವೆ ಮತ್ತು ಅವರನ್ನು ಗೌರವಿಸಲು ಬಯಸುತ್ತೇವೆ” ಎಂದು ಹೇಳಿದ್ದಾರೆ.

“ಸಾರ್ವಜನಿಕರು ಈ ಹೆಸರುಗಳನ್ನು ನಮಗೆ ತಿಳಿಸುತ್ತಾರೆ. ಆಗಸ್ಟ್ 15 ರೊಳಗೆ ಜನರು ತಮ್ಮ ಮೇಲ್‌ಗಳನ್ನು [email protected] ಗೆ ಕಳುಹಿಸಬಹುದು” ಎಂದು ದೆಹಲಿ ಮುಖ್ಯಮಂತ್ರಿ ಹೇಳಿದ್ದಾರೆ.

“ದೆಹಲಿ ಸರ್ಕಾರವು ಪರಿಶೀಲನಾ ಸಮಿತಿಯನ್ನು ರಚಿಸಿದ್ದು, ಈ ಸಮಿತಿ ಮುಂದಿನ 15 ದಿನಗಳಲ್ಲಿ ತಮ್ಮ ಆಯ್ಕೆಯನ್ನು ದೆಹಲಿ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ. ಅಂತಿಮ ಹೆಸರುಗಳನ್ನು ಒಕ್ಕೂಟ ಸರ್ಕಾರಕ್ಕೆ ಕಳುಹಿಸಲಾಗುವುದು” ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಪದ್ಮಶ್ರಿ ಪ್ರಶಸ್ತಿ ನೀಡಿ ಅಭಿಯಾನ: ವೈಜನಾಥ ಬಿರಾದಾರರವರ ಎರಡು ಹಾಸ್ಯ ‘ಸ್ವಗತಗಳು’

ಪದ್ಮ ಪ್ರಶಸ್ತಿಗಳಿಗೆ (ಪದ್ಮವಿಭೂಷಣ, ಪದ್ಮಭೂಷಣ್ ಮತ್ತು ಪದ್ಮಶ್ರೀ) ನಾಮಪತ್ರಗಳು ಮತ್ತು ಶಿಫಾರಸುಗಳನ್ನು 2021 ರ ಸೆಪ್ಟೆಂಬರ್ 15 ರವರೆಗೆ ಒಕ್ಕೂಟ ಸರ್ಕಾರದ ಪೋರ್ಟಲ್‌ನಲ್ಲಿ ಸಲ್ಲಿಸಬಹುದು. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡುವಂತೆ ದೇಶದ ಜನರಿಗೆ ಒತ್ತಾಯಿಸಿದ್ದರು.

1954 ರಲ್ಲಿ ಸ್ಥಾಪನೆಯಾದ ಈ ಪ್ರಶಸ್ತಿಗಳನ್ನು ಪ್ರತಿವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ಔಷಧಿ, ಸಾಮಾಜಿಕ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಇತ್ಯಾದಿ ಎಲ್ಲಾ ಕ್ಷೇತ್ರಗಳು ಹಾಗೂ ವಿಭಾಗಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು ಮತ್ತು ಸೇವೆಗಾಗಿ ಇದನ್ನು ನೀಡಲಾಗುತ್ತದೆ.

ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗ ಭೇದವಿಲ್ಲದ ಎಲ್ಲ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರು. ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ ಸಾರ್ವಜನಿಕ ಕ್ಷೇತ್ರದ ಉದ್ಯಮಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ.

ಇದನ್ನೂ ಓದಿ: 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ಭರತನಾಟ್ಯ ಕಲಾವಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...