Homeಕರ್ನಾಟಕಎಸ್‌.ಎಲ್. ಬೈರಪ್ಪ, ಎಸ್‌.ಎಂ. ಕೃಷ್ಣ, ಸುಧಾ ಮೂರ್ತಿ ಸೇರಿ ರಾಜ್ಯದ 8 ಜನರಿಗೆ ಪದ್ಮ ಪ್ರಶಸ್ತಿ

ಎಸ್‌.ಎಲ್. ಬೈರಪ್ಪ, ಎಸ್‌.ಎಂ. ಕೃಷ್ಣ, ಸುಧಾ ಮೂರ್ತಿ ಸೇರಿ ರಾಜ್ಯದ 8 ಜನರಿಗೆ ಪದ್ಮ ಪ್ರಶಸ್ತಿ

6 ಪದ್ಮ ವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮಶ್ರೀ ಪ್ರಶಸ್ತಿಗಳು ಸೇರಿದಂತೆ 106 ಪದ್ಮ ಪ್ರಶಸ್ತಿಗಳನ್ನು ಈ ವರ್ಷ ಘೋಷಿಸಲಾಗಿದೆ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ, ಸಾಹಿತಿ ಎಸ್‌.ಎಲ್. ಬೈರಪ್ಪ ಹಾಗೂ ಸುಧಾಮೂರ್ತಿ ಸೇರಿದಂತೆ ರಾಜ್ಯದ ಎಂಟು ಜನರು ಸೇರಿ ದೇಶದ ಒಟ್ಟು 106 ಜನರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಪ್ರಮುಖವಾಗಿ ತಬಲಾ ಮಾಂತ್ರಿಕ ಜಾಕೀರ್ ಹುಸೇನ್, ‘RRR’ ಸಂಗೀತ ಸಂಯೋಜಕ ಎಂ.ಎಂ. ಕೀರವಾಣಿ, ನಟಿ ರವೀನಾ ಟಂಡನ್, ಗಾಯಕರಾದ ಸುಮನ್ ಕಲ್ಯಾಣಪುರ ಮತ್ತು ವಾಣಿ ಜೈರಾಮ್ ಈ ಪಟ್ಟಿಯಲ್ಲಿ ಇದ್ದಾರೆ.

2023ರ ಗಣರಾಜ್ಯೋತ್ಸವದ ಮುನ್ನಾದಿನದಂದು ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಪ್ರಸಿದ್ಧ ವಾಸ್ತುಶಿಲ್ಪಿ ಬಾಲಕೃಷ್ಣ ದೋಷಿ, ವೈದ್ಯಕೀಯ ವೃತ್ತಿಪರ ದಿಲೀಪ್ ಮಹಲನಾಬಿಸ್, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಮತ್ತು ಇತರ ನಾಲ್ವರಿಗೆ ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕದಿಂದ ಒಟ್ಟು ಎಂಟು ಜನರಿಗೆ ಪದ್ಮ ಪ್ರಶಸ್ತಿಗಳನ್ನು ನೀಡಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರಿಗೆ ಪದ್ಮವಿಭೂಷಣ ಘೋಷಣೆಯಾಗಿದ್ದು, ಸಾಹಿತಿ ಎಸ್‌ಎಲ್ ಬೈರಪ್ಪ ಹಾಗೂ ಸುಧಾ ಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಒಲಿದಿದೆ. ಇನ್ನು ಉಳಿದಂತೆ ಖಾದರ್‌ ವಲ್ಲಿ ಡುಡೆಕಳ, ರಾಣಿ ಮಾಚಯ್ಯ, ನಾಡೋಜ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ, ಶಾ ರಶೀದ್ ಅಹ್ಮದ್‌ ಖಾದ್ರಿ, ಎಸ್‌. ಸುಬ್ಬರಾಮನ್ ಅವರಿಗೆ ಪದಶ್ರೀ ಪ್ರಶಸ್ತಿ ದೊರೆತಿದೆ.

ಅಧಿಕೃತ ಹೇಳಿಕೆಯ ಪ್ರಕಾರ, ಈ ವರ್ಷ 6 ಪದ್ಮ ವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮಶ್ರೀ ಪ್ರಶಸ್ತಿಗಳು ಸೇರಿದಂತೆ 106 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಪಟ್ಟಿಯಲ್ಲಿ 19 ಮಹಿಳಾ ಪ್ರಶಸ್ತಿ ಪುರಸ್ಕೃತರಲ್ಲಿ, ಏಳು ಮಹಿಳೆಯರು ಮರಣೋತ್ತರವಾಗಿ ಪ್ರಶಸ್ತಿ ಪಡೆದಿದ್ದಾರೆ. ಅದಾಗ್ಯೂ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನಕ್ಕೆ ಯಾರನ್ನೂ ಹೆಸರಿಸಲಾಗಿಲ್ಲ.

ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. “ರಾಷ್ಟ್ರಕ್ಕಾಗಿ ತಮ್ಮ ಶ್ರೀಮಂತ ಮತ್ತು ವೈವಿಧ್ಯಮಯ ಕೊಡುಗೆಗಳನ್ನು ನೀಡಿ, ನಮ್ಮ ಬೆಳವಣಿಗೆಯ ಪಥವನ್ನು ಹೆಚ್ಚಿಸಲು ನಡೆಸಿದ ಅವರ ಪ್ರಯತ್ನಗಳನ್ನು ಭಾರತವು ಗೌರವಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಅಮೇರಿಕಾ ಮೂಲದ ಗಣಿತಶಾಸ್ತ್ರಜ್ಞ ಶ್ರೀನಿವಾಸ್ ವರಧನ್ ಅವರನ್ನೂ ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಖ್ಯಾತ ಕೈಗಾರಿಕೋದ್ಯಮಿ ಕುಮಾರ ಮಂಗಲಂ ಬಿರ್ಲಾ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ. ರಾಕೇಶ್ ರಾಧೇಶ್ಯಾಮ್ ಜುಂಜುನ್ವಾಲಾ (ಮರಣೋತ್ತರ), ಮಣಿಪುರ ಬಿಜೆಪಿ ಅಧ್ಯಕ್ಷ ತೌನೋಜಮ್ ಚೋಬಾ ಸಿಂಗ್ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದಾರೆ. ಈ ಪ್ರಶಸ್ತಿಗಳನ್ನು ರಾಷ್ಟ್ರಪತಿ ಭವನದಲ್ಲಿ ಸಾಮಾನ್ಯವಾಗಿ ಪ್ರತಿ ವರ್ಷ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ನಡೆಯುವ ಸಮಾರಂಭಗಳಲ್ಲಿ ರಾಷ್ಟ್ರಪತಿಗಳು ಪ್ರದಾನ ಮಾಡುತ್ತಾರೆ.

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. ಕಲೆ, ಸಾಮಾಜಿಕ ಕಾರ್ಯ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ಇಂಜಿನಿಯರಿಂಗ್, ವ್ಯಾಪಾರ ಮತ್ತು ಉದ್ಯಮ, ಔಷಧ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ನಾಗರಿಕ ಸೇವೆ ಇತ್ಯಾದಿ ವಿವಿಧ ವಿಭಾಗಗಳು ಅಥವಾ ಚಟುವಟಿಕೆಗಳ ಕ್ಷೇತ್ರಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ‘ಪದ್ಮವಿಭೂಷಣ’, ಉನ್ನತ ಶ್ರೇಣಿಯ ವಿಶಿಷ್ಟ ಸೇವೆಗಾಗಿ ‘ಪದ್ಮಭೂಷಣ’ ಮತ್ತು ಯಾವುದೇ ಕ್ಷೇತ್ರದಲ್ಲಿನ ವಿಶಿಷ್ಟ ಸೇವೆಗಾಗಿ ‘ಪದ್ಮಶ್ರೀ’ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಶಸ್ತಿಗಳನ್ನು ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರದ ವಿರುದ್ಧ ಟ್ವೀಟ್ ಮಾಡಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಮಾಜಿ ಸಚಿವ ಎಕೆ ಆಂಟನಿ ಪುತ್ರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...